Homeಅಂಕಣಗಳು2019ರ ಚುನಾವಣೆಯೀಗ ಅಸಮ ಮೈದಾನದಲ್ಲಿ ನಡೆಯುವುದಿಲ್ಲ

2019ರ ಚುನಾವಣೆಯೀಗ ಅಸಮ ಮೈದಾನದಲ್ಲಿ ನಡೆಯುವುದಿಲ್ಲ

- Advertisement -
- Advertisement -

ಯೋಗೇಂದ್ರ ಯಾದವ್ |

ಇದನ್ನು ರಾಜಕೀಯ ವಿಜ್ಞಾನಿಗಳು ಚುನಾವಣಾ ಪ್ರಜಾತಂತ್ರದ ‘ಸ್ವಯಂ ಸುಧಾರಣೆಯ ಮೆಕ್ಯಾನಿಸಂ’ ಎಂದು ಕರೆಯುತ್ತಾರೆ. ಮಾರುಕಟ್ಟೆ ಆರ್ಥಿಕತೆಯ ವಿಕೃತಿಗಳನ್ನು ಸರಿಪಡಿಸುವ ಆದಂ ಸ್ಮಿತ್‍ರ ಪ್ರಖ್ಯಾತ ನಿಗೂಢ ಹಸ್ತದ ರೀತಿಯಲ್ಲೇ, ಸ್ಪರ್ಧಾತ್ಮಕ ಚುನಾವಣೆಗಳು ರಾಜಕೀಯ ವ್ಯವಸ್ಥೆಗಳ ಅತಿರೇಕಗಳನ್ನು ಸರಿ ಮಾಡಬೇಕು. 2018ರ ವಿಧಾನಸಭಾ ಚುನಾವಣೆಗಳು ಮಾಡಿರುವುದು ಇದನ್ನೇ. ಸರ್ವೋಚ್ಚ ನಾಯಕನೊಬ್ಬನ ಕದಲಿಸಲಾಗದ ಶಕ್ತಿಗೆ ಎಲ್ಲಾ ಸಂಸ್ಥೆಗಳು, ನಿಯಮಗಳು ಮತ್ತು ಸಾಂವಿಧಾನಿಕ ಸ್ವಾತಂತ್ರ್ಯಗಳನ್ನು ಅಡವಿಡುವ ಸಂಸದೀಯ ಸರ್ವಾಧಿಕಾರದತ್ತ ದೇಶ ಸಾಗುತ್ತಿರುವಾಗ, ಸ್ವಯಂಚಾಲಿತ ಬ್ರೇಕ್‍ಗಳು ಚುರುಕುಗೊಂಡಿವೆ. ಇದ್ದಕ್ಕಿದ್ದ ಹಾಗೆ, 2019ರ ಚುನಾವಣೆಯು ಯಾರೂ ಗೆಲ್ಲಬಹುದಾದ ಸ್ಪರ್ಧೆಯಾಗಿಬಿಟ್ಟಿದೆ.
ಮೊಟ್ಟಮೊದಲನೆಯದಾಗಿ, ಈ ಫಲಿತಾಂಶವು ಜನರು ಮತಚಲಾಯಿಸುವ ಅಸಲೀ ಅಜೆಂಡಾ ಯಾವುದೆಂಬುದನ್ನು ಒತ್ತಿ ಹೇಳಿದೆ. ಕೃಷಿ ಬಿಕ್ಕಟ್ಟು ಮತ್ತು ಗ್ರಾಮೀಣ ಸಂಕಷ್ಟವು ನಿಜವೆಂಬುದನ್ನು ಇದು ಸಾಬೀತುಪಡಿಸಿದೆ. ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸುವ ಅಂತಿಮ ಸಮೀಕರಣ ಯಾವುದೆಂಬುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಛತ್ತೀಸ್‍ಗಢ, ರಾಜಸ್ತಾನ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿಯ ವಿರುದ್ಧದ ಸ್ಪಷ್ಟ ಅಲೆ ಕಂಡಿದೆ. ಮಧ್ಯಪ್ರದೇಶದ ಮಾಲ್ವಾ, ಪೂರ್ವ ರಾಜಸ್ತಾನ ಮತ್ತು ಕೇಂದ್ರ ಛತ್ತೀಸ್‍ಗಡದಲ್ಲಿ ಬಿಜೆಪಿಯ ಸೋಲುಗಳು ಗುಜರಾತ್‍ನಂತೆಯೇ ರೈತರ ಸಿಟ್ಟು ಬಿಜೆಪಿಯ ವಿರುದ್ಧ ಕೆಲಸ ಮಾಡಿರುವುದನ್ನು ತೋರುತ್ತಿವೆ. ಟ್ರೆಂಡ್ ಏನಿದೆ ಎಂಬುದನ್ನು ಗ್ರಹಿಸುವ ಫಲಿತಾಂಶದ ಸಾಮಾಜಿಕ ಸಂಗತಿಗಳು, ಬಿಜೆಪಿಯ ನಷ್ಟವು ಗ್ರಾಮೀಣ ಭಾಗದಲ್ಲೇ ಸಾಪೇಕ್ಷವಾಗಿ ಹೆಚ್ಚಿದೆ ಎಂಬುದನ್ನು ಕಾಣಿಸಿವೆ. ನಿರುದ್ಯೋಗಿ ಯುವಜನರೂ ಆಡಳಿತ ಪಕ್ಷದ ವಿರುದ್ಧ ಮತ ಚಲಾಯಿಸಿರುವುದನ್ನು ತೋರಿವೆ. ಎಲ್ಲಾ ಚುನಾವಣಾಪೂರ್ವ ಸಮೀಕ್ಷೆಗಳು ಉದ್ಯೋಗದ ಇಶ್ಯೂ ಚುನಾವಣೆಯ ಪ್ರಮುಖ ಅಂಶವನ್ನಾಗಿರುವುದನ್ನು ಗುರುತಿಸಿದ್ದವು. ಯೋಗಿ ಆದಿತ್ಯನಾಥರ ಆಕ್ರಮಣಕಾರಿ ಪ್ರಚಾರದ ಹೊರತಾಗಿಯೂ ಮಂದಿರವು ಒಂದು ಇಶ್ಯೂವಾಗಿ ಮುನ್ನೆಲೆಗೆ ಬಂದಿಲ್ಲವೆಂಬುದನ್ನೂ ಫಲಿತಾಂಶವು ಖಚಿತಪಡಿಸಿದೆ. ದೇಶದ ಉಳಿದ ಭಾಗಗಳ ಬಗ್ಗೆ ಇದೇ ಮಾತನ್ನು ಈಗಲೇ ಹೇಳುವುದು ಸಾಧ್ಯವಿಲ್ಲವಾದರೂ ಹಿಂದಿ ಪ್ರದೇಶದ 2019ರ ಚುನಾವಣಾ ವಿಷಯವು ಇದಾಗಿರುತ್ತದೆ: ಹಿಂದೂ ಮುಸಲ್ಮಾನ್ ಅಲ್ಲ ಕಿಸಾನ್ (ರೈತ) ಮತ್ತು ಜವಾನ್ (ಯುವಜನತೆ).
ಫಲಿತಾಂಶವು ಇನ್ನೂ ಒಂದು ಪ್ರಜಾತಾಂತ್ರಿಕ ಸಂದೇಶವನ್ನು ಕಳಿಸಿದೆ. ಹಣ ಮತ್ತು ಮಾಧ್ಯಮಗಳು ಚುನಾವಣಾ ಗೆಲುವಿಗೆ ಅಗತ್ಯ, ಆದರೆ ಅವಷ್ಟೇ ಸಾಲದು. ಬಿಜೆಪಿಯು ಅದರ ಎದುರಾಳಿಗಿಂತ 10:1ರ ಅನುಪಾತದಲ್ಲಿ ಹಣ ವ್ಯಯಿಸಿರುವುದು ರಹಸ್ಯವೇನಲ್ಲ. ನಿಗೂಢವಾದ ಆದರೆ ಕಾನೂನುಬದ್ಧ ಮಾರ್ಗವಾದ ಚುನಾವಣಾ ಬಾಂಡ್‍ಗಳ ಮೂಲಕ ಒಟ್ಟು ಚುನಾವಣಾ ವಂತಿಗೆಯ ಶೇ.95ರಷ್ಟನ್ನು ಬಿಜೆಪಿಯೊಂದೇ ಪಡೆದುಕೊಂಡಿತ್ತು. ಮಾಧ್ಯಮಗಳ ಬಗ್ಗೆ ಎಷ್ಟು ಕಡಿಮೆ ಮಾತಾಡಿದರೆ ಅಷ್ಟು ಒಳ್ಳೆಯದು. ಆದರೆ ಇಷ್ಟನ್ನಂತೂ ಹೇಳಬೇಕು: ‘ಸ್ವತಂತ್ರ’ ಮಾಧ್ಯಮದ ಅತೀ ದೊಡ್ಡ ವಿಭಾಗವು ಆಡಳಿತ ಪಕ್ಷದ ಮುಖವಾಣಿಯಾಗಿ ಬದಲಾಗಿದೆಯೆಂಬುದು ಭಾರತದ ಪ್ರಜಾತಂತ್ರದ ಚರಿತ್ರೆಯ ಅತ್ಯಂತ ನಾಚಿಕೆಗೇಡು ಅಧ್ಯಾಯವಾಗಿ ಉಳಿಯಲಿದೆ. ಇದರ ಜೊತೆಗೆ ಎದುರಾಳಿ ಪಕ್ಷಗಳನ್ನು ದುರ್ಬಲಗೊಳಿಸುವ ಬಂಡಾಯ ಅಭ್ಯರ್ಥಿಗಳು ಮತ್ತು ಪಕ್ಷಗಳಿಗೆ ಬಿಜೆಪಿಯು ಹಣದ ಹೊಳೆಯನ್ನೇ ಹರಿಸಿದ್ದೂ ಎಲ್ಲರಿಗೆ ಗೊತ್ತಿರುವ ಸತ್ಯ. ಇವೆಲ್ಲವೂ ತೆಲಂಗಾಣದಲ್ಲಿ ಟಿಆರ್‍ಎಸ್‍ಗೆ ಸಹಾಯ ಮಾಡಿದಂತೆಯೇ ಬಿಜೆಪಿಗೂ ಸಹಾಯ ಮಾಡಿವೆ. ಆದರೆ, ಬಿಜೆಪಿಯ ಸೋಲು ನಮಗೆ ಮತ್ತೊಮ್ಮೆ ನೆನಪಿಸುವುದೇನೆಂದರೆ, ನೀವು ಅಸಲೀ ಮತದಾರರ ಅಸಲೀ ಇಶ್ಯೂಗಳೊಂದಿಗೆ ಜೀವಂತ ಸಂಬಂಧವಿಟ್ಟುಕೊಂಡಿರಬೇಕು.
ಮೂರನೆಯದಾಗಿ ಚುನಾವಣೆಗಳು ತೋರಿಸುತ್ತಿರುವುದೇನೆಂದರೆ ವ್ಯಕ್ತಿ ಆರಾಧನೆಗೂ ಒಂದು ಮಿತಿಯಿರುತ್ತದೆ. ಆದರೆ, ಮೋದಿಯುಗ ಮುಗಿದಿದೆ ಎಂದು ಹೇಳುವುದು ತಪ್ಪಾದೀತು. ಎಲ್ಲಾ ಸಮೀಕ್ಷೆಗಳು ತೋರುತ್ತಿರುವುದೇನೆಂದರೆ ಮೋದಿ ಈಗಲೂ ಅತ್ಯಂತ ಜನಪ್ರಿಯ ನಾಯಕ ಮತ್ತು ರಾಹುಲ್‍ಗಾಂಧಿಗಿಂತಲೂ ಮತ್ತು ತನ್ನದೇ ಪಕ್ಷಕ್ಕಿಂತಲೂ ಹೆಚ್ಚು ಜನಪ್ರಿಯ ವ್ಯಕ್ತಿ. ಆದರೆ, ಇಷ್ಟು ಹೇಳುವುದು ಸಾಧ್ಯ. ಮೋದಿ ತನ್ನ ಆಡಳಿತದ ಮೊದಲೆರಡು ವರ್ಷಗಳಲ್ಲಿ ಮಾಡಿದಂತೆ ಯಾವುದೇ ಚುನಾವಣೆಯನ್ನು ಹೇಗೆ ಬೇಕಾದರೂ ತಿರುಗಿಸುವುದು ಇನ್ನು ಮುಂದೆ ಸಾಧ್ಯವಿಲ್ಲ. ಅವರ ಮಾಂತ್ರಿಕ ಇನ್ನಿಂಗ್ಸ್ ಮುಗಿದಿದೆ; ಈಗವರು ಆರ್ಥಿಕತೆಯ ಕುರಿತು, ದ್ವೇಷದ ವಾತಾವರಣದ ಕುರಿತು, ಸಂಸ್ಥೆಗಳ ನಾಶದ ಕುರಿತು ಮತ್ತು ರಾಫೇಲ್‍ನ ಕುರಿತಂತೆ ಕಠಿಣ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ. ಕಾಂಗ್ರೆಸ್‍ನ ಅತ್ಯಂತ ದೊಡ್ಡ ಗೆಲುವು ಎಲ್ಲಿಂದ ಬಂತೆಂದು ನೋಡಿ, ವ್ಯಕ್ತಿ ಆರಾಧನೆಯಿರಲಿ ಸರಿಯಾಗಿ ಒಬ್ಬ ದೊಡ್ಡ ನಾಯಕನೂ ಇಲ್ಲದಿದ್ದ ಛತ್ತೀಸ್‍ಗಢದಿಂದ ಅದು ಬಂದಿದೆ.
ಈ ಫಲಿತಾಂಶವು ಆಡಳಿತ ಕೂಟದಲ್ಲಿದ್ದ ದುರಹಂಕಾರಕ್ಕೆ ಪೆಟ್ಟು ಕೊಟ್ಟಿರುವಂತೆಯೇ, ವಿರೋಧಿ ಕೂಟದಲ್ಲಿರುವ ಅಲ್ಪತೃಪ್ತಿಗೂ ಮದ್ದು ನೀಡಿದೆ. ರಾಜಸ್ತಾನದಲ್ಲಿ ನಿರೀಕ್ಷಿಸಲಾಗಿದ್ದ ದೊಡ್ಡ ಗೆಲುವನ್ನು ಪಡೆಯಲಾಗದ್ದು ಮತ್ತು ಮಧ್ಯಪ್ರದೇಶದಲ್ಲಿ ಬಹುಮತ ಸಿಗದಿರುವುದು ಕಾಂಗ್ರೆಸ್ ಸುಮ್ಮನೇ ಕುಳಿತು ಮೋದಿಯ ಆಡಳಿತವು ತನ್ನಂತೆ ತಾನೇ ಕರಗಲಿ ಎಂದು ಬಯಸಲಾಗುವುದಿಲ್ಲವೆಂಬುದು ಸ್ಪಷ್ಟ. ವಸುಂಧರಾ ರಾಜೇ ಸರ್ಕಾರದ ವಿರುದ್ಧ ವ್ಯಕ್ತವಾಗುತ್ತಿದ್ದ ಆಕ್ರೋಶ ಮತ್ತು ಶಿವರಾಜ್ ಚೌಹಾಣ್‍ರ ಆಡಳಿತದಲ್ಲಿದ್ದ ಜನರ ವ್ಯಾಪಕ ಸಂಕಷ್ಟವನ್ನು ಕಾಂಗ್ರೆಸ್ ತನ್ನ ಗೆಲುವಾಗಿ ಪರಿವರ್ತಿಸಲಾಗಲಿಲ್ಲವೆಂಬುದು, ಆ ಪಕ್ಷದೊಳಗೆ ಇರುವ ಗಂಭೀರ ಸಮಸ್ಯೆಯನ್ನು ಎತ್ತಿ ತೋರುತ್ತದೆ. ಕಳೆದ ಐದು ವರ್ಷಗಳಿಂದ ವಿಪಕ್ಷದಲ್ಲಿರುವ ಕಾಂಗ್ರೆಸ್ಸು, ಆ ಪಾತ್ರಕ್ಕೆ ತಕ್ಕಂತೆ ಬೀದಿಯಲ್ಲಿ ಪ್ರತಿಭಟಿಸಿದ್ದು ಎಲ್ಲೂ ಕಾಣಲಿಲ್ಲ. ಛತ್ತೀಸ್‍ಗಢದಲ್ಲಿ ಇದು ಭಿನ್ನವಾಗಿತ್ತು; ಅಲ್ಲಿನ ನಾಯಕತ್ವವು ತಳಮಟ್ಟದ ಚಳವಳಿ ಮತ್ತು ಪ್ರತಿಭಟನೆಗಳನ್ನು ಕಳೆದೈದು ವರ್ಷಗಳಲ್ಲಿ ನಡೆಸುತ್ತಾ ಕ್ರಿಯಾಶೀಲವಾಗಿತ್ತು.
ಕಡೆಯದಾಗಿ, ಚುನಾವಣಾ ಫಲಿತಾಂಶವು ಚುನಾವಣಾ ಅಂಕಗಣಿತಕ್ಕಿರುವ ಮಿತಿಯನ್ನೂ ತೋರಿಸಿದೆ. ಕಾಗದದ ಮೇಲೆ ಬಲಿಷ್ಠವಾಗಿದ್ದ ಮೈತ್ರಿಯನ್ನು ಕಾಂಗ್ರೆಸ್ಸು ತೆಲಂಗಾಣದಲ್ಲಿ ಮಾಡಿಕೊಂಡಿತ್ತು. ಲೆಕ್ಕ ಹಾಕಿ ನೋಡಿದರೆ, ಕಾಂಗ್ರೆಸ್-ಟಿಡಿಪಿ-ಸಿಪಿಐ-ಟಿಜೆಎಸ್‍ನ ಸಂಯುಕ್ತ ಶಕ್ತಿಯು ಟಿಆರ್‍ಎಸ್‍ಗಿಂತ ಎಷ್ಟೋ ಹೆಚ್ಚಿನದ್ದಾಗಿತ್ತು. ಆದರೆ, ತೆಲಂಗಾಣದ ಹುಟ್ಟಿಗೇ ವಿರುದ್ಧವಾಗಿದ್ದ ಪಕ್ಷದೊಂದಿಗಿನ ಅಪಕ್ವ ಮೈತ್ರಿಯು ಜನರಿಂದ ತಿರಸ್ಕರಿಸಲ್ಪಟ್ಟಿತು. ಛತ್ತೀಸ್‍ಗಢದಲ್ಲೂ ಅಜಿತ್ ಜೋಗಿ-ಬಿಎಸ್‍ಪಿ ಕೂಟವು ಕಾಂಗ್ರೆಸ್‍ಅನ್ನು ಬೀಳಿಸಬೇಕಿತ್ತು. ಆದರೆ, ಛತ್ತೀಸ್‍ಗಡದ ಜನರು ರಾಜ್ಯ ರಾಜಕಾರಣದ ಅತ್ಯಂತ ಸಂಶಯಾಸ್ಪದ ದಲ್ಲಾಳಿಯನ್ನು ತಿರಸ್ಕರಿಸಿದರು. 2019ಕ್ಕೆ ಮಹಾಘಟಬಂಧನ ಮಾಡುವ ಪ್ರಯತ್ನದಲ್ಲಿರುವ ತೀವ್ರ ಸಮಸ್ಯೆಯ ಬಗ್ಗೆ ಇದು ಬೆಳಕು ಚೆಲ್ಲುತ್ತದೆ. ಮೈತ್ರಿಗಳು ಅಗತ್ಯ, ಆದರೆ ಅವು ವಿಶ್ವಾಸಾರ್ಹತೆಗೆ ಬದಲಿಯಾಗಿ ಕೆಲಸಕ್ಕೆ ಬರುವುದಿಲ್ಲ. ಚುನಾವಣೆಗಳೆಂದರೆ ನೀವು ಕನಸನ್ನು ಬಿತ್ತಬೇಕು, ಭರವಸೆ ಹುಟ್ಟಿಸಬೇಕು, ಕಥನವನ್ನು ಕಟ್ಟಬೇಕು. ಈಗ ಹುಟ್ಟಿಕೊಳ್ಳುತ್ತಿರುವ ಮೋದಿ-ವಿರೋಧಿ ಕೂಟದಲ್ಲಿ ಅದಿನ್ನೂ ರೂಪುಗೊಂಡಿಲ್ಲ.
2019ರ ದಾರಿಯಲ್ಲಿ ಬಿಜೆಪಿಯು ಐದು ಘೋಷಣೆಗಳೊಂದಿಗೆ ಹೊರಟಿದೆ: ಅದರ ಭಾರೀ ಯಂತ್ರಾಂಗ, ಮೋದಿ, ಮಂದಿರ, ಮಾಧ್ಯಮ ಮತ್ತು ಹಣ (Machinery, Modi, Mandir, Media, Money). ಈ ವಿಧಾನಸಭಾ ಚುನಾವಣೆಗಳು ಮೊದಲ ಮೂರನ್ನು ಸರಿ ಮಾಡಿಕೊಳ್ಳಲು ಸೂಚಿಸುತ್ತವೆ. ಬಿಜೆಪಿಯ ಸಂಘಟನಾತ್ಮಕ ಶಕ್ತಿಯು ಅಜೇಯವಲ್ಲದಿದ್ದರೂ, ಮಣಿಸುವುದು ಸುಲಭವಲ್ಲ. ಮೋದಿಯನ್ನು ತಳ್ಳಿ ಹಾಕುವುದು ಸಾಧ್ಯವಿಲ್ಲ, ಆದರೆ ಜನಪ್ರಿಯತೆ ನಿಸ್ಸಂದೇಹವಾಗಿ ಕಡಿಮೆಯಾಗಿದೆ. ಮಂದಿರವು ನಿಷ್ಠಾವಂತರಲ್ಲಿ ಉತ್ಸಾಹ ಮೂಡಿಸುತ್ತದಾದರೂ, ಮತದಾರರನ್ನು ಸೆಳೆಯಲಾಗದು. ಬದಲಿಗೆ ಉಳಿದೆರಡನ್ನೂ ಅದು ಬದಲಿಸಬಲ್ಲದು. ಮಾಧ್ಯಮ ದೊರೆಗಳು ಅವರ ಇದುವರೆಗಿನ ರೀತಿಯ ಕುರಿತು ಪುನರಾಲೋಚಿಸುತ್ತಾರೆ. ಕನಿಷ್ಠ ಇವತ್ತಿರುವ ರೀತಿಯ ಆಡಳಿತದ ಪರ ತುತ್ತೂರಿಯು ಸ್ವಲ್ಪವಾದರೂ ಕಡಿಮೆಯಾಗುತ್ತದೆಂದು ಆಶಿಸಬಹುದು. ಹಾಗೆಯೇ ದೊಡ್ಡ ಉದ್ದಿಮೆದಾರರು ತಮ್ಮೆಲ್ಲಾ ಮೊಟ್ಟೆಗಳನ್ನು ಒಂದೇ ಬುಟ್ಟಿಯಲ್ಲಿ ಹಾಕಲು ಬಯಸುವುದಿಲ್ಲ. ಚುನಾವಣಾ ರಂಗದಲ್ಲಿ ಉಳಿಯಲು ಬೇಕಾದ ಸಂಪನ್ಮೂಲವನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೂ ಪಡೆದುಕೊಳ್ಳಲು ಆರಂಭವಾಗುತ್ತದೆ. ಅಷ್ಟು ಅಸಮಾನವಲ್ಲದ ಮೈದಾನದಲ್ಲಿ 2019ರ ಲೋಕಸಭಾ ಚುನಾವಣೆಯ ಸಂಗ್ರಾಮ ನಡೆಯಲಿದೆ. ಪ್ರಜಾತಂತ್ರಕ್ಕೆ ಅಗತ್ಯವಿದ್ದ ತಿದ್ದುಪಡಿಯು ಬಹಳ ತಡವಾಗಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...