Homeಮುಖಪುಟ'2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ' | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ...

‘2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ’ | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ ನಿರಾಕರಿಸಿದ ಬಿಜೆಪಿಯ ದೇವೇಂದ್ರ ಫಡ್ನವಿಸ್

- Advertisement -
- Advertisement -

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ, ರಾಜ್ಯದಲ್ಲಿ ಬಿಜೆಪಿ-ಎನ್‌ಸಿಪಿ ಮೈತ್ರಿ ಸರ್ಕಾರ ರಚನೆ ಮಾಡುವ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು ಎಂಬ ವರದಿಗಳನ್ನು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶುಕ್ರವಾರ ನಿರಾಕರಿಸಿದ್ದಾರೆ. ಶರದ್ ಮತ್ತು

“ನಾನು ಮತ್ತು ನನ್ನ ಸೋದರ ಸಂಬಂಧಿ ಅಜಿತ್ ಪವಾರ್ ಉದ್ಯಮಿ ಅದಾನಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದೆವು” ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಫಡ್ನವಿಸ್, ಅದಾನಿ ಈ ಹಿಂದೆ ನಮ್ಮ ಯಾವುದೇ ಸಭೆಗಳಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಶರದ್ ಮತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯೂಸ್‌ಲಾಂಡ್ರಿ ಮತ್ತು ದಿ ನ್ಯೂಸ್ ಮಿನಿಟ್‌ಗೆ ನೀಡಿದ ಸಂದರ್ಶನಗಳಲ್ಲಿ ಮಾತನಾಡಿರುವ ಶರದ್ ಪವಾರ್ ಅವರು, ಅದಾನಿ ಅವರು 2019 ರಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿಯ ಬೆಂಬಲವನ್ನು ಕೋರುವ ಎನ್‌ಸಿಪಿಯ ಸಾಧ್ಯತೆಯ ಕುರಿತು ಚರ್ಚೆ ನಡೆಸಲಾಗಿತ್ತು ಆರೋಪಿಸಿದ್ದರು, ಇದರ ನಂತರ ಫಡ್ನವೀಸ್ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಾನು, ಅಜಿತ್ ಪವಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅದಾನಿ ಉಪಸ್ಥಿತರಿದ್ದರು ಎಂದು ಶರದ್ ಪವಾರ್ ಹೇಳಿಕೊಂಡಿದ್ದಾರೆ. ಅದಕ್ಕೂ ಮುಂಚೆ ಅಜಿತ್ ಪವಾರ್ ಅವರು ಕೂಡಾ ಈ ಸಭೆಯ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

2019ರ ಚುನಾವಣೆಯ ನಂತರ ಶರದ್ ಪವಾರ್ ಅವರ ಎನ್‌ಸಿಪಿಯಿಂದ ಬಂಡೆದ್ದಿದ್ದ ಅಜಿತ್ ಪವಾರ್ ಅವರ ಬಣದೊಂದಿಗೆ ಬಿಜೆಪಿ ರಚಿಸಿದ್ದ 3 ದಿನಗಳ ಸರ್ಕಾರಕ್ಕೆ ಮುನ್ನವೆ ಈ ಸಭೆ ನಡೆದಿತ್ತು. ಮೂರೂವರೆ ದಿನಗಳ ಅವಧಿಯ ಅಲ್ಪಾವಧಿ ಸರ್ಕಾರದಲ್ಲಿ ಫಡ್ನವಿಸ್ ಮುಖ್ಯಮಂತ್ರಿ ಮತ್ತು ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಅದಾಗ್ಯೂ, ನಾಟಕೀಯ ಬೆಳವಣಿಗೆಯ ನಂತರ, ಅಜಿತ್ ಪವಾರ್ ಅವರು ಮತ್ತೆ ಅವಿಭಜಿತ ಎನ್‌ಸಿಪಿಗೆ ಮರಳಿದ್ದು ಮೂರು ದಿನಗಳ ಸರ್ಕಾರ ಉರುಳಿತ್ತು. ಅದರ ನಂತರ ಎನ್‌ಸಿಪಿಯು ಕಾಂಗ್ರೆಸ್ ಮತ್ತು ಅವಿಭಜಿತ ಶಿವಸೇನೆಯೊಂದಿಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಿತ್ತು. ಆದಾಗ್ಯೂ, 2022ರ ಜೂನ್ ತಿಂಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪು ಬಂಡಾಯವೆದ್ದು, ಬಿಜೆಪಿ ಜೊತೆಗೆ ಸೇರಿದ ನಂತರ ಸರ್ಕಾರವು ಪತನವಾಯಿತು.

ಇದರ ನಂತರ ಶಿಂಧೆ ಅವರು ಬಿಜೆಪಿ ಜೊತೆಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು ಇದರಲ್ಲಿ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಅದಾಗಿ ಒಂದು ವರ್ಷದ ನಂತರ, ಹಲವಾರು ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಮತ್ತೆ ಬಂಡಾಯವೆದ್ದು ಆಡಳಿತರೂಢ ಸಮ್ಮಿಶ್ರ ಸರ್ಕಾರಕ್ಕೆ ಸೇರಿ, ಅವರೂ ಉಪಮುಖ್ಯಮಂತ್ರಿಯಾದರು.

ಅಜಿತ್ ಪವಾರ್ ಅವರ ವಿಭಜನೆಯ ಪರಿಣಾಮವಾಗಿ ಎನ್‌ಸಿಪಿಯ ಒಂದು ಬಣ ಅವರನ್ನು ಬೆಂಬಲಿಸಿದ್ದರೆ, ಇನ್ನೊಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿತು.

288 ಅಸೆಂಬ್ಲಿ ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಮೂರು ದಿನಗಳ ನಂತರ ನಡೆಯಲಿದೆ. ಶಿವಸೇನೆ ಮತ್ತು ಎನ್‌ಸಿಪಿ ವಿಭಜನೆಯ ನಂತರ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ.

ಇದನ್ನೂ ಓದಿ: ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...