Homeಮುಖಪುಟ'2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ' | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ...

‘2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ’ | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ ನಿರಾಕರಿಸಿದ ಬಿಜೆಪಿಯ ದೇವೇಂದ್ರ ಫಡ್ನವಿಸ್

- Advertisement -
- Advertisement -

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ, ರಾಜ್ಯದಲ್ಲಿ ಬಿಜೆಪಿ-ಎನ್‌ಸಿಪಿ ಮೈತ್ರಿ ಸರ್ಕಾರ ರಚನೆ ಮಾಡುವ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು ಎಂಬ ವರದಿಗಳನ್ನು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶುಕ್ರವಾರ ನಿರಾಕರಿಸಿದ್ದಾರೆ. ಶರದ್ ಮತ್ತು

“ನಾನು ಮತ್ತು ನನ್ನ ಸೋದರ ಸಂಬಂಧಿ ಅಜಿತ್ ಪವಾರ್ ಉದ್ಯಮಿ ಅದಾನಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದೆವು” ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಫಡ್ನವಿಸ್, ಅದಾನಿ ಈ ಹಿಂದೆ ನಮ್ಮ ಯಾವುದೇ ಸಭೆಗಳಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಶರದ್ ಮತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯೂಸ್‌ಲಾಂಡ್ರಿ ಮತ್ತು ದಿ ನ್ಯೂಸ್ ಮಿನಿಟ್‌ಗೆ ನೀಡಿದ ಸಂದರ್ಶನಗಳಲ್ಲಿ ಮಾತನಾಡಿರುವ ಶರದ್ ಪವಾರ್ ಅವರು, ಅದಾನಿ ಅವರು 2019 ರಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿಯ ಬೆಂಬಲವನ್ನು ಕೋರುವ ಎನ್‌ಸಿಪಿಯ ಸಾಧ್ಯತೆಯ ಕುರಿತು ಚರ್ಚೆ ನಡೆಸಲಾಗಿತ್ತು ಆರೋಪಿಸಿದ್ದರು, ಇದರ ನಂತರ ಫಡ್ನವೀಸ್ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಾನು, ಅಜಿತ್ ಪವಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅದಾನಿ ಉಪಸ್ಥಿತರಿದ್ದರು ಎಂದು ಶರದ್ ಪವಾರ್ ಹೇಳಿಕೊಂಡಿದ್ದಾರೆ. ಅದಕ್ಕೂ ಮುಂಚೆ ಅಜಿತ್ ಪವಾರ್ ಅವರು ಕೂಡಾ ಈ ಸಭೆಯ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

2019ರ ಚುನಾವಣೆಯ ನಂತರ ಶರದ್ ಪವಾರ್ ಅವರ ಎನ್‌ಸಿಪಿಯಿಂದ ಬಂಡೆದ್ದಿದ್ದ ಅಜಿತ್ ಪವಾರ್ ಅವರ ಬಣದೊಂದಿಗೆ ಬಿಜೆಪಿ ರಚಿಸಿದ್ದ 3 ದಿನಗಳ ಸರ್ಕಾರಕ್ಕೆ ಮುನ್ನವೆ ಈ ಸಭೆ ನಡೆದಿತ್ತು. ಮೂರೂವರೆ ದಿನಗಳ ಅವಧಿಯ ಅಲ್ಪಾವಧಿ ಸರ್ಕಾರದಲ್ಲಿ ಫಡ್ನವಿಸ್ ಮುಖ್ಯಮಂತ್ರಿ ಮತ್ತು ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಅದಾಗ್ಯೂ, ನಾಟಕೀಯ ಬೆಳವಣಿಗೆಯ ನಂತರ, ಅಜಿತ್ ಪವಾರ್ ಅವರು ಮತ್ತೆ ಅವಿಭಜಿತ ಎನ್‌ಸಿಪಿಗೆ ಮರಳಿದ್ದು ಮೂರು ದಿನಗಳ ಸರ್ಕಾರ ಉರುಳಿತ್ತು. ಅದರ ನಂತರ ಎನ್‌ಸಿಪಿಯು ಕಾಂಗ್ರೆಸ್ ಮತ್ತು ಅವಿಭಜಿತ ಶಿವಸೇನೆಯೊಂದಿಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಿತ್ತು. ಆದಾಗ್ಯೂ, 2022ರ ಜೂನ್ ತಿಂಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪು ಬಂಡಾಯವೆದ್ದು, ಬಿಜೆಪಿ ಜೊತೆಗೆ ಸೇರಿದ ನಂತರ ಸರ್ಕಾರವು ಪತನವಾಯಿತು.

ಇದರ ನಂತರ ಶಿಂಧೆ ಅವರು ಬಿಜೆಪಿ ಜೊತೆಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು ಇದರಲ್ಲಿ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಅದಾಗಿ ಒಂದು ವರ್ಷದ ನಂತರ, ಹಲವಾರು ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಮತ್ತೆ ಬಂಡಾಯವೆದ್ದು ಆಡಳಿತರೂಢ ಸಮ್ಮಿಶ್ರ ಸರ್ಕಾರಕ್ಕೆ ಸೇರಿ, ಅವರೂ ಉಪಮುಖ್ಯಮಂತ್ರಿಯಾದರು.

ಅಜಿತ್ ಪವಾರ್ ಅವರ ವಿಭಜನೆಯ ಪರಿಣಾಮವಾಗಿ ಎನ್‌ಸಿಪಿಯ ಒಂದು ಬಣ ಅವರನ್ನು ಬೆಂಬಲಿಸಿದ್ದರೆ, ಇನ್ನೊಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿತು.

288 ಅಸೆಂಬ್ಲಿ ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಮೂರು ದಿನಗಳ ನಂತರ ನಡೆಯಲಿದೆ. ಶಿವಸೇನೆ ಮತ್ತು ಎನ್‌ಸಿಪಿ ವಿಭಜನೆಯ ನಂತರ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ.

ಇದನ್ನೂ ಓದಿ: ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...