Homeಮುಖಪುಟ'2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ' | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ...

‘2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ’ | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ ನಿರಾಕರಿಸಿದ ಬಿಜೆಪಿಯ ದೇವೇಂದ್ರ ಫಡ್ನವಿಸ್

- Advertisement -
- Advertisement -

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ, ರಾಜ್ಯದಲ್ಲಿ ಬಿಜೆಪಿ-ಎನ್‌ಸಿಪಿ ಮೈತ್ರಿ ಸರ್ಕಾರ ರಚನೆ ಮಾಡುವ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು ಎಂಬ ವರದಿಗಳನ್ನು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶುಕ್ರವಾರ ನಿರಾಕರಿಸಿದ್ದಾರೆ. ಶರದ್ ಮತ್ತು

“ನಾನು ಮತ್ತು ನನ್ನ ಸೋದರ ಸಂಬಂಧಿ ಅಜಿತ್ ಪವಾರ್ ಉದ್ಯಮಿ ಅದಾನಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದೆವು” ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಫಡ್ನವಿಸ್, ಅದಾನಿ ಈ ಹಿಂದೆ ನಮ್ಮ ಯಾವುದೇ ಸಭೆಗಳಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಶರದ್ ಮತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯೂಸ್‌ಲಾಂಡ್ರಿ ಮತ್ತು ದಿ ನ್ಯೂಸ್ ಮಿನಿಟ್‌ಗೆ ನೀಡಿದ ಸಂದರ್ಶನಗಳಲ್ಲಿ ಮಾತನಾಡಿರುವ ಶರದ್ ಪವಾರ್ ಅವರು, ಅದಾನಿ ಅವರು 2019 ರಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿಯ ಬೆಂಬಲವನ್ನು ಕೋರುವ ಎನ್‌ಸಿಪಿಯ ಸಾಧ್ಯತೆಯ ಕುರಿತು ಚರ್ಚೆ ನಡೆಸಲಾಗಿತ್ತು ಆರೋಪಿಸಿದ್ದರು, ಇದರ ನಂತರ ಫಡ್ನವೀಸ್ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಾನು, ಅಜಿತ್ ಪವಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅದಾನಿ ಉಪಸ್ಥಿತರಿದ್ದರು ಎಂದು ಶರದ್ ಪವಾರ್ ಹೇಳಿಕೊಂಡಿದ್ದಾರೆ. ಅದಕ್ಕೂ ಮುಂಚೆ ಅಜಿತ್ ಪವಾರ್ ಅವರು ಕೂಡಾ ಈ ಸಭೆಯ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

2019ರ ಚುನಾವಣೆಯ ನಂತರ ಶರದ್ ಪವಾರ್ ಅವರ ಎನ್‌ಸಿಪಿಯಿಂದ ಬಂಡೆದ್ದಿದ್ದ ಅಜಿತ್ ಪವಾರ್ ಅವರ ಬಣದೊಂದಿಗೆ ಬಿಜೆಪಿ ರಚಿಸಿದ್ದ 3 ದಿನಗಳ ಸರ್ಕಾರಕ್ಕೆ ಮುನ್ನವೆ ಈ ಸಭೆ ನಡೆದಿತ್ತು. ಮೂರೂವರೆ ದಿನಗಳ ಅವಧಿಯ ಅಲ್ಪಾವಧಿ ಸರ್ಕಾರದಲ್ಲಿ ಫಡ್ನವಿಸ್ ಮುಖ್ಯಮಂತ್ರಿ ಮತ್ತು ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಅದಾಗ್ಯೂ, ನಾಟಕೀಯ ಬೆಳವಣಿಗೆಯ ನಂತರ, ಅಜಿತ್ ಪವಾರ್ ಅವರು ಮತ್ತೆ ಅವಿಭಜಿತ ಎನ್‌ಸಿಪಿಗೆ ಮರಳಿದ್ದು ಮೂರು ದಿನಗಳ ಸರ್ಕಾರ ಉರುಳಿತ್ತು. ಅದರ ನಂತರ ಎನ್‌ಸಿಪಿಯು ಕಾಂಗ್ರೆಸ್ ಮತ್ತು ಅವಿಭಜಿತ ಶಿವಸೇನೆಯೊಂದಿಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಿತ್ತು. ಆದಾಗ್ಯೂ, 2022ರ ಜೂನ್ ತಿಂಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪು ಬಂಡಾಯವೆದ್ದು, ಬಿಜೆಪಿ ಜೊತೆಗೆ ಸೇರಿದ ನಂತರ ಸರ್ಕಾರವು ಪತನವಾಯಿತು.

ಇದರ ನಂತರ ಶಿಂಧೆ ಅವರು ಬಿಜೆಪಿ ಜೊತೆಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು ಇದರಲ್ಲಿ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಅದಾಗಿ ಒಂದು ವರ್ಷದ ನಂತರ, ಹಲವಾರು ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಮತ್ತೆ ಬಂಡಾಯವೆದ್ದು ಆಡಳಿತರೂಢ ಸಮ್ಮಿಶ್ರ ಸರ್ಕಾರಕ್ಕೆ ಸೇರಿ, ಅವರೂ ಉಪಮುಖ್ಯಮಂತ್ರಿಯಾದರು.

ಅಜಿತ್ ಪವಾರ್ ಅವರ ವಿಭಜನೆಯ ಪರಿಣಾಮವಾಗಿ ಎನ್‌ಸಿಪಿಯ ಒಂದು ಬಣ ಅವರನ್ನು ಬೆಂಬಲಿಸಿದ್ದರೆ, ಇನ್ನೊಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿತು.

288 ಅಸೆಂಬ್ಲಿ ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಮೂರು ದಿನಗಳ ನಂತರ ನಡೆಯಲಿದೆ. ಶಿವಸೇನೆ ಮತ್ತು ಎನ್‌ಸಿಪಿ ವಿಭಜನೆಯ ನಂತರ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ.

ಇದನ್ನೂ ಓದಿ: ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...