Homeಅಂತರಾಷ್ಟ್ರೀಯ2019ರ ನೋಬೆಲ್ ಪ್ರಶಸ್ತಿಗೆ ಕೆನಡಾದ ಮೂವರು ವಿಜ್ಞಾನಿಗಳು ಆಯ್ಕೆ

2019ರ ನೋಬೆಲ್ ಪ್ರಶಸ್ತಿಗೆ ಕೆನಡಾದ ಮೂವರು ವಿಜ್ಞಾನಿಗಳು ಆಯ್ಕೆ

- Advertisement -
- Advertisement -

ವಿಶ್ವ ವಿಜ್ಞಾನದಲ್ಲಿ ಬ್ರಹ್ಮಾಂಡದ ವಿಕಾಸ ಮತ್ತು ತಿಳುವಳಿಕೆ ಸುಧಾರಣೆ ಹಾಗೂ ಕ್ರಾಂತಿಕಾರಕ ಸಂಶೋಧನೆಯ ಸಾಧನೆಗೆ ಮೂವರು ವಿಜ್ಞಾನಿಗಳು ನೋಬೆಲ್ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಭೌತಶಾಸ್ತ್ರದಲ್ಲಿ ಮಾಡಿದ ಮಹಾನ್‌ ಸಾಧನೆಗಾಗಿ 2019ರ ನೋಬೆಲ್ ಪ್ರಶಸ್ತಿಯನ್ನು ಜೇಮ್ಸ್ ಪೀಬಲ್ಸ್, ಮೈಕೆಲ್ ಮೇಯರ್, ಡೀಡಿಯರ್ ಕ್ವೆಲೋಜ್ ಪಡೆದುಕೊಂಡಿದ್ದಾರೆ.

ಕೆನಡಾ ವಿಜ್ಞಾನಿ ಜೇಮ್ಸ್ ಪೀಬಲ್ಸ್‍ಗೆ ಬ್ರಹ್ಮಾಂಡದ ವಿಕಾಸದ ಸೈದ್ಧಾಂತಿಕ ಆವಿಷ್ಕಾರಗಳಿಗಾಗಿ ಸ್ವೀಡಿಶ್ ಕ್ರೋನರ್ ಬಹುಮಾನ ನೀಡಲಾಗಿದೆ. ಸ್ಟಾಕ್‍ಹೋಮ್‍ನ ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸ್ ಪ್ರಶಸ್ತಿ ಪ್ರದಾನ ಮಾಡಿದೆ. ಇನ್ನು ಖಗೋಳ ವಿಜ್ಞಾನಿಗಳಾದ ಮೈಕೆಲ್ ಮೇಯರ್, ಡೀಡಿಯರ್ ಕ್ವೆಲೋಜ್ ಜೋಡಿ, ಸೌರವ್ಯೂಹದಿಂದ ಹೊರಗಿರುವ ಮೊದಲ ಗ್ರಹ ಕಂಡು ಹಿಡಿದಿದ್ದಕ್ಕಾಗಿ ಪ್ರಶಸ್ತಿ ನೀಡಲಾಗಿದೆ.

ಜೇಮ್ಸ್ ಪೀಬಲ್ಸ್ ಅವರು ಭೌತಿಕ ವಿಶ್ವವಿಜ್ಞಾನದ ಕುರಿತು ಸಂಶೋಧನೆ ನಡೆಸಿದ್ದರು. ಕಳೆದ 50 ವರ್ಷಗಳಲ್ಲಿ ಭೌತಿಕ ವಿಶ್ವ ವಿಜ್ಞಾನದಲ್ಲಿ ನಡೆದ ಬೆಳವಣಿಗೆಗಳು, ಊಹಾಪೋಹಗಳು, ರೂಪಾಂತರಕ್ಕೆ ಅಡಿಪಾಯ ಹಾಕಿದ ಸಂಗತಿಗಾಗಿ ಪೀಬಲ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೇಯರ್ ಮತ್ತು ಕ್ವೆಲೋಜ್ 1995ರಲ್ಲಿ ಪೆಗಾಸನ್ ನಕ್ಷತ್ರಪುಂಜದಲ್ಲಿ 50 ವರ್ಷಗಳವರೆಗೆ ಬೆಳಕಿನಿಂದ ದೂರವಿದ್ದ ಮೊದಲ ಗ್ರಹವನ್ನು ಕಂಡು ಹಿಡಿದಿದ್ದರು. ಅಂದಿನಿಂದ ಇಬ್ಬರೂ ಖಗೋಳಶಾಸ್ತ್ರಜ್ಞರು ಸಾವಿರಾರು ಗ್ರಹಗಳನ್ನು ಕಂಡು ಹಿಡಿದಿದ್ದಾರೆ. ಅಲ್ಲದೇ ಸೌರವ್ಯೂಹವನ್ನು ಮೀರಿದ ಪ್ರಪಂಚಗಳ ಕುರಿತು ಆವಿಷ್ಕಾರ, ಕ್ಷೀರಪಥದ ಬಗ್ಗೆ ಇರುವ ಮಾಹಿತಿ ಹಾಗೂ ಹೆಚ್ಚಿನ ತಿಳುವಳಿಕೆ ಮೂಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂತಸ ಹಂಚಿಕೊಂಡ ಜೇಮ್ಸ್ ಪೀಬಲ್ಸ್, ನಾನು ಅಂದುಕೊಂಡಿದ್ದ ಒಂದೆರಡು ಸಂಗತಿಗಳನ್ನು ಸಂಶೋಧಿಸಿದ್ದೇನೆ. ವಿಶ್ವವಿಜ್ಞಾನದಲ್ಲಿ ಅವುಗಳ ಪ್ರಾಮುಖ್ಯವನ್ನು ಇದ್ದಂತೆ ಸ್ವೀಕರಿಸಿ, ಕೆಲ ಸಂಗತಿಗಳನ್ನು ಕಂಡುಕೊಂಡಿದ್ದೇನೆ. ಪ್ರಶಸ್ತಿ ಮತ್ತು ಪದಕಗಳು ಪ್ರಶಂಸೆಗಿಂತ ಹೆಚ್ಚು ಆಕರ್ಷಕವಾಗಿರುತ್ತವೆ. ಆದರೆ ಪ್ರಶಸ್ತಿಗಳು ನಮ್ಮ ಯೋಜನೆಗಳ ಭಾಗವಾಗಿರುವುದಿಲ್ಲ. ನಿಮ್ಮನ್ನು ವಿಜ್ಞಾನ ಆಕರ್ಷಿಸಿದಾಗ ಮಾತ್ರ ನೀವು ವಿಜ್ಞಾನದೊಳಗೆ ಒಂದಾಗಲು ಸಾಧ್ಯ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...