Homeಅಂತರಾಷ್ಟ್ರೀಯ2019ರ ನೋಬೆಲ್ ಪ್ರಶಸ್ತಿಗೆ ಕೆನಡಾದ ಮೂವರು ವಿಜ್ಞಾನಿಗಳು ಆಯ್ಕೆ

2019ರ ನೋಬೆಲ್ ಪ್ರಶಸ್ತಿಗೆ ಕೆನಡಾದ ಮೂವರು ವಿಜ್ಞಾನಿಗಳು ಆಯ್ಕೆ

- Advertisement -
- Advertisement -

ವಿಶ್ವ ವಿಜ್ಞಾನದಲ್ಲಿ ಬ್ರಹ್ಮಾಂಡದ ವಿಕಾಸ ಮತ್ತು ತಿಳುವಳಿಕೆ ಸುಧಾರಣೆ ಹಾಗೂ ಕ್ರಾಂತಿಕಾರಕ ಸಂಶೋಧನೆಯ ಸಾಧನೆಗೆ ಮೂವರು ವಿಜ್ಞಾನಿಗಳು ನೋಬೆಲ್ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಭೌತಶಾಸ್ತ್ರದಲ್ಲಿ ಮಾಡಿದ ಮಹಾನ್‌ ಸಾಧನೆಗಾಗಿ 2019ರ ನೋಬೆಲ್ ಪ್ರಶಸ್ತಿಯನ್ನು ಜೇಮ್ಸ್ ಪೀಬಲ್ಸ್, ಮೈಕೆಲ್ ಮೇಯರ್, ಡೀಡಿಯರ್ ಕ್ವೆಲೋಜ್ ಪಡೆದುಕೊಂಡಿದ್ದಾರೆ.

ಕೆನಡಾ ವಿಜ್ಞಾನಿ ಜೇಮ್ಸ್ ಪೀಬಲ್ಸ್‍ಗೆ ಬ್ರಹ್ಮಾಂಡದ ವಿಕಾಸದ ಸೈದ್ಧಾಂತಿಕ ಆವಿಷ್ಕಾರಗಳಿಗಾಗಿ ಸ್ವೀಡಿಶ್ ಕ್ರೋನರ್ ಬಹುಮಾನ ನೀಡಲಾಗಿದೆ. ಸ್ಟಾಕ್‍ಹೋಮ್‍ನ ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸ್ ಪ್ರಶಸ್ತಿ ಪ್ರದಾನ ಮಾಡಿದೆ. ಇನ್ನು ಖಗೋಳ ವಿಜ್ಞಾನಿಗಳಾದ ಮೈಕೆಲ್ ಮೇಯರ್, ಡೀಡಿಯರ್ ಕ್ವೆಲೋಜ್ ಜೋಡಿ, ಸೌರವ್ಯೂಹದಿಂದ ಹೊರಗಿರುವ ಮೊದಲ ಗ್ರಹ ಕಂಡು ಹಿಡಿದಿದ್ದಕ್ಕಾಗಿ ಪ್ರಶಸ್ತಿ ನೀಡಲಾಗಿದೆ.

ಜೇಮ್ಸ್ ಪೀಬಲ್ಸ್ ಅವರು ಭೌತಿಕ ವಿಶ್ವವಿಜ್ಞಾನದ ಕುರಿತು ಸಂಶೋಧನೆ ನಡೆಸಿದ್ದರು. ಕಳೆದ 50 ವರ್ಷಗಳಲ್ಲಿ ಭೌತಿಕ ವಿಶ್ವ ವಿಜ್ಞಾನದಲ್ಲಿ ನಡೆದ ಬೆಳವಣಿಗೆಗಳು, ಊಹಾಪೋಹಗಳು, ರೂಪಾಂತರಕ್ಕೆ ಅಡಿಪಾಯ ಹಾಕಿದ ಸಂಗತಿಗಾಗಿ ಪೀಬಲ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೇಯರ್ ಮತ್ತು ಕ್ವೆಲೋಜ್ 1995ರಲ್ಲಿ ಪೆಗಾಸನ್ ನಕ್ಷತ್ರಪುಂಜದಲ್ಲಿ 50 ವರ್ಷಗಳವರೆಗೆ ಬೆಳಕಿನಿಂದ ದೂರವಿದ್ದ ಮೊದಲ ಗ್ರಹವನ್ನು ಕಂಡು ಹಿಡಿದಿದ್ದರು. ಅಂದಿನಿಂದ ಇಬ್ಬರೂ ಖಗೋಳಶಾಸ್ತ್ರಜ್ಞರು ಸಾವಿರಾರು ಗ್ರಹಗಳನ್ನು ಕಂಡು ಹಿಡಿದಿದ್ದಾರೆ. ಅಲ್ಲದೇ ಸೌರವ್ಯೂಹವನ್ನು ಮೀರಿದ ಪ್ರಪಂಚಗಳ ಕುರಿತು ಆವಿಷ್ಕಾರ, ಕ್ಷೀರಪಥದ ಬಗ್ಗೆ ಇರುವ ಮಾಹಿತಿ ಹಾಗೂ ಹೆಚ್ಚಿನ ತಿಳುವಳಿಕೆ ಮೂಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂತಸ ಹಂಚಿಕೊಂಡ ಜೇಮ್ಸ್ ಪೀಬಲ್ಸ್, ನಾನು ಅಂದುಕೊಂಡಿದ್ದ ಒಂದೆರಡು ಸಂಗತಿಗಳನ್ನು ಸಂಶೋಧಿಸಿದ್ದೇನೆ. ವಿಶ್ವವಿಜ್ಞಾನದಲ್ಲಿ ಅವುಗಳ ಪ್ರಾಮುಖ್ಯವನ್ನು ಇದ್ದಂತೆ ಸ್ವೀಕರಿಸಿ, ಕೆಲ ಸಂಗತಿಗಳನ್ನು ಕಂಡುಕೊಂಡಿದ್ದೇನೆ. ಪ್ರಶಸ್ತಿ ಮತ್ತು ಪದಕಗಳು ಪ್ರಶಂಸೆಗಿಂತ ಹೆಚ್ಚು ಆಕರ್ಷಕವಾಗಿರುತ್ತವೆ. ಆದರೆ ಪ್ರಶಸ್ತಿಗಳು ನಮ್ಮ ಯೋಜನೆಗಳ ಭಾಗವಾಗಿರುವುದಿಲ್ಲ. ನಿಮ್ಮನ್ನು ವಿಜ್ಞಾನ ಆಕರ್ಷಿಸಿದಾಗ ಮಾತ್ರ ನೀವು ವಿಜ್ಞಾನದೊಳಗೆ ಒಂದಾಗಲು ಸಾಧ್ಯ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...