Homeಮುಖಪುಟ2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು...

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

- Advertisement -
- Advertisement -

ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಬಹುನಿರೀಕ್ಷಿತ ತೀರ್ಪು ಬುಧವಾರ ಹೊರಬಿದ್ದಿದ್ದು, ಕೊಯಮತ್ತೂರಿನ ಮಹಿಳಾ ವಿಶೇಷ ನ್ಯಾಯಾಲಯವು ಎಲ್ಲಾ ಒಂಬತ್ತು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದೆ. ದುಷ್ಕರ್ಮಿಗಳ ಗುಂಪೊಂದು ಮಹಿಳೆಯರನ್ನು ಹುಸಿ ಸ್ನೇಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದ ಈ ಪ್ರಕರಣ 2019ರಲ್ಲಿ ಬೆಳಕಿಗೆ ಬಂದಿತ್ತು. 2019 ರ ಪೊಲ್ಲಾಚಿ ಲೈಂಗಿಕ

ನ್ಯಾಯಮೂರ್ತಿ ನಂದಿನಿ ದೇವಿ ನೇತೃತ್ವದ ಮಹಿಳಾ ಪೀಠವು, ಆರೋಪಿಗಳಾದ ತಿರುನಾವುಕರಸು, ಸಬರೀಶನ್, ವಸಂತ ಕುಮಾರ್, ಸತೀಶ್, ಮಣಿವಣ್ಣನ್, ಹರನ್‌ಪಾಲ್, ಬಾಬು, ಅರುಳನಂತಮ್ ಮತ್ತು ಅರುಣ್ ಕುಮಾರ್ ಅವರನ್ನು ಕಾನೂನಿನ ಬಹು ವಿಭಾಗಗಳ ಅಡಿಯಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದ್ದಾರೆ. ನ್ಯಾಯಾಲಯವು ಮಧ್ಯಾಹ್ನ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಸಂತ್ರಸ್ತರೊಬ್ಬರು ಕಳ್ಳತನದ ದೂರನ್ನು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿತ್ತು. ತನಿಖೆಯ ವೇಳೆ ಇದು ದೊಡ್ಡ ಸಂಘಟಿತ ಲೈಂಗಿಕ ದೌರ್ಜನ್ಯ ಎಂದು ತಿಳಿದುಬಂದಿತ್ತು. ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ವೀಡಿಯೊಗಳು ವೈರಲ್ ಆದ ನಂತರ, ಆಗಿನ ಆಡಳಿತಾರೂಢ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ವಿರುದ್ಧ ತಮಿಳುನಾಡಿನಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ಜೊತೆಗೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಇತರ ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಒಟ್ಟುಗೂಡಿ ಹೋರಾಟ ಮಾಡಿದ್ದರಿಂದ ರಾಜಕೀಯ  ಚರ್ಚೆಯನ್ನೂ ಹುಟ್ಟುಹಾಕಿತ್ತು. ಪ್ರಕರಣವು ನ್ಯಾಯ ಮತ್ತು ಮಹಿಳಾ ಸುರಕ್ಷತೆಗಾಗಿ ವ್ಯವಸ್ಥಿತ ಸುಧಾರಣೆಯನ್ನು ಸರ್ಕಾರಕ್ಕೆ ಒತ್ತಾಯಿಸಿದ್ದವು.

ಆರಂಭದಲ್ಲಿ ಪ್ರಕರಣವನ್ನು ನಿರ್ವಹಿಸುತ್ತಿದ್ದ ಅಪರಾಧ ತನಿಖಾ ಇಲಾಖೆಯು ಸಾರ್ವಜನಿಕ ಒತ್ತಡದ ನಂತರ ಅದನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಿತ್ತು.

ವಿಚಾರಣೆಯ ಉದ್ದಕ್ಕೂ, ಸರ್ಕಾರಿ ವಕೀಲರು 50 ಕ್ಕೂ ಹೆಚ್ಚು ಸಾಕ್ಷಿಗಳು, 200 ಕ್ಕೂ ಹೆಚ್ಚು ದಾಖಲೆಗಳು ಮತ್ತು 400 ಡಿಜಿಟಲ್ ಸಾಕ್ಷ್ಯಗಳನ್ನು ಹಾಜರುಪಡಿಸಿದ್ದರು. ಎಂಟು ಸಂತ್ರಸ್ತರು ಸಾಕ್ಷ್ಯ ಹೇಳಲು ನ್ಯಾಯಾಲಯದ ಮುಂದೆ ಹಾಜರಾಗಿದ್ದರು ಮತ್ತು ಆರೋಪಿಗಳು 50 ಪ್ರಶ್ನೆಗಳಿಗೆ ಲಿಖಿತವಾಗಿ ಪ್ರತಿಕ್ರಿಯಿಸಿದ್ದರು. 2019 ರ ಪೊಲ್ಲಾಚಿ ಲೈಂಗಿಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ನಕ್ಸಲರೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿ: ಕೇಂದ್ರ ಸರ್ಕಾರಕ್ಕೆ ಭಾರತ್ ಬಚಾವೋ ಆಂದೋಲನ ಒತ್ತಾಯ

ಕೇಂದ್ರವು ನಕ್ಸಲರೊಂದಿಗೆ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಬೇಕು: ಭಾರತ್ ಬಚಾವೋ ದೆಹಲಿ ಭೇಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...