Homeಅಂಕಣಗಳು2019ರ ಚುನಾವಣೆ: ಜವಾನ್ ಔರ್ ಕಿಸಾನ್

2019ರ ಚುನಾವಣೆ: ಜವಾನ್ ಔರ್ ಕಿಸಾನ್

- Advertisement -
- Advertisement -

2014ರ ಲೋಕಸಭಾ ಚುನಾವಣೆ ನಡೆದಾಗ ಬಿಜೆಪಿಯು ರೈತರ ಆದಾಯ ದ್ವಿಗುಣ ಮಾಡುವುದಾಗಿಯೂ, ರೈತರ ಎಲ್ಲಾ ಬೆಳೆಗಳಿಗೂ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಬೆಲೆ ಸಿಗುವಂತೆ ಮಾಡುವುದಾಗಿಯೂ ಹೇಳಿತ್ತು. ಆದರೆ, ಆ ಚುನಾವಣೆಯು ಗ್ರಾಮೀಣ ಭಾಗದ ಇಶ್ಯೂಗಳನ್ನು ಕೇಂದ್ರವಾಗಿಟ್ಟುಕೊಂಡು ನಡೆಯಲಿಲ್ಲ. ಯುಪಿಎ ಭ್ರಷ್ಟಾಚಾರ, 10 ವರ್ಷಗಳ ಆಡಳಿತ ವಿರೋಧಿ ಅಲೆ, ಕಪ್ಪುಹಣ, ಹೊಸ ಪರ್ಯಾಯ, ಮೋದಿ ಮಾದರಿ ಮತ್ತು ಗುಜರಾತ್ ಮಾದರಿ, ಅಭಿವೃದ್ಧಿ, ಕೋಮು ಧ್ರುವೀಕರಣ ಹೀಗೆ ಹತ್ತು ಹಲವು ಅಂಶಗಳನ್ನೊಳಗೊಂಡ ಒಂದು ಪ್ಯಾಕೇಜ್‍ಅನ್ನು ಬಿಜೆಪಿಯು ಮುಂದಿಟ್ಟಿತ್ತು. ಮಾಧ್ಯಮಗಳು ಮತ್ತು ಹಣದ ಬಲದೊಂದಿಗೆ ಅತ್ಯಂತ ಚಾಣಾಕ್ಷತೆ ಮತ್ತು ಕಠಿಣ ಶ್ರಮದ ಮೂಲಕ ಅದನ್ನು ಜನರ ಮುಂದಿಟ್ಟು ಸೃಷ್ಟಿಸಿದ ಅಲೆಯು, ಬಿಜೆಪಿಗೆ ಸ್ವಂತ ಬಲದ ಮೇಲೆ ಅಧಿಕಾರ ಪಡೆದುಕೊಳ್ಳುವಷ್ಟು ಜೋರಾಗಿ ಬೀಸಿತ್ತು. ಆದರೆ, 2019ರ ಚುನಾವಣೆಯು ಹಾಗಿರುವುದಿಲ್ಲವೆಂದು ಭಾವಿಸಲು ಕಾರಣಗಳಿವೆ.
2004ರಲ್ಲಿ ವಾಜಪೇಯಿಯವರ ನೇತೃತ್ವದಲ್ಲಿ ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಘೋಷಣೆಯಡಿ ಚುನಾವಣೆಗೆ ಹೊರಟಾಗ, ಜನರಲ್ಲಿ ‘ಫೀಲ್ ಗುಡ್ ಫ್ಯಾಕ್ಟರ್ (ಎಲ್ಲಾ ಚೆನ್ನಾಗಿದೆ ಎಂಬ ಭಾವನೆ)’ ಇದೆ ಎಂಬ ತಪ್ಪು ಲೆಕ್ಕಾಚಾರ ಮಾಡಲಾಗಿತ್ತು. ಗ್ರಾಮೀಣ ಭಾರತವು ಆಗ ತತ್ತರಿಸಿತ್ತು. ಹೀಗಾಗಿ ಎಲ್ಲರ ನಿರೀಕ್ಷೆಗೆ ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ-1 ಅಧಿಕಾರಕ್ಕೆ ಬಂದಿತ್ತು. 2009ಕ್ಕೆ ಮತ್ತೆ ಚುನಾವಣೆಗೆ ಹೊರಟಾಗ ಕಾಂಗ್ರೆಸ್ ಮತ್ತು ಯುಪಿಎಗೆ ಕಡಿಮೆ ಸೀಟು ಬರುತ್ತದೆಂದು ಭಾವಿಸಲಾಗಿತ್ತು. ಆರ್‍ಜೆಡಿಯಂತಹ ಕೆಲವು ಪಕ್ಷಗಳು ಚುನಾವಣೆಗೆ ಸ್ವಲ್ಪ ಮುಂಚೆ ಯುಪಿಎ ತೊರೆದಿದ್ದವು. ಆದರೆ, ಚುನಾವಣೆಗೆ ಮುಂಚೆ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಅತೀ ದೊಡ್ಡ ರೈತರ ಸಾಲಮನ್ನಾ ಮಾಡಿತು. ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿತಲ್ಲದೇ, ಹೆಚ್ಚು ಕಷ್ಟವಿಲ್ಲದೇ ಯುಪಿಎ-2ರ ಮುಖಾಂತರ ಮತ್ತೆ ಅಧಿಕಾರ ಹಿಡಿಯಿತು.
ಹಾಗಾದರೆ 2014ರಲ್ಲಿ ಗ್ರಾಮೀಣ ಭಾರತವು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಪಾತ್ರ ಕಳೆದುಕೊಂಡಿತೇ? ಹಾಗೆ ಹೇಳಲು ಯಾವ ಕಾರಣವೂ ಇಲ್ಲ. ಈ ಮಧ್ಯೆ ಹೆಚ್ಚಾದ ಕೃಷಿ ಬಿಕ್ಕಟ್ಟಿಗೆ ಯುಪಿಎ ಸಹಾ ಯಾವ ವಿಶೇಷ ಕ್ರಮವನ್ನೂ ತೆಗೆದುಕೊಂಡಿರಲಿಲ್ಲ. ನರೇಗಾದಂತಹ ಕ್ರಮಗಳು ಈ ಬಿಕ್ಕಟ್ಟನ್ನು ಮರೆಮಾಚುವಷ್ಟು ಸಮರ್ಥವೂ ಆಗಿರಲಿಲ್ಲ; ಇದ್ದಷ್ಟು ಪ್ರಮಾಣದಲ್ಲಿ ಜಾರಿಯೂ ಆಗಲಿಲ್ಲ. ಇದರಾಚೆಗೂ ಯುಪಿಎ ಸರ್ಕಾರದ ತಂದಿದ್ದ ಕೆಲವು ಕ್ರಮಗಳ ಜನಪರತೆಯನ್ನು ಜನರ ಮುಂದಿಡುವಷ್ಟು ಸಾಮಥ್ರ್ಯ ಕಾಂಗ್ರೆಸ್ಸಿನ ಪ್ರಚಾರ ಯಂತ್ರಾಂಗಕ್ಕೆ ಅಂದೂ ಇರಲಿಲ್ಲ; ಇಂದೂ ಇಲ್ಲ. ಯುಪಿಎ ತಂದಿದ್ದ ಭೂಸ್ವಾಧೀನ ಕಾಯ್ದೆ ಎಷ್ಟು ಜನಪರ ಎಂದು ಗೊತ್ತಾದದ್ದು, ಮೋದಿ ಸರ್ಕಾರ ಬಂದ ಮೇಲೆ ಅದನ್ನು ತಿದ್ದಲು ಯತ್ನಿಸಿದಾಗಲೇ!
2016ರ ಡಿಸೆಂಬರ್‍ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಗುಜರಾತ್‍ನ ಗ್ರಾಮೀಣ ಭಾಗ ಮತ್ತು ನಗರ ಭಾಗಗಳು ಭಿನ್ನ ರೀತಿಯಲ್ಲಿ ಮತ ಚಲಾಯಿಸಿದವು ಎಂಬುದನ್ನು ಎಲ್ಲರೂ ಗುರುತಿಸಿದ್ದಾರೆ. ಇದಕ್ಕೆ ಕಾರಣವಿಲ್ಲದಿಲ್ಲ. ಯಾವ ಕಛ್ ಮತ್ತು ಸೌರಾಷ್ಟ್ರದ ಹೆಸರೇಳಿ ನರ್ಮದಾ ನದಿಗೆ ಒಂದಾದ ಮೇಲೆ ಒಂದರಂತೆ ಅಣೆಕಟ್ಟುಗಳನ್ನು ಕಟ್ಟಲಾಯಿತೋ, ಅಲ್ಲಿಗೆ ನೀರೂ ಹೋಗಿರಲಿಲ್ಲ; ಅವರ ಬವಣೆಯೂ ತೀರಿರಲಿಲ್ಲ. ಇಂತಹ ಹಲವು ಕಾರಣಗಳಿಂದ ಅಲ್ಲಿನ ಗ್ರಾಮೀಣ ಭಾಗ ಆಡಳಿತ ಪಕ್ಷದ ವಿರುದ್ಧ ಮತ ಚಲಾಯಿಸಿತು.
ಮುಂದಿನ ಚುನಾವಣೆಗಳಿರುವುದು ಛತ್ತೀಸ್‍ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ. ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಮಹಾರಾಷ್ಟ್ರಗಳು ಸೇರಿದಂತೆ ಇವಿಷ್ಟೂ ರಾಜ್ಯಗಳಲ್ಲಿ ಪಡೆದುಕೊಂಡ ಸೀಟುಗಳೇ ಮೋದಿಯವರನ್ನು ಪ್ರಧಾನಿಯಾಗಿಸಿದ್ದು. ಅಲ್ಲಿ ಬಿಜೆಪಿಯು ಎಷ್ಟು ಸೀಟುಗಳನ್ನು ಪಡೆದುಕೊಂಡಿತ್ತು ಎಂದು ನೋಡುವ ಮುನ್ನ ಉತ್ತರ ಪ್ರದೇಶದ ಈಚಿನ ಒಂದು ವಿದ್ಯಮಾನವನ್ನು ನೋಡೋಣ.
ಕೈರಾನಾ ಎಂಬ ಲೋಕಸಭಾ ಕ್ಷೇತ್ರದಲ್ಲಿ 2014ರಲ್ಲಿ ಬಿಜೆಪಿ ಗೆದ್ದಿತ್ತು. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಇತರ ಮತಗಳ ಧ್ರುವೀಕರಣ ಬಿಜೆಪಿಗೆ ಸಾಧ್ಯವಾಗಿದ್ದು ಮುಜಫ್ಫರ್‍ನಗರದ ಕೋಮುಗಲಭೆಯಿಂದ. ಈ ಕ್ಷೇತ್ರದ ಬಿಜೆಪಿ ಸಂಸದ ತೀರಿಕೊಂಡಿದ್ದರಿಂದ ಅಲ್ಲಿ ಉಪಚುನಾವಣೆ ನಡೆಯಿತು. ಮತ್ತೆ ಕೋಮು ಧ್ರುವೀಕರಣ ನಡೆಸಲು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಕಾಲದಿಂದಲೂ ಇದ್ದ ಜಿನ್ನಾ ಅವರ ಭಾವಚಿತ್ರದ ವಿಚಾರವನ್ನು ಬಿಜೆಪಿಯು ಬಳಸಿಕೊಂಡಿತು. ಮೇಲಾಗಿ ಈ ಸಾರಿ ಬಿಜೆಪಿಗೆದುರಾಗಿ ನಿಂತ ಮುಸ್ಲಿಂ ಮಹಿಳೆಯ ವಿರುದ್ಧವೂ ಸಾಕಷ್ಟು ಅಪಪ್ರಚಾರ ನಡೆಸಲಾಯಿತು. ಆಕೆ ಐಎಸ್‍ಐ ಏಜೆಂಟ್ ಇತ್ಯಾದಿ ಪೋಸ್ಟ್‍ಗಳನ್ನು ಯಥೇಚ್ಛವಾಗಿ ಹಾಕಲಾಯಿತು.
ಬಿಜೆಪಿಗೆದುರಾಗಿ ನಿಂತಿದ್ದು ರಾಷ್ಟ್ರೀಯ ಲೋಕದಳದ ಅಭ್ಯರ್ಥಿ ತಬಸ್ಸುಮ್ ಹಸನ್. ಆಕೆ ವಾಸ್ತವದಲ್ಲಿ ಸಮಾಜವಾದಿ ಪಕ್ಷದ ಕುಟುಂಬದವರು. ಆಕೆಯ ಪತಿ ಎಸ್‍ಪಿಯಿಂದ ಎಂ.ಎಲ್.ಎ ಮತ್ತು ಎಂ.ಪಿ ಆಗಿದ್ದವರು. ಈ ಮುಸ್ಲಿಂ ಅಭ್ಯರ್ಥಿ ನಿಂತಿದ್ದು ಜಾಟ್ ಸಮುದಾಯದ ಪಕ್ಷವೆಂದು ಹೆಸರಾದ ಲೋಕದಳದಿಂದ. ಈಕೆಯ ಪತಿ ಇಲ್ಲಿನ ಕಬ್ಬು (ಹಿಂದಿಯಲ್ಲಿ ಗನ್ನಾ) ಬೆಳೆಗಾರರ ಪರವಾಗಿ ಕೆಲಸ ಮಾಡಿದ್ದವರು. ಇವೆಲ್ಲವೂ ಸೇರಿ ಕೈರಾನಾದಲ್ಲಿ ಬಿಜೆಪಿ ಸೋತಿತು.
ಅಂದರೆ, ಕಟು ಕೋಮು ಧ್ರುವೀಕರಣವನ್ನು ದಾಟಿ ಕೃಷಿ ಬಿಕ್ಕಟ್ಟಿನ ಸಮಸ್ಯೆಯ ಪರಿಹಾರ ಗ್ರಾಮೀಣ ಭಾರತಕ್ಕೆ ಮುಖ್ಯವಾಗಿದೆ. ಈ ಸದ್ಯ ಕೃಷಿ ಬಿಕ್ಕಟ್ಟು ಬಾಧಿಸುತ್ತಿರುವ, ರೈತ ಹೋರಾಟವೂ ಗರಿಗೆದರಿರುವ ಮತ್ತು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನು ನೋಡೋಣ. ಮಧ್ಯಪ್ರದೇಶದ 29 ಸೀಟುಗಳಲ್ಲಿ 27, ಛತ್ತೀಸ್‍ಗಡದ 11 ಸೀಟುಗಳಲ್ಲಿ 10, ರಾಜಸ್ಥಾನದ 25 ಸೀಟುಗಳಲ್ಲಿ 25, ಮಹಾರಾಷ್ಟ್ರದ 42 ಸ್ಥಾನಗಳಲ್ಲಿ ಬಿಜೆಪಿ 18, ಶಿವಸೇನಾ 16 ಮತ್ತು ಅವರ ಇನ್ನೊಬ್ಬ ಎನ್‍ಡಿಎ ಸಂಬಂಧಿ 1 ಸೀಟು. ಈ ಒಂದು ಸೀಟು ಸ್ವಾಭಿಮಾನಿ ಷೇತ್ಕರಿ ಸಂಘಟನೆ (ರೈತ ಸಂಘಟನೆ)ಯ ರಾಜು ಶೆಟ್ಟಿಯವರದ್ದಾಗಿತ್ತು. ರಾಜು ಶೆಟ್ಟಿಯವರು ಈಗ ಎನ್‍ಡಿಎಯಿಂದ ಹೊರಬಂದಿದ್ದಾರೆ ಮತ್ತು ಅಖಿಲ ಭಾರತ ರೈತ ಹೋರಾಟ ಸಮನ್ವಯ ಸಮಿತಿಯ ಭಾಗವಾಗಿದ್ದಾರೆ.
ಅಂದರೆ, ಇದು 2019ರಲ್ಲಿ ಬಿಜೆಪಿಗೆ ಇದು ತಲೆ ನೋವಾಗಲಿದೆ. ಹಾಗಾಗಿಯೇ ಈ ಸಾರಿಯ ಬಜೆಟ್‍ನಲ್ಲಿ ಮತ್ತೆ ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸಾದ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಖಾತರಿ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತು. ಆ ನಿಟ್ಟಿನಲ್ಲಿ ಈವರೆಗೂ ಏನೂ ಆಗಿಲ್ಲ ಎಂಬುದು ಮಾತ್ರ ವಾಸ್ತವ.
ಈ ಮಧ್ಯೆ, ದೇಶದ ಉತ್ತರ ಭಾಗದಲ್ಲಿ ನಡೆಯುತ್ತಿರುವ ಆಂದೋಲನದ ಬಗ್ಗೆ ಕೇಳಲಾದ ಪ್ರಶ್ನೆಗೆ ಕೇಂದ್ರ ಕೃಷಿ ಸಚಿವ ರಾಧಾಮೋಹನ್, ಇದು ಪ್ರಚಾರಕ್ಕಾಗಿ ಮಾಡುತ್ತಿರುವುದು ಮತ್ತು ಈ ಸಂಘಟನೆಗಳಲ್ಲಿ ಕೆಲವು ಸಾವಿರ ಸದಸ್ಯರಿರಬಹುದು ಅಷ್ಟೇ ಎಂದಿದ್ದಾರೆ. ಕಡಿಮೆ ಸಂಖ್ಯೆಯ ಸದಸ್ಯರಿರುವ ಸಂಘಟನೆಗಳೇ ಮೂವತ್ತು ಸಾವಿರಕ್ಕೂ ಹೆಚ್ಚು ರೈತರನ್ನು ಒಟ್ಟುಗೂಡಿಸಿ ನೂರಾರು ಕಿ.ಮೀ. ದೂರದ ಜಾಥಾ ಮಾಡಿದ್ದು ಎಂಬುದನ್ನು ಅವರು ಮರೆತಂತಿದೆ.
ಇವೆಲ್ಲಾ ಕಾರಣಗಳಿಂದ, ದೇಶದ ಗ್ರಾಮೀಣ ಭಾಗವು 2019ರ ಚುನಾವಣೆಗೆ ಮುಂಚೆ ವಿಶೇಷ ಮಹತ್ವವನ್ನು ಪಡೆದುಕೊಳ್ಳಲಿದೆ. ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿಯ ನೇತಾರರಲ್ಲೊಬ್ಬರಾದ ಯೋಗೇಂದ್ರ ಯಾದವ್‍ರ ಪ್ರಕಾರ ಜವಾನ್ ಮತ್ತು ಕಿಸಾನ್ ಮುಂದಿನ ದಿನಗಳ ದೇಶದ ದಿಕ್ಕನ್ನು ನಿರ್ಧರಿಸುತ್ತಾರೆ. ಇಲ್ಲಿ ಜವಾನ್ ಎಂದರೆ ಸೈನಿಕರಲ್ಲ; ಯುವಜನರು. ಕಿಸಾನ್, ರೈತರು. ಯುವಜನರು ಮತ್ತು ರೈತರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು ಎಂಬುದು ಮುಂದಿನ ಚುನಾವಣೆಗಳ ದಿಕ್ಕನ್ನೂ ಬದಲಿಸುತ್ತದೆ.

– ಡಾ.ವಾಸು ಎಚ್.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...