Homeಅಂಕಣಗಳು2019ರ ಚುನಾವಣೆಯೀಗ ಅಸಮ ಮೈದಾನದಲ್ಲಿ ನಡೆಯುವುದಿಲ್ಲ

2019ರ ಚುನಾವಣೆಯೀಗ ಅಸಮ ಮೈದಾನದಲ್ಲಿ ನಡೆಯುವುದಿಲ್ಲ

- Advertisement -
- Advertisement -

ಯೋಗೇಂದ್ರ ಯಾದವ್ |

ಇದನ್ನು ರಾಜಕೀಯ ವಿಜ್ಞಾನಿಗಳು ಚುನಾವಣಾ ಪ್ರಜಾತಂತ್ರದ ‘ಸ್ವಯಂ ಸುಧಾರಣೆಯ ಮೆಕ್ಯಾನಿಸಂ’ ಎಂದು ಕರೆಯುತ್ತಾರೆ. ಮಾರುಕಟ್ಟೆ ಆರ್ಥಿಕತೆಯ ವಿಕೃತಿಗಳನ್ನು ಸರಿಪಡಿಸುವ ಆದಂ ಸ್ಮಿತ್‍ರ ಪ್ರಖ್ಯಾತ ನಿಗೂಢ ಹಸ್ತದ ರೀತಿಯಲ್ಲೇ, ಸ್ಪರ್ಧಾತ್ಮಕ ಚುನಾವಣೆಗಳು ರಾಜಕೀಯ ವ್ಯವಸ್ಥೆಗಳ ಅತಿರೇಕಗಳನ್ನು ಸರಿ ಮಾಡಬೇಕು. 2018ರ ವಿಧಾನಸಭಾ ಚುನಾವಣೆಗಳು ಮಾಡಿರುವುದು ಇದನ್ನೇ. ಸರ್ವೋಚ್ಚ ನಾಯಕನೊಬ್ಬನ ಕದಲಿಸಲಾಗದ ಶಕ್ತಿಗೆ ಎಲ್ಲಾ ಸಂಸ್ಥೆಗಳು, ನಿಯಮಗಳು ಮತ್ತು ಸಾಂವಿಧಾನಿಕ ಸ್ವಾತಂತ್ರ್ಯಗಳನ್ನು ಅಡವಿಡುವ ಸಂಸದೀಯ ಸರ್ವಾಧಿಕಾರದತ್ತ ದೇಶ ಸಾಗುತ್ತಿರುವಾಗ, ಸ್ವಯಂಚಾಲಿತ ಬ್ರೇಕ್‍ಗಳು ಚುರುಕುಗೊಂಡಿವೆ. ಇದ್ದಕ್ಕಿದ್ದ ಹಾಗೆ, 2019ರ ಚುನಾವಣೆಯು ಯಾರೂ ಗೆಲ್ಲಬಹುದಾದ ಸ್ಪರ್ಧೆಯಾಗಿಬಿಟ್ಟಿದೆ.
ಮೊಟ್ಟಮೊದಲನೆಯದಾಗಿ, ಈ ಫಲಿತಾಂಶವು ಜನರು ಮತಚಲಾಯಿಸುವ ಅಸಲೀ ಅಜೆಂಡಾ ಯಾವುದೆಂಬುದನ್ನು ಒತ್ತಿ ಹೇಳಿದೆ. ಕೃಷಿ ಬಿಕ್ಕಟ್ಟು ಮತ್ತು ಗ್ರಾಮೀಣ ಸಂಕಷ್ಟವು ನಿಜವೆಂಬುದನ್ನು ಇದು ಸಾಬೀತುಪಡಿಸಿದೆ. ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸುವ ಅಂತಿಮ ಸಮೀಕರಣ ಯಾವುದೆಂಬುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಛತ್ತೀಸ್‍ಗಢ, ರಾಜಸ್ತಾನ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿಯ ವಿರುದ್ಧದ ಸ್ಪಷ್ಟ ಅಲೆ ಕಂಡಿದೆ. ಮಧ್ಯಪ್ರದೇಶದ ಮಾಲ್ವಾ, ಪೂರ್ವ ರಾಜಸ್ತಾನ ಮತ್ತು ಕೇಂದ್ರ ಛತ್ತೀಸ್‍ಗಡದಲ್ಲಿ ಬಿಜೆಪಿಯ ಸೋಲುಗಳು ಗುಜರಾತ್‍ನಂತೆಯೇ ರೈತರ ಸಿಟ್ಟು ಬಿಜೆಪಿಯ ವಿರುದ್ಧ ಕೆಲಸ ಮಾಡಿರುವುದನ್ನು ತೋರುತ್ತಿವೆ. ಟ್ರೆಂಡ್ ಏನಿದೆ ಎಂಬುದನ್ನು ಗ್ರಹಿಸುವ ಫಲಿತಾಂಶದ ಸಾಮಾಜಿಕ ಸಂಗತಿಗಳು, ಬಿಜೆಪಿಯ ನಷ್ಟವು ಗ್ರಾಮೀಣ ಭಾಗದಲ್ಲೇ ಸಾಪೇಕ್ಷವಾಗಿ ಹೆಚ್ಚಿದೆ ಎಂಬುದನ್ನು ಕಾಣಿಸಿವೆ. ನಿರುದ್ಯೋಗಿ ಯುವಜನರೂ ಆಡಳಿತ ಪಕ್ಷದ ವಿರುದ್ಧ ಮತ ಚಲಾಯಿಸಿರುವುದನ್ನು ತೋರಿವೆ. ಎಲ್ಲಾ ಚುನಾವಣಾಪೂರ್ವ ಸಮೀಕ್ಷೆಗಳು ಉದ್ಯೋಗದ ಇಶ್ಯೂ ಚುನಾವಣೆಯ ಪ್ರಮುಖ ಅಂಶವನ್ನಾಗಿರುವುದನ್ನು ಗುರುತಿಸಿದ್ದವು. ಯೋಗಿ ಆದಿತ್ಯನಾಥರ ಆಕ್ರಮಣಕಾರಿ ಪ್ರಚಾರದ ಹೊರತಾಗಿಯೂ ಮಂದಿರವು ಒಂದು ಇಶ್ಯೂವಾಗಿ ಮುನ್ನೆಲೆಗೆ ಬಂದಿಲ್ಲವೆಂಬುದನ್ನೂ ಫಲಿತಾಂಶವು ಖಚಿತಪಡಿಸಿದೆ. ದೇಶದ ಉಳಿದ ಭಾಗಗಳ ಬಗ್ಗೆ ಇದೇ ಮಾತನ್ನು ಈಗಲೇ ಹೇಳುವುದು ಸಾಧ್ಯವಿಲ್ಲವಾದರೂ ಹಿಂದಿ ಪ್ರದೇಶದ 2019ರ ಚುನಾವಣಾ ವಿಷಯವು ಇದಾಗಿರುತ್ತದೆ: ಹಿಂದೂ ಮುಸಲ್ಮಾನ್ ಅಲ್ಲ ಕಿಸಾನ್ (ರೈತ) ಮತ್ತು ಜವಾನ್ (ಯುವಜನತೆ).
ಫಲಿತಾಂಶವು ಇನ್ನೂ ಒಂದು ಪ್ರಜಾತಾಂತ್ರಿಕ ಸಂದೇಶವನ್ನು ಕಳಿಸಿದೆ. ಹಣ ಮತ್ತು ಮಾಧ್ಯಮಗಳು ಚುನಾವಣಾ ಗೆಲುವಿಗೆ ಅಗತ್ಯ, ಆದರೆ ಅವಷ್ಟೇ ಸಾಲದು. ಬಿಜೆಪಿಯು ಅದರ ಎದುರಾಳಿಗಿಂತ 10:1ರ ಅನುಪಾತದಲ್ಲಿ ಹಣ ವ್ಯಯಿಸಿರುವುದು ರಹಸ್ಯವೇನಲ್ಲ. ನಿಗೂಢವಾದ ಆದರೆ ಕಾನೂನುಬದ್ಧ ಮಾರ್ಗವಾದ ಚುನಾವಣಾ ಬಾಂಡ್‍ಗಳ ಮೂಲಕ ಒಟ್ಟು ಚುನಾವಣಾ ವಂತಿಗೆಯ ಶೇ.95ರಷ್ಟನ್ನು ಬಿಜೆಪಿಯೊಂದೇ ಪಡೆದುಕೊಂಡಿತ್ತು. ಮಾಧ್ಯಮಗಳ ಬಗ್ಗೆ ಎಷ್ಟು ಕಡಿಮೆ ಮಾತಾಡಿದರೆ ಅಷ್ಟು ಒಳ್ಳೆಯದು. ಆದರೆ ಇಷ್ಟನ್ನಂತೂ ಹೇಳಬೇಕು: ‘ಸ್ವತಂತ್ರ’ ಮಾಧ್ಯಮದ ಅತೀ ದೊಡ್ಡ ವಿಭಾಗವು ಆಡಳಿತ ಪಕ್ಷದ ಮುಖವಾಣಿಯಾಗಿ ಬದಲಾಗಿದೆಯೆಂಬುದು ಭಾರತದ ಪ್ರಜಾತಂತ್ರದ ಚರಿತ್ರೆಯ ಅತ್ಯಂತ ನಾಚಿಕೆಗೇಡು ಅಧ್ಯಾಯವಾಗಿ ಉಳಿಯಲಿದೆ. ಇದರ ಜೊತೆಗೆ ಎದುರಾಳಿ ಪಕ್ಷಗಳನ್ನು ದುರ್ಬಲಗೊಳಿಸುವ ಬಂಡಾಯ ಅಭ್ಯರ್ಥಿಗಳು ಮತ್ತು ಪಕ್ಷಗಳಿಗೆ ಬಿಜೆಪಿಯು ಹಣದ ಹೊಳೆಯನ್ನೇ ಹರಿಸಿದ್ದೂ ಎಲ್ಲರಿಗೆ ಗೊತ್ತಿರುವ ಸತ್ಯ. ಇವೆಲ್ಲವೂ ತೆಲಂಗಾಣದಲ್ಲಿ ಟಿಆರ್‍ಎಸ್‍ಗೆ ಸಹಾಯ ಮಾಡಿದಂತೆಯೇ ಬಿಜೆಪಿಗೂ ಸಹಾಯ ಮಾಡಿವೆ. ಆದರೆ, ಬಿಜೆಪಿಯ ಸೋಲು ನಮಗೆ ಮತ್ತೊಮ್ಮೆ ನೆನಪಿಸುವುದೇನೆಂದರೆ, ನೀವು ಅಸಲೀ ಮತದಾರರ ಅಸಲೀ ಇಶ್ಯೂಗಳೊಂದಿಗೆ ಜೀವಂತ ಸಂಬಂಧವಿಟ್ಟುಕೊಂಡಿರಬೇಕು.
ಮೂರನೆಯದಾಗಿ ಚುನಾವಣೆಗಳು ತೋರಿಸುತ್ತಿರುವುದೇನೆಂದರೆ ವ್ಯಕ್ತಿ ಆರಾಧನೆಗೂ ಒಂದು ಮಿತಿಯಿರುತ್ತದೆ. ಆದರೆ, ಮೋದಿಯುಗ ಮುಗಿದಿದೆ ಎಂದು ಹೇಳುವುದು ತಪ್ಪಾದೀತು. ಎಲ್ಲಾ ಸಮೀಕ್ಷೆಗಳು ತೋರುತ್ತಿರುವುದೇನೆಂದರೆ ಮೋದಿ ಈಗಲೂ ಅತ್ಯಂತ ಜನಪ್ರಿಯ ನಾಯಕ ಮತ್ತು ರಾಹುಲ್‍ಗಾಂಧಿಗಿಂತಲೂ ಮತ್ತು ತನ್ನದೇ ಪಕ್ಷಕ್ಕಿಂತಲೂ ಹೆಚ್ಚು ಜನಪ್ರಿಯ ವ್ಯಕ್ತಿ. ಆದರೆ, ಇಷ್ಟು ಹೇಳುವುದು ಸಾಧ್ಯ. ಮೋದಿ ತನ್ನ ಆಡಳಿತದ ಮೊದಲೆರಡು ವರ್ಷಗಳಲ್ಲಿ ಮಾಡಿದಂತೆ ಯಾವುದೇ ಚುನಾವಣೆಯನ್ನು ಹೇಗೆ ಬೇಕಾದರೂ ತಿರುಗಿಸುವುದು ಇನ್ನು ಮುಂದೆ ಸಾಧ್ಯವಿಲ್ಲ. ಅವರ ಮಾಂತ್ರಿಕ ಇನ್ನಿಂಗ್ಸ್ ಮುಗಿದಿದೆ; ಈಗವರು ಆರ್ಥಿಕತೆಯ ಕುರಿತು, ದ್ವೇಷದ ವಾತಾವರಣದ ಕುರಿತು, ಸಂಸ್ಥೆಗಳ ನಾಶದ ಕುರಿತು ಮತ್ತು ರಾಫೇಲ್‍ನ ಕುರಿತಂತೆ ಕಠಿಣ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ. ಕಾಂಗ್ರೆಸ್‍ನ ಅತ್ಯಂತ ದೊಡ್ಡ ಗೆಲುವು ಎಲ್ಲಿಂದ ಬಂತೆಂದು ನೋಡಿ, ವ್ಯಕ್ತಿ ಆರಾಧನೆಯಿರಲಿ ಸರಿಯಾಗಿ ಒಬ್ಬ ದೊಡ್ಡ ನಾಯಕನೂ ಇಲ್ಲದಿದ್ದ ಛತ್ತೀಸ್‍ಗಢದಿಂದ ಅದು ಬಂದಿದೆ.
ಈ ಫಲಿತಾಂಶವು ಆಡಳಿತ ಕೂಟದಲ್ಲಿದ್ದ ದುರಹಂಕಾರಕ್ಕೆ ಪೆಟ್ಟು ಕೊಟ್ಟಿರುವಂತೆಯೇ, ವಿರೋಧಿ ಕೂಟದಲ್ಲಿರುವ ಅಲ್ಪತೃಪ್ತಿಗೂ ಮದ್ದು ನೀಡಿದೆ. ರಾಜಸ್ತಾನದಲ್ಲಿ ನಿರೀಕ್ಷಿಸಲಾಗಿದ್ದ ದೊಡ್ಡ ಗೆಲುವನ್ನು ಪಡೆಯಲಾಗದ್ದು ಮತ್ತು ಮಧ್ಯಪ್ರದೇಶದಲ್ಲಿ ಬಹುಮತ ಸಿಗದಿರುವುದು ಕಾಂಗ್ರೆಸ್ ಸುಮ್ಮನೇ ಕುಳಿತು ಮೋದಿಯ ಆಡಳಿತವು ತನ್ನಂತೆ ತಾನೇ ಕರಗಲಿ ಎಂದು ಬಯಸಲಾಗುವುದಿಲ್ಲವೆಂಬುದು ಸ್ಪಷ್ಟ. ವಸುಂಧರಾ ರಾಜೇ ಸರ್ಕಾರದ ವಿರುದ್ಧ ವ್ಯಕ್ತವಾಗುತ್ತಿದ್ದ ಆಕ್ರೋಶ ಮತ್ತು ಶಿವರಾಜ್ ಚೌಹಾಣ್‍ರ ಆಡಳಿತದಲ್ಲಿದ್ದ ಜನರ ವ್ಯಾಪಕ ಸಂಕಷ್ಟವನ್ನು ಕಾಂಗ್ರೆಸ್ ತನ್ನ ಗೆಲುವಾಗಿ ಪರಿವರ್ತಿಸಲಾಗಲಿಲ್ಲವೆಂಬುದು, ಆ ಪಕ್ಷದೊಳಗೆ ಇರುವ ಗಂಭೀರ ಸಮಸ್ಯೆಯನ್ನು ಎತ್ತಿ ತೋರುತ್ತದೆ. ಕಳೆದ ಐದು ವರ್ಷಗಳಿಂದ ವಿಪಕ್ಷದಲ್ಲಿರುವ ಕಾಂಗ್ರೆಸ್ಸು, ಆ ಪಾತ್ರಕ್ಕೆ ತಕ್ಕಂತೆ ಬೀದಿಯಲ್ಲಿ ಪ್ರತಿಭಟಿಸಿದ್ದು ಎಲ್ಲೂ ಕಾಣಲಿಲ್ಲ. ಛತ್ತೀಸ್‍ಗಢದಲ್ಲಿ ಇದು ಭಿನ್ನವಾಗಿತ್ತು; ಅಲ್ಲಿನ ನಾಯಕತ್ವವು ತಳಮಟ್ಟದ ಚಳವಳಿ ಮತ್ತು ಪ್ರತಿಭಟನೆಗಳನ್ನು ಕಳೆದೈದು ವರ್ಷಗಳಲ್ಲಿ ನಡೆಸುತ್ತಾ ಕ್ರಿಯಾಶೀಲವಾಗಿತ್ತು.
ಕಡೆಯದಾಗಿ, ಚುನಾವಣಾ ಫಲಿತಾಂಶವು ಚುನಾವಣಾ ಅಂಕಗಣಿತಕ್ಕಿರುವ ಮಿತಿಯನ್ನೂ ತೋರಿಸಿದೆ. ಕಾಗದದ ಮೇಲೆ ಬಲಿಷ್ಠವಾಗಿದ್ದ ಮೈತ್ರಿಯನ್ನು ಕಾಂಗ್ರೆಸ್ಸು ತೆಲಂಗಾಣದಲ್ಲಿ ಮಾಡಿಕೊಂಡಿತ್ತು. ಲೆಕ್ಕ ಹಾಕಿ ನೋಡಿದರೆ, ಕಾಂಗ್ರೆಸ್-ಟಿಡಿಪಿ-ಸಿಪಿಐ-ಟಿಜೆಎಸ್‍ನ ಸಂಯುಕ್ತ ಶಕ್ತಿಯು ಟಿಆರ್‍ಎಸ್‍ಗಿಂತ ಎಷ್ಟೋ ಹೆಚ್ಚಿನದ್ದಾಗಿತ್ತು. ಆದರೆ, ತೆಲಂಗಾಣದ ಹುಟ್ಟಿಗೇ ವಿರುದ್ಧವಾಗಿದ್ದ ಪಕ್ಷದೊಂದಿಗಿನ ಅಪಕ್ವ ಮೈತ್ರಿಯು ಜನರಿಂದ ತಿರಸ್ಕರಿಸಲ್ಪಟ್ಟಿತು. ಛತ್ತೀಸ್‍ಗಢದಲ್ಲೂ ಅಜಿತ್ ಜೋಗಿ-ಬಿಎಸ್‍ಪಿ ಕೂಟವು ಕಾಂಗ್ರೆಸ್‍ಅನ್ನು ಬೀಳಿಸಬೇಕಿತ್ತು. ಆದರೆ, ಛತ್ತೀಸ್‍ಗಡದ ಜನರು ರಾಜ್ಯ ರಾಜಕಾರಣದ ಅತ್ಯಂತ ಸಂಶಯಾಸ್ಪದ ದಲ್ಲಾಳಿಯನ್ನು ತಿರಸ್ಕರಿಸಿದರು. 2019ಕ್ಕೆ ಮಹಾಘಟಬಂಧನ ಮಾಡುವ ಪ್ರಯತ್ನದಲ್ಲಿರುವ ತೀವ್ರ ಸಮಸ್ಯೆಯ ಬಗ್ಗೆ ಇದು ಬೆಳಕು ಚೆಲ್ಲುತ್ತದೆ. ಮೈತ್ರಿಗಳು ಅಗತ್ಯ, ಆದರೆ ಅವು ವಿಶ್ವಾಸಾರ್ಹತೆಗೆ ಬದಲಿಯಾಗಿ ಕೆಲಸಕ್ಕೆ ಬರುವುದಿಲ್ಲ. ಚುನಾವಣೆಗಳೆಂದರೆ ನೀವು ಕನಸನ್ನು ಬಿತ್ತಬೇಕು, ಭರವಸೆ ಹುಟ್ಟಿಸಬೇಕು, ಕಥನವನ್ನು ಕಟ್ಟಬೇಕು. ಈಗ ಹುಟ್ಟಿಕೊಳ್ಳುತ್ತಿರುವ ಮೋದಿ-ವಿರೋಧಿ ಕೂಟದಲ್ಲಿ ಅದಿನ್ನೂ ರೂಪುಗೊಂಡಿಲ್ಲ.
2019ರ ದಾರಿಯಲ್ಲಿ ಬಿಜೆಪಿಯು ಐದು ಘೋಷಣೆಗಳೊಂದಿಗೆ ಹೊರಟಿದೆ: ಅದರ ಭಾರೀ ಯಂತ್ರಾಂಗ, ಮೋದಿ, ಮಂದಿರ, ಮಾಧ್ಯಮ ಮತ್ತು ಹಣ (Machinery, Modi, Mandir, Media, Money). ಈ ವಿಧಾನಸಭಾ ಚುನಾವಣೆಗಳು ಮೊದಲ ಮೂರನ್ನು ಸರಿ ಮಾಡಿಕೊಳ್ಳಲು ಸೂಚಿಸುತ್ತವೆ. ಬಿಜೆಪಿಯ ಸಂಘಟನಾತ್ಮಕ ಶಕ್ತಿಯು ಅಜೇಯವಲ್ಲದಿದ್ದರೂ, ಮಣಿಸುವುದು ಸುಲಭವಲ್ಲ. ಮೋದಿಯನ್ನು ತಳ್ಳಿ ಹಾಕುವುದು ಸಾಧ್ಯವಿಲ್ಲ, ಆದರೆ ಜನಪ್ರಿಯತೆ ನಿಸ್ಸಂದೇಹವಾಗಿ ಕಡಿಮೆಯಾಗಿದೆ. ಮಂದಿರವು ನಿಷ್ಠಾವಂತರಲ್ಲಿ ಉತ್ಸಾಹ ಮೂಡಿಸುತ್ತದಾದರೂ, ಮತದಾರರನ್ನು ಸೆಳೆಯಲಾಗದು. ಬದಲಿಗೆ ಉಳಿದೆರಡನ್ನೂ ಅದು ಬದಲಿಸಬಲ್ಲದು. ಮಾಧ್ಯಮ ದೊರೆಗಳು ಅವರ ಇದುವರೆಗಿನ ರೀತಿಯ ಕುರಿತು ಪುನರಾಲೋಚಿಸುತ್ತಾರೆ. ಕನಿಷ್ಠ ಇವತ್ತಿರುವ ರೀತಿಯ ಆಡಳಿತದ ಪರ ತುತ್ತೂರಿಯು ಸ್ವಲ್ಪವಾದರೂ ಕಡಿಮೆಯಾಗುತ್ತದೆಂದು ಆಶಿಸಬಹುದು. ಹಾಗೆಯೇ ದೊಡ್ಡ ಉದ್ದಿಮೆದಾರರು ತಮ್ಮೆಲ್ಲಾ ಮೊಟ್ಟೆಗಳನ್ನು ಒಂದೇ ಬುಟ್ಟಿಯಲ್ಲಿ ಹಾಕಲು ಬಯಸುವುದಿಲ್ಲ. ಚುನಾವಣಾ ರಂಗದಲ್ಲಿ ಉಳಿಯಲು ಬೇಕಾದ ಸಂಪನ್ಮೂಲವನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೂ ಪಡೆದುಕೊಳ್ಳಲು ಆರಂಭವಾಗುತ್ತದೆ. ಅಷ್ಟು ಅಸಮಾನವಲ್ಲದ ಮೈದಾನದಲ್ಲಿ 2019ರ ಲೋಕಸಭಾ ಚುನಾವಣೆಯ ಸಂಗ್ರಾಮ ನಡೆಯಲಿದೆ. ಪ್ರಜಾತಂತ್ರಕ್ಕೆ ಅಗತ್ಯವಿದ್ದ ತಿದ್ದುಪಡಿಯು ಬಹಳ ತಡವಾಗಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...