Homeಮುಖಪುಟ2020ರ ದೆಹಲಿ ಗಲಭೆ: 'ಕಪೋಲಕಲ್ಪಿತ' ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

2020ರ ದೆಹಲಿ ಗಲಭೆ: ‘ಕಪೋಲಕಲ್ಪಿತ’ ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

- Advertisement -
- Advertisement -

‘ಕಪೋಲಕಲ್ಪಿತ’ ಮತ್ತು ‘ಕಾಲ್ಪನಿಕ’ ಸಾಕ್ಷ್ಯಗಳು ಹಾಗೂ ‘ತಿರುಚಿದ’ ಪ್ರಕರಣಗಳನ್ನು ಉಲ್ಲೇಖಿಸಿ, 2020ರ ಗಲಭೆಗಳಿಗೆ ಸಂಬಂಧಿಸಿದ ಕನಿಷ್ಠ 17 ಪ್ರಕರಣಗಳಲ್ಲಿ ದೆಹಲಿ ನ್ಯಾಯಾಲಯಗಳು ಆರೋಪಿಗಳನ್ನು ಖುಲಾಸೆಗೊಳಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿ ಮಾಡಿದೆ.

ಒಟ್ಟು 93 ಖುಲಾಸೆ ಆದೇಶಗಳ ಪರಿಶೀಲನೆಯಿಂದ ನ್ಯಾಯಾಲಯಗಳು ದೆಹಲಿ ಪೊಲೀಸರ ವಿರುದ್ಧ ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿರುವುದು ಗೊತ್ತಾಗಿದೆ. ಸುಮಾರು 20% ಪ್ರಕರಣಗಳಲ್ಲಿ (ಅಂದರೆ, ಪ್ರತಿ ಐದು ಪ್ರಕರಣಗಳಲ್ಲಿ ಒಂದರಲ್ಲಿ), ನ್ಯಾಯಾಧೀಶರು ಪೊಲೀಸರಿಂದ ಗಂಭೀರ ತಪ್ಪುಗಳು ಅಥವಾ ದುರ್ವರ್ತನೆಯನ್ನು ಗಮನಿಸಿದ್ದಾರೆ. ಒಟ್ಟಾರೆ, 116 ಗಲಭೆ ಪ್ರಕರಣಗಳಲ್ಲಿ ತೀರ್ಪು ನೀಡಲಾಗಿದ್ದು, ಅದರಲ್ಲಿ 97 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ, ಅಂದರೆ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ದೋಷಮುಕ್ತರೆಂದು ಘೋಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಕನಿಷ್ಠ 12 ಆದೇಶಗಳಲ್ಲಿ, ಪೊಲೀಸರು ‘ಕೃತಕ’ ಅಥವಾ ಸ್ಪಷ್ಟವಾಗಿ ‘ಕಲ್ಪಿತ’ ಸಾಕ್ಷ್ಯಗಳನ್ನು ಪರಿಚಯಿಸಿದ್ದಾರೆ ಎಂದು ನ್ಯಾಯಾಧೀಶರು ಕಂಡುಕೊಂಡಿದ್ದಾರೆ. ಅಂದರೆ, ಪೊಲೀಸರು ಸುಳ್ಳು ಅಥವಾ ತಿರುಚಿದ ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆ ಎಂದು ಗುರುತಿಸಿದ್ದಾರೆ. ಇದರ ಜೊತೆಗೆ, ಇನ್ನೆರಡು ಪ್ರಕರಣಗಳಲ್ಲಿ, ಸಾಕ್ಷಿಗಳು ತಮ್ಮ ಹೇಳಿಕೆಗಳನ್ನು ಪೊಲೀಸ್ ಅಧಿಕಾರಿಗಳು ನಿರ್ದೇಶಿಸಿದಂತೆ ದಾಖಲಿಸಲಾಗಿದೆ. ಅವರು ಸೂಚಿಸಿದಂತೆ ಹೇಳಿಕೆ ನೀಡಲು ಪೊಲೀಸರು ನಮ್ಮನ್ನು ಒತ್ತಾಯಿಸಿದ್ದಾರೆ ಎಂದು ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ನ್ಯಾಯಾಧೀಶ ಪರವೀನ್ ಸಿಂಗ್, ಅವರು ಒಂದು ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸುವಾಗ, ತನಿಖಾಧಿಕಾರಿಯಿಂದ (IO) ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದಾರೆ ಅಥವಾ ಸುಳ್ಳು ಸಾಕ್ಷ್ಯಗಳನ್ನು ಸೇರಿಸಿದ್ದಾರೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳು ಜನರಲ್ಲಿ ತನಿಖಾ ಪ್ರಕ್ರಿಯೆ ಮತ್ತು ಕಾನೂನಿನ ಆಡಳಿತದ ಮೇಲಿನ ವಿಶ್ವಾಸವನ್ನುಕಡಿಮೆ ಮಾಡುತ್ತವೆ ಎಂದು ಎಚ್ಚರಿಸಿದ್ದಾರೆ.

2020 ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳ ನಡುವೆ ಭುಗಿಲೆದ್ದ ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೆಲ ಆದೇಶಗಳಲ್ಲಿ ನ್ಯಾಯಾಲಯಗಳು ಪ್ರಾಸಿಕ್ಯೂಷನ್‌ನ (ಅಭಿಯೋಗದ) ವಾದವನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಒಂದು ಪ್ರಕರಣದಲ್ಲಿ, ನ್ಯಾಯಾಧೀಶರು ಪ್ರಮುಖ ಸಾಕ್ಷಿಯ ಇರುವಿಕೆಯ ಬಗ್ಗೆಯೇ ಸಂದೇಹ ವ್ಯಕ್ತಪಡಿಸಿದ್ದಾರೆ ಮತ್ತು ಆ ಸಾಕ್ಷಿಯು ಕಾಲ್ಪನಿಕ (ನಕಲಿ) ವ್ಯಕ್ತಿಯಾಗಿರಬಹುದು ಎಂದು ತಿಳಿಸಿದ್ದಾರೆ. ಇನ್ನೆರಡು ಸಮಾನ ಆದೇಶಗಳಲ್ಲಿ, ಪೊಲೀಸರು ಪ್ರಕರಣವನ್ನು ತಿರುಚಿರುವುದು (ಸುಳ್ಳು ಸಾಕ್ಷ್ಯಗಳಿಂದ ಕೂಡಿದೆ) ಅವರಿಗೆ ಗೊತ್ತಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ಏಕೆಂದರೆ, ಅವರು ಟೆಸ್ಟ್ ಐಡೆಂಟಿಫಿಕೇಶನ್ ಪರೇಡ್ (ಟಿಐಪಿ)ನಡೆಸಿಲ್ಲ, ಇದು ತನಿಖೆಯಲ್ಲಿ ಪ್ರಮುಖ ಕ್ರಮವಾಗಿದೆ ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನ್ಯಾಯಾಧೀಶರ ಈ ಟೀಕೆಗಳು, ತನಿಖೆಯ ಸಂದರ್ಭದಲ್ಲಿ ಕೇಸ್ ಡೈರಿಯಲ್ಲಿ ಉದ್ದೇಶಪೂರ್ವಕವಾಗಿ ತಿರುಚಲಾಗಿರುವ ಸಾಧ್ಯತೆಯನ್ನು ಮತ್ತು ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಕೃತಕವಾಗಿ ರಚಿಸಲಾದ ಆರೋಪವನ್ನು ಒತ್ತಿಹೇಳುತ್ತವೆ. ಇದು, ನಗರದಲ್ಲಿ ನಡೆದ ಗಂಭೀರ ಸಾಮುದಾಯಿಕ ಹಿಂಸಾಚಾರದ ಘಟನೆಯ ತನಿಖೆಯಲ್ಲಿ ಗಂಭೀರ ಲೋಪಗಳು ಇದ್ದವು ಎಂದು ಸೂಚಿಸುತ್ತದೆ, ಇದು ಒಟ್ಟಾರೆ ತನಿಖಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ ವರದಿ ಅಭಿಪ್ರಾಯಪಟ್ಟಿದೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...