Homeಮುಖಪುಟ2020ರ ದೆಹಲಿ ಗಲಭೆ: 'ಕಪೋಲಕಲ್ಪಿತ' ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

2020ರ ದೆಹಲಿ ಗಲಭೆ: ‘ಕಪೋಲಕಲ್ಪಿತ’ ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

- Advertisement -
- Advertisement -

‘ಕಪೋಲಕಲ್ಪಿತ’ ಮತ್ತು ‘ಕಾಲ್ಪನಿಕ’ ಸಾಕ್ಷ್ಯಗಳು ಹಾಗೂ ‘ತಿರುಚಿದ’ ಪ್ರಕರಣಗಳನ್ನು ಉಲ್ಲೇಖಿಸಿ, 2020ರ ಗಲಭೆಗಳಿಗೆ ಸಂಬಂಧಿಸಿದ ಕನಿಷ್ಠ 17 ಪ್ರಕರಣಗಳಲ್ಲಿ ದೆಹಲಿ ನ್ಯಾಯಾಲಯಗಳು ಆರೋಪಿಗಳನ್ನು ಖುಲಾಸೆಗೊಳಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿ ಮಾಡಿದೆ.

ಒಟ್ಟು 93 ಖುಲಾಸೆ ಆದೇಶಗಳ ಪರಿಶೀಲನೆಯಿಂದ ನ್ಯಾಯಾಲಯಗಳು ದೆಹಲಿ ಪೊಲೀಸರ ವಿರುದ್ಧ ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿರುವುದು ಗೊತ್ತಾಗಿದೆ. ಸುಮಾರು 20% ಪ್ರಕರಣಗಳಲ್ಲಿ (ಅಂದರೆ, ಪ್ರತಿ ಐದು ಪ್ರಕರಣಗಳಲ್ಲಿ ಒಂದರಲ್ಲಿ), ನ್ಯಾಯಾಧೀಶರು ಪೊಲೀಸರಿಂದ ಗಂಭೀರ ತಪ್ಪುಗಳು ಅಥವಾ ದುರ್ವರ್ತನೆಯನ್ನು ಗಮನಿಸಿದ್ದಾರೆ. ಒಟ್ಟಾರೆ, 116 ಗಲಭೆ ಪ್ರಕರಣಗಳಲ್ಲಿ ತೀರ್ಪು ನೀಡಲಾಗಿದ್ದು, ಅದರಲ್ಲಿ 97 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ, ಅಂದರೆ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ದೋಷಮುಕ್ತರೆಂದು ಘೋಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಕನಿಷ್ಠ 12 ಆದೇಶಗಳಲ್ಲಿ, ಪೊಲೀಸರು ‘ಕೃತಕ’ ಅಥವಾ ಸ್ಪಷ್ಟವಾಗಿ ‘ಕಲ್ಪಿತ’ ಸಾಕ್ಷ್ಯಗಳನ್ನು ಪರಿಚಯಿಸಿದ್ದಾರೆ ಎಂದು ನ್ಯಾಯಾಧೀಶರು ಕಂಡುಕೊಂಡಿದ್ದಾರೆ. ಅಂದರೆ, ಪೊಲೀಸರು ಸುಳ್ಳು ಅಥವಾ ತಿರುಚಿದ ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆ ಎಂದು ಗುರುತಿಸಿದ್ದಾರೆ. ಇದರ ಜೊತೆಗೆ, ಇನ್ನೆರಡು ಪ್ರಕರಣಗಳಲ್ಲಿ, ಸಾಕ್ಷಿಗಳು ತಮ್ಮ ಹೇಳಿಕೆಗಳನ್ನು ಪೊಲೀಸ್ ಅಧಿಕಾರಿಗಳು ನಿರ್ದೇಶಿಸಿದಂತೆ ದಾಖಲಿಸಲಾಗಿದೆ. ಅವರು ಸೂಚಿಸಿದಂತೆ ಹೇಳಿಕೆ ನೀಡಲು ಪೊಲೀಸರು ನಮ್ಮನ್ನು ಒತ್ತಾಯಿಸಿದ್ದಾರೆ ಎಂದು ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ನ್ಯಾಯಾಧೀಶ ಪರವೀನ್ ಸಿಂಗ್, ಅವರು ಒಂದು ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸುವಾಗ, ತನಿಖಾಧಿಕಾರಿಯಿಂದ (IO) ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದಾರೆ ಅಥವಾ ಸುಳ್ಳು ಸಾಕ್ಷ್ಯಗಳನ್ನು ಸೇರಿಸಿದ್ದಾರೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳು ಜನರಲ್ಲಿ ತನಿಖಾ ಪ್ರಕ್ರಿಯೆ ಮತ್ತು ಕಾನೂನಿನ ಆಡಳಿತದ ಮೇಲಿನ ವಿಶ್ವಾಸವನ್ನುಕಡಿಮೆ ಮಾಡುತ್ತವೆ ಎಂದು ಎಚ್ಚರಿಸಿದ್ದಾರೆ.

2020 ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳ ನಡುವೆ ಭುಗಿಲೆದ್ದ ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೆಲ ಆದೇಶಗಳಲ್ಲಿ ನ್ಯಾಯಾಲಯಗಳು ಪ್ರಾಸಿಕ್ಯೂಷನ್‌ನ (ಅಭಿಯೋಗದ) ವಾದವನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಒಂದು ಪ್ರಕರಣದಲ್ಲಿ, ನ್ಯಾಯಾಧೀಶರು ಪ್ರಮುಖ ಸಾಕ್ಷಿಯ ಇರುವಿಕೆಯ ಬಗ್ಗೆಯೇ ಸಂದೇಹ ವ್ಯಕ್ತಪಡಿಸಿದ್ದಾರೆ ಮತ್ತು ಆ ಸಾಕ್ಷಿಯು ಕಾಲ್ಪನಿಕ (ನಕಲಿ) ವ್ಯಕ್ತಿಯಾಗಿರಬಹುದು ಎಂದು ತಿಳಿಸಿದ್ದಾರೆ. ಇನ್ನೆರಡು ಸಮಾನ ಆದೇಶಗಳಲ್ಲಿ, ಪೊಲೀಸರು ಪ್ರಕರಣವನ್ನು ತಿರುಚಿರುವುದು (ಸುಳ್ಳು ಸಾಕ್ಷ್ಯಗಳಿಂದ ಕೂಡಿದೆ) ಅವರಿಗೆ ಗೊತ್ತಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ಏಕೆಂದರೆ, ಅವರು ಟೆಸ್ಟ್ ಐಡೆಂಟಿಫಿಕೇಶನ್ ಪರೇಡ್ (ಟಿಐಪಿ)ನಡೆಸಿಲ್ಲ, ಇದು ತನಿಖೆಯಲ್ಲಿ ಪ್ರಮುಖ ಕ್ರಮವಾಗಿದೆ ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನ್ಯಾಯಾಧೀಶರ ಈ ಟೀಕೆಗಳು, ತನಿಖೆಯ ಸಂದರ್ಭದಲ್ಲಿ ಕೇಸ್ ಡೈರಿಯಲ್ಲಿ ಉದ್ದೇಶಪೂರ್ವಕವಾಗಿ ತಿರುಚಲಾಗಿರುವ ಸಾಧ್ಯತೆಯನ್ನು ಮತ್ತು ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಕೃತಕವಾಗಿ ರಚಿಸಲಾದ ಆರೋಪವನ್ನು ಒತ್ತಿಹೇಳುತ್ತವೆ. ಇದು, ನಗರದಲ್ಲಿ ನಡೆದ ಗಂಭೀರ ಸಾಮುದಾಯಿಕ ಹಿಂಸಾಚಾರದ ಘಟನೆಯ ತನಿಖೆಯಲ್ಲಿ ಗಂಭೀರ ಲೋಪಗಳು ಇದ್ದವು ಎಂದು ಸೂಚಿಸುತ್ತದೆ, ಇದು ಒಟ್ಟಾರೆ ತನಿಖಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ ವರದಿ ಅಭಿಪ್ರಾಯಪಟ್ಟಿದೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...