Homeಮುಖಪುಟ2020ರ ದೆಹಲಿ ಗಲಭೆ: 'ಕಪೋಲಕಲ್ಪಿತ' ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

2020ರ ದೆಹಲಿ ಗಲಭೆ: ‘ಕಪೋಲಕಲ್ಪಿತ’ ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

- Advertisement -
- Advertisement -

‘ಕಪೋಲಕಲ್ಪಿತ’ ಮತ್ತು ‘ಕಾಲ್ಪನಿಕ’ ಸಾಕ್ಷ್ಯಗಳು ಹಾಗೂ ‘ತಿರುಚಿದ’ ಪ್ರಕರಣಗಳನ್ನು ಉಲ್ಲೇಖಿಸಿ, 2020ರ ಗಲಭೆಗಳಿಗೆ ಸಂಬಂಧಿಸಿದ ಕನಿಷ್ಠ 17 ಪ್ರಕರಣಗಳಲ್ಲಿ ದೆಹಲಿ ನ್ಯಾಯಾಲಯಗಳು ಆರೋಪಿಗಳನ್ನು ಖುಲಾಸೆಗೊಳಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿ ಮಾಡಿದೆ.

ಒಟ್ಟು 93 ಖುಲಾಸೆ ಆದೇಶಗಳ ಪರಿಶೀಲನೆಯಿಂದ ನ್ಯಾಯಾಲಯಗಳು ದೆಹಲಿ ಪೊಲೀಸರ ವಿರುದ್ಧ ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿರುವುದು ಗೊತ್ತಾಗಿದೆ. ಸುಮಾರು 20% ಪ್ರಕರಣಗಳಲ್ಲಿ (ಅಂದರೆ, ಪ್ರತಿ ಐದು ಪ್ರಕರಣಗಳಲ್ಲಿ ಒಂದರಲ್ಲಿ), ನ್ಯಾಯಾಧೀಶರು ಪೊಲೀಸರಿಂದ ಗಂಭೀರ ತಪ್ಪುಗಳು ಅಥವಾ ದುರ್ವರ್ತನೆಯನ್ನು ಗಮನಿಸಿದ್ದಾರೆ. ಒಟ್ಟಾರೆ, 116 ಗಲಭೆ ಪ್ರಕರಣಗಳಲ್ಲಿ ತೀರ್ಪು ನೀಡಲಾಗಿದ್ದು, ಅದರಲ್ಲಿ 97 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ, ಅಂದರೆ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ದೋಷಮುಕ್ತರೆಂದು ಘೋಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಕನಿಷ್ಠ 12 ಆದೇಶಗಳಲ್ಲಿ, ಪೊಲೀಸರು ‘ಕೃತಕ’ ಅಥವಾ ಸ್ಪಷ್ಟವಾಗಿ ‘ಕಲ್ಪಿತ’ ಸಾಕ್ಷ್ಯಗಳನ್ನು ಪರಿಚಯಿಸಿದ್ದಾರೆ ಎಂದು ನ್ಯಾಯಾಧೀಶರು ಕಂಡುಕೊಂಡಿದ್ದಾರೆ. ಅಂದರೆ, ಪೊಲೀಸರು ಸುಳ್ಳು ಅಥವಾ ತಿರುಚಿದ ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆ ಎಂದು ಗುರುತಿಸಿದ್ದಾರೆ. ಇದರ ಜೊತೆಗೆ, ಇನ್ನೆರಡು ಪ್ರಕರಣಗಳಲ್ಲಿ, ಸಾಕ್ಷಿಗಳು ತಮ್ಮ ಹೇಳಿಕೆಗಳನ್ನು ಪೊಲೀಸ್ ಅಧಿಕಾರಿಗಳು ನಿರ್ದೇಶಿಸಿದಂತೆ ದಾಖಲಿಸಲಾಗಿದೆ. ಅವರು ಸೂಚಿಸಿದಂತೆ ಹೇಳಿಕೆ ನೀಡಲು ಪೊಲೀಸರು ನಮ್ಮನ್ನು ಒತ್ತಾಯಿಸಿದ್ದಾರೆ ಎಂದು ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ನ್ಯಾಯಾಧೀಶ ಪರವೀನ್ ಸಿಂಗ್, ಅವರು ಒಂದು ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸುವಾಗ, ತನಿಖಾಧಿಕಾರಿಯಿಂದ (IO) ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದಾರೆ ಅಥವಾ ಸುಳ್ಳು ಸಾಕ್ಷ್ಯಗಳನ್ನು ಸೇರಿಸಿದ್ದಾರೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳು ಜನರಲ್ಲಿ ತನಿಖಾ ಪ್ರಕ್ರಿಯೆ ಮತ್ತು ಕಾನೂನಿನ ಆಡಳಿತದ ಮೇಲಿನ ವಿಶ್ವಾಸವನ್ನುಕಡಿಮೆ ಮಾಡುತ್ತವೆ ಎಂದು ಎಚ್ಚರಿಸಿದ್ದಾರೆ.

2020 ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳ ನಡುವೆ ಭುಗಿಲೆದ್ದ ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೆಲ ಆದೇಶಗಳಲ್ಲಿ ನ್ಯಾಯಾಲಯಗಳು ಪ್ರಾಸಿಕ್ಯೂಷನ್‌ನ (ಅಭಿಯೋಗದ) ವಾದವನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಒಂದು ಪ್ರಕರಣದಲ್ಲಿ, ನ್ಯಾಯಾಧೀಶರು ಪ್ರಮುಖ ಸಾಕ್ಷಿಯ ಇರುವಿಕೆಯ ಬಗ್ಗೆಯೇ ಸಂದೇಹ ವ್ಯಕ್ತಪಡಿಸಿದ್ದಾರೆ ಮತ್ತು ಆ ಸಾಕ್ಷಿಯು ಕಾಲ್ಪನಿಕ (ನಕಲಿ) ವ್ಯಕ್ತಿಯಾಗಿರಬಹುದು ಎಂದು ತಿಳಿಸಿದ್ದಾರೆ. ಇನ್ನೆರಡು ಸಮಾನ ಆದೇಶಗಳಲ್ಲಿ, ಪೊಲೀಸರು ಪ್ರಕರಣವನ್ನು ತಿರುಚಿರುವುದು (ಸುಳ್ಳು ಸಾಕ್ಷ್ಯಗಳಿಂದ ಕೂಡಿದೆ) ಅವರಿಗೆ ಗೊತ್ತಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ಏಕೆಂದರೆ, ಅವರು ಟೆಸ್ಟ್ ಐಡೆಂಟಿಫಿಕೇಶನ್ ಪರೇಡ್ (ಟಿಐಪಿ)ನಡೆಸಿಲ್ಲ, ಇದು ತನಿಖೆಯಲ್ಲಿ ಪ್ರಮುಖ ಕ್ರಮವಾಗಿದೆ ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನ್ಯಾಯಾಧೀಶರ ಈ ಟೀಕೆಗಳು, ತನಿಖೆಯ ಸಂದರ್ಭದಲ್ಲಿ ಕೇಸ್ ಡೈರಿಯಲ್ಲಿ ಉದ್ದೇಶಪೂರ್ವಕವಾಗಿ ತಿರುಚಲಾಗಿರುವ ಸಾಧ್ಯತೆಯನ್ನು ಮತ್ತು ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಕೃತಕವಾಗಿ ರಚಿಸಲಾದ ಆರೋಪವನ್ನು ಒತ್ತಿಹೇಳುತ್ತವೆ. ಇದು, ನಗರದಲ್ಲಿ ನಡೆದ ಗಂಭೀರ ಸಾಮುದಾಯಿಕ ಹಿಂಸಾಚಾರದ ಘಟನೆಯ ತನಿಖೆಯಲ್ಲಿ ಗಂಭೀರ ಲೋಪಗಳು ಇದ್ದವು ಎಂದು ಸೂಚಿಸುತ್ತದೆ, ಇದು ಒಟ್ಟಾರೆ ತನಿಖಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ ವರದಿ ಅಭಿಪ್ರಾಯಪಟ್ಟಿದೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...