Homeಮುಖಪುಟ2020ರ ದೆಹಲಿ ಗಲಭೆ: 'ಕಪೋಲಕಲ್ಪಿತ' ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

2020ರ ದೆಹಲಿ ಗಲಭೆ: ‘ಕಪೋಲಕಲ್ಪಿತ’ ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

- Advertisement -
- Advertisement -

‘ಕಪೋಲಕಲ್ಪಿತ’ ಮತ್ತು ‘ಕಾಲ್ಪನಿಕ’ ಸಾಕ್ಷ್ಯಗಳು ಹಾಗೂ ‘ತಿರುಚಿದ’ ಪ್ರಕರಣಗಳನ್ನು ಉಲ್ಲೇಖಿಸಿ, 2020ರ ಗಲಭೆಗಳಿಗೆ ಸಂಬಂಧಿಸಿದ ಕನಿಷ್ಠ 17 ಪ್ರಕರಣಗಳಲ್ಲಿ ದೆಹಲಿ ನ್ಯಾಯಾಲಯಗಳು ಆರೋಪಿಗಳನ್ನು ಖುಲಾಸೆಗೊಳಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿ ಮಾಡಿದೆ.

ಒಟ್ಟು 93 ಖುಲಾಸೆ ಆದೇಶಗಳ ಪರಿಶೀಲನೆಯಿಂದ ನ್ಯಾಯಾಲಯಗಳು ದೆಹಲಿ ಪೊಲೀಸರ ವಿರುದ್ಧ ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿರುವುದು ಗೊತ್ತಾಗಿದೆ. ಸುಮಾರು 20% ಪ್ರಕರಣಗಳಲ್ಲಿ (ಅಂದರೆ, ಪ್ರತಿ ಐದು ಪ್ರಕರಣಗಳಲ್ಲಿ ಒಂದರಲ್ಲಿ), ನ್ಯಾಯಾಧೀಶರು ಪೊಲೀಸರಿಂದ ಗಂಭೀರ ತಪ್ಪುಗಳು ಅಥವಾ ದುರ್ವರ್ತನೆಯನ್ನು ಗಮನಿಸಿದ್ದಾರೆ. ಒಟ್ಟಾರೆ, 116 ಗಲಭೆ ಪ್ರಕರಣಗಳಲ್ಲಿ ತೀರ್ಪು ನೀಡಲಾಗಿದ್ದು, ಅದರಲ್ಲಿ 97 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ, ಅಂದರೆ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ದೋಷಮುಕ್ತರೆಂದು ಘೋಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಕನಿಷ್ಠ 12 ಆದೇಶಗಳಲ್ಲಿ, ಪೊಲೀಸರು ‘ಕೃತಕ’ ಅಥವಾ ಸ್ಪಷ್ಟವಾಗಿ ‘ಕಲ್ಪಿತ’ ಸಾಕ್ಷ್ಯಗಳನ್ನು ಪರಿಚಯಿಸಿದ್ದಾರೆ ಎಂದು ನ್ಯಾಯಾಧೀಶರು ಕಂಡುಕೊಂಡಿದ್ದಾರೆ. ಅಂದರೆ, ಪೊಲೀಸರು ಸುಳ್ಳು ಅಥವಾ ತಿರುಚಿದ ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆ ಎಂದು ಗುರುತಿಸಿದ್ದಾರೆ. ಇದರ ಜೊತೆಗೆ, ಇನ್ನೆರಡು ಪ್ರಕರಣಗಳಲ್ಲಿ, ಸಾಕ್ಷಿಗಳು ತಮ್ಮ ಹೇಳಿಕೆಗಳನ್ನು ಪೊಲೀಸ್ ಅಧಿಕಾರಿಗಳು ನಿರ್ದೇಶಿಸಿದಂತೆ ದಾಖಲಿಸಲಾಗಿದೆ. ಅವರು ಸೂಚಿಸಿದಂತೆ ಹೇಳಿಕೆ ನೀಡಲು ಪೊಲೀಸರು ನಮ್ಮನ್ನು ಒತ್ತಾಯಿಸಿದ್ದಾರೆ ಎಂದು ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ನ್ಯಾಯಾಧೀಶ ಪರವೀನ್ ಸಿಂಗ್, ಅವರು ಒಂದು ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸುವಾಗ, ತನಿಖಾಧಿಕಾರಿಯಿಂದ (IO) ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದಾರೆ ಅಥವಾ ಸುಳ್ಳು ಸಾಕ್ಷ್ಯಗಳನ್ನು ಸೇರಿಸಿದ್ದಾರೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳು ಜನರಲ್ಲಿ ತನಿಖಾ ಪ್ರಕ್ರಿಯೆ ಮತ್ತು ಕಾನೂನಿನ ಆಡಳಿತದ ಮೇಲಿನ ವಿಶ್ವಾಸವನ್ನುಕಡಿಮೆ ಮಾಡುತ್ತವೆ ಎಂದು ಎಚ್ಚರಿಸಿದ್ದಾರೆ.

2020 ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳ ನಡುವೆ ಭುಗಿಲೆದ್ದ ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೆಲ ಆದೇಶಗಳಲ್ಲಿ ನ್ಯಾಯಾಲಯಗಳು ಪ್ರಾಸಿಕ್ಯೂಷನ್‌ನ (ಅಭಿಯೋಗದ) ವಾದವನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಒಂದು ಪ್ರಕರಣದಲ್ಲಿ, ನ್ಯಾಯಾಧೀಶರು ಪ್ರಮುಖ ಸಾಕ್ಷಿಯ ಇರುವಿಕೆಯ ಬಗ್ಗೆಯೇ ಸಂದೇಹ ವ್ಯಕ್ತಪಡಿಸಿದ್ದಾರೆ ಮತ್ತು ಆ ಸಾಕ್ಷಿಯು ಕಾಲ್ಪನಿಕ (ನಕಲಿ) ವ್ಯಕ್ತಿಯಾಗಿರಬಹುದು ಎಂದು ತಿಳಿಸಿದ್ದಾರೆ. ಇನ್ನೆರಡು ಸಮಾನ ಆದೇಶಗಳಲ್ಲಿ, ಪೊಲೀಸರು ಪ್ರಕರಣವನ್ನು ತಿರುಚಿರುವುದು (ಸುಳ್ಳು ಸಾಕ್ಷ್ಯಗಳಿಂದ ಕೂಡಿದೆ) ಅವರಿಗೆ ಗೊತ್ತಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ಏಕೆಂದರೆ, ಅವರು ಟೆಸ್ಟ್ ಐಡೆಂಟಿಫಿಕೇಶನ್ ಪರೇಡ್ (ಟಿಐಪಿ)ನಡೆಸಿಲ್ಲ, ಇದು ತನಿಖೆಯಲ್ಲಿ ಪ್ರಮುಖ ಕ್ರಮವಾಗಿದೆ ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನ್ಯಾಯಾಧೀಶರ ಈ ಟೀಕೆಗಳು, ತನಿಖೆಯ ಸಂದರ್ಭದಲ್ಲಿ ಕೇಸ್ ಡೈರಿಯಲ್ಲಿ ಉದ್ದೇಶಪೂರ್ವಕವಾಗಿ ತಿರುಚಲಾಗಿರುವ ಸಾಧ್ಯತೆಯನ್ನು ಮತ್ತು ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಕೃತಕವಾಗಿ ರಚಿಸಲಾದ ಆರೋಪವನ್ನು ಒತ್ತಿಹೇಳುತ್ತವೆ. ಇದು, ನಗರದಲ್ಲಿ ನಡೆದ ಗಂಭೀರ ಸಾಮುದಾಯಿಕ ಹಿಂಸಾಚಾರದ ಘಟನೆಯ ತನಿಖೆಯಲ್ಲಿ ಗಂಭೀರ ಲೋಪಗಳು ಇದ್ದವು ಎಂದು ಸೂಚಿಸುತ್ತದೆ, ಇದು ಒಟ್ಟಾರೆ ತನಿಖಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ ವರದಿ ಅಭಿಪ್ರಾಯಪಟ್ಟಿದೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...