Homeಮುಖಪುಟ2020ರ ದೆಹಲಿ ಗಲಭೆ: 'ಕಪೋಲಕಲ್ಪಿತ' ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

2020ರ ದೆಹಲಿ ಗಲಭೆ: ‘ಕಪೋಲಕಲ್ಪಿತ’ ಸಾಕ್ಷ್ಯಗಳನ್ನು ಉಲ್ಲೇಖಿಸಿದ ನ್ಯಾಯಾಲಯಗಳು; ಖುಲಾಸೆ ಪ್ರಕರಣಗಳಲ್ಲಿ ಪೊಲೀಸರಿಗೆ ತರಾಟೆ

- Advertisement -
- Advertisement -

‘ಕಪೋಲಕಲ್ಪಿತ’ ಮತ್ತು ‘ಕಾಲ್ಪನಿಕ’ ಸಾಕ್ಷ್ಯಗಳು ಹಾಗೂ ‘ತಿರುಚಿದ’ ಪ್ರಕರಣಗಳನ್ನು ಉಲ್ಲೇಖಿಸಿ, 2020ರ ಗಲಭೆಗಳಿಗೆ ಸಂಬಂಧಿಸಿದ ಕನಿಷ್ಠ 17 ಪ್ರಕರಣಗಳಲ್ಲಿ ದೆಹಲಿ ನ್ಯಾಯಾಲಯಗಳು ಆರೋಪಿಗಳನ್ನು ಖುಲಾಸೆಗೊಳಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿ ಮಾಡಿದೆ.

ಒಟ್ಟು 93 ಖುಲಾಸೆ ಆದೇಶಗಳ ಪರಿಶೀಲನೆಯಿಂದ ನ್ಯಾಯಾಲಯಗಳು ದೆಹಲಿ ಪೊಲೀಸರ ವಿರುದ್ಧ ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿರುವುದು ಗೊತ್ತಾಗಿದೆ. ಸುಮಾರು 20% ಪ್ರಕರಣಗಳಲ್ಲಿ (ಅಂದರೆ, ಪ್ರತಿ ಐದು ಪ್ರಕರಣಗಳಲ್ಲಿ ಒಂದರಲ್ಲಿ), ನ್ಯಾಯಾಧೀಶರು ಪೊಲೀಸರಿಂದ ಗಂಭೀರ ತಪ್ಪುಗಳು ಅಥವಾ ದುರ್ವರ್ತನೆಯನ್ನು ಗಮನಿಸಿದ್ದಾರೆ. ಒಟ್ಟಾರೆ, 116 ಗಲಭೆ ಪ್ರಕರಣಗಳಲ್ಲಿ ತೀರ್ಪು ನೀಡಲಾಗಿದ್ದು, ಅದರಲ್ಲಿ 97 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ, ಅಂದರೆ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ದೋಷಮುಕ್ತರೆಂದು ಘೋಷಿಸಲಾಗಿದೆ ಎಂದು ವರದಿ ವಿವರಿಸಿದೆ.

ಕನಿಷ್ಠ 12 ಆದೇಶಗಳಲ್ಲಿ, ಪೊಲೀಸರು ‘ಕೃತಕ’ ಅಥವಾ ಸ್ಪಷ್ಟವಾಗಿ ‘ಕಲ್ಪಿತ’ ಸಾಕ್ಷ್ಯಗಳನ್ನು ಪರಿಚಯಿಸಿದ್ದಾರೆ ಎಂದು ನ್ಯಾಯಾಧೀಶರು ಕಂಡುಕೊಂಡಿದ್ದಾರೆ. ಅಂದರೆ, ಪೊಲೀಸರು ಸುಳ್ಳು ಅಥವಾ ತಿರುಚಿದ ಸಾಕ್ಷ್ಯಗಳನ್ನು ಸೃಷ್ಟಿಸಿದ್ದಾರೆ ಎಂದು ಗುರುತಿಸಿದ್ದಾರೆ. ಇದರ ಜೊತೆಗೆ, ಇನ್ನೆರಡು ಪ್ರಕರಣಗಳಲ್ಲಿ, ಸಾಕ್ಷಿಗಳು ತಮ್ಮ ಹೇಳಿಕೆಗಳನ್ನು ಪೊಲೀಸ್ ಅಧಿಕಾರಿಗಳು ನಿರ್ದೇಶಿಸಿದಂತೆ ದಾಖಲಿಸಲಾಗಿದೆ. ಅವರು ಸೂಚಿಸಿದಂತೆ ಹೇಳಿಕೆ ನೀಡಲು ಪೊಲೀಸರು ನಮ್ಮನ್ನು ಒತ್ತಾಯಿಸಿದ್ದಾರೆ ಎಂದು ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ನ್ಯಾಯಾಧೀಶ ಪರವೀನ್ ಸಿಂಗ್, ಅವರು ಒಂದು ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸುವಾಗ, ತನಿಖಾಧಿಕಾರಿಯಿಂದ (IO) ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದಾರೆ ಅಥವಾ ಸುಳ್ಳು ಸಾಕ್ಷ್ಯಗಳನ್ನು ಸೇರಿಸಿದ್ದಾರೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳು ಜನರಲ್ಲಿ ತನಿಖಾ ಪ್ರಕ್ರಿಯೆ ಮತ್ತು ಕಾನೂನಿನ ಆಡಳಿತದ ಮೇಲಿನ ವಿಶ್ವಾಸವನ್ನುಕಡಿಮೆ ಮಾಡುತ್ತವೆ ಎಂದು ಎಚ್ಚರಿಸಿದ್ದಾರೆ.

2020 ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳ ನಡುವೆ ಭುಗಿಲೆದ್ದ ಗಲಭೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕೆಲ ಆದೇಶಗಳಲ್ಲಿ ನ್ಯಾಯಾಲಯಗಳು ಪ್ರಾಸಿಕ್ಯೂಷನ್‌ನ (ಅಭಿಯೋಗದ) ವಾದವನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಒಂದು ಪ್ರಕರಣದಲ್ಲಿ, ನ್ಯಾಯಾಧೀಶರು ಪ್ರಮುಖ ಸಾಕ್ಷಿಯ ಇರುವಿಕೆಯ ಬಗ್ಗೆಯೇ ಸಂದೇಹ ವ್ಯಕ್ತಪಡಿಸಿದ್ದಾರೆ ಮತ್ತು ಆ ಸಾಕ್ಷಿಯು ಕಾಲ್ಪನಿಕ (ನಕಲಿ) ವ್ಯಕ್ತಿಯಾಗಿರಬಹುದು ಎಂದು ತಿಳಿಸಿದ್ದಾರೆ. ಇನ್ನೆರಡು ಸಮಾನ ಆದೇಶಗಳಲ್ಲಿ, ಪೊಲೀಸರು ಪ್ರಕರಣವನ್ನು ತಿರುಚಿರುವುದು (ಸುಳ್ಳು ಸಾಕ್ಷ್ಯಗಳಿಂದ ಕೂಡಿದೆ) ಅವರಿಗೆ ಗೊತ್ತಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ. ಏಕೆಂದರೆ, ಅವರು ಟೆಸ್ಟ್ ಐಡೆಂಟಿಫಿಕೇಶನ್ ಪರೇಡ್ (ಟಿಐಪಿ)ನಡೆಸಿಲ್ಲ, ಇದು ತನಿಖೆಯಲ್ಲಿ ಪ್ರಮುಖ ಕ್ರಮವಾಗಿದೆ ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನ್ಯಾಯಾಧೀಶರ ಈ ಟೀಕೆಗಳು, ತನಿಖೆಯ ಸಂದರ್ಭದಲ್ಲಿ ಕೇಸ್ ಡೈರಿಯಲ್ಲಿ ಉದ್ದೇಶಪೂರ್ವಕವಾಗಿ ತಿರುಚಲಾಗಿರುವ ಸಾಧ್ಯತೆಯನ್ನು ಮತ್ತು ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಕೃತಕವಾಗಿ ರಚಿಸಲಾದ ಆರೋಪವನ್ನು ಒತ್ತಿಹೇಳುತ್ತವೆ. ಇದು, ನಗರದಲ್ಲಿ ನಡೆದ ಗಂಭೀರ ಸಾಮುದಾಯಿಕ ಹಿಂಸಾಚಾರದ ಘಟನೆಯ ತನಿಖೆಯಲ್ಲಿ ಗಂಭೀರ ಲೋಪಗಳು ಇದ್ದವು ಎಂದು ಸೂಚಿಸುತ್ತದೆ, ಇದು ಒಟ್ಟಾರೆ ತನಿಖಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ ವರದಿ ಅಭಿಪ್ರಾಯಪಟ್ಟಿದೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...