Homeಚಳವಳಿದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

- Advertisement -
- Advertisement -

ಫೆಬ್ರವರಿ 2020ರಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಎಡಪಂಥೀಯರ ಕೈವಾಡವಿದೆ ಎಂದು ಎರಡು ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್‌ ನೌ ಸುದ್ದಿ ವಾಹಿನಿ ವಿರುದ್ಧ ನ್ಯಾಷನಲ್ ಬ್ರಾಡ್‌ಕಾಸ್ಟಿಂಗ್ ಮತ್ತು ಡಿಜಿಟಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBDSA) ಆಕ್ಷೇಪ ವ್ಯಕ್ತಪಡಿಸಿದ್ದು, ಆ ಎರಡು ವಿವಾದಾತ್ಮಕ ಚರ್ಚೆಗಳನ್ನು ತಮ್ಮ ಚಾನಲ್ ಮತ್ತು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಸೂಚನೆ ನೀಡಿದೆ.

ಟೈಮ್ಸ್ ನೌ ವಾಹಿನಿ ಆ ಸುದ್ದಿಗಳನ್ನು “ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ರೀತಿಯಲ್ಲಿ” ವರದಿ ಮಾಡಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. 

ಸೆಪ್ಟೆಂಬರ್ 14ರಂದು ‘ಇಂಡಿಯಾ ಅಪ್‌ಫ್ರಂಟ್’ ಕಾರ್ಯಕ್ರಮವನ್ನು ಆಯೋಜಿಸಿದ್ದ ಟೈಮ್ಸ್‌ ನೌನ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್, “ಎಡಪಂಥೀಯರ ರಹಸ್ಯ ಸಭೆ” ಎಂದು ಸುದ್ದಿ ಕಾರ್ಯಕ್ರಮ ಮಾಡಿದ್ದರು. ಈ ಬಗ್ಗೆ NBDSA ದೂರು ನೀಡಿದ್ದ ಉತ್ಕರ್ಷ್ ಮಿಶ್ರಾ ಅವರು ಟೈಮ್ಸ್‌ ನೌನಲ್ಲಿ ಹೇಳಲಾದ ಎಡಪಂತೀಯ ಸಭೆಯು ವಾಸ್ತವವಾಗಿ ಜೂಮ್‌ ವೆಬ್‌ನಾರ್ ಆಗಿತ್ತು. ಆ ವೆಬಿನಾರ್‌ಅನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿ, ವೀಡಿಯೊ ಅಪ್‌ಲೋಡ್ ಮಾಡಲಾಗಿದೆ. ಆದರೆ, “ಟೈಮ್ಸ್‌ ನೌ ಪ್ರಸಾರಕರು ವೀಕ್ಷಕರನ್ನು ದಾರಿತಪ್ಪಿಸಲು, ಸಮುದಾಯಗಳ ನಡುವೆ ದ್ವೇಷವನ್ನು ಬೆಳೆಸಲು ಪ್ರಯತ್ನಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ” ಎಂದು ತಿಳಿಸಿದ್ದರು. 

ಚರ್ಚೆ ಕಾರ್ಯಕ್ರಮಗಳನ್ನು ನಿರೂಪಕರಾದ ರಾಹುಲ್ ಶಿವಶಂಕರ್ ಮತ್ತು ಪದ್ಮಜಾ ಜೋಶಿಯವರು ನಡೆಸುತ್ತಿದ್ದರು. ನಿರೂಪಕರು “ನೈತಿಕ ಸಂಹಿತೆ ಮತ್ತು ಬ್ರಾಡ್‌ಕಾಸ್ಟಿಂಗ್ ಮಾನದಂಡಗಳು ಮತ್ತು NBDSA ಹೊರಡಿಸಿದ ವಿವಿಧ ಮಾರ್ಗಸೂಚಿಗಳಲ್ಲಿ ನಮೂದಿಸಲಾದ ಮೂಲಭೂತ ತತ್ವಗಳನ್ನು ಉಲ್ಲಂಘಿಸಿದ್ದಾರೆ” ಎಂದು NBDSA ಘೋಷಿಸಿದೆ. 

ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

“ಸೆಪ್ಟೆಂಬರ್ 14, 2020 ಮತ್ತು ಸೆಪ್ಟೆಂಬರ್ 23, 2020 ರಂದು ಟೈಮ್ಸ್‌ ನೌನ ಇಂಡಿಯಾ ಅಪ್‌ಫ್ರಂಟ್‌ನ ಎರಡು ಸಂಚಿಕೆಗಳನ್ನು ತೆಗೆದು ಹಾಕಬೇಕು. ಈ ಬಗ್ಗೆ, ಏಳು ದಿನಗಳೊಳಗೆ ಲಿಖಿತವಾಗಿ ದೃಢೀಕರಣವನ್ನು ಕಳುಹಿಸಬೇಕು” ಎಂದು NBDSA ಆದೇಶ ನೀಡಿದೆ.

ನಿರೂಪಕ ರಾಹುಲ್ ಶಿವಶಂಕರ್ “ರಹಸ್ಯ ಎಡಪಂಥೀಯರ ಸಭೆ” ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದು ಮಾತ್ರವಲ್ಲದೆ, ಗಲಭೆಯ ಸಮಯದಲ್ಲಿ ನ್ಯಾಯಾಂಗ ದೆಹಲಿ ಪೊಲೀಸರ ಕ್ರಮ ಮತ್ತು ಉದ್ದೇಶವನ್ನು ಪ್ರಶ್ನಿಸಿದ್ದು ಸೇರಿದಂತೆ, ಇತರ ಚಾನೆಲ್‌ಗಳಲ್ಲಿ ವರದಿಯಾದ ಸತ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

“ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ದೆಹಲಿ ಪೊಲೀಸರು ಪರಿಶೀಲಿಸದೇ ಮಾಡಿದ್ದ ಆರೋಪಗಳನ್ನು ಮಾತ್ರ ಚಾನೆಲ್ ವರದಿ ಮಾಡಿದೆ. ಚಾನೆಲ್‌ನ ಆಂತರಿಕ ಭದ್ರತಾ ಸಂಪಾದಕರು ಇಡೀ ವಿಷಯದಲ್ಲಿ ದೆಹಲಿ ಪೊಲೀಸರ ಪಾತ್ರವನ್ನು ನ್ಯಾಯಾಂಗವು ಪ್ರಶ್ನಿಸಿದ್ದರೂ ಸಹ, ಪೊಲೀಸರ ನಡೆಯನ್ನು ಮೌಲ್ಯೀಕರಿಸಲು ಮುಂದಾಗಿದ್ದಾರೆ ಎಂದು ದೂರುದಾರ ಆರೋಪಿಸಿದ್ದರು.

“ಈ ವಿಷಯದ ಬಗ್ಗೆ ವೀಕ್ಷಕರು ಸತ್ಯಾಧಾರಿತ ದೃಷ್ಟಿಕೋನವನ್ನು ಪಡೆದುಕೊಳ್ಳಲು ವಾಹಿನಿ ಅಡ್ಡಿಪಡಿಸಿದೆ. ಇದಲ್ಲದೆ, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಅಪಖ್ಯಾತಿಗೊಳಿಸಲು ಪದ್ಮಜಾ ಜೋಶಿ ಪ್ರಯತ್ನಿಸಿದ್ದಾರೆ. ವಿವಾದಾತ್ಮಕ ವಿಷಯದ ಒಂದು ಬದಿಯ ಪರವಾಗಿ ಮತ್ತು ಮತ್ತೊಂದು ಬದಿಗೆ ಅಡ್ಡಿಪಡಿಸಲು ಮಾಧ್ಯಮ ಪ್ರಯೋಗ ನಡೆದಿದೆ” ಎಂದು ಪ್ರಾಧಿಕಾರದ ಆದೇಶ ಹೇಳಿದೆ.

ಆದರೆ ಟೈಮ್ಸ್ ನೌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, “ದೂರುದಾರರು ಅದೇ ಆ್ಯಂಕರ್‌ಗಳು/ಪತ್ರಕರ್ತರ ವಿರುದ್ಧ ಪದೇ ಪದೇ ಅನಗತ್ಯ ಮತ್ತು ಕ್ಷುಲ್ಲಕ ದೂರುಗಳನ್ನು ಮಾಡುತ್ತಿದ್ದಾರೆ” ಎಂದು ಚಾನೆಲ್ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಚಾನೆಲ್‌ನ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ನೋಟಿಸ್ ನೀಡಿದೆ.

ಇತ್ತ, ರೈತ ಹೋರಾಟದ ವರದಿಗಾರಿಕೆಯ ವೇಳೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಝೀ ನ್ಯೂಸ್‌ ಚಾನಲ್‌ ವಿರುದ್ದ ಸಲ್ಲಿಸಲಾಗಿದ್ದ ದೂರನ್ನು NBDSA ಪರಿಶೀಲನೆ ನಡೆಸಿ ಸುದ್ದಿ ಸಂಸ್ಥೆಗೆ ಛೀಮಾರಿ ಹಾಕಿದೆ. ಮಾತ್ರವಲ್ಲದೆ, ರೈತ ಹೋರಾಟದ ವಿರುದ್ದ ಪ್ರಸಾರ ಮಾಡಲಾಗಿದ್ದ, ಸುಳ್ಳು ವರದಿಗಳ ವೀಡಿಯೊಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸೂಚನೆ ನೀಡಿದೆ.


ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...