Homeಚಳವಳಿದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

- Advertisement -
- Advertisement -

ಫೆಬ್ರವರಿ 2020ರಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಎಡಪಂಥೀಯರ ಕೈವಾಡವಿದೆ ಎಂದು ಎರಡು ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್‌ ನೌ ಸುದ್ದಿ ವಾಹಿನಿ ವಿರುದ್ಧ ನ್ಯಾಷನಲ್ ಬ್ರಾಡ್‌ಕಾಸ್ಟಿಂಗ್ ಮತ್ತು ಡಿಜಿಟಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBDSA) ಆಕ್ಷೇಪ ವ್ಯಕ್ತಪಡಿಸಿದ್ದು, ಆ ಎರಡು ವಿವಾದಾತ್ಮಕ ಚರ್ಚೆಗಳನ್ನು ತಮ್ಮ ಚಾನಲ್ ಮತ್ತು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಸೂಚನೆ ನೀಡಿದೆ.

ಟೈಮ್ಸ್ ನೌ ವಾಹಿನಿ ಆ ಸುದ್ದಿಗಳನ್ನು “ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ರೀತಿಯಲ್ಲಿ” ವರದಿ ಮಾಡಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. 

ಸೆಪ್ಟೆಂಬರ್ 14ರಂದು ‘ಇಂಡಿಯಾ ಅಪ್‌ಫ್ರಂಟ್’ ಕಾರ್ಯಕ್ರಮವನ್ನು ಆಯೋಜಿಸಿದ್ದ ಟೈಮ್ಸ್‌ ನೌನ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್, “ಎಡಪಂಥೀಯರ ರಹಸ್ಯ ಸಭೆ” ಎಂದು ಸುದ್ದಿ ಕಾರ್ಯಕ್ರಮ ಮಾಡಿದ್ದರು. ಈ ಬಗ್ಗೆ NBDSA ದೂರು ನೀಡಿದ್ದ ಉತ್ಕರ್ಷ್ ಮಿಶ್ರಾ ಅವರು ಟೈಮ್ಸ್‌ ನೌನಲ್ಲಿ ಹೇಳಲಾದ ಎಡಪಂತೀಯ ಸಭೆಯು ವಾಸ್ತವವಾಗಿ ಜೂಮ್‌ ವೆಬ್‌ನಾರ್ ಆಗಿತ್ತು. ಆ ವೆಬಿನಾರ್‌ಅನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿ, ವೀಡಿಯೊ ಅಪ್‌ಲೋಡ್ ಮಾಡಲಾಗಿದೆ. ಆದರೆ, “ಟೈಮ್ಸ್‌ ನೌ ಪ್ರಸಾರಕರು ವೀಕ್ಷಕರನ್ನು ದಾರಿತಪ್ಪಿಸಲು, ಸಮುದಾಯಗಳ ನಡುವೆ ದ್ವೇಷವನ್ನು ಬೆಳೆಸಲು ಪ್ರಯತ್ನಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ” ಎಂದು ತಿಳಿಸಿದ್ದರು. 

ಚರ್ಚೆ ಕಾರ್ಯಕ್ರಮಗಳನ್ನು ನಿರೂಪಕರಾದ ರಾಹುಲ್ ಶಿವಶಂಕರ್ ಮತ್ತು ಪದ್ಮಜಾ ಜೋಶಿಯವರು ನಡೆಸುತ್ತಿದ್ದರು. ನಿರೂಪಕರು “ನೈತಿಕ ಸಂಹಿತೆ ಮತ್ತು ಬ್ರಾಡ್‌ಕಾಸ್ಟಿಂಗ್ ಮಾನದಂಡಗಳು ಮತ್ತು NBDSA ಹೊರಡಿಸಿದ ವಿವಿಧ ಮಾರ್ಗಸೂಚಿಗಳಲ್ಲಿ ನಮೂದಿಸಲಾದ ಮೂಲಭೂತ ತತ್ವಗಳನ್ನು ಉಲ್ಲಂಘಿಸಿದ್ದಾರೆ” ಎಂದು NBDSA ಘೋಷಿಸಿದೆ. 

ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

“ಸೆಪ್ಟೆಂಬರ್ 14, 2020 ಮತ್ತು ಸೆಪ್ಟೆಂಬರ್ 23, 2020 ರಂದು ಟೈಮ್ಸ್‌ ನೌನ ಇಂಡಿಯಾ ಅಪ್‌ಫ್ರಂಟ್‌ನ ಎರಡು ಸಂಚಿಕೆಗಳನ್ನು ತೆಗೆದು ಹಾಕಬೇಕು. ಈ ಬಗ್ಗೆ, ಏಳು ದಿನಗಳೊಳಗೆ ಲಿಖಿತವಾಗಿ ದೃಢೀಕರಣವನ್ನು ಕಳುಹಿಸಬೇಕು” ಎಂದು NBDSA ಆದೇಶ ನೀಡಿದೆ.

ನಿರೂಪಕ ರಾಹುಲ್ ಶಿವಶಂಕರ್ “ರಹಸ್ಯ ಎಡಪಂಥೀಯರ ಸಭೆ” ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದು ಮಾತ್ರವಲ್ಲದೆ, ಗಲಭೆಯ ಸಮಯದಲ್ಲಿ ನ್ಯಾಯಾಂಗ ದೆಹಲಿ ಪೊಲೀಸರ ಕ್ರಮ ಮತ್ತು ಉದ್ದೇಶವನ್ನು ಪ್ರಶ್ನಿಸಿದ್ದು ಸೇರಿದಂತೆ, ಇತರ ಚಾನೆಲ್‌ಗಳಲ್ಲಿ ವರದಿಯಾದ ಸತ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

“ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ದೆಹಲಿ ಪೊಲೀಸರು ಪರಿಶೀಲಿಸದೇ ಮಾಡಿದ್ದ ಆರೋಪಗಳನ್ನು ಮಾತ್ರ ಚಾನೆಲ್ ವರದಿ ಮಾಡಿದೆ. ಚಾನೆಲ್‌ನ ಆಂತರಿಕ ಭದ್ರತಾ ಸಂಪಾದಕರು ಇಡೀ ವಿಷಯದಲ್ಲಿ ದೆಹಲಿ ಪೊಲೀಸರ ಪಾತ್ರವನ್ನು ನ್ಯಾಯಾಂಗವು ಪ್ರಶ್ನಿಸಿದ್ದರೂ ಸಹ, ಪೊಲೀಸರ ನಡೆಯನ್ನು ಮೌಲ್ಯೀಕರಿಸಲು ಮುಂದಾಗಿದ್ದಾರೆ ಎಂದು ದೂರುದಾರ ಆರೋಪಿಸಿದ್ದರು.

“ಈ ವಿಷಯದ ಬಗ್ಗೆ ವೀಕ್ಷಕರು ಸತ್ಯಾಧಾರಿತ ದೃಷ್ಟಿಕೋನವನ್ನು ಪಡೆದುಕೊಳ್ಳಲು ವಾಹಿನಿ ಅಡ್ಡಿಪಡಿಸಿದೆ. ಇದಲ್ಲದೆ, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಅಪಖ್ಯಾತಿಗೊಳಿಸಲು ಪದ್ಮಜಾ ಜೋಶಿ ಪ್ರಯತ್ನಿಸಿದ್ದಾರೆ. ವಿವಾದಾತ್ಮಕ ವಿಷಯದ ಒಂದು ಬದಿಯ ಪರವಾಗಿ ಮತ್ತು ಮತ್ತೊಂದು ಬದಿಗೆ ಅಡ್ಡಿಪಡಿಸಲು ಮಾಧ್ಯಮ ಪ್ರಯೋಗ ನಡೆದಿದೆ” ಎಂದು ಪ್ರಾಧಿಕಾರದ ಆದೇಶ ಹೇಳಿದೆ.

ಆದರೆ ಟೈಮ್ಸ್ ನೌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, “ದೂರುದಾರರು ಅದೇ ಆ್ಯಂಕರ್‌ಗಳು/ಪತ್ರಕರ್ತರ ವಿರುದ್ಧ ಪದೇ ಪದೇ ಅನಗತ್ಯ ಮತ್ತು ಕ್ಷುಲ್ಲಕ ದೂರುಗಳನ್ನು ಮಾಡುತ್ತಿದ್ದಾರೆ” ಎಂದು ಚಾನೆಲ್ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಚಾನೆಲ್‌ನ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ನೋಟಿಸ್ ನೀಡಿದೆ.

ಇತ್ತ, ರೈತ ಹೋರಾಟದ ವರದಿಗಾರಿಕೆಯ ವೇಳೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಝೀ ನ್ಯೂಸ್‌ ಚಾನಲ್‌ ವಿರುದ್ದ ಸಲ್ಲಿಸಲಾಗಿದ್ದ ದೂರನ್ನು NBDSA ಪರಿಶೀಲನೆ ನಡೆಸಿ ಸುದ್ದಿ ಸಂಸ್ಥೆಗೆ ಛೀಮಾರಿ ಹಾಕಿದೆ. ಮಾತ್ರವಲ್ಲದೆ, ರೈತ ಹೋರಾಟದ ವಿರುದ್ದ ಪ್ರಸಾರ ಮಾಡಲಾಗಿದ್ದ, ಸುಳ್ಳು ವರದಿಗಳ ವೀಡಿಯೊಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸೂಚನೆ ನೀಡಿದೆ.


ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...