Homeಚಳವಳಿದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

- Advertisement -
- Advertisement -

ಫೆಬ್ರವರಿ 2020ರಲ್ಲಿ ನಡೆದ ದೆಹಲಿ ಗಲಭೆಯಲ್ಲಿ ಎಡಪಂಥೀಯರ ಕೈವಾಡವಿದೆ ಎಂದು ಎರಡು ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್‌ ನೌ ಸುದ್ದಿ ವಾಹಿನಿ ವಿರುದ್ಧ ನ್ಯಾಷನಲ್ ಬ್ರಾಡ್‌ಕಾಸ್ಟಿಂಗ್ ಮತ್ತು ಡಿಜಿಟಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBDSA) ಆಕ್ಷೇಪ ವ್ಯಕ್ತಪಡಿಸಿದ್ದು, ಆ ಎರಡು ವಿವಾದಾತ್ಮಕ ಚರ್ಚೆಗಳನ್ನು ತಮ್ಮ ಚಾನಲ್ ಮತ್ತು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಸೂಚನೆ ನೀಡಿದೆ.

ಟೈಮ್ಸ್ ನೌ ವಾಹಿನಿ ಆ ಸುದ್ದಿಗಳನ್ನು “ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ರೀತಿಯಲ್ಲಿ” ವರದಿ ಮಾಡಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. 

ಸೆಪ್ಟೆಂಬರ್ 14ರಂದು ‘ಇಂಡಿಯಾ ಅಪ್‌ಫ್ರಂಟ್’ ಕಾರ್ಯಕ್ರಮವನ್ನು ಆಯೋಜಿಸಿದ್ದ ಟೈಮ್ಸ್‌ ನೌನ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್, “ಎಡಪಂಥೀಯರ ರಹಸ್ಯ ಸಭೆ” ಎಂದು ಸುದ್ದಿ ಕಾರ್ಯಕ್ರಮ ಮಾಡಿದ್ದರು. ಈ ಬಗ್ಗೆ NBDSA ದೂರು ನೀಡಿದ್ದ ಉತ್ಕರ್ಷ್ ಮಿಶ್ರಾ ಅವರು ಟೈಮ್ಸ್‌ ನೌನಲ್ಲಿ ಹೇಳಲಾದ ಎಡಪಂತೀಯ ಸಭೆಯು ವಾಸ್ತವವಾಗಿ ಜೂಮ್‌ ವೆಬ್‌ನಾರ್ ಆಗಿತ್ತು. ಆ ವೆಬಿನಾರ್‌ಅನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿ, ವೀಡಿಯೊ ಅಪ್‌ಲೋಡ್ ಮಾಡಲಾಗಿದೆ. ಆದರೆ, “ಟೈಮ್ಸ್‌ ನೌ ಪ್ರಸಾರಕರು ವೀಕ್ಷಕರನ್ನು ದಾರಿತಪ್ಪಿಸಲು, ಸಮುದಾಯಗಳ ನಡುವೆ ದ್ವೇಷವನ್ನು ಬೆಳೆಸಲು ಪ್ರಯತ್ನಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ” ಎಂದು ತಿಳಿಸಿದ್ದರು. 

ಚರ್ಚೆ ಕಾರ್ಯಕ್ರಮಗಳನ್ನು ನಿರೂಪಕರಾದ ರಾಹುಲ್ ಶಿವಶಂಕರ್ ಮತ್ತು ಪದ್ಮಜಾ ಜೋಶಿಯವರು ನಡೆಸುತ್ತಿದ್ದರು. ನಿರೂಪಕರು “ನೈತಿಕ ಸಂಹಿತೆ ಮತ್ತು ಬ್ರಾಡ್‌ಕಾಸ್ಟಿಂಗ್ ಮಾನದಂಡಗಳು ಮತ್ತು NBDSA ಹೊರಡಿಸಿದ ವಿವಿಧ ಮಾರ್ಗಸೂಚಿಗಳಲ್ಲಿ ನಮೂದಿಸಲಾದ ಮೂಲಭೂತ ತತ್ವಗಳನ್ನು ಉಲ್ಲಂಘಿಸಿದ್ದಾರೆ” ಎಂದು NBDSA ಘೋಷಿಸಿದೆ. 

ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

“ಸೆಪ್ಟೆಂಬರ್ 14, 2020 ಮತ್ತು ಸೆಪ್ಟೆಂಬರ್ 23, 2020 ರಂದು ಟೈಮ್ಸ್‌ ನೌನ ಇಂಡಿಯಾ ಅಪ್‌ಫ್ರಂಟ್‌ನ ಎರಡು ಸಂಚಿಕೆಗಳನ್ನು ತೆಗೆದು ಹಾಕಬೇಕು. ಈ ಬಗ್ಗೆ, ಏಳು ದಿನಗಳೊಳಗೆ ಲಿಖಿತವಾಗಿ ದೃಢೀಕರಣವನ್ನು ಕಳುಹಿಸಬೇಕು” ಎಂದು NBDSA ಆದೇಶ ನೀಡಿದೆ.

ನಿರೂಪಕ ರಾಹುಲ್ ಶಿವಶಂಕರ್ “ರಹಸ್ಯ ಎಡಪಂಥೀಯರ ಸಭೆ” ಎಂದು ಸುಳ್ಳು ಹೇಳಿಕೆಗಳನ್ನು ನೀಡಿದ್ದು ಮಾತ್ರವಲ್ಲದೆ, ಗಲಭೆಯ ಸಮಯದಲ್ಲಿ ನ್ಯಾಯಾಂಗ ದೆಹಲಿ ಪೊಲೀಸರ ಕ್ರಮ ಮತ್ತು ಉದ್ದೇಶವನ್ನು ಪ್ರಶ್ನಿಸಿದ್ದು ಸೇರಿದಂತೆ, ಇತರ ಚಾನೆಲ್‌ಗಳಲ್ಲಿ ವರದಿಯಾದ ಸತ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

“ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ದೆಹಲಿ ಪೊಲೀಸರು ಪರಿಶೀಲಿಸದೇ ಮಾಡಿದ್ದ ಆರೋಪಗಳನ್ನು ಮಾತ್ರ ಚಾನೆಲ್ ವರದಿ ಮಾಡಿದೆ. ಚಾನೆಲ್‌ನ ಆಂತರಿಕ ಭದ್ರತಾ ಸಂಪಾದಕರು ಇಡೀ ವಿಷಯದಲ್ಲಿ ದೆಹಲಿ ಪೊಲೀಸರ ಪಾತ್ರವನ್ನು ನ್ಯಾಯಾಂಗವು ಪ್ರಶ್ನಿಸಿದ್ದರೂ ಸಹ, ಪೊಲೀಸರ ನಡೆಯನ್ನು ಮೌಲ್ಯೀಕರಿಸಲು ಮುಂದಾಗಿದ್ದಾರೆ ಎಂದು ದೂರುದಾರ ಆರೋಪಿಸಿದ್ದರು.

“ಈ ವಿಷಯದ ಬಗ್ಗೆ ವೀಕ್ಷಕರು ಸತ್ಯಾಧಾರಿತ ದೃಷ್ಟಿಕೋನವನ್ನು ಪಡೆದುಕೊಳ್ಳಲು ವಾಹಿನಿ ಅಡ್ಡಿಪಡಿಸಿದೆ. ಇದಲ್ಲದೆ, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಅಪಖ್ಯಾತಿಗೊಳಿಸಲು ಪದ್ಮಜಾ ಜೋಶಿ ಪ್ರಯತ್ನಿಸಿದ್ದಾರೆ. ವಿವಾದಾತ್ಮಕ ವಿಷಯದ ಒಂದು ಬದಿಯ ಪರವಾಗಿ ಮತ್ತು ಮತ್ತೊಂದು ಬದಿಗೆ ಅಡ್ಡಿಪಡಿಸಲು ಮಾಧ್ಯಮ ಪ್ರಯೋಗ ನಡೆದಿದೆ” ಎಂದು ಪ್ರಾಧಿಕಾರದ ಆದೇಶ ಹೇಳಿದೆ.

ಆದರೆ ಟೈಮ್ಸ್ ನೌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, “ದೂರುದಾರರು ಅದೇ ಆ್ಯಂಕರ್‌ಗಳು/ಪತ್ರಕರ್ತರ ವಿರುದ್ಧ ಪದೇ ಪದೇ ಅನಗತ್ಯ ಮತ್ತು ಕ್ಷುಲ್ಲಕ ದೂರುಗಳನ್ನು ಮಾಡುತ್ತಿದ್ದಾರೆ” ಎಂದು ಚಾನೆಲ್ ಹೇಳಿದೆ. ಆದರೆ, ಎನ್‌ಬಿಡಿಎಸ್‌ಎ ಚಾನೆಲ್‌ನ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ನೋಟಿಸ್ ನೀಡಿದೆ.

ಇತ್ತ, ರೈತ ಹೋರಾಟದ ವರದಿಗಾರಿಕೆಯ ವೇಳೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಝೀ ನ್ಯೂಸ್‌ ಚಾನಲ್‌ ವಿರುದ್ದ ಸಲ್ಲಿಸಲಾಗಿದ್ದ ದೂರನ್ನು NBDSA ಪರಿಶೀಲನೆ ನಡೆಸಿ ಸುದ್ದಿ ಸಂಸ್ಥೆಗೆ ಛೀಮಾರಿ ಹಾಕಿದೆ. ಮಾತ್ರವಲ್ಲದೆ, ರೈತ ಹೋರಾಟದ ವಿರುದ್ದ ಪ್ರಸಾರ ಮಾಡಲಾಗಿದ್ದ, ಸುಳ್ಳು ವರದಿಗಳ ವೀಡಿಯೊಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸೂಚನೆ ನೀಡಿದೆ.


ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...