Homeಮುಖಪುಟ2020 ನ್ನು ದಾಖಲೆಯ ನಿರುದ್ಯೋಗಿ ವರ್ಷವನ್ನಾಗಿ ಮಾಡಿದ ನರೇಂದ್ರ ಮೋದಿ ಸರ್ಕಾರ

2020 ನ್ನು ದಾಖಲೆಯ ನಿರುದ್ಯೋಗಿ ವರ್ಷವನ್ನಾಗಿ ಮಾಡಿದ ನರೇಂದ್ರ ಮೋದಿ ಸರ್ಕಾರ

ದುರಂತವೆಂದರೆ ಇನ್ನೂ ಕೆಟ್ಟದಿನಗಳು ಮುಗಿಯದೆ 2021 ರಲ್ಲೂ ಮುಂದುವರೆಯುತ್ತವೆ.

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಜನರ ಜೀವನೋಪಾಯ ಮತ್ತು ಆದಾಯ ಗಳಿಯ ವಿಚಾರದಲ್ಲಿ 2020ರ ವರ್ಷ ಅತ್ಯಂತ ಕೆಟ್ಟ ವರ್ಷವಾಗಿ ದಾಖಲಾಗಿದೆ. 2020 ರಲ್ಲಿ ನಿರುದ್ಯೋಗ ಪ್ರಮಾಣ ಗರಿಷ್ಟ ಮಟ್ಟಕ್ಕೇರಿದೆ. ಆದಾಯದ ಪ್ರಮಾಣ ಕೂಡಾ ಅಷ್ಟೇ ದಾಖಲೆಯ ಕನಿಷ್ಟ ಮಟ್ಟಕ್ಕೆ ಕುಸಿದಿದೆ. ಸಾವಿರಾರು ಕುಟುಂಬಗಳು ಹಸಿವಿನಿಂದ ಬಳಲುತ್ತಿವೆ. ಇದಕ್ಕೆಲ್ಲಾ ಕಾರಣ ಕೇವಲ ಕೊರೊನಾ ಸೋಂಕು ಮಾತ್ರವಲ್ಲ. ಬದಲಾಗಿ ಹಠಾತ್‌ ಹೇರಿಕೆಯಾದ ಲಾಕ್‌ಡೌನ್‌.

ಲಾಕ್‌ಡೌನ್‌ ಹೇರಿದ ನಂತರ, ಜನರ ಆದಾಯಕ್ಕೆ ಇಲ್ಲದ ಪರ್ಯಾಯ. ಖರ್ಚನ್ನು ನಿರ್ಬಂಧಿಸಲು ಸರ್ಕಾರದ ಒತ್ತಾಯ, ಅಪ್ರಯೋಜಕ ಯೋಚನೆಗಳು, ನಡೆಗಳು ಇದೆಲ್ಲದರಿಂದಾಗಿ ಭಾರತೀಯರು ಭಾರೀ ಸಂಕಷ್ಟವನ್ನು ಎದುರಿಸಬೇಕಾಯಿತು. ದುರಂತವೆಂದರೆ, ಇನ್ನೂ ಆ ಕೆಟ್ಟದಿನಗಳು ಮುಗಿಯದೆ 2021 ರಲ್ಲೂ ಮುಂದುವರೆಯುತ್ತಿವೆ.

Migrant Workers: Where they come from, where they go - The Economic Times

ಇದನ್ನೂ ಓದಿ: ಬ್ಯಾಂಕ್ ಉದ್ಯೋಗಿಗಳಿಗೆ ಕನ್ನಡ ಕಲಿಸಿ; ಇಲ್ಲವೆಂದರೆ ರಾಜ್ಯದಿಂದ ಹೊರಗೆ ಕಳಿಸಿ: T.S. ನಾಗಾಭರಣ

ಸರ್ಕಾರದ ಪ್ರಚಾರಕಾಗಿರುವವರು, ವಿನಾಶಕಾರಿಯ ಅಂಚಿನಲ್ಲಿರುವ ಆರ್ಥಿಕತೆಯು “V-ಆಕಾರದಲ್ಲಿ ಚೇತರಿಕೆ” ಕಾಣುತ್ತಿದೆ ಎಂದು ಹೇಳಿದರು. ಅವರು ಹೇಳಿದ್ದು, ಹೊಗಳಿದ್ದು, ಮರಗಿಡಗಳಲ್ಲಿ ಚಿಗುರುತ್ತಿದ್ದ ಹಸಿರು ಮತ್ತು ಬೀಸುತ್ತಿದ್ದ ತಂಗಾಳಿ ಬಗ್ಗೆ ಮಾತ್ರವೇ ಹೊರತು. ಜನರ ಸಂಕಷ್ಟದ ಬಗ್ಗೆಯಾಗಿರಲಿಲ್ಲ.

ದೊಡ್ಡ ಕಾರ್ಪೋರೇಟ್‌ ಶಕ್ತಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಆರ್ಥಿಕತೆ ನಿರೀಕ್ಷೆಗಿಂತ ವೇಗವಾಗಿ ಚೇತರಿಸಿಕೊಳ್ಳುತ್ತಿದೆ. ಜಿಎಸ್‌ಟಿ ಸಂಗ್ರಹಣೆ, ಸರಕು ಸಾಗಣೆ, ಬಂದರು ದಟ್ಟಣೆ ಹೆಚ್ಚಳ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸ್ಟಾಕ್ ಮಾರುಕಟ್ಟೆ ದಾಖಲೆಯ ಪ್ರಮಾಣದಷ್ಟು ಹೆಚ್ಚಾಗಿದೆ ಎಂದು ಹೇಳಿದ್ದರು. ಆದರೆ, ನಿಜ ಸ್ಥಿತಿಯನ್ನು ಗಮನಿಸಿದರೆ, ವಿಷಯ ಭಾರೀ ವ್ಯತಿರಿಕ್ತವಾಗಿವೆ. ಆರ್ಥಿಕತೆ ಮೂಲವು ಉದ್ಯೋಗವನ್ನೂ ಆಧರಿಸಿರುತ್ತದೆ. ಲಾಕ್‌ಡೌನ್‌ ನಂತರದಲ್ಲಿ ಎಷ್ಟು ಜನರಿಗೆ ಉದ್ಯೋಗವಿದೆ? ನಿರುದ್ಯೋಗ ದರ ಎಷ್ಟು? ಈ ಎಲ್ಲಾ ವಿಚಾರಗಳು ಭೀಕರವಾಗಿವೆ.

ಕೆಳಗಿನ ಚಾರ್ಟ್‌ನಲ್ಲಿರುವ ಡೇಟಾದ ಆಧಾರದ ಮೇಲೆ ಡಿಸೆಂಬರ್ 2018 ರಿಂದ ಇಲ್ಲಿನವರೆಗಿನ ಕಳೆದ ಎರಡು ವರ್ಷಗಳ ಮಾಸಿಕ ನಿರುದ್ಯೋಗ ದರವನ್ನು ತೋರಿಸುತ್ತದೆ. 2020 ರ ಮಾರ್ಚ್‌ನಲ್ಲಿ ಲಾಕ್‌ಡೌನ್‌ ಆಗುವವರೆಗೂ ದೇಶದ ನಿರುದ್ಯೋಗ ಪ್ರಮಾಣವು 7-8% ರಷ್ಟಿತ್ತು. ಆದರೆ ಲಾಕ್‌ಡೌನ್‌ ನಂತರದ ವಿನಾಶಕಾರಿ ಬಿಕ್ಕಟ್ಟು ದೇಶದ ಆರ್ಥಿಕತೆಯನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸಿತು. ನಿರುದ್ಯೋಗ ದರವೂ ಗಗನಕ್ಕೇರಿತು. ಇದು ಏಪ್ರಿಲ್‌ನಲ್ಲಿ ಸುಮಾರು 24% ಮತ್ತು ವರ್ಷ ಮೇ ತಿಂಗಳಲ್ಲಿ ಸುಮಾರು 22% ರಷ್ಟಿತ್ತು. ಆರ್ಥಿಕ ಚಟುವಟಿಕೆಯನ್ನು ನಿಧಾನವಾಗಿ ಅರಂಭಗೊಂಡಂತೆ ಜನರು ಅನೌಪಚಾರಿಕ ಕೆಲಸಗಳಿಗೆ ಮರಳಿದರು. ಇದು ನಿರುದ್ಯೋಗ ದರದಲ್ಲಿ ಸುಧಾರಣೆಗೆ ಕಾರಣವಾಯಿತು. ಆದರೂ ಆರ್ಥಿಕತೆಯಲ್ಲಿ ಅಂತಹ ಯಾವುದೇ ಸುಧಾರಣೆ ಕಾಣಲಿಲ್ಲ. ಏಕೆಂದರೆ, ಜನರ ಗಳಿಕೆ ಮೊದಲಿಗಿಂತಲೂ ಕಡಿಮೆಯಾಗಿದೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

Unemployment rate 2020

ಖಾರಿಫ್ ಕೊಯ್ಲು ಮುಗಿಯುತ್ತಿದ್ದಂತೆ ಅಕ್ಟೋಬರ್‌ನಲ್ಲಿ ರಬಿ ಬಿತ್ತನೆ ಸಿದ್ಧತೆಗಳು ಪ್ರಾರಂಭವಾಗುವ ಹಂತದಲ್ಲಿ ನಿರುದ್ಯೋಗ ದರವು ನವೆಂಬರ್‌ನಲ್ಲಿ 6.5%ಕ್ಕೆ ಕಡಿಮೆಯಾಯಿತು. ಇದು ಸರ್ಕಾರದ ಪರ ಅರ್ಥಶಾಸ್ತ್ರಜ್ಞರು ಮತ್ತು ಟಿವಿ ಶೋ ‘ನಿರೂಪಕರಲ್ಲಿ’ ಹೆಚ್ಚು ಸಂಭ್ರಮಕ್ಕೆ ಕಾರಣವಾಯಿತು. ಆದರೆ, ಇತ್ತೀಚೆಗೆ CMIE ಯ ಸಾಪ್ತಾಹಿಕ ದತ್ತಾಂಶದ ಪ್ರಕಾರ, ಡಿಸೆಂಬರ್ 27 ರ ಹೊತ್ತಿಗೆ ನಿರುದ್ಯೋಗ ದರವು ಮತ್ತೆ 9% ಕ್ಕಿಂತ ಹೆಚ್ಚಾಗಿದೆ. ವಾಸ್ತವವಾಗಿ, ಲಾಕ್‌ಡೌನ್ ನಂತರದ ಅವಧಿಯಲ್ಲಿ ನಿರುದ್ಯೋಗವು 8-9% ರಷ್ಟು ಪ್ರಮಾಣದಲ್ಲಿದೆ.

ನಿಶ್ಚಲ ಉದ್ಯೋಗ

ಈಗ, ಉದ್ಯೋಗಕ್ಕಾಗಿ ದೂರದ ಊರುಗಳಿಗೆ ಹೋಗಲು ಸಾಧ್ಯವಾಗದ ಬಿಕ್ಕಟ್ಟು ದೇಶದಲ್ಲಿದೆ. ಈ ಸಂದರ್ಭದಲ್ಲಿ CMIE ಸಮೀಕ್ಷೆಯ ಡೇಟಾವನ್ನು ಆಧರಿಸಿ ಕಳೆದ ಎರಡು ವರ್ಷಗಳ ಬೆಳವಣಿಗೆಗಳನ್ನು ಕೆಳಗಿನ ಪಟ್ಟಿಯಲ್ಲಿ ತೋರಿಸಲಾಗಿದೆ. ಅದರನ್ವಯ, ಉದ್ಯೋಗಿಗಳ ಸಂಖ್ಯೆ 2018 ರ ಡಿಸೆಂಬರ್‌ನಲ್ಲಿ ಸುಮಾರು 39.7 ಕೋಟಿಗಳಷ್ಟಿತ್ತು. ಇದು 2020 ರ ನವೆಂಬರ್‌ನಲ್ಲಿ 39.4 ಕೋಟಿ ಆಗಿದೆ. ಏಪ್ರಿಲ್‌ನಲ್ಲಿ ಉದ್ಯೋಗದ ಪ್ರಮಾಣವು ಕೇವಲ 28.2 ಕೋಟಿಗೆ ಕುಸಿದಿತ್ತು. ಇದು ಲಾಕ್‌ಡೌನ್ ದುಷ್ಪರಿಣಾಮವನ್ನು ಸ್ಪಷ್ಟವಾಗಿ ತೋರಿಸುತ್ತದೆ.

Employed person in India

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಭರವಸೆ; ಹಣಪಡೆದು ವಂಚಿಸಿದ ಬಿಜೆಪಿ ಕಾರ್ಯಕರ್ತ!

ಭಾರತದಲ್ಲಿ ಉದ್ಯೋಗಿ

ಇದರ ಅರ್ಥ ಏನು? ಪ್ರತಿದಿನ ಜನಸಂಖ್ಯೆ ಹೆಚ್ಚುತ್ತಿದೆ ಮತ್ತು ಪ್ರತಿ ವರ್ಷ ಸುಮಾರು 12 ಕೋಟಿ ಜನರು ಹೊಸದಾಗಿ ಉದ್ಯೋಗಾಕಾಂಕ್ಷಿಗಳಾಗಿ (ವಿದ್ಯಾಭ್ಯಾಸ ಮುಗಿಸಿದರು) ಈ ಸಮೂಹವನ್ನು ಸೇರುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಇವರಲ್ಲಿ ಎಲ್ಲರೂ ಉದ್ಯೋಗಗಳನ್ನು ಹುಡುಕುತ್ತಿಲ್ಲ. ಕೆಲವರು ಇನ್ನೂ ಅಧ್ಯಯನ ಮಾಡುತ್ತಿದ್ದಾರೆ, ಹೆಣ್ಣುಮಕ್ಕಳಿಗೆ ಸಾಮಾನ್ಯವಾಗಿ ಮದುವೆಯಾಗಲು ಹೇಳಲಾಗುತ್ತದೆ. ಹೀಗಾಗಿ ಕೆಲಸ ಮಾಡಲು ಸಿದ್ಧರಿರುವ ಜನಸಂಖ್ಯೆಯ ಪಾಲು – ಲಾಕ್‌ಡೌನ್‌ಗೆ ಮೊದಲು ಸುಮಾರು 42% ನಷ್ಟಿತ್ತು. ಅಂದರೆ, ಪ್ರತಿವರ್ಷ ಸುಮಾರು ಐದು ಕೋಟಿ ಜನರು ಉದ್ಯೋಗಾಕಾಂಕ್ಷಿಗಳ ಗುಂಪಿಗೆ ಸೇರುತ್ತಾರೆ. ಆದರೂ, ಎರಡು ವರ್ಷಗಳಲ್ಲಿ ಉದ್ಯೋಗಿಗಳ ಸಂಖ್ಯೆ ಒಂದೇ ಆಗಿದೆ. ಅದರಲ್ಲಿ ಏರಿಕೆಯಾಗಿಲ್ಲ. ನಿರುದ್ಯೋಗಿಗಳ ಸಮೂಹ ವಿಸ್ತಾರಗೊಳ್ಳುತ್ತಿದೆ. ಅವರೆಲ್ಲರೂ ಉದ್ಯೋಗ ಸಿಗದೆ ನಿರುತ್ಸಾಹಗೊಂಡಿದ್ದಾರೆ. ಇವರಲ್ಲಿ ಬಹುಸಂಖ್ಯಾತರು ಮನೆಯಲ್ಲಿಯೇ ಇದ್ದಾರೆ. ಕಡಿಮೆ ಸಮಯಕ್ಕೆ ಸಿಗುವ ತುಂಡು ಕೆಲಸಗಳನ್ನು, ಕೃಷಿ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ವಾಸ್ತವವಾಗಿ, ಕೆಲಸದ ಭಾಗವಹಿಸುವಿಕೆಯ ದರವು 2018 ರ ಡಿಸೆಂಬರ್‌ನಲ್ಲಿ 42.5% ರಷ್ಟಿತ್ತು. ಆದರೆ, 2020ರ ನವೆಂಬರ್‌ನಲ್ಲಿ ಸುಮಾರು 40%ಕ್ಕೆ ಕುಸಿದಿದೆ.

ಮೋದಿ ಸರ್ಕಾರ ಸೃಷ್ಟಿಸಿದ ಬಿಕ್ಕಟ್ಟು

ಕೊರೊನಾ ಸೋಂಕು ದೇಶವನ್ನು ಬಾಧಿಸುವ ಮೊದಲೇ ಭಾರತದ ಆರ್ಥಿಕತೆ ದುರ್ಬತೆಯಿಂದ ಕೂಡಿದ್ದು, ಬಿಕ್ಕಟ್ಟಿನ ಹಾದಿ ಹಿಡಿದಿತ್ತು. ಆರ್ಥಿಕ ಬೆಳವಣಿಗೆ ಕುಂಠಿತಗೊಂಡಿತ್ತು, ನಿರುದ್ಯೋಗ ಹೆಚ್ಚುತ್ತಿತ್ತು, ಜನರ ದಿನನಿತ್ಯದ ಕೊಳ್ಳುವ ಶಕ್ತಿಯೂ ಕುಸಿದಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ, ಜನರ ಜೀವನ ಮಟ್ಟ ಕುಸಿಯುತ್ತಿದ್ದಂತೆ ಸಾಮಾನ್ಯ ಜನರು ಅಪಾರ ತೊಂದರೆ ಅನುಭವಿಸುತ್ತಿದ್ದರು. 2018-19ರ ಇತ್ತೀಚಿನ ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯ ಪ್ರಕಾರ, ಅಪೌಷ್ಟಿಕತೆಗೆ ಸಿಲುಕುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಮೋದಿ ಸರ್ಕಾರವು ಈ ಬಿಕ್ಕಟ್ಟನ್ನು ನಿಭಾಯಿಸಲು ಸಂಪೂರ್ಣವಾಗಿ ಅಸಮರ್ಥವಾಗಿದೆ ಎಂಬುದನ್ನು ಅದು ಸ್ಪಷ್ಟವಾಗಿ ಸೂಚಿಸಿತ್ತು.

ಆದರೆ ಈ ವರ್ಷದ ಸಾಂಕ್ರಾಮಿಕ, ಅದಕ್ಕೆ ಸರ್ಕಾರದ ತಪ್ಪು ಪ್ರತಿಕ್ರಿಯೆ ಮತ್ತು ಜನ ವಿರೋಧಿ ನೀತಿಗಳಿಂದಾಗಿ ಜನರು ಮತ್ತಷ್ಟು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಮೂರು ಕೃಷಿ ಕಾನೂನುಗಳು ಮತ್ತು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಜನರನ್ನು ಮತ್ತಷ್ಟು ಅಪಾಯಕ್ಕೆ ತಳ್ಳಲು ಸರ್ಕಾರವು ಪ್ರಯತ್ನಿಸಿದೆ. ಇದು ಒಟ್ಟಾಗಿ ಹೆಚ್ಚು ನಿರುದ್ಯೋಗವನ್ನು ಸೃಷ್ಟಿಸುತ್ತದೆ, ಆದಾಯವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ ಮತ್ತು ಜನರಿಗೆ ಹೆಚ್ಚಿನ ಅಭದ್ರತೆಯನ್ನು ನೀಡುತ್ತದೆ.

ಕೃಪೆ: ನ್ಯೂಸ್‌ ಕ್ಲಿಕ್

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...