Homeಮುಖಪುಟ2020 ನ್ನು ದಾಖಲೆಯ ನಿರುದ್ಯೋಗಿ ವರ್ಷವನ್ನಾಗಿ ಮಾಡಿದ ನರೇಂದ್ರ ಮೋದಿ ಸರ್ಕಾರ

2020 ನ್ನು ದಾಖಲೆಯ ನಿರುದ್ಯೋಗಿ ವರ್ಷವನ್ನಾಗಿ ಮಾಡಿದ ನರೇಂದ್ರ ಮೋದಿ ಸರ್ಕಾರ

ದುರಂತವೆಂದರೆ ಇನ್ನೂ ಕೆಟ್ಟದಿನಗಳು ಮುಗಿಯದೆ 2021 ರಲ್ಲೂ ಮುಂದುವರೆಯುತ್ತವೆ.

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಜನರ ಜೀವನೋಪಾಯ ಮತ್ತು ಆದಾಯ ಗಳಿಯ ವಿಚಾರದಲ್ಲಿ 2020ರ ವರ್ಷ ಅತ್ಯಂತ ಕೆಟ್ಟ ವರ್ಷವಾಗಿ ದಾಖಲಾಗಿದೆ. 2020 ರಲ್ಲಿ ನಿರುದ್ಯೋಗ ಪ್ರಮಾಣ ಗರಿಷ್ಟ ಮಟ್ಟಕ್ಕೇರಿದೆ. ಆದಾಯದ ಪ್ರಮಾಣ ಕೂಡಾ ಅಷ್ಟೇ ದಾಖಲೆಯ ಕನಿಷ್ಟ ಮಟ್ಟಕ್ಕೆ ಕುಸಿದಿದೆ. ಸಾವಿರಾರು ಕುಟುಂಬಗಳು ಹಸಿವಿನಿಂದ ಬಳಲುತ್ತಿವೆ. ಇದಕ್ಕೆಲ್ಲಾ ಕಾರಣ ಕೇವಲ ಕೊರೊನಾ ಸೋಂಕು ಮಾತ್ರವಲ್ಲ. ಬದಲಾಗಿ ಹಠಾತ್‌ ಹೇರಿಕೆಯಾದ ಲಾಕ್‌ಡೌನ್‌.

ಲಾಕ್‌ಡೌನ್‌ ಹೇರಿದ ನಂತರ, ಜನರ ಆದಾಯಕ್ಕೆ ಇಲ್ಲದ ಪರ್ಯಾಯ. ಖರ್ಚನ್ನು ನಿರ್ಬಂಧಿಸಲು ಸರ್ಕಾರದ ಒತ್ತಾಯ, ಅಪ್ರಯೋಜಕ ಯೋಚನೆಗಳು, ನಡೆಗಳು ಇದೆಲ್ಲದರಿಂದಾಗಿ ಭಾರತೀಯರು ಭಾರೀ ಸಂಕಷ್ಟವನ್ನು ಎದುರಿಸಬೇಕಾಯಿತು. ದುರಂತವೆಂದರೆ, ಇನ್ನೂ ಆ ಕೆಟ್ಟದಿನಗಳು ಮುಗಿಯದೆ 2021 ರಲ್ಲೂ ಮುಂದುವರೆಯುತ್ತಿವೆ.

Migrant Workers: Where they come from, where they go - The Economic Times

ಇದನ್ನೂ ಓದಿ: ಬ್ಯಾಂಕ್ ಉದ್ಯೋಗಿಗಳಿಗೆ ಕನ್ನಡ ಕಲಿಸಿ; ಇಲ್ಲವೆಂದರೆ ರಾಜ್ಯದಿಂದ ಹೊರಗೆ ಕಳಿಸಿ: T.S. ನಾಗಾಭರಣ

ಸರ್ಕಾರದ ಪ್ರಚಾರಕಾಗಿರುವವರು, ವಿನಾಶಕಾರಿಯ ಅಂಚಿನಲ್ಲಿರುವ ಆರ್ಥಿಕತೆಯು “V-ಆಕಾರದಲ್ಲಿ ಚೇತರಿಕೆ” ಕಾಣುತ್ತಿದೆ ಎಂದು ಹೇಳಿದರು. ಅವರು ಹೇಳಿದ್ದು, ಹೊಗಳಿದ್ದು, ಮರಗಿಡಗಳಲ್ಲಿ ಚಿಗುರುತ್ತಿದ್ದ ಹಸಿರು ಮತ್ತು ಬೀಸುತ್ತಿದ್ದ ತಂಗಾಳಿ ಬಗ್ಗೆ ಮಾತ್ರವೇ ಹೊರತು. ಜನರ ಸಂಕಷ್ಟದ ಬಗ್ಗೆಯಾಗಿರಲಿಲ್ಲ.

ದೊಡ್ಡ ಕಾರ್ಪೋರೇಟ್‌ ಶಕ್ತಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಆರ್ಥಿಕತೆ ನಿರೀಕ್ಷೆಗಿಂತ ವೇಗವಾಗಿ ಚೇತರಿಸಿಕೊಳ್ಳುತ್ತಿದೆ. ಜಿಎಸ್‌ಟಿ ಸಂಗ್ರಹಣೆ, ಸರಕು ಸಾಗಣೆ, ಬಂದರು ದಟ್ಟಣೆ ಹೆಚ್ಚಳ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸ್ಟಾಕ್ ಮಾರುಕಟ್ಟೆ ದಾಖಲೆಯ ಪ್ರಮಾಣದಷ್ಟು ಹೆಚ್ಚಾಗಿದೆ ಎಂದು ಹೇಳಿದ್ದರು. ಆದರೆ, ನಿಜ ಸ್ಥಿತಿಯನ್ನು ಗಮನಿಸಿದರೆ, ವಿಷಯ ಭಾರೀ ವ್ಯತಿರಿಕ್ತವಾಗಿವೆ. ಆರ್ಥಿಕತೆ ಮೂಲವು ಉದ್ಯೋಗವನ್ನೂ ಆಧರಿಸಿರುತ್ತದೆ. ಲಾಕ್‌ಡೌನ್‌ ನಂತರದಲ್ಲಿ ಎಷ್ಟು ಜನರಿಗೆ ಉದ್ಯೋಗವಿದೆ? ನಿರುದ್ಯೋಗ ದರ ಎಷ್ಟು? ಈ ಎಲ್ಲಾ ವಿಚಾರಗಳು ಭೀಕರವಾಗಿವೆ.

ಕೆಳಗಿನ ಚಾರ್ಟ್‌ನಲ್ಲಿರುವ ಡೇಟಾದ ಆಧಾರದ ಮೇಲೆ ಡಿಸೆಂಬರ್ 2018 ರಿಂದ ಇಲ್ಲಿನವರೆಗಿನ ಕಳೆದ ಎರಡು ವರ್ಷಗಳ ಮಾಸಿಕ ನಿರುದ್ಯೋಗ ದರವನ್ನು ತೋರಿಸುತ್ತದೆ. 2020 ರ ಮಾರ್ಚ್‌ನಲ್ಲಿ ಲಾಕ್‌ಡೌನ್‌ ಆಗುವವರೆಗೂ ದೇಶದ ನಿರುದ್ಯೋಗ ಪ್ರಮಾಣವು 7-8% ರಷ್ಟಿತ್ತು. ಆದರೆ ಲಾಕ್‌ಡೌನ್‌ ನಂತರದ ವಿನಾಶಕಾರಿ ಬಿಕ್ಕಟ್ಟು ದೇಶದ ಆರ್ಥಿಕತೆಯನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸಿತು. ನಿರುದ್ಯೋಗ ದರವೂ ಗಗನಕ್ಕೇರಿತು. ಇದು ಏಪ್ರಿಲ್‌ನಲ್ಲಿ ಸುಮಾರು 24% ಮತ್ತು ವರ್ಷ ಮೇ ತಿಂಗಳಲ್ಲಿ ಸುಮಾರು 22% ರಷ್ಟಿತ್ತು. ಆರ್ಥಿಕ ಚಟುವಟಿಕೆಯನ್ನು ನಿಧಾನವಾಗಿ ಅರಂಭಗೊಂಡಂತೆ ಜನರು ಅನೌಪಚಾರಿಕ ಕೆಲಸಗಳಿಗೆ ಮರಳಿದರು. ಇದು ನಿರುದ್ಯೋಗ ದರದಲ್ಲಿ ಸುಧಾರಣೆಗೆ ಕಾರಣವಾಯಿತು. ಆದರೂ ಆರ್ಥಿಕತೆಯಲ್ಲಿ ಅಂತಹ ಯಾವುದೇ ಸುಧಾರಣೆ ಕಾಣಲಿಲ್ಲ. ಏಕೆಂದರೆ, ಜನರ ಗಳಿಕೆ ಮೊದಲಿಗಿಂತಲೂ ಕಡಿಮೆಯಾಗಿದೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

Unemployment rate 2020

ಖಾರಿಫ್ ಕೊಯ್ಲು ಮುಗಿಯುತ್ತಿದ್ದಂತೆ ಅಕ್ಟೋಬರ್‌ನಲ್ಲಿ ರಬಿ ಬಿತ್ತನೆ ಸಿದ್ಧತೆಗಳು ಪ್ರಾರಂಭವಾಗುವ ಹಂತದಲ್ಲಿ ನಿರುದ್ಯೋಗ ದರವು ನವೆಂಬರ್‌ನಲ್ಲಿ 6.5%ಕ್ಕೆ ಕಡಿಮೆಯಾಯಿತು. ಇದು ಸರ್ಕಾರದ ಪರ ಅರ್ಥಶಾಸ್ತ್ರಜ್ಞರು ಮತ್ತು ಟಿವಿ ಶೋ ‘ನಿರೂಪಕರಲ್ಲಿ’ ಹೆಚ್ಚು ಸಂಭ್ರಮಕ್ಕೆ ಕಾರಣವಾಯಿತು. ಆದರೆ, ಇತ್ತೀಚೆಗೆ CMIE ಯ ಸಾಪ್ತಾಹಿಕ ದತ್ತಾಂಶದ ಪ್ರಕಾರ, ಡಿಸೆಂಬರ್ 27 ರ ಹೊತ್ತಿಗೆ ನಿರುದ್ಯೋಗ ದರವು ಮತ್ತೆ 9% ಕ್ಕಿಂತ ಹೆಚ್ಚಾಗಿದೆ. ವಾಸ್ತವವಾಗಿ, ಲಾಕ್‌ಡೌನ್ ನಂತರದ ಅವಧಿಯಲ್ಲಿ ನಿರುದ್ಯೋಗವು 8-9% ರಷ್ಟು ಪ್ರಮಾಣದಲ್ಲಿದೆ.

ನಿಶ್ಚಲ ಉದ್ಯೋಗ

ಈಗ, ಉದ್ಯೋಗಕ್ಕಾಗಿ ದೂರದ ಊರುಗಳಿಗೆ ಹೋಗಲು ಸಾಧ್ಯವಾಗದ ಬಿಕ್ಕಟ್ಟು ದೇಶದಲ್ಲಿದೆ. ಈ ಸಂದರ್ಭದಲ್ಲಿ CMIE ಸಮೀಕ್ಷೆಯ ಡೇಟಾವನ್ನು ಆಧರಿಸಿ ಕಳೆದ ಎರಡು ವರ್ಷಗಳ ಬೆಳವಣಿಗೆಗಳನ್ನು ಕೆಳಗಿನ ಪಟ್ಟಿಯಲ್ಲಿ ತೋರಿಸಲಾಗಿದೆ. ಅದರನ್ವಯ, ಉದ್ಯೋಗಿಗಳ ಸಂಖ್ಯೆ 2018 ರ ಡಿಸೆಂಬರ್‌ನಲ್ಲಿ ಸುಮಾರು 39.7 ಕೋಟಿಗಳಷ್ಟಿತ್ತು. ಇದು 2020 ರ ನವೆಂಬರ್‌ನಲ್ಲಿ 39.4 ಕೋಟಿ ಆಗಿದೆ. ಏಪ್ರಿಲ್‌ನಲ್ಲಿ ಉದ್ಯೋಗದ ಪ್ರಮಾಣವು ಕೇವಲ 28.2 ಕೋಟಿಗೆ ಕುಸಿದಿತ್ತು. ಇದು ಲಾಕ್‌ಡೌನ್ ದುಷ್ಪರಿಣಾಮವನ್ನು ಸ್ಪಷ್ಟವಾಗಿ ತೋರಿಸುತ್ತದೆ.

Employed person in India

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಭರವಸೆ; ಹಣಪಡೆದು ವಂಚಿಸಿದ ಬಿಜೆಪಿ ಕಾರ್ಯಕರ್ತ!

ಭಾರತದಲ್ಲಿ ಉದ್ಯೋಗಿ

ಇದರ ಅರ್ಥ ಏನು? ಪ್ರತಿದಿನ ಜನಸಂಖ್ಯೆ ಹೆಚ್ಚುತ್ತಿದೆ ಮತ್ತು ಪ್ರತಿ ವರ್ಷ ಸುಮಾರು 12 ಕೋಟಿ ಜನರು ಹೊಸದಾಗಿ ಉದ್ಯೋಗಾಕಾಂಕ್ಷಿಗಳಾಗಿ (ವಿದ್ಯಾಭ್ಯಾಸ ಮುಗಿಸಿದರು) ಈ ಸಮೂಹವನ್ನು ಸೇರುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಇವರಲ್ಲಿ ಎಲ್ಲರೂ ಉದ್ಯೋಗಗಳನ್ನು ಹುಡುಕುತ್ತಿಲ್ಲ. ಕೆಲವರು ಇನ್ನೂ ಅಧ್ಯಯನ ಮಾಡುತ್ತಿದ್ದಾರೆ, ಹೆಣ್ಣುಮಕ್ಕಳಿಗೆ ಸಾಮಾನ್ಯವಾಗಿ ಮದುವೆಯಾಗಲು ಹೇಳಲಾಗುತ್ತದೆ. ಹೀಗಾಗಿ ಕೆಲಸ ಮಾಡಲು ಸಿದ್ಧರಿರುವ ಜನಸಂಖ್ಯೆಯ ಪಾಲು – ಲಾಕ್‌ಡೌನ್‌ಗೆ ಮೊದಲು ಸುಮಾರು 42% ನಷ್ಟಿತ್ತು. ಅಂದರೆ, ಪ್ರತಿವರ್ಷ ಸುಮಾರು ಐದು ಕೋಟಿ ಜನರು ಉದ್ಯೋಗಾಕಾಂಕ್ಷಿಗಳ ಗುಂಪಿಗೆ ಸೇರುತ್ತಾರೆ. ಆದರೂ, ಎರಡು ವರ್ಷಗಳಲ್ಲಿ ಉದ್ಯೋಗಿಗಳ ಸಂಖ್ಯೆ ಒಂದೇ ಆಗಿದೆ. ಅದರಲ್ಲಿ ಏರಿಕೆಯಾಗಿಲ್ಲ. ನಿರುದ್ಯೋಗಿಗಳ ಸಮೂಹ ವಿಸ್ತಾರಗೊಳ್ಳುತ್ತಿದೆ. ಅವರೆಲ್ಲರೂ ಉದ್ಯೋಗ ಸಿಗದೆ ನಿರುತ್ಸಾಹಗೊಂಡಿದ್ದಾರೆ. ಇವರಲ್ಲಿ ಬಹುಸಂಖ್ಯಾತರು ಮನೆಯಲ್ಲಿಯೇ ಇದ್ದಾರೆ. ಕಡಿಮೆ ಸಮಯಕ್ಕೆ ಸಿಗುವ ತುಂಡು ಕೆಲಸಗಳನ್ನು, ಕೃಷಿ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ವಾಸ್ತವವಾಗಿ, ಕೆಲಸದ ಭಾಗವಹಿಸುವಿಕೆಯ ದರವು 2018 ರ ಡಿಸೆಂಬರ್‌ನಲ್ಲಿ 42.5% ರಷ್ಟಿತ್ತು. ಆದರೆ, 2020ರ ನವೆಂಬರ್‌ನಲ್ಲಿ ಸುಮಾರು 40%ಕ್ಕೆ ಕುಸಿದಿದೆ.

ಮೋದಿ ಸರ್ಕಾರ ಸೃಷ್ಟಿಸಿದ ಬಿಕ್ಕಟ್ಟು

ಕೊರೊನಾ ಸೋಂಕು ದೇಶವನ್ನು ಬಾಧಿಸುವ ಮೊದಲೇ ಭಾರತದ ಆರ್ಥಿಕತೆ ದುರ್ಬತೆಯಿಂದ ಕೂಡಿದ್ದು, ಬಿಕ್ಕಟ್ಟಿನ ಹಾದಿ ಹಿಡಿದಿತ್ತು. ಆರ್ಥಿಕ ಬೆಳವಣಿಗೆ ಕುಂಠಿತಗೊಂಡಿತ್ತು, ನಿರುದ್ಯೋಗ ಹೆಚ್ಚುತ್ತಿತ್ತು, ಜನರ ದಿನನಿತ್ಯದ ಕೊಳ್ಳುವ ಶಕ್ತಿಯೂ ಕುಸಿದಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ, ಜನರ ಜೀವನ ಮಟ್ಟ ಕುಸಿಯುತ್ತಿದ್ದಂತೆ ಸಾಮಾನ್ಯ ಜನರು ಅಪಾರ ತೊಂದರೆ ಅನುಭವಿಸುತ್ತಿದ್ದರು. 2018-19ರ ಇತ್ತೀಚಿನ ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯ ಪ್ರಕಾರ, ಅಪೌಷ್ಟಿಕತೆಗೆ ಸಿಲುಕುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಮೋದಿ ಸರ್ಕಾರವು ಈ ಬಿಕ್ಕಟ್ಟನ್ನು ನಿಭಾಯಿಸಲು ಸಂಪೂರ್ಣವಾಗಿ ಅಸಮರ್ಥವಾಗಿದೆ ಎಂಬುದನ್ನು ಅದು ಸ್ಪಷ್ಟವಾಗಿ ಸೂಚಿಸಿತ್ತು.

ಆದರೆ ಈ ವರ್ಷದ ಸಾಂಕ್ರಾಮಿಕ, ಅದಕ್ಕೆ ಸರ್ಕಾರದ ತಪ್ಪು ಪ್ರತಿಕ್ರಿಯೆ ಮತ್ತು ಜನ ವಿರೋಧಿ ನೀತಿಗಳಿಂದಾಗಿ ಜನರು ಮತ್ತಷ್ಟು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಮೂರು ಕೃಷಿ ಕಾನೂನುಗಳು ಮತ್ತು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಜನರನ್ನು ಮತ್ತಷ್ಟು ಅಪಾಯಕ್ಕೆ ತಳ್ಳಲು ಸರ್ಕಾರವು ಪ್ರಯತ್ನಿಸಿದೆ. ಇದು ಒಟ್ಟಾಗಿ ಹೆಚ್ಚು ನಿರುದ್ಯೋಗವನ್ನು ಸೃಷ್ಟಿಸುತ್ತದೆ, ಆದಾಯವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ ಮತ್ತು ಜನರಿಗೆ ಹೆಚ್ಚಿನ ಅಭದ್ರತೆಯನ್ನು ನೀಡುತ್ತದೆ.

ಕೃಪೆ: ನ್ಯೂಸ್‌ ಕ್ಲಿಕ್

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ...

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...