Homeಮುಖಪುಟಭರವಸೆಯ ಬೆಳಕಿನತ್ತ 2021 - ಆ ಆಶಾದಾಯಕ ವಿದ್ಯಮಾನಗಳು ಯಾವುವು?

ಭರವಸೆಯ ಬೆಳಕಿನತ್ತ 2021 – ಆ ಆಶಾದಾಯಕ ವಿದ್ಯಮಾನಗಳು ಯಾವುವು?

ತನ್ನ ಪಕ್ಷಕ್ಕೆ ದೇಣಿಗೆ ನೀಡುವ ಕಾರ್ಪೊರೆಟ್ ಧಣಿಗಳ ಋಣ ಹೇಗೆ ತೀರಿಸುವುದು? ಜನರ ಸಂಪತ್ತನ್ನು ಕಸಿದು ತನ್ನ ಕಾರ್ಪೊರೆಟ್ ಧಣಿಗಳಿಗೆ ನೀಡುವುದು. ಕೊರೊನಾ ಸಮಯದಲ್ಲಿ ಹಿಂಬಾಗಿಲಿನಿಂದ ತಂದ ಮೂರು ಕೃಷಿ ತಿದ್ದುಪಡಿಗಳು ಇಂತಹ ಕಾರಣಕ್ಕಾಗಿಯೇ ಇರುವಂತವು. ಎಪಿಎಂಸಿ, ಕಾರ್ಪೊರೆಟ್ ಕಾಂಟ್ರಾಕ್ಟ್ ಕೃಷಿ ತಿದ್ದುಪಡಿ, ಕನಿಷ್ಠ ಮಾರಾಟ ಬೆಲೆ ಸಂಬಂಧಿತ ತಿದ್ದುಪಡಿಗಳು ಇವು. ಬಹುತೇಕವಾಗಿ ಪಂಜಾಬ್, ಹರಿಯಾಣ ಮತ್ತು ಕೇರಳದ ರೈತರು ಈ ಕಾನೂನುಗಳ ವಿರುದ್ಧ ಧ್ವನಿ ಎತ್ತಿದರು ನಂತರ ದೇಶಾದ್ಯಂತ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.

- Advertisement -
- Advertisement -

2021 ಪ್ರಾರಂಭವಾಗುತ್ತಿದ್ದಂತೆ ನಮ್ಮ ಮುಂದೆ ಸಾವಿರಾರು ಪ್ರಶ್ನೆಗಳು ಹುಟ್ಟಿವೆ. ಪ್ರಪಂಚದಾದ್ಯಂತ 2020ರಲ್ಲಿ ಬಹುತೇಕವಾಗಿ ಕೋವಿಡ್ ಭಯ, ಆತಂಕ ಮತ್ತು ಅನಿಶ್ಚಿತತೆಯಿಂದ ತತ್ತರಿಸುತ್ತಿದ್ದ ಜನಕ್ಕೆ 2021 ಹೊಸ ಭರವಸೆಗಳನ್ನು ಹುಟ್ಟಿಸಿದೆ. ಹಿನ್ನೋಟ ಮತ್ತು ಮುನ್ನೋಟದಲ್ಲಿ ಫ್ಯಾಸಿವಾದದ ಕಾರ್ಮೋಡಗಳು ಇರುಳಿನ ಹಾಗೆ ಆವರಿಸಿದ್ದರೂ ಅದನ್ನು ಎದುರಿಸುವ ಹೊಸ ಬೆಳಕಿನ ಕಿರಣಗಳು ಗೋಚರಿಸತೊಡಗಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ, ಉಸಿರುಗಟ್ಟಿಸುವ ಮಾಸ್ಕ್ ಮತ್ತು ಮುಖವಾಡಗಳಿಂದ ಮುಕ್ತಿ ನೀಡಲೋ ಎಂಬಂತೆ ದಾಖಲೆ ಸಮಯದಲ್ಲಿ ಲಸಿಕೆಯತ್ತ ಸಾಗುತ್ತಿರುವ ವೈಜ್ಞಾನಿಕ ವಿದ್ಯಮಾನ, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಶಾಂತಿಯುತ ದಂಗೆಯೆದ್ದ ಭಾರತೀಯ ರೈತರು ನಮ್ಮೆಲ್ಲರ ಆತ್ಮಸ್ಥೈರ್ಯವನ್ನು, ಹೋಗಬೇಕಿರುವ ದಿಕ್ಕನ್ನು ತೋರಿಸಿಕೊಡುತ್ತಿದ್ದಾರೆ.

ಟ್ರಂಪ್ ಚುನಾವಣಾ ಸೋಲು..

PC : Macleans.ca

ಮೊದಲನೆಯದಾಗಿ, ’ಊರಿಗೆ ಒಂದು ದಾರಿ ಎಂದರೆ ಎಡವಟ್ಟನಿಗೆ ಮತ್ತೊಂದು ದಾರಿ’ ಎಂಬಂತೆ ಉಂಡಾಡಿ ಗುಂಡನಂತಿದ್ದ ಡೊನಾಲ್ಡ್ ಟ್ರಂಪ್‌ನ, ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲು, ಪ್ರಪಂಚದ ಪ್ರಜಾಪ್ರಭುತ್ವದ ಹಾದಿಗೆ ಕೊಂಚ ಮಟ್ಟವಾದರೂ ಸಹಕಾರಿಯೇ. ಅಧಿಕಾರಕ್ಕೆ ಬಂದ ತಕ್ಷಣವೇ ತನ್ನದೇ ದೇಶದ ಹಿಂದಿನ ಅಣು ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ವಿರುದ್ಧ ಅತ್ಯಂತ ಕಠಿಣ ನಿರ್ಬಂಧಗಳನ್ನು ಹೇರಿದಾತ ಟ್ರಂಪ್. ಇರಾನಿನಿಂದ ತೈಲ ಖರೀದಿ ಮಾಡುತ್ತಿದ್ದ ಭಾರತವನ್ನು ಸೇರಿ ಬೇರೆ ಬೇರೆ ದೇಶಗಳಿಗೆ ನಿರ್ಬಂಧಗಳ ಬೆದರಿಕೆಯೊಡ್ಡಿ ತೈಲ ಆಮದನ್ನು ನಿಲ್ಲಿಸಿದಾತ. ಇರಾನ್ ವಿರುದ್ಧ ಯುದ್ಧ ಮಾಡಲು ಹವಣಿಸುತ್ತಿರುವ ಇಸ್ರೇಲ್ ಜೊತೆಗೂಡಿ, ಇಸ್ಲಾಮಿಕ್ ಸ್ಟೇಟ್ ಎಂಬ ಭಯೋತ್ಪ್ಪಾದಕ ಸಂಘಟನೆಯ ನಿರ್ಮೂಲನೆಗೆ ಕಾರಣಕರ್ತನಾಗಿದ್ದ ಇರಾನಿನ ಕಮ್ಯಾಂಡರ್ ಜನರಲ್ ಖಾಸೆಮ್ ಸೊಲೈಮಾನಿಯನ್ನು ಅಂತಾರಾಷ್ಟ್ರೀಯ ಕಾನೂನುಗಳಿಗೂ ಕ್ಯಾರೇ ಅನ್ನದೆ, ಜನವರಿ 3 2020ರಂದು ಇರಾಕಿನ ಬಾಗ್ದಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಡ್ರೋನ್ ಸ್ಟ್ರೈಕ್ ಮೂಲಕ ಹತ್ಯೆಗೈದು ಐತಿಹಾಸಿಕ ಅಪರಾಧವೆಸಗಿದ ಆರೋಪ ಆತನ ಮೇಲಿದೆ. ಚೀನಾ ವಿರುದ್ಧ ವಾಣಿಜ್ಯ ಯುದ್ಧ ಸಾರಿ ಜಾಗತಿಕ ವಹಿವಾಟು ಮತ್ತು ಜಿಡಿಪಿಯನ್ನು ಕುಸಿಯುವಂತೆ ಮಾಡಿದಾತ.

ಅಮೆರಿಕದಂತಹ ಪ್ರಭಾವಶಾಲಿ ಬಂಡವಾಳಶಾಹಿ ಸಾಮ್ರಾಜ್ಯಶಾಹಿ ಶಕ್ತಿ ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಅತಿ ಹೆಚ್ಚು ಸಾವಿನ ಸಂಖ್ಯೆ ಕಂಡದ್ದು ಟ್ರಂಪ್ ಆಡಳಿತದಲ್ಲೇ. ಈಗಲೂ ಟ್ರಂಪ್ ಬೆಂಬಲಿಗರು ಮಾಸ್ಕ್ ಧರಿಸದೇ, ಚೀನಾವನ್ನು ದೂರುತ್ತಾ ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಅಮೆರಿಕದ ಜನರನ್ನು ಅಪಾಯದಂಚಿಗೆ ತಳ್ಳುತ್ತಿದ್ದಾರೆ. ತನ್ನ ಅಬ್ಬರದ ಪ್ರಚಾರದ ನಡುವೆ, ’ಹೌಡಿ ಮೋದಿ’, ’ನಮಸ್ತೆ ಟ್ರಂಪ್ ಕಾರ್ಯಕ್ರಮಗಳ ಹೊರತಾಗಿಯೂ ನವೆಂಬರ್‌ನಲ್ಲಿ ನಡೆದ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ವಿರುದ್ಧ ಸೋತು ಕೊನೆಗೆ ಜನವರಿ 20, 2021 ಅಧಿಕಾರ ಹಸ್ತಾಂತರ ಮಾಡಬೇಕಿದೆ. ಜೋ ಬಿಡೆನ್ ಯಾವುದೇ ಪ್ರಗತಿಪರ ಚಿಂತನೆಯುಳ್ಳವನಲ್ಲವಾಗಿದ್ದರು ಟ್ರಂಪ್ ಅಧಿಕಾರ ಅವನನ್ನು ಗೆಲ್ಲಿಸುವಂತೆ ಮಾಡಿತು. ಐತಿಹಾಸಿಕ ಚುನಾವಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಅಮೆರಿಕದ ಅಲ್ಪಸಂಖ್ಯಾತರು, ಕಪ್ಪು ವರ್ಣೀಯರು, ಲ್ಯಾಟಿನ್ ಅಮೆರಿಕನ್ನರು, ಪ್ರಜಾಪ್ರಭುತ್ವವನ್ನು ಬೆಂಬಲಿಸುವ ಪ್ರಗತಿಪರರು ಟ್ರಂಪ್ ಒಡೆದಾಳುವ ನೀತಿಯನ್ನು ತಿರಸ್ಕರಿಸಿ ಅವನನ್ನು ಸೋಲಿಸಿದರು. ಈ ಸೋಲಿನ ಪ್ರತಿಧ್ವನಿ ಪ್ರಪಂಚಾದ್ಯಂತ ಅಣಬೆಯಂತೆ ಎದ್ದು ನಿಂತಿರುವ ಸರ್ವಾಧಿಕಾರಗಳಿಗೆ ಸ್ವಲ್ಪ ಮಟ್ಟಿಗಾದರೂ ಹಿಮ್ಮೆಟ್ಟುವುದಕ್ಕೆ ಸಹಕಾರಿಯಾಗುತ್ತದೆ.

ಮಾಸ್ಕ್‌ಗಳಿಂದ ಲಸಿಕೆಯೆಡೆಗೆ..

2019 ಡಿಸೆಂಬರ್ ತಿಂಗಳು ಮತ್ತು 2020ರ ಪ್ರಾರಂಭದಲ್ಲಿ, ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಭುಗಿಲೆದ್ದ ಪ್ರತಿಭಟನೆಗಳಿಗೆ ಮೋದಿ ಸರ್ಕಾರ ಪ್ರಪ್ರಥಮ ಬಾರಿಗೆ ದೊಡ್ಡ ಪ್ರಮಾಣದ ಪ್ರತಿರೋಧವನ್ನು ಎದುರಿಸಬೇಕಾಯಿತು. ಪ್ರಜಾಪ್ರಭುತ್ವದ ತತ್ವಗಳನ್ನು ಬರಿ ಭಾಷಣದ ಸರಕನ್ನಾಗಿಸಿ ಒಂದರ ನಂತರ ಮತ್ತೊಂದು ದಮನಕಾರಿ ನೀತಿಗಳನ್ನು ಜನರ ಮೇಲೆ ಹೇರಲು ಹೊರಟಿದ್ದ ಮೋದಿ ಸರ್ಕಾರಕ್ಕೆ ವಿದ್ಯಾರ್ಥಿಗಳು ಪ್ರತಿರೋಧ ಒಡ್ಡಿದರು. ಜಾಮಿಯಾ, ಎಎಂಯು ಮತ್ತು ಜೆಎನ್‌ಯು ಮೇಲೆ ಸ್ವತಃ ಪ್ರಭುತ್ವವೇ ದಾಳಿ ಮಾಡಿತು. ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು ಪ್ರಭುತ್ವಕ್ಕೆ ನುಂಗಲಾರದ ತುತ್ತಾಗಿತ್ತು. ಇದೆ ಸಂದರ್ಭದಲ್ಲಿ, ಜಾಗತಿಕವಾಗಿ ಹರಡುತ್ತಿದ್ದ ಕೊರೊನಾ ಸಾಂಕ್ರಾಮಿಕವನ್ನು ನಿರ್ಲಕ್ಷಿಸಿ ಗುಜರಾತಿನ ಅಹಮದಾಬಾದಿನಲ್ಲಿ ’ನಮಸ್ತೆ ಟ್ರಂಪ್ ಕಾರ್ಯಕ್ರಮ ನಡೆಸಲಾಯಿತು.

ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗೆ ತಾವೇ ಪ್ರಚೋದಿಸಿ, ನಡೆಸಿ ಕೊನೆಗೆ ಕೋಮು ಪ್ರಚೋದನೆ ಭಾಷಣವನ್ನು ಮಾಡಿದವರನ್ನು ಬಿಟ್ಟು ಗಲಭೆಯಲ್ಲಿ ಪ್ರಾಣ, ಮನೆ, ಅಂಗಡಿ, ವ್ಯಾಪಾರ ಕಳೆದುಕೊಂಡವರನ್ನೇ ಆರೋಪಿಗಳನ್ನಾಗಿ ಮಾಡಲಾಯಿತು. ಸಾಂಕ್ರಾಮಿಕ ರೋಗ ಹರಡುತ್ತಿದ್ದಂತೆ ಯಾವುದೇ ತಯ್ಯಾರಿ ಇಲ್ಲದ ಅವೈಜ್ಞಾನಿಕ ಲಾಕ್‌ಡೌನ್‌ಅನ್ನು ಮಾರ್ಚ್ 24ರಂದು ಘೋಷಿಸಲಾಯಿತು. ಅಸಂಖ್ಯಾತ ಅಸಂಘಟಿತ ಕಾರ್ಮಿಕರನ್ನು ಬೀದಿಗೆ ತಳ್ಳಲಾಯಿತು. ಈ ನಡುವೆಯೇ ಕೊರೊನಾ ಸಂಖ್ಯೆ ಹೆಚ್ಚುತ್ತಿದ್ದಂತೆ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ದೇಶಾದ್ಯಂತ ತಟ್ಟೆ ಬಾರಿಸಲು, ದೀಪ ಹಚ್ಚಲು ಕರೆ ನೀಡಲಾಯಿತು. ಯಾವುದೇ ಪೂರ್ವ ಸಿದ್ಧತೆಗಳಿಲ್ಲದೆ ಕಾರ್ಮಿಕರು, ವೈದ್ಯರು, ಆರೋಗ್ಯ ಕಾರ್ಯಕರ್ತರು, ಸಾಮಾನ್ಯ ಜನರು ತತ್ತರಿಸಿದರು. ಇದರ ಹಿನ್ನೆಲೆಯಲ್ಲಿ ಜೂನ್ ತಿಂಗಳ ಮೊದಲ ವಾರದಲ್ಲಿ ಕಾರ್ಪೊರೆಟ್ ಪೂರಕವಾದ ದೇಶದ ಮೂರು ಪ್ರಮುಖ ಕೃಷಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಗಳನ್ನು ಸದ್ದಿಲ್ಲದೆ ತರಲಾಯಿತು.

PC : Daily Mail

ಮಾಸ್ಕ್ ಹಾಕುವುದರಿಂದ ಹಿಡಿದು ಜನರು ತಮ್ಮ ತಮ್ಮ ಮನೆಗಳಲ್ಲೇ ಬಂಧಿಯಾದರು. ಸಂಚಾರಿ ವ್ಯವಸ್ಥೆ ಸಂಪೂರ್ಣವಾಗಿ ನಿಲ್ಲಿಸಲಾಯಿತು. ಕೊನೆಗೂ ಈ ಸಾಂಕ್ರಾಮಿಕ ರೋಗಕ್ಕೆ ಈಗ ದಾಖಲೆ ಸಮಯದಲ್ಲಿ ಲಸಿಕೆ ಕಂಡುಹಿಡಿಯಲಾಗಿದೆ. ಮೊದಲು ಚೀನಾ ಮತ್ತು ರಶಿಯಾ ದೇಶಗಳು ಲಸಿಕೆಯನ್ನು ಘೋಷಿಸಿದರು, ನಂತರ ಮಾಡೆರ್ನ ಮತ್ತು ಫೈಜ್ಹರ್ ಕಂಪನಿಗಳು ಲಸಿಕೆ ಘೋಷಿಸಿದವು. ಅಮೆರಿಕ, ಇಂಗ್ಲೆಂಡ್, ರಶಿಯಾ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ಈಗಾಗಲೇ ಜನರಿಗೆ ಲಸಿಕೆ ಕೊಡುವುದನ್ನು ಶುರು ಮಾಡಿದ್ದಾರೆ. ಭಾರತ ಕೂಡ ಲಸಿಕೆ ಹಾಕಲು ಅನುಮತಿ ಪಡೆದಾಗಿದೆ ಮತ್ತದರ ಸಿದ್ಧತೆಗಳ ಡ್ರೈರನ್ ನೆಡೆಸಲಾಗುತ್ತಿದೆ. ಎಲ್ಲವೂ ಸರಿಯಾದ ರೀತಿಯಲ್ಲಿ ನೆಡೆದರೆ 2021ರ ಮಧ್ಯ ಭಾಗದ ಹೊತ್ತಿಗೆ ಕೊರೊನಾ ಇಳಿಮುಖವಾಗುತ್ತದೆ. ಮಾಸ್ಕ್ ಧರಿಸುವಿಕೆ ಈಗಲೂ ಕಡ್ಡಾಯವಿದ್ದರೂ ಮುಂದಿನ ದಿನಗಳಲ್ಲಿ ಮಾಸ್ಕ್ ಧರಿಸುವುದು ಇಳಿಮುಖವಾಗುತ್ತದೆ. ಜನ ಕಳೆದ ವರ್ಷಕ್ಕಿಂತ ಈ ವರ್ಷ ತಮ್ಮ ಹಳೆಯ ಜೀವನಕ್ಕೆ ಹಿಂದಿರುಗುತ್ತಾರೆ.

ಐತಿಹಾಸಿಕ ದೆಹಲಿ ಪ್ರತಿಭಟನೆಗಳು..

ತನ್ನ ಪಕ್ಷಕ್ಕೆ ದೇಣಿಗೆ ನೀಡುವ ಕಾರ್ಪೊರೆಟ್ ಧಣಿಗಳ ಋಣ ಹೇಗೆ ತೀರಿಸುವುದು? ಜನರ ಸಂಪತ್ತನ್ನು ಕಸಿದು ತನ್ನ ಕಾರ್ಪೊರೆಟ್ ಧಣಿಗಳಿಗೆ ನೀಡುವುದು. ಕೊರೊನಾ ಸಮಯದಲ್ಲಿ ಹಿಂಬಾಗಿಲಿನಿಂದ ತಂದ ಮೂರು ಕೃಷಿ ತಿದ್ದುಪಡಿಗಳು ಇಂತಹ ಕಾರಣಕ್ಕಾಗಿಯೇ ಇರುವಂತವು. ಎಪಿಎಂಸಿ, ಕಾರ್ಪೊರೆಟ್ ಕಾಂಟ್ರಾಕ್ಟ್ ಕೃಷಿ ತಿದ್ದುಪಡಿ, ಕನಿಷ್ಠ ಮಾರಾಟ ಬೆಲೆ ಸಂಬಂಧಿತ ತಿದ್ದುಪಡಿಗಳು ಇವು. ಬಹುತೇಕವಾಗಿ ಪಂಜಾಬ್, ಹರಿಯಾಣ ಮತ್ತು ಕೇರಳದ ರೈತರು ಈ ಕಾನೂನುಗಳ ವಿರುದ್ಧ ಧ್ವನಿ ಎತ್ತಿದರು ನಂತರ ದೇಶಾದ್ಯಂತ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಕಾರ್ಪೊರೆಟ್ ಪರ ಕಾನೂನುಗಳು ರೈತನನ್ನು ಉತ್ಪಾದಿಸುವ ಶಕ್ತಿಯನ್ನು ಕಡಿಮೆ ಮಾಡುವ ಮತ್ತು ಕಾರ್ಪೊರೆಟ್‌ಗಳ ಲಾಭವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ಅವರು ಪ್ರತಿಭಟಿಸಿದರು. ಜೂನ್‌ನಿಂದ ಅವರು ಎಲ್ಲಾ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳಲು ಪ್ರತಿಭಟಿಸುತ್ತಿದ್ದಾರೆ.

ವಿದ್ಯುತ್ ಖಾಸಗೀಕರಣಕ್ಕೆ ಸಂಬಂಧಿಸಿದ ಹೊಸ ಮಸೂದೆಯನ್ನು ತರುವುದನ್ನು ನಿಲ್ಲಿಸಿ ಮತ್ತು ಕನಿಷ್ಠ ಮಾರಾಟದ ಬೆಲೆಯನ್ನು ಕಾನೂನುಬದ್ಧವಾಗಿ ಖಾತರಿಪಡಿಸಿ ಎಂದು ಆಗ್ರಹಿಸುತ್ತಿದ್ದಾರೆ. ತಿಂಗಳುಗಳ ಪ್ರತಿಭಟನೆಯ ನಂತರ ಅವರು ದೆಹಲಿಗೆ ಮೆರವಣಿಗೆ ನಡೆಸಿದ್ದಾರೆ ಮತ್ತು ಪ್ರಸ್ತುತ ದೆಹಲಿಯ 7 ಪ್ರವೇಶದ್ವಾರಗಳಲ್ಲಿ ಬೀಡುಬಿಟ್ಟಿದ್ದಾರೆ. ಈ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ದೆಹಲಿಯ 1 ಡಿಗ್ರಿ ಕಠಿಣ ಚಳಿಯನ್ನು ಲೆಕ್ಕಿಸದೆ ಪ್ರತಿಭಟಿಸುತ್ತಿದ್ದಾರೆ ಮತ್ತು ಹತ್ತಾರು ರೈತರು ಹುತಾತ್ಮರಾಗಿದ್ದಾರೆ. ಏಳು ಸುತ್ತಿನ ಮಾತುಕತೆಗಳ ನಂತರವೂ ಸರ್ಕಾರ ಅದೇ ರಾಗವನ್ನು ಹಾಡುತ್ತಿದೆ. ರೈತರನ್ನು ಪ್ರತಿಪಕ್ಷಗಳು ದಿಕ್ಕು ತಪ್ಪಿಸುತ್ತಿದ್ದಾರೆ, ರೈತರು ಖಲಿಸ್ತಾನಿಗಳು, ರೈತರು ನಕ್ಸಲರು ಎಂದು ದಿನೇ ದಿನೆ ಹೊಸ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇವೆಲ್ಲದರ ನಡುವೆ ರೈತರು ತಮ್ಮ ಬೇಡಿಕೆ ಈಡೇರವವರೆಗೂ ತಾವು ಆ ಜಾಗದಿಂದ ಕದಲುವುದಿಲ್ಲ ಮತ್ತು ಗಣತಂತ್ರದ ದಿವಸ ತಾವು ಪರ್ಯಾಯ ಗಣತಂತ್ರವನ್ನು ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಆಚರಿಸುತ್ತೇವೆ ಎಂದು ಘೋಷಿಸಿದ್ದಾರೆ. ಎಷ್ಟೇ ದೊಡ್ಡ ನಿರಂಕುಶ ಅಧಿಕಾರ ವ್ಯವಸ್ಥೆ ಇರಲಿ, ಪ್ರಜಾಪ್ರಭುತ್ವದ ಅಡಿಪಾಯ ಪ್ರತಿಭಟನೆ ಎಂಬುದನ್ನು ಸರ್ಕಾರಕ್ಕೆ, ಪ್ರತಿಪಕ್ಷಗಳಿಗೆ ಮತ್ತು ಪ್ರಪಂಚಕ್ಕೆ ರೈತರು ಸಾರಿ ಹೇಳುತ್ತಿದ್ದಾರೆ. ಬದಲಾವಣೆಯ ಗಾಳಿ ಪ್ರಪಂಚಾದ್ಯಂತ ಬೀಸುತ್ತಿದರೂ ಭಾರತದ ಈ ಪ್ರತಿಭಟನೆ ಪ್ರಪಂಚದಲ್ಲೇ ದೊಡ್ಡದು. ಗಣತಂತ್ರಕ್ಕೂ ಮುಂಚೆ ಮೋದಿ ಸರ್ಕಾರ ಈ ಕಾರ್ಪೊರೆಟ್ ಪರ ನೀತಿಗಳನ್ನು ಹಿಂಪಡೆಯದಿದ್ದರೆ ಈ ಗಣತಂತ್ರ ಭಾರತದ ಪ್ರಜಾಪ್ರಭುತ್ವಕ್ಕೆ ಹೊಸ ಸ್ವರೂಪವನ್ನು ಕೊಡುತ್ತದೆ ಎಂಬ ಭರವಸೆಯಂತೂ ಇದೆ. ’ನಮಸ್ತೆ’ ಟ್ರಂಪ್ ನಂತರ ಭಾರತದ ಪ್ರಜ್ಞಾವಂತರು ’ನಮಸ್ತೆ’ ಮೋದಿ ಮಾಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇವೆಲ್ಲದರ ನಡುವೆ ವಿಕಿಲೀಕ್ಸ್ ಸಂಸ್ಥಾಪಕ, ಜೂಲಿಯನ್ ಅಸಾಂಜ್ ಎಂಬ ಅಸಾಧಾರಣ ಪತ್ರಕರ್ತನ ಅಮೆರಿಕ ಹಸ್ತಾಂತರವನ್ನು ಇಂಗ್ಲೆಂಡ್ ನ್ಯಾಯಾಲಯ ತಿರಸ್ಕರಿಸಿದೆ. ಅಮೆರಿಕ ಮಾಡಿದ ಯುದ್ಧ ಕ್ರೌರ್ಯವನ್ನು ಪ್ರಪಂಚಕ್ಕೆ ಸಾಕ್ಷಿ ಸಮೇತ ತಿಳಿಸಿದ ಅಸಾಂಜ್ ಈಗಲೂ ಇಂಗ್ಲೆಂಡಿನ ಕುಖ್ಯಾತ ಸೆರೆಮನೆಯಲ್ಲಿ ಬಂಧಿಯಾಗಿದ್ದರೆ.

ಪ್ರಜಾಪ್ರಭುತ್ವವನ್ನು ಬಯಸುವ, ಸಮಾನತೆ, ಸೋದರತೆ ಬಯಸುವ ಎಲ್ಲ ಮನಸ್ಸುಗಳು ನಮ್ಮ ನಾಡಿನ ರೈತರ ಆಶಯಗಳನ್ನು ಈಡೇರಿಸಲು ಪಣ ತೊಡೋಣ ಮತ್ತು ಪ್ರಜಾಪ್ರಭುತ್ವಕ್ಕಾಗಿ ಧ್ವನಿ ಕೊಟ್ಟು ಈಗ ಬಂಧನದಲ್ಲಿರುವ ಸುರೇಂದ್ರ ಗಾಡಲಿಂಗ್, ಸುಧೀರ್ ಧಾವಲೆ, ರೋಣ ವಿಲ್ಸನ್, ಶೋಮಾ ಸೆನ್, ಮಹೇಶ್ ರಾವುತ್, ಸುಧಾ ಭಾರದ್ವಾಜ್, ವರವರ ರಾವ್, ಗೌತಮ್ ನವ್ಲಖ, ವೆರ್ನೊನ್ ಗೋನ್ಸಾಲ್ವೇಸ್, ಆನಂದ್ ತೇಲ್ತುಂಬ್ಡೆ ಮತ್ತು ಸ್ಟಾನ್ ಸ್ವಾಮಿ ಮತ್ತು ಜೂಲಿಯನ್ ಅಸಾಂಜ್ ಪರ ನಿಲ್ಲೋಣ ಮತ್ತು ಅವರ ಮೇಲಿನ ಪ್ರಭುತ್ವದ ದಾಳಿಯನ್ನು ಖಂಡಿಸಿ ಅವರ ಶೀಘ್ರ ಬಿಡುಗಡೆಗೆ ಒತ್ತಾಯಿಸೋಣ.


ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....