Homeಅಂಕಣಗಳುಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!

ಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಬಜೆಟ್ ಮಂಗಳವಾರ ಲೋಕಸಭೆಯಲ್ಲಿ ಅನಾವರಣಗೊಂಡಿತು. ದೇಶದ ಷೇರುಪೇಟೆ ಉತ್ಸಾಹದಿಂದ ಕುಣಿದು ಕುಪ್ಪಳಿಸಿತು. ಮಾಧ್ಯಮಲೋಕ ಈ ಉತ್ಸಾಹವನ್ನೇ ಬಜೆಟ್‌ನ ಅಳತೆಗೋಲು ಎಂಬಂತೆ ಬಿಂಬಿಸಿದೆ.

ಷೇರುಪೇಟೆಯ ಜಿಗಿತ-ಕುಸಿತದಲ್ಲಿ ಪ್ರತಿಫಲಿಸುವುದು ಶೇ.4ರಷ್ಟು ಭಾರತ ಮಾತ್ರ. ಉಳಿದ ಶೇ.96ರಷ್ಟು ಭಾರತದ ಪಾಲಿಗೆ ಈ ಬಜೆಟ್ ಎಷ್ಟು ಪ್ರಸ್ತುತ ಅಥವಾ ಅಪ್ರಸ್ತುತ ಎಂಬುದೇ ಅಸಲು ಸಂಗತಿ.

ಅಂಕಿಅಂಶಗಳ ಮಾಯಾಜಾಲವನ್ನು ಹರಿದು ನೋಡುವುದಾದರೆ ಬಡವರನ್ನು ಬಡವರನ್ನಾಗಿಯೇ ಉಳಿಸಿ, ಧನಿಕರನ್ನು ಇನ್ನಷ್ಟು ಧನಿಕರನ್ನಾಗಿಸುವ ಯಥಾಸ್ಥಿತಿವಾದಿ ಬಜೆಟ್ ಇದು. ನಿರುದ್ಯೋಗ, ಸಮಾಜ ಕಲ್ಯಾಣ, ವಿತ್ತೀಯ ಸ್ಥಿತಿಗತಿಯಲ್ಲೂ ನಿರಾಶೆಯನ್ನೇ ಧರಿಸಿರುವ ಮುಂಗಡಪತ್ರ.

ಪೆಟ್ರೋಲ್ ಎಂಬುದು ಮೋದಿ ಸರ್ಕಾರದ ಪಾಲಿಗೆ ತೆರಿಗೆ ಸಂಗ್ರಹದ ಕಾಮಧೇನು-ಕಲ್ಪವೃಕ್ಷ. ಜನಸಾಮಾನ್ಯರ ಪಾಲಿಗೆ ನಡು ಮುರಿದು ನೆಲಕ್ಕೆ ಕೆಡವಿರುವ ಭಯಂಕರ ಬಡಿಗೆ. ಅನ್‌ಬ್ಲೆಂಡೆಡ್ ಪೆಟ್ರೋಲ್ ಮೇಲೆ ಲೀಟರಿಗೆ ಎರಡು ರೂಪಾಯಿಯ ಹೊಸ ತೆರಿಗೆಯನ್ನು ಬಜೆಟ್ಟಿನಲ್ಲಿ ಹೇರಲಾಗಿದೆ. ಈ ಹೊಸ ಭಾರವನ್ನು ಜನಸಾಮಾನ್ಯರೇ ಹೊರಬೇಕಿದೆ. ವಿಶ್ವಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಈಗಾಗಲೆ ಏರುಮುಖವಾಗಿದೆ. ಮುಂದಿನ ತಿಂಗಳುಗಳಲ್ಲಿ ಈ ತೈಲದ ಬೆಲೆ ಇನ್ನಷ್ಟು ಏರಿಕೆಯ ಒಜ್ಜೆ ಹೊರಲು ಭಾರತದೇಶವಾಸಿಗಳು ತಯಾರಾಗಬೇಕಿದೆ.

ಮೋದಿಯಂತಹ ಮೋದಿಯವರೇ ಮಂಡಿಯೂರಿರುವಂತಹ ಪ್ರಬಲ ರೈತ ಚಳವಳಿ ವರ್ಷದೊಪ್ಪತ್ತು ನಡೆದದ್ದನ್ನು ವಿಶ್ವವೇ ಎದ್ದು ಕುಳಿತು ನೋಡಿತು. ಆದರೆ ಈ ಬಜೆಟ್ಟಿನಲ್ಲಿ ಅಸಲಿ ಕೃಷಿಯ ವಿಷಯವನ್ನು ಭೂತಗಾಜು ಹಾಕಿ ಹುಡುಕಬೇಕಿದೆ.

ಕನಿಷ್ಠ ಬೆಂಬಲ ಬೆಲೆಯ ಸೌಲಭ್ಯ ಎಲ್ಲ ರೈತರ ಉತ್ಪನ್ನಗಳಿಗೂ ದೊರೆಯಬೇಕೆಂಬ ರೈತ ಆಂದೋಲನದ ಬೇಡಿಕೆಗೆ ಕೇಂದ್ರ ಸರ್ಕಾರ ಯಾವ ಕಿಮ್ಮತ್ತನ್ನೂ ನೀಡಿಲ್ಲ. ಕಳೆದ ವರ್ಷದ (2021) ಬಜೆಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ತೆತ್ತು ಕೃಷಿ ಉತ್ಪನ್ನಗಳ ಖರೀದಿಗೆ ತೆಗೆದಿರಿಸಿದ್ದ ಮೊತ್ತ 2.48 ಲಕ್ಷ ಕೋಟಿ ರುಪಾಯಿ. ಇಂದು ಮಂಡಿಸಿದ ಬಜೆಟ್ಟಿನಲ್ಲಿ ಈ ಮೊತ್ತ 2.37 ಲಕ್ಷ ಕೋಟಿ ರುಪಾಯಿ.

ರಸಗೊಬ್ಬರಗಳ ಮೇಲಿನ ಸಬ್ಸಿಡಿಯ ಮೊತ್ತವನ್ನು 1.40 ಲಕ್ಷ ಕೋಟಿ ರುಪಾಯಿಗಳಿಂದ 1.05 ಕೋಟಿ ರುಪಾಯಿಗಳಿಗೆ ಖೋತಾ ಮಾಡಲಾಗಿದೆ. ಇದೇ ರೀತಿ ಬಡಜನಸಮುದಾಯಗಳಿಗೆ ನೀಡಲಾಗುವ ಆಹಾರ ಸಬ್ಸಿಡಿ ಕೂಡ 2.9 ಲಕ್ಷ ಕೋಟಿ ರುಪಾಯಿಗಳಿಂದ 2.1 ಲಕ್ಷ ಕೋಟಿಗೆ ಇಳಿದಿದೆ. ರಾಷ್ಟ್ರೀಯ ಹಸಿರು ಕ್ರಾಂತಿ ಯೋಜನೆಗೆ ಕಳೆದ ಬಜೆಟ್‌ನಲ್ಲಿ 13 ಸಾವಿರ ಕೋಟಿ ತೆಗೆದಿರಿಸಲಾಗಿತ್ತು. ಈ ಬಾರಿ ಅದರ ಪ್ರಸ್ತಾಪವೇ ಇಲ್ಲ.

ಕೃಷಿ ಆದಾಯವನ್ನು ದುಪ್ಪಟ್ಟು ಮಾಡುವ ಭರವಸೆ ಕಾಗದದ ಮೇಲೆಯೇ ಉಳಿದಿದೆ. ಪ್ರಧಾನಮಂತ್ರಿ ರೈತ ಧನವೆಂದು ರೈತರಿಗೆ ಪ್ರತಿ ಮೂರು ತಿಂಗಳಿಗೆ ಎರಡು ಸಾವಿರದಂತೆ ವರ್ಷಕ್ಕೆ ಆರು ಸಾವಿರ ರುಪಾಯಿ ನೀಡಲಾಗುತ್ತಿದೆ. ಈ ಮೊತ್ತವನ್ನು ಹನ್ನೆರಡು ಸಾವಿರಕ್ಕೆ ಏರಿಸುವರೆಂಬ ನಿರೀಕ್ಷೆ ಹುಸಿಯಾಗಿದೆ. ಭೂರಹಿತ ಕೃಷಿ ಕೂಲಿ ಕಾರ್ಮಿಕ ಕುಟುಂಬಗಳಿಗೆ ತಲಾ ಆರು ಸಾವಿರ ರೂಪಾಯಿ ನೀಡಿಕೆಯನ್ನು ಆರಂಭಿಸಬಹುದಿತ್ತು.

ರೈತಾಪಿಗಳ ಜನಸಂಖ್ಯೆ ಶೇ.50ಕ್ಕೂ ಹೆಚ್ಚು. ಇವರ ಕೈಗೆ ಹಣ ಹರಿಯುವುದೆಂದರೆ ಖರೀದಿ ಸಾಮರ್ಥ್ಯ
ಹೆಚ್ಚಿಸಿ ಸರಕು ಸರಂಜಾಮುಗಳ ಬೇಡಿಕೆಯನ್ನು ಹೆಚ್ಚಿಸಿದಂತೆ. ಬೇಡಿಕೆ ಹೆಚ್ಚಿಸಿದರೆ ಉತ್ಪಾದನೆ ಚುರುಕು ಪಡೆದು ಉದ್ಯೋಗಾವಕಾಶ ಕುದುರಿ ಅರ್ಥಸ್ಥಿತಿಯ ಆವರ್ತ ಜೀವಂತಗೊಳ್ಳುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಈ ಉಸಾಬರಿಗೆ ಹೋಗಿಲ್ಲ. ಸಂಬಳದಾರ ಮಧ್ಯಮವರ್ಗಗಳಿಗೆ ಆದಾಯ ತೆರಿಗೆಯ ಯಾವುದೇ ರಿಯಾಯಿತಿ ಈ ವರ್ಷವೂ ದೊರೆತಿಲ್ಲ.

ಗ್ರಾಮೀಣ ಬಡಜನರನ್ನು ತಕ್ಕಮಟ್ಟಿಗಾದರೂ ಹಸಿವಿನಿಂದ ಕಾಪಾಡುತ್ತ ಬಂದಿರುವುದು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ. ಕೋವಿಡ್ ಲಾಕ್‌ಡೌನ್‌ಗಳ ನಂತರ ಮಹಾನಗರಗಳಿಂದ ಹಳ್ಳಿಗಳಿಗೆ ನಡೆದ ಮಹಾವಲಸೆಯ ನಂತರ ಆ ಜನರಾಶಿಯನ್ನು ಪೊರೆದ ಯೋಜನೆ. ಗ್ರಾಮೀಣ ಬಡಜನರಿಂದ ಭಾರೀ ಬೇಡಿಕೆ ಇರುವ ಯೋಜನೆಯಿದು. ಆದರೆ ಈ ಯೋಜನೆಯ ಹಂಚಿಕೆಯನ್ನು 98,000 ಕೋಟಿ ರುಪಾಯಿಗಳಿಂದ 73,000 ಕೋಟಿ ರುಪಾಯಿಗಳಿಗೆ ಇಳಿಸಲಾಗಿದೆ!

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಪಾಲಿಗೆ ಎಂದಿನಂತೆ ನಿರಾಶಾದಾಯಕ ಬಜೆಟ್. ಆರೋಗ್ಯ ಮಂತ್ರಾಲಯಕ್ಕೆ ಹಂಚಿಕೆ ಮಾಡಲಾಗಿರುವ ಒಟ್ಟು ಹಣ 86,200 ಕೋಟಿ ರುಪಾಯಿಗಳು. ಕಳೆದ ವರ್ಷದ ಪರಿಷ್ಕೃತ ಬಜೆಟ್ ಹಂಚಿಕೆಗೆ ಹೋಲಿಸಿದರೆ ಕೇವಲ 200 ಕೋಟಿ ರುಪಾಯಿಗಳ ಹೆಚ್ಚಳ!

ಶೇ.90ರಷ್ಟು ಉದ್ಯೋಗಾವಕಾಶಗಳನ್ನು ಒದಗಿಸುವ ಅಸಂಘಟಿತ ಕ್ಷೇತ್ರವನ್ನು ನೆಲಕಚ್ಚಿಸಲಾಗಿದೆ. ಹೀಗಾಗಿ ಈ ವಲಯಕ್ಕೆ ಪುನಶ್ಚೇತನ ನೀಡುವ ಮಾತನ್ನು ಬಜೆಟ್ಟಿನಲ್ಲಿ ನಿರೀಕ್ಷಿಸುವುದೂ ಮೂರ್ಖತನವಾದೀತು. ಹಣದುಬ್ಬರ ದರವನ್ನು ತಿರುಚಿ ತಗ್ಗಿಸಿ ಮಂಡಿಸಲಾಗಿದೆ.

ದೇಶದ ಅತಿ ಸಿರಿವಂತರ ಪ್ರಮಾಣ ಶೇ.10. ದೇಶದ ಶೇ.64.6ರಷ್ಟು ಸಂಪತ್ತು ಇವರ ಕೈಯಲ್ಲಿದೆ. ದೇಶವನ್ನು ಕಾಡಿದ ನೋಟು ರದ್ದು, ಕೋವಿಡ್ ಮಹಾ ಸಾಂಕ್ರಾಮಿಕ, ನಿರುದ್ಯೋಗ, ಬಡತನ, ಹಸಿವಿನ ಸಂಕಟಗಳು ಈ ವರ್ಗದ ಸಂಪತ್ತನ್ನು ಇನ್ನಷ್ಟು ಹೆಚ್ಚಿಸಿವೆ. ಭಾರತದ ಕೇವಲ ಹತ್ತು ಮಂದಿ ಅಪಾರ ಧನಿಕರ ಬಳಿ ಇರುವ ಸಂಪತ್ತಿನಿಂದ ದೇಶದ ಎಲ್ಲ ಮಕ್ಕಳ ಶಾಲಾ ಮತ್ತು ಪ್ರೌಢ ಶಿಕ್ಷಣವನ್ನು 25 ವರ್ಷಗಳ ಕಾಲ ನಡೆಸಬಹುದೆಂಬ ಅಂಕಿಅಂಶ ಎರಡು ವಾರಗಳ ಹಿಂದೆ ದಾವೋಸ್‌ನಲ್ಲಿ ಜರುಗಿದ ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯಲ್ಲಿ ಮಂಡಿತವಾದವು. ದೇಶದ ಆರ್ಥಿಕ ಏಣಿಶ್ರೇಣಿಯ ಮೇಲ್ಭಾಗದ ಶೇ.10 ಮಂದಿ ದೇಶದ ಒಟ್ಟು ಸಂಪತ್ತಿನ ಶೇ.45ರಷ್ಟರ ಒಡೆತನ ಹೊಂದಿದ್ದರೆ ಕೆಳಭಾಗದ ಶೇ.50ರಷ್ಟು ಜನಸಂಖ್ಯೆಯು ದೇಶದ ಒಟ್ಟು ಸಂಪತ್ತಿನ ಶೇ.6ರಷ್ಟರಲ್ಲೇ ಒದ್ದಾಡಿದೆ. ಆಕ್ಸ್‌ಫ್ಯಾಮ್ ಇಂಡಿಯಾದ ಈ ಅಂಕಿ ಅಂಶಗಳ ಪ್ರಕಾರ ಈ ಶೇ.10ರಷ್ಟು ಅತಿ ಧನಿಕರ ಮೇಲೆ ವಿಧಿಸಲಾಗುವ ಶೇ.ಒಂದರಷ್ಟು ತೆರಿಗೆ ಕೂಡ 17.7 ಲಕ್ಷ ಹೆಚ್ಚುವರಿ ಆಮ್ಲಜನಕ ಸಿಲಿಂಡರುಗಳನ್ನು ಒದಗಿಸಬಲ್ಲದು. ಹಾಗೆಯೇ ಭಾರತದ 98 ಮಂದಿ ಶತಕೋಟ್ಯಾಧೀಶ ಕುಬೇರರ ಮೇಲೆ ವಿಧಿಸಲಾಗುವ ಶೇ.1ರಷ್ಟು ಸಂಪತ್ತು ತೆರಿಗೆ ಕೂಡ ವಿಶ್ವದ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿರುವ ಆಯುಷ್ಮಾನ್ ಭಾರತವನ್ನು ಏಳು ವರ್ಷಗಳಿಗೂ ಹೆಚ್ಚು ಕಾಲ ಸಾಕಬಲ್ಲದು.

ಆದರೂ ಕೇಂದ್ರ ಸರ್ಕಾರ ಇವರ ಮೇಲೆ ತೆರಿಗೆ ಹೆಚ್ಚಿಸುವ ಮನಸ್ಸು ಮಾಡುವುದಿಲ್ಲ. ಬದಲಿಗೆ ಇಂದು ಮಂಡಿಸಲಾಗಿರುವ ಬಜೆಟ್‌ನಲ್ಲಿ ಈ ಕುಬೇರರ ಸಮೂಹದ ಕಾರ್ಪೊರೇಟ್ ವಲಯದ ಮೇಲೆ ವಿಧಿಸಲಾಗಿರುವ ಕಾರ್ಪೊರೆಟ್ ಸರ್ಚಾರ್ಜ್ ತೆರಿಗೆಯನ್ನು ಶೇ.12ರಿಂದ ಶೇ.ಏಳಕ್ಕೆ ಇಳಿಸಲಾಗಿದೆ! ದಶಕಗಳಿಂದ ಮಾಡಿಟ್ಟಿದ್ದ ರೇಲ್ವೆ, ಬಂದರು, ವಿಮಾನಯಾನ ಸೇರಿದಂತೆ ಸಾರ್ವಜನಿಕ ವಲಯದ ಆಸ್ತಿಪಾಸ್ತಿಗಳನ್ನು ಅಗ್ಗದ ಬೆಲೆಗೆ ಕಾರ್ಪೊರೇಟುಗಳಿಗೆ ಮಾರಾಟ ಮಾಡಲಾಗುತ್ತಿದೆ.

ಇದು ಶೇ.80ರಷ್ಟು ಬಹುಜನ ಭಾರತದ ಅಣಕವಲ್ಲದೆ ಇನ್ನೇನು?

ಮುಕ್ಕಾಲುಪಾಲು ದೇಶವಾಸಿಗಳ ಬದುಕುಗಳು ನೋಟು ರದ್ದು, ಜಿ.ಎಸ್.ಟಿ., ಕೋವಿಡ್‌ನ ಕ್ರೂರ ಆಘಾತದಡಿ ಜರ್ಝರಿತವಾಗಿವೆ. ಆದರೆ ದೇಶದಲ್ಲಿ ಅಮೃತಕಾಲ ನಡೆಯುತ್ತಿದೆ… ಮುಂದಿನ 25 ವರ್ಷಗಳ ಕಾಲವೂ ಹಾಲಿ ಬಜೆಟ್ಟಿನ ದೂರದರ್ಶಿತ್ವ ವಿಸ್ತರಿಸಲಿದೆ ಎಂದು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ರೊಟ್ಟಿ ಸಿಗದಿದ್ದರೆ ಕೇಕನ್ನು ತಿನ್ನಿ ಎಂದಿದ್ದ ಫ್ರಾನ್ಸಿನ ರಾಜಕುವರಿಯಂತೆ ಥೇಟು.


ಇದನ್ನೂ ಓದಿ: ಬಜೆಟ್‌ 2022-23: ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ವಂಚನೆ; ಖಾಸಗಿ ಪರ ಧೋರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...