Homeಅಂಕಣಗಳುಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!

ಬಹುಜನ ಭಾರತ; ದೇಶದ ಬಹುಜನರ ಅಣಕಿಸುವ ಬಜೆಟ್!

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಬಜೆಟ್ ಮಂಗಳವಾರ ಲೋಕಸಭೆಯಲ್ಲಿ ಅನಾವರಣಗೊಂಡಿತು. ದೇಶದ ಷೇರುಪೇಟೆ ಉತ್ಸಾಹದಿಂದ ಕುಣಿದು ಕುಪ್ಪಳಿಸಿತು. ಮಾಧ್ಯಮಲೋಕ ಈ ಉತ್ಸಾಹವನ್ನೇ ಬಜೆಟ್‌ನ ಅಳತೆಗೋಲು ಎಂಬಂತೆ ಬಿಂಬಿಸಿದೆ.

ಷೇರುಪೇಟೆಯ ಜಿಗಿತ-ಕುಸಿತದಲ್ಲಿ ಪ್ರತಿಫಲಿಸುವುದು ಶೇ.4ರಷ್ಟು ಭಾರತ ಮಾತ್ರ. ಉಳಿದ ಶೇ.96ರಷ್ಟು ಭಾರತದ ಪಾಲಿಗೆ ಈ ಬಜೆಟ್ ಎಷ್ಟು ಪ್ರಸ್ತುತ ಅಥವಾ ಅಪ್ರಸ್ತುತ ಎಂಬುದೇ ಅಸಲು ಸಂಗತಿ.

ಅಂಕಿಅಂಶಗಳ ಮಾಯಾಜಾಲವನ್ನು ಹರಿದು ನೋಡುವುದಾದರೆ ಬಡವರನ್ನು ಬಡವರನ್ನಾಗಿಯೇ ಉಳಿಸಿ, ಧನಿಕರನ್ನು ಇನ್ನಷ್ಟು ಧನಿಕರನ್ನಾಗಿಸುವ ಯಥಾಸ್ಥಿತಿವಾದಿ ಬಜೆಟ್ ಇದು. ನಿರುದ್ಯೋಗ, ಸಮಾಜ ಕಲ್ಯಾಣ, ವಿತ್ತೀಯ ಸ್ಥಿತಿಗತಿಯಲ್ಲೂ ನಿರಾಶೆಯನ್ನೇ ಧರಿಸಿರುವ ಮುಂಗಡಪತ್ರ.

ಪೆಟ್ರೋಲ್ ಎಂಬುದು ಮೋದಿ ಸರ್ಕಾರದ ಪಾಲಿಗೆ ತೆರಿಗೆ ಸಂಗ್ರಹದ ಕಾಮಧೇನು-ಕಲ್ಪವೃಕ್ಷ. ಜನಸಾಮಾನ್ಯರ ಪಾಲಿಗೆ ನಡು ಮುರಿದು ನೆಲಕ್ಕೆ ಕೆಡವಿರುವ ಭಯಂಕರ ಬಡಿಗೆ. ಅನ್‌ಬ್ಲೆಂಡೆಡ್ ಪೆಟ್ರೋಲ್ ಮೇಲೆ ಲೀಟರಿಗೆ ಎರಡು ರೂಪಾಯಿಯ ಹೊಸ ತೆರಿಗೆಯನ್ನು ಬಜೆಟ್ಟಿನಲ್ಲಿ ಹೇರಲಾಗಿದೆ. ಈ ಹೊಸ ಭಾರವನ್ನು ಜನಸಾಮಾನ್ಯರೇ ಹೊರಬೇಕಿದೆ. ವಿಶ್ವಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಈಗಾಗಲೆ ಏರುಮುಖವಾಗಿದೆ. ಮುಂದಿನ ತಿಂಗಳುಗಳಲ್ಲಿ ಈ ತೈಲದ ಬೆಲೆ ಇನ್ನಷ್ಟು ಏರಿಕೆಯ ಒಜ್ಜೆ ಹೊರಲು ಭಾರತದೇಶವಾಸಿಗಳು ತಯಾರಾಗಬೇಕಿದೆ.

ಮೋದಿಯಂತಹ ಮೋದಿಯವರೇ ಮಂಡಿಯೂರಿರುವಂತಹ ಪ್ರಬಲ ರೈತ ಚಳವಳಿ ವರ್ಷದೊಪ್ಪತ್ತು ನಡೆದದ್ದನ್ನು ವಿಶ್ವವೇ ಎದ್ದು ಕುಳಿತು ನೋಡಿತು. ಆದರೆ ಈ ಬಜೆಟ್ಟಿನಲ್ಲಿ ಅಸಲಿ ಕೃಷಿಯ ವಿಷಯವನ್ನು ಭೂತಗಾಜು ಹಾಕಿ ಹುಡುಕಬೇಕಿದೆ.

ಕನಿಷ್ಠ ಬೆಂಬಲ ಬೆಲೆಯ ಸೌಲಭ್ಯ ಎಲ್ಲ ರೈತರ ಉತ್ಪನ್ನಗಳಿಗೂ ದೊರೆಯಬೇಕೆಂಬ ರೈತ ಆಂದೋಲನದ ಬೇಡಿಕೆಗೆ ಕೇಂದ್ರ ಸರ್ಕಾರ ಯಾವ ಕಿಮ್ಮತ್ತನ್ನೂ ನೀಡಿಲ್ಲ. ಕಳೆದ ವರ್ಷದ (2021) ಬಜೆಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ತೆತ್ತು ಕೃಷಿ ಉತ್ಪನ್ನಗಳ ಖರೀದಿಗೆ ತೆಗೆದಿರಿಸಿದ್ದ ಮೊತ್ತ 2.48 ಲಕ್ಷ ಕೋಟಿ ರುಪಾಯಿ. ಇಂದು ಮಂಡಿಸಿದ ಬಜೆಟ್ಟಿನಲ್ಲಿ ಈ ಮೊತ್ತ 2.37 ಲಕ್ಷ ಕೋಟಿ ರುಪಾಯಿ.

ರಸಗೊಬ್ಬರಗಳ ಮೇಲಿನ ಸಬ್ಸಿಡಿಯ ಮೊತ್ತವನ್ನು 1.40 ಲಕ್ಷ ಕೋಟಿ ರುಪಾಯಿಗಳಿಂದ 1.05 ಕೋಟಿ ರುಪಾಯಿಗಳಿಗೆ ಖೋತಾ ಮಾಡಲಾಗಿದೆ. ಇದೇ ರೀತಿ ಬಡಜನಸಮುದಾಯಗಳಿಗೆ ನೀಡಲಾಗುವ ಆಹಾರ ಸಬ್ಸಿಡಿ ಕೂಡ 2.9 ಲಕ್ಷ ಕೋಟಿ ರುಪಾಯಿಗಳಿಂದ 2.1 ಲಕ್ಷ ಕೋಟಿಗೆ ಇಳಿದಿದೆ. ರಾಷ್ಟ್ರೀಯ ಹಸಿರು ಕ್ರಾಂತಿ ಯೋಜನೆಗೆ ಕಳೆದ ಬಜೆಟ್‌ನಲ್ಲಿ 13 ಸಾವಿರ ಕೋಟಿ ತೆಗೆದಿರಿಸಲಾಗಿತ್ತು. ಈ ಬಾರಿ ಅದರ ಪ್ರಸ್ತಾಪವೇ ಇಲ್ಲ.

ಕೃಷಿ ಆದಾಯವನ್ನು ದುಪ್ಪಟ್ಟು ಮಾಡುವ ಭರವಸೆ ಕಾಗದದ ಮೇಲೆಯೇ ಉಳಿದಿದೆ. ಪ್ರಧಾನಮಂತ್ರಿ ರೈತ ಧನವೆಂದು ರೈತರಿಗೆ ಪ್ರತಿ ಮೂರು ತಿಂಗಳಿಗೆ ಎರಡು ಸಾವಿರದಂತೆ ವರ್ಷಕ್ಕೆ ಆರು ಸಾವಿರ ರುಪಾಯಿ ನೀಡಲಾಗುತ್ತಿದೆ. ಈ ಮೊತ್ತವನ್ನು ಹನ್ನೆರಡು ಸಾವಿರಕ್ಕೆ ಏರಿಸುವರೆಂಬ ನಿರೀಕ್ಷೆ ಹುಸಿಯಾಗಿದೆ. ಭೂರಹಿತ ಕೃಷಿ ಕೂಲಿ ಕಾರ್ಮಿಕ ಕುಟುಂಬಗಳಿಗೆ ತಲಾ ಆರು ಸಾವಿರ ರೂಪಾಯಿ ನೀಡಿಕೆಯನ್ನು ಆರಂಭಿಸಬಹುದಿತ್ತು.

ರೈತಾಪಿಗಳ ಜನಸಂಖ್ಯೆ ಶೇ.50ಕ್ಕೂ ಹೆಚ್ಚು. ಇವರ ಕೈಗೆ ಹಣ ಹರಿಯುವುದೆಂದರೆ ಖರೀದಿ ಸಾಮರ್ಥ್ಯ
ಹೆಚ್ಚಿಸಿ ಸರಕು ಸರಂಜಾಮುಗಳ ಬೇಡಿಕೆಯನ್ನು ಹೆಚ್ಚಿಸಿದಂತೆ. ಬೇಡಿಕೆ ಹೆಚ್ಚಿಸಿದರೆ ಉತ್ಪಾದನೆ ಚುರುಕು ಪಡೆದು ಉದ್ಯೋಗಾವಕಾಶ ಕುದುರಿ ಅರ್ಥಸ್ಥಿತಿಯ ಆವರ್ತ ಜೀವಂತಗೊಳ್ಳುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಈ ಉಸಾಬರಿಗೆ ಹೋಗಿಲ್ಲ. ಸಂಬಳದಾರ ಮಧ್ಯಮವರ್ಗಗಳಿಗೆ ಆದಾಯ ತೆರಿಗೆಯ ಯಾವುದೇ ರಿಯಾಯಿತಿ ಈ ವರ್ಷವೂ ದೊರೆತಿಲ್ಲ.

ಗ್ರಾಮೀಣ ಬಡಜನರನ್ನು ತಕ್ಕಮಟ್ಟಿಗಾದರೂ ಹಸಿವಿನಿಂದ ಕಾಪಾಡುತ್ತ ಬಂದಿರುವುದು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ. ಕೋವಿಡ್ ಲಾಕ್‌ಡೌನ್‌ಗಳ ನಂತರ ಮಹಾನಗರಗಳಿಂದ ಹಳ್ಳಿಗಳಿಗೆ ನಡೆದ ಮಹಾವಲಸೆಯ ನಂತರ ಆ ಜನರಾಶಿಯನ್ನು ಪೊರೆದ ಯೋಜನೆ. ಗ್ರಾಮೀಣ ಬಡಜನರಿಂದ ಭಾರೀ ಬೇಡಿಕೆ ಇರುವ ಯೋಜನೆಯಿದು. ಆದರೆ ಈ ಯೋಜನೆಯ ಹಂಚಿಕೆಯನ್ನು 98,000 ಕೋಟಿ ರುಪಾಯಿಗಳಿಂದ 73,000 ಕೋಟಿ ರುಪಾಯಿಗಳಿಗೆ ಇಳಿಸಲಾಗಿದೆ!

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಪಾಲಿಗೆ ಎಂದಿನಂತೆ ನಿರಾಶಾದಾಯಕ ಬಜೆಟ್. ಆರೋಗ್ಯ ಮಂತ್ರಾಲಯಕ್ಕೆ ಹಂಚಿಕೆ ಮಾಡಲಾಗಿರುವ ಒಟ್ಟು ಹಣ 86,200 ಕೋಟಿ ರುಪಾಯಿಗಳು. ಕಳೆದ ವರ್ಷದ ಪರಿಷ್ಕೃತ ಬಜೆಟ್ ಹಂಚಿಕೆಗೆ ಹೋಲಿಸಿದರೆ ಕೇವಲ 200 ಕೋಟಿ ರುಪಾಯಿಗಳ ಹೆಚ್ಚಳ!

ಶೇ.90ರಷ್ಟು ಉದ್ಯೋಗಾವಕಾಶಗಳನ್ನು ಒದಗಿಸುವ ಅಸಂಘಟಿತ ಕ್ಷೇತ್ರವನ್ನು ನೆಲಕಚ್ಚಿಸಲಾಗಿದೆ. ಹೀಗಾಗಿ ಈ ವಲಯಕ್ಕೆ ಪುನಶ್ಚೇತನ ನೀಡುವ ಮಾತನ್ನು ಬಜೆಟ್ಟಿನಲ್ಲಿ ನಿರೀಕ್ಷಿಸುವುದೂ ಮೂರ್ಖತನವಾದೀತು. ಹಣದುಬ್ಬರ ದರವನ್ನು ತಿರುಚಿ ತಗ್ಗಿಸಿ ಮಂಡಿಸಲಾಗಿದೆ.

ದೇಶದ ಅತಿ ಸಿರಿವಂತರ ಪ್ರಮಾಣ ಶೇ.10. ದೇಶದ ಶೇ.64.6ರಷ್ಟು ಸಂಪತ್ತು ಇವರ ಕೈಯಲ್ಲಿದೆ. ದೇಶವನ್ನು ಕಾಡಿದ ನೋಟು ರದ್ದು, ಕೋವಿಡ್ ಮಹಾ ಸಾಂಕ್ರಾಮಿಕ, ನಿರುದ್ಯೋಗ, ಬಡತನ, ಹಸಿವಿನ ಸಂಕಟಗಳು ಈ ವರ್ಗದ ಸಂಪತ್ತನ್ನು ಇನ್ನಷ್ಟು ಹೆಚ್ಚಿಸಿವೆ. ಭಾರತದ ಕೇವಲ ಹತ್ತು ಮಂದಿ ಅಪಾರ ಧನಿಕರ ಬಳಿ ಇರುವ ಸಂಪತ್ತಿನಿಂದ ದೇಶದ ಎಲ್ಲ ಮಕ್ಕಳ ಶಾಲಾ ಮತ್ತು ಪ್ರೌಢ ಶಿಕ್ಷಣವನ್ನು 25 ವರ್ಷಗಳ ಕಾಲ ನಡೆಸಬಹುದೆಂಬ ಅಂಕಿಅಂಶ ಎರಡು ವಾರಗಳ ಹಿಂದೆ ದಾವೋಸ್‌ನಲ್ಲಿ ಜರುಗಿದ ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯಲ್ಲಿ ಮಂಡಿತವಾದವು. ದೇಶದ ಆರ್ಥಿಕ ಏಣಿಶ್ರೇಣಿಯ ಮೇಲ್ಭಾಗದ ಶೇ.10 ಮಂದಿ ದೇಶದ ಒಟ್ಟು ಸಂಪತ್ತಿನ ಶೇ.45ರಷ್ಟರ ಒಡೆತನ ಹೊಂದಿದ್ದರೆ ಕೆಳಭಾಗದ ಶೇ.50ರಷ್ಟು ಜನಸಂಖ್ಯೆಯು ದೇಶದ ಒಟ್ಟು ಸಂಪತ್ತಿನ ಶೇ.6ರಷ್ಟರಲ್ಲೇ ಒದ್ದಾಡಿದೆ. ಆಕ್ಸ್‌ಫ್ಯಾಮ್ ಇಂಡಿಯಾದ ಈ ಅಂಕಿ ಅಂಶಗಳ ಪ್ರಕಾರ ಈ ಶೇ.10ರಷ್ಟು ಅತಿ ಧನಿಕರ ಮೇಲೆ ವಿಧಿಸಲಾಗುವ ಶೇ.ಒಂದರಷ್ಟು ತೆರಿಗೆ ಕೂಡ 17.7 ಲಕ್ಷ ಹೆಚ್ಚುವರಿ ಆಮ್ಲಜನಕ ಸಿಲಿಂಡರುಗಳನ್ನು ಒದಗಿಸಬಲ್ಲದು. ಹಾಗೆಯೇ ಭಾರತದ 98 ಮಂದಿ ಶತಕೋಟ್ಯಾಧೀಶ ಕುಬೇರರ ಮೇಲೆ ವಿಧಿಸಲಾಗುವ ಶೇ.1ರಷ್ಟು ಸಂಪತ್ತು ತೆರಿಗೆ ಕೂಡ ವಿಶ್ವದ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿರುವ ಆಯುಷ್ಮಾನ್ ಭಾರತವನ್ನು ಏಳು ವರ್ಷಗಳಿಗೂ ಹೆಚ್ಚು ಕಾಲ ಸಾಕಬಲ್ಲದು.

ಆದರೂ ಕೇಂದ್ರ ಸರ್ಕಾರ ಇವರ ಮೇಲೆ ತೆರಿಗೆ ಹೆಚ್ಚಿಸುವ ಮನಸ್ಸು ಮಾಡುವುದಿಲ್ಲ. ಬದಲಿಗೆ ಇಂದು ಮಂಡಿಸಲಾಗಿರುವ ಬಜೆಟ್‌ನಲ್ಲಿ ಈ ಕುಬೇರರ ಸಮೂಹದ ಕಾರ್ಪೊರೇಟ್ ವಲಯದ ಮೇಲೆ ವಿಧಿಸಲಾಗಿರುವ ಕಾರ್ಪೊರೆಟ್ ಸರ್ಚಾರ್ಜ್ ತೆರಿಗೆಯನ್ನು ಶೇ.12ರಿಂದ ಶೇ.ಏಳಕ್ಕೆ ಇಳಿಸಲಾಗಿದೆ! ದಶಕಗಳಿಂದ ಮಾಡಿಟ್ಟಿದ್ದ ರೇಲ್ವೆ, ಬಂದರು, ವಿಮಾನಯಾನ ಸೇರಿದಂತೆ ಸಾರ್ವಜನಿಕ ವಲಯದ ಆಸ್ತಿಪಾಸ್ತಿಗಳನ್ನು ಅಗ್ಗದ ಬೆಲೆಗೆ ಕಾರ್ಪೊರೇಟುಗಳಿಗೆ ಮಾರಾಟ ಮಾಡಲಾಗುತ್ತಿದೆ.

ಇದು ಶೇ.80ರಷ್ಟು ಬಹುಜನ ಭಾರತದ ಅಣಕವಲ್ಲದೆ ಇನ್ನೇನು?

ಮುಕ್ಕಾಲುಪಾಲು ದೇಶವಾಸಿಗಳ ಬದುಕುಗಳು ನೋಟು ರದ್ದು, ಜಿ.ಎಸ್.ಟಿ., ಕೋವಿಡ್‌ನ ಕ್ರೂರ ಆಘಾತದಡಿ ಜರ್ಝರಿತವಾಗಿವೆ. ಆದರೆ ದೇಶದಲ್ಲಿ ಅಮೃತಕಾಲ ನಡೆಯುತ್ತಿದೆ… ಮುಂದಿನ 25 ವರ್ಷಗಳ ಕಾಲವೂ ಹಾಲಿ ಬಜೆಟ್ಟಿನ ದೂರದರ್ಶಿತ್ವ ವಿಸ್ತರಿಸಲಿದೆ ಎಂದು ಅರ್ಥಮಂತ್ರಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ರೊಟ್ಟಿ ಸಿಗದಿದ್ದರೆ ಕೇಕನ್ನು ತಿನ್ನಿ ಎಂದಿದ್ದ ಫ್ರಾನ್ಸಿನ ರಾಜಕುವರಿಯಂತೆ ಥೇಟು.


ಇದನ್ನೂ ಓದಿ: ಬಜೆಟ್‌ 2022-23: ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ವಂಚನೆ; ಖಾಸಗಿ ಪರ ಧೋರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...