Homeಮುಖಪುಟನೊಬೆಲ್ ಸಾಹಿತ್ಯ 2022; ಅಕ್ಷರ ಲೋಕದ ಪುರಾತತ್ವಜ್ಞೆ ಆನಿ ಎರ್ನೊ

ನೊಬೆಲ್ ಸಾಹಿತ್ಯ 2022; ಅಕ್ಷರ ಲೋಕದ ಪುರಾತತ್ವಜ್ಞೆ ಆನಿ ಎರ್ನೊ

- Advertisement -
- Advertisement -

ಎಡುವರ್ಡೋ ಗೆಲಿಯಾನೊ ಲ್ಯಾಟಿನ್ ಅಮೆರಿಕದ ಶ್ರೇಷ್ಠ ಬರಹಗಾರ. ಆತನನ್ನು ಕನ್ನಡಕ್ಕೆ ತಂದು ಪರಿಚಯಿಸಿದ್ದು ಕೆ ಪಿ ಸುರೇಶ್. ಬೆಂಕಿಯ ನೆನಪು ಎಂಬ ಪುಟ್ಟ ಪುಸ್ತಕದ ಇತಿಹಾಸ ಮತ್ತು ಜನರ ಸ್ಮೃತಿಯ ಕುರಿತು ಹೊಸ ಚಿಂತನೆಯ ಕಿಡಿ ಹೊತ್ತಿಸಿತ್ತು.

ನಾಲ್ಕು ದಿನಗಳ ಹಿಂದೆ 2022ರ ನೊಬೆಲ್ ಸಾಹಿತ್ಯ ಪುರಸ್ಕಾರ ಘೋಷಣೆಯಾದಾಗ ನನಗೆ ಗೆಲಿಯಾನೊ ನೆನಪಾದ. ಫ್ರೆಂಚ್ ಕಾದಂಬರಿಕಾರ್ತಿ, ಲೇಖಕಿ ಆನಿ ಎರ್ನೊಗೆ ಈ ಬಾರಿಯ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಘೋಷಿಸುತ್ತಾ, ಸ್ವೀಡಿಷ್ ಅಕಾಡೆಮಿ, ವ್ಯಕ್ತಿಗತ ನೆನಪುಗಳನ್ನು ದಾಖಲಿಸುವ ವಿಶಿಷ್ಟ ಬರವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತ್ತು.

ಹಿಂದೆ ನಡೆದಿದ್ದನ್ನು ನಾವು ನೆನಪಿಸಿಕೊಳ್ಳುತ್ತೇವೆ. ಇತಿಹಾಸದ ಹೆಸರಿನಲ್ಲಿ ದಾಖಲಾಗುವ ಹಲವು ಹಿತಾಸಕ್ತಿಗಳು ಆ ನೆನಪುಗಳ ಹಿಂದಿರುತ್ತವೆ. ಹಾಗಾಗಿ ಆ ಇತಿಹಾಸಕ್ಕೆ ಬಹು ಆಯಾಮಗಳಿರುತ್ತವೆಯೇ ಎಂಬ ಅನುಮಾನ ಎಂದಿಗೂ ಉಳಿದಿರುತ್ತದೆ. ಅದಕ್ಕೆ ಗೆಲಿಯಾನೊ, ಜನರ ಇತಿಹಾಸ ದಾಖಲಾಗಬೇಕೆಂದು ವಾದಿಸಿ, ಅದನ್ನು ’ಮೆಮೊರಿ ಆಫ್ ಫೈರ್’, ’ಮಿರರ್’ ಪುಸ್ತಕಗಳಲ್ಲಿ ಗಟ್ಟಿಯಾಗಿ ಪ್ರತಿಪಾದಿಸಿದ.

ಗೆಲಿಯಾನೊ ಹೇಳಿದ ಆ ಜನರ ಇತಿಹಾಸಕ್ಕೂ, ಆನಿ ಅವರು ತಮ್ಮ ವ್ಯಕ್ತಿಗತ ನೆನಪುಗಳನ್ನು ದಾಖಲಿಸುವುದಕ್ಕೂ ಸಾಮ್ಯತೆ ಇರಬಹುದೆ ಎಂಬ ಕುತೂಹಲ ನನ್ನನ್ನು ಕಾಡಲಾರಂಭಿಸಿತ್ತು. ಏಳು ದಶಕಗಳ ಕಾಲ ಫ್ರಾನ್ಸಿನ ಬದುಕುಗಳನ್ನು ನೋಡುತ್ತಾ, ಅಲ್ಲಿನ ಆಗು ಹೋಗುಗಳನ್ನು ದಾಖಲಿಸಿರುವ ಆನಿ ಸಾಮಾನ್ಯರ ಚರಿತ್ರೆಯನ್ನೇ ದಾಖಲಿಸಿದ್ದಾರೆಂದು ಹೇಳುವುದರಲ್ಲಿ ತಪ್ಪಿಲ್ಲ ಅನ್ನಿಸುತ್ತದೆ. ಅದಕ್ಕೆ ಆಕೆಯನ್ನು ಫ್ರಾನ್ಸಿನ ಸಮುದಾಯಗಳ ಸ್ಮೃತಿಗಳ ರಕ್ಷಕಿ ಎಂದು ಕರೆದಿರುವುದು.

ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಕಾಲಘಟ್ಟದ ಕಥನದಲ್ಲಿ ತಾನಿದ್ದೂ ಇಲ್ಲದಂತೆ ದಾಖಲಿಸುವ ಈ ವಿಶಿಷ್ಟ ಬರವಣಿಗೆಯ ಕುರಿತು ಮಾತನಾಡುತ್ತಾ ಆನಿ, “ಒಂದು ಕಾಲಘಟ್ಟದಲ್ಲಿ ಬದುಕಿನ ಹೆಣ್ಣಿನ ಕಥೆಯನ್ನ ಹೇಳಬೇಕೆಂದುಕೊಂಡಿದ್ದೆ. ಆದರೆ ಅದನ್ನು ಹೇಗೆ ಹೇಳುವುದು ಎಂದು ತಿಳಿದಿರಲಿಲ್ಲ. ಆಕೆಯನ್ನು ಹೊರಗಿಟ್ಟು ಕತೆ ಹೇಳಲು ಹೊರಟಿದ್ದರೆ, ಅದು ಇತಿಹಾಸವಾಗುತ್ತಿತ್ತು. ನಾನು ಬರೆಯುವ ಕಥನದಲ್ಲಿ ಅಂತಃಶಕ್ತಿ ಇರಬೇಕು ಎಂದು ನನಗೆ ಗಟ್ಟಿಯಾಗಿ ಅನ್ನಿಸುತ್ತಿತ್ತು. ನಾನು ಚಿತ್ರಗಳನ್ನು, ವ್ಯಕ್ತಿಗತವಾದ ಮತ್ತು ವ್ಯಕ್ತಿಗತವಲ್ಲದ ನೆನಪುಗಳನ್ನು ಸಂಗ್ರಹಿಸಲಾರಂಭಿಸಿದೆ. ಸಿನಿಮಾ, ಪುಸ್ತಕ, ಭಾವಗೀತೆಗಳು ಎಲ್ಲವನ್ನೂ ಸಂಗ್ರಹಿಸಲಾರಂಭಿಸಿದೆ. ಯಾರದ್ದು ಎಂದು ಹೇಳಲಿಲ್ಲ. ನಾನು ಈ ಜಗತ್ತಿಗೆ ಕಾಲಿಟ್ಟ ಸಂದರ್ಭದಿಂದ ಆರಂಭಿಸಿದೆ. ನನ್ನ ಬಗ್ಗೆ ನಾನು ಬರೆಯುತ್ತಿರಲಿಲ್ಲ. ನಿರೂಪಣೆಗಳ ಮೂಲಕ, ನನ್ನದೇ ಆದ ರೀತಿಯಲ್ಲಿ ತಿಳಿಯುವ ಮೂಲಕ, ನನ್ನದೇ ಆದ ರೀತಿಯಲ್ಲಿ ಜಗತ್ತನ್ನು ಎದುರುಗೊಳ್ಳುವ ಮೂಲಕ ಆದ ಅನುಭವಗಳನ್ನು ದಾಖಲಿಸಲಾರಂಭಿಸಿದೆ. ಒಬ್ಬ ವ್ಯಕ್ತಿಯ ಅನುಭವವಾಗಿರಲಿಲ್ಲ. ಇದು ಜನರ, ಕಾರ್ಮಿಕರ, ಹಳೆಯ ದಿನಗಳ ಇತಿಹಾಸವಾಗಿತ್ತು” ಎಂದು ವಿವರಿಸಿದ್ದರು.

ಆನಿ, ಕಾರ್ಮಿಕ ವರ್ಗದ ಕುಟುಂಬವೊಂದರಲ್ಲಿ ಜನಿಸಿದಾಕೆ. ತಂದೆ ತಾಯಿಯರಿಬ್ಬರು ಕೆಫೆ ಮತ್ತು ತರಕಾರಿ ಅಂಗಡಿ ನಡೆಸುತ್ತಿದ್ದರು. ಇಪ್ಪತ್ತನೆಯ ವಯಸ್ಸಿಗೆ ಲಂಡನ್ನಿಗೆ ಬಂದ ಆನಿ ಸಹಾಯಕಿಯಾಗಿ ಕೆಲಸ ಮಾಡಿದ್ದರು. ಈ ಸಂದರ್ಭದ ಅನುಭವಗಳನ್ನು ತನ್ನ ’ಎ ಗರ್ಲ್ಸ್ ಸ್ಟೋರಿ’ ಕಾದಂಬರಿಯಲ್ಲಿ ವಿವರಿಸಿದ್ದಾರೆ. ಫ್ರಾನ್ಸಿಗೆ ಮರಳಿ ವಿದ್ಯಾಭ್ಯಾಸ ಮುಂದುವರಿಸಿದ ಆನಿ, ಶಿಕ್ಷಕಿಯಾಗಿ ವೃತ್ತಿ ಆರಂಭಿಸಿದ್ದರು. ಓದು ಅಧ್ಯಯನ ಮುಂದುವರಿಸಿ, ನ್ಯಾಷನಲ್ ಸೆಂಟರ್ ಫಾರ್ ಡಿಸ್ಟನ್ಸ್ ಎಜುಕೇಷನ್ ಸೇರಿಕೊಂಡರು. ಇಲ್ಲಿಯೇ ಎರಡೂವರೆ ದಶಕಗಳ ಕಾಲ ಸೇವೆ ಸಲ್ಲಿಸಿದರು.

ಜೀವನದ ಈ ಎಲ್ಲ ಓಡಾಟಗಳ ನಡುವೆ ಬರವಣಿಗೆಯ ಹುಕಿ ಉಸಿರು ತುಂಬಿಕೊಂಡು ಬಂದಿದ್ದ ಆನಿಯವರ 34ನೇ ವಯಸ್ಸಿಗೆ. ಆಗ ಮೊದಲ ಕಾದಂಬರಿಯನ್ನು ಪ್ರಕಟಿಸಿದರು. ಬರವಣಿಗೆಯನ್ನೇ ತನ್ನ ಜೀವನದುದ್ದಕ್ಕೂ ಆರಿಸಿಕೊಳ್ಳಲಿರುವ ದಾರಿಯ ಸೂಚನೆ ಈ ಮೊದಲ ಕೃತಿಯಲ್ಲಿಯೇ ಇತ್ತು. ’ಕ್ಲೀನ್ಡ್ ಔಟ್’ ಹೆಸರಿನ ಈ ಮೊದಲ ಪ್ರಕಟಿತ ಪುಸ್ತಕ ಆತ್ಮಕಥಾ ಶೈಲಿಯ ಕಾದಂಬರಿಯಾಗಿತ್ತು. ನಂತರ ಬಂದ ’ಎ ಮ್ಯಾನ್ಸ್ ಲೈಫ್’ ಫ್ರಾನ್ಸಿನ ಪುಟ್ಟ ಪಟ್ಟಣದಲ್ಲಿ ತಂದೆಯೊಂದಿಗಿನ ಯುವತಿಯೊಬ್ಬಳ ಸಂಬಂಧವನ್ನು ಕಟ್ಟಿಕೊಟ್ಟರು. ಇಲ್ಲೂ ಆತ್ಮಕಥಾನಕ ಅಂಶಗಳೇ ಇದ್ದವು. ಶೈಲಿ ಮತ್ತು ಭಾಷೆಯ ಕಾರಣಕ್ಕೆ ಮೆಚ್ಚುಗೆ ಪಡೆದ ಈ ಕೃತಿ ಆನಿಯ ಸೃಜನಶೀಲ ಪ್ರಯೋಗವನ್ನು ಗಟ್ಟಿಯಾಗಿ ದಾಖಲಿಸಿತು.

ತನ್ನ ಪೋಷಕರ ಸಾಮಾಜಿಕ ಪ್ರಗತಿ, ಹರೆಯದ ದಿನಗಳು, ಮದುವೆ, ಪೂರ್ವ ಯುರೋಪಿನ ವ್ಯಕ್ತಿಯೊಂದಿಗೆ ಸಂಬಂಧ, ಗರ್ಭಪಾತ, ತನ್ನ ತಾಯಿಯ ಸಾವು, ಸ್ತನ ಕ್ಯಾನ್ಸರ್, ಹೀಗೆ ತನ್ನ ಬದುಕಿನ ಘಟ್ಟದ ತೀವ್ರ ಅನುಭವಗಳನ್ನು ಕಥನದ ಮೂಸೆಯಲ್ಲಿ ಕರಗಿಸಿ ಎರಕ ಹೊಯ್ದ ಆನಿ ನೆನಪುಗಳ ದಟ್ಟ ಅನುಭವವನ್ನು, ಬರವಣಿಗೆಯ ಮೂಲಕ ಆ ಕಾಲ, ಸಮಾಜದ ಅನುಭವವನ್ನಾಗಿಸಿ ಜಗತ್ತಿಗೆ ದಾಟಿಸಲಾರಂಭಿಸಿದರು. ಹೀಗೆ ವ್ಯಕ್ತಿಗತ ಅನುಭವಗಳನ್ನು ಬರೆಯುತ್ತಲೇ ದನಿಯಿಲ್ಲದ, ದಾಖಲಾದ ಎಷ್ಟೋ ಕತೆಗಳಿಗೆ ದನಿಯಾದರು.

ಆದರೆ ಹೀಗೆ ತನ್ನ ಬದುಕಿನ ಮೂಲಕ ಲೋಕದ ನೆನಪುಗಳನ್ನು ಹೆಕ್ಕಿ ತೆಗೆದು ದಾಖಲಿಸಿದ ಮೇಲೆ ಅವುಗಳನ್ನೇ ಅನುಮಾನಿಸುವುದು ಆನಿಯ ಇನ್ನೊಂದು ವೈಶಿಷ್ಟ್ಯ. ಇಪ್ಪತ್ತು ಕೃತಿಗಳನ್ನು ನೀಡಿರುವ ಆನಿ ವ್ಯಕ್ತಿಗತವಾದ ಬದುಕನ್ನು ದಾಖಲಿಸುತ್ತಿದ್ದರೂ, ಸಾಮಾಜಿಕ, ರಾಜಕೀಯ ಪರಿಸರವನ್ನು ಕಟ್ಟಿಕೊಟ್ಟಿದ್ದಾರೆ. ಉತ್ಖನನದಲ್ಲಿ ಸಿಕ್ಕುವ ಪ್ರತಿ ವಸ್ತುವು ಐತಿಹಾಸಿಕ ಕಾಲಘಟ್ಟದ ಹೊಸ ಮಗ್ಗಲನ್ನು ಅರಿಯುವಂತೆ ಮಾಡುವ ರೀತಿಯಲ್ಲೇ, ಆನಿಯ ಕಥನಗಳು ಬಿಚ್ಚಿಕೊಳ್ಳುತ್ತವೆ. ಹಾಗಾಗಿ ಆಕೆಯನ್ನು ಅಕ್ಷರ ಲೋಕದ ಪುರಾತತ್ವಶಾಸ್ತ್ರಜ್ಞೆ ಎಂದಿರುವುದು.

ಬರವಣಿಗೆಯ ಮೂಲಕ ಮುಕ್ತಿ ಹೊಂದುವ ಕ್ರಿಯೆ ಅತ್ಯಂತ ಸಂಕೀರ್ಣವಾದದ್ದು ಎನ್ನುವ ಆನಿ, ವ್ಯಕ್ತಿಗತ ಸತ್ಯದ ಹುಡುಕಾಟದ ಬಗ್ಗೆ ಅಪಾರ ಆಸ್ಥೆ, ಕುತೂಹಲದಿಂದ ತೊಡಗಿಸಿಕೊಳ್ಳುತ್ತಾ ಬಂದಿದ್ದಾರೆ. ಅವರ ಒಟ್ಟು ಸೃಜನಶೀಲ ಪಯಣದ ಹಿಂದಿರುವ ಚೈತನ್ಯ, ಸ್ಫೂರ್ತಿ ಈ ಕುತೂಹಲವೇ ಆಗಿದೆ.

ಎಸ್ ಕುಮಾರ್

ಎಸ್ ಕುಮಾರ್
ಸಂಪಾದಕರು ಈದಿನ.ಕಾಂ


ಇದನ್ನೂ ಓದಿ: ಅಲೈನ್ ಆಸ್ಪೆಕ್ಟ್, ಜಾನ್ ಎಫ್. ಕ್ಲೌಸರ್, ಆಂಟನ್ ಝೈಲಿಂಗರ್‌ರವರಿಗೆ 2022ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...