Homeಮುಖಪುಟನೊಬೆಲ್ ಸಾಹಿತ್ಯ 2022; ಅಕ್ಷರ ಲೋಕದ ಪುರಾತತ್ವಜ್ಞೆ ಆನಿ ಎರ್ನೊ

ನೊಬೆಲ್ ಸಾಹಿತ್ಯ 2022; ಅಕ್ಷರ ಲೋಕದ ಪುರಾತತ್ವಜ್ಞೆ ಆನಿ ಎರ್ನೊ

- Advertisement -
- Advertisement -

ಎಡುವರ್ಡೋ ಗೆಲಿಯಾನೊ ಲ್ಯಾಟಿನ್ ಅಮೆರಿಕದ ಶ್ರೇಷ್ಠ ಬರಹಗಾರ. ಆತನನ್ನು ಕನ್ನಡಕ್ಕೆ ತಂದು ಪರಿಚಯಿಸಿದ್ದು ಕೆ ಪಿ ಸುರೇಶ್. ಬೆಂಕಿಯ ನೆನಪು ಎಂಬ ಪುಟ್ಟ ಪುಸ್ತಕದ ಇತಿಹಾಸ ಮತ್ತು ಜನರ ಸ್ಮೃತಿಯ ಕುರಿತು ಹೊಸ ಚಿಂತನೆಯ ಕಿಡಿ ಹೊತ್ತಿಸಿತ್ತು.

ನಾಲ್ಕು ದಿನಗಳ ಹಿಂದೆ 2022ರ ನೊಬೆಲ್ ಸಾಹಿತ್ಯ ಪುರಸ್ಕಾರ ಘೋಷಣೆಯಾದಾಗ ನನಗೆ ಗೆಲಿಯಾನೊ ನೆನಪಾದ. ಫ್ರೆಂಚ್ ಕಾದಂಬರಿಕಾರ್ತಿ, ಲೇಖಕಿ ಆನಿ ಎರ್ನೊಗೆ ಈ ಬಾರಿಯ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಘೋಷಿಸುತ್ತಾ, ಸ್ವೀಡಿಷ್ ಅಕಾಡೆಮಿ, ವ್ಯಕ್ತಿಗತ ನೆನಪುಗಳನ್ನು ದಾಖಲಿಸುವ ವಿಶಿಷ್ಟ ಬರವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತ್ತು.

ಹಿಂದೆ ನಡೆದಿದ್ದನ್ನು ನಾವು ನೆನಪಿಸಿಕೊಳ್ಳುತ್ತೇವೆ. ಇತಿಹಾಸದ ಹೆಸರಿನಲ್ಲಿ ದಾಖಲಾಗುವ ಹಲವು ಹಿತಾಸಕ್ತಿಗಳು ಆ ನೆನಪುಗಳ ಹಿಂದಿರುತ್ತವೆ. ಹಾಗಾಗಿ ಆ ಇತಿಹಾಸಕ್ಕೆ ಬಹು ಆಯಾಮಗಳಿರುತ್ತವೆಯೇ ಎಂಬ ಅನುಮಾನ ಎಂದಿಗೂ ಉಳಿದಿರುತ್ತದೆ. ಅದಕ್ಕೆ ಗೆಲಿಯಾನೊ, ಜನರ ಇತಿಹಾಸ ದಾಖಲಾಗಬೇಕೆಂದು ವಾದಿಸಿ, ಅದನ್ನು ’ಮೆಮೊರಿ ಆಫ್ ಫೈರ್’, ’ಮಿರರ್’ ಪುಸ್ತಕಗಳಲ್ಲಿ ಗಟ್ಟಿಯಾಗಿ ಪ್ರತಿಪಾದಿಸಿದ.

ಗೆಲಿಯಾನೊ ಹೇಳಿದ ಆ ಜನರ ಇತಿಹಾಸಕ್ಕೂ, ಆನಿ ಅವರು ತಮ್ಮ ವ್ಯಕ್ತಿಗತ ನೆನಪುಗಳನ್ನು ದಾಖಲಿಸುವುದಕ್ಕೂ ಸಾಮ್ಯತೆ ಇರಬಹುದೆ ಎಂಬ ಕುತೂಹಲ ನನ್ನನ್ನು ಕಾಡಲಾರಂಭಿಸಿತ್ತು. ಏಳು ದಶಕಗಳ ಕಾಲ ಫ್ರಾನ್ಸಿನ ಬದುಕುಗಳನ್ನು ನೋಡುತ್ತಾ, ಅಲ್ಲಿನ ಆಗು ಹೋಗುಗಳನ್ನು ದಾಖಲಿಸಿರುವ ಆನಿ ಸಾಮಾನ್ಯರ ಚರಿತ್ರೆಯನ್ನೇ ದಾಖಲಿಸಿದ್ದಾರೆಂದು ಹೇಳುವುದರಲ್ಲಿ ತಪ್ಪಿಲ್ಲ ಅನ್ನಿಸುತ್ತದೆ. ಅದಕ್ಕೆ ಆಕೆಯನ್ನು ಫ್ರಾನ್ಸಿನ ಸಮುದಾಯಗಳ ಸ್ಮೃತಿಗಳ ರಕ್ಷಕಿ ಎಂದು ಕರೆದಿರುವುದು.

ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಕಾಲಘಟ್ಟದ ಕಥನದಲ್ಲಿ ತಾನಿದ್ದೂ ಇಲ್ಲದಂತೆ ದಾಖಲಿಸುವ ಈ ವಿಶಿಷ್ಟ ಬರವಣಿಗೆಯ ಕುರಿತು ಮಾತನಾಡುತ್ತಾ ಆನಿ, “ಒಂದು ಕಾಲಘಟ್ಟದಲ್ಲಿ ಬದುಕಿನ ಹೆಣ್ಣಿನ ಕಥೆಯನ್ನ ಹೇಳಬೇಕೆಂದುಕೊಂಡಿದ್ದೆ. ಆದರೆ ಅದನ್ನು ಹೇಗೆ ಹೇಳುವುದು ಎಂದು ತಿಳಿದಿರಲಿಲ್ಲ. ಆಕೆಯನ್ನು ಹೊರಗಿಟ್ಟು ಕತೆ ಹೇಳಲು ಹೊರಟಿದ್ದರೆ, ಅದು ಇತಿಹಾಸವಾಗುತ್ತಿತ್ತು. ನಾನು ಬರೆಯುವ ಕಥನದಲ್ಲಿ ಅಂತಃಶಕ್ತಿ ಇರಬೇಕು ಎಂದು ನನಗೆ ಗಟ್ಟಿಯಾಗಿ ಅನ್ನಿಸುತ್ತಿತ್ತು. ನಾನು ಚಿತ್ರಗಳನ್ನು, ವ್ಯಕ್ತಿಗತವಾದ ಮತ್ತು ವ್ಯಕ್ತಿಗತವಲ್ಲದ ನೆನಪುಗಳನ್ನು ಸಂಗ್ರಹಿಸಲಾರಂಭಿಸಿದೆ. ಸಿನಿಮಾ, ಪುಸ್ತಕ, ಭಾವಗೀತೆಗಳು ಎಲ್ಲವನ್ನೂ ಸಂಗ್ರಹಿಸಲಾರಂಭಿಸಿದೆ. ಯಾರದ್ದು ಎಂದು ಹೇಳಲಿಲ್ಲ. ನಾನು ಈ ಜಗತ್ತಿಗೆ ಕಾಲಿಟ್ಟ ಸಂದರ್ಭದಿಂದ ಆರಂಭಿಸಿದೆ. ನನ್ನ ಬಗ್ಗೆ ನಾನು ಬರೆಯುತ್ತಿರಲಿಲ್ಲ. ನಿರೂಪಣೆಗಳ ಮೂಲಕ, ನನ್ನದೇ ಆದ ರೀತಿಯಲ್ಲಿ ತಿಳಿಯುವ ಮೂಲಕ, ನನ್ನದೇ ಆದ ರೀತಿಯಲ್ಲಿ ಜಗತ್ತನ್ನು ಎದುರುಗೊಳ್ಳುವ ಮೂಲಕ ಆದ ಅನುಭವಗಳನ್ನು ದಾಖಲಿಸಲಾರಂಭಿಸಿದೆ. ಒಬ್ಬ ವ್ಯಕ್ತಿಯ ಅನುಭವವಾಗಿರಲಿಲ್ಲ. ಇದು ಜನರ, ಕಾರ್ಮಿಕರ, ಹಳೆಯ ದಿನಗಳ ಇತಿಹಾಸವಾಗಿತ್ತು” ಎಂದು ವಿವರಿಸಿದ್ದರು.

ಆನಿ, ಕಾರ್ಮಿಕ ವರ್ಗದ ಕುಟುಂಬವೊಂದರಲ್ಲಿ ಜನಿಸಿದಾಕೆ. ತಂದೆ ತಾಯಿಯರಿಬ್ಬರು ಕೆಫೆ ಮತ್ತು ತರಕಾರಿ ಅಂಗಡಿ ನಡೆಸುತ್ತಿದ್ದರು. ಇಪ್ಪತ್ತನೆಯ ವಯಸ್ಸಿಗೆ ಲಂಡನ್ನಿಗೆ ಬಂದ ಆನಿ ಸಹಾಯಕಿಯಾಗಿ ಕೆಲಸ ಮಾಡಿದ್ದರು. ಈ ಸಂದರ್ಭದ ಅನುಭವಗಳನ್ನು ತನ್ನ ’ಎ ಗರ್ಲ್ಸ್ ಸ್ಟೋರಿ’ ಕಾದಂಬರಿಯಲ್ಲಿ ವಿವರಿಸಿದ್ದಾರೆ. ಫ್ರಾನ್ಸಿಗೆ ಮರಳಿ ವಿದ್ಯಾಭ್ಯಾಸ ಮುಂದುವರಿಸಿದ ಆನಿ, ಶಿಕ್ಷಕಿಯಾಗಿ ವೃತ್ತಿ ಆರಂಭಿಸಿದ್ದರು. ಓದು ಅಧ್ಯಯನ ಮುಂದುವರಿಸಿ, ನ್ಯಾಷನಲ್ ಸೆಂಟರ್ ಫಾರ್ ಡಿಸ್ಟನ್ಸ್ ಎಜುಕೇಷನ್ ಸೇರಿಕೊಂಡರು. ಇಲ್ಲಿಯೇ ಎರಡೂವರೆ ದಶಕಗಳ ಕಾಲ ಸೇವೆ ಸಲ್ಲಿಸಿದರು.

ಜೀವನದ ಈ ಎಲ್ಲ ಓಡಾಟಗಳ ನಡುವೆ ಬರವಣಿಗೆಯ ಹುಕಿ ಉಸಿರು ತುಂಬಿಕೊಂಡು ಬಂದಿದ್ದ ಆನಿಯವರ 34ನೇ ವಯಸ್ಸಿಗೆ. ಆಗ ಮೊದಲ ಕಾದಂಬರಿಯನ್ನು ಪ್ರಕಟಿಸಿದರು. ಬರವಣಿಗೆಯನ್ನೇ ತನ್ನ ಜೀವನದುದ್ದಕ್ಕೂ ಆರಿಸಿಕೊಳ್ಳಲಿರುವ ದಾರಿಯ ಸೂಚನೆ ಈ ಮೊದಲ ಕೃತಿಯಲ್ಲಿಯೇ ಇತ್ತು. ’ಕ್ಲೀನ್ಡ್ ಔಟ್’ ಹೆಸರಿನ ಈ ಮೊದಲ ಪ್ರಕಟಿತ ಪುಸ್ತಕ ಆತ್ಮಕಥಾ ಶೈಲಿಯ ಕಾದಂಬರಿಯಾಗಿತ್ತು. ನಂತರ ಬಂದ ’ಎ ಮ್ಯಾನ್ಸ್ ಲೈಫ್’ ಫ್ರಾನ್ಸಿನ ಪುಟ್ಟ ಪಟ್ಟಣದಲ್ಲಿ ತಂದೆಯೊಂದಿಗಿನ ಯುವತಿಯೊಬ್ಬಳ ಸಂಬಂಧವನ್ನು ಕಟ್ಟಿಕೊಟ್ಟರು. ಇಲ್ಲೂ ಆತ್ಮಕಥಾನಕ ಅಂಶಗಳೇ ಇದ್ದವು. ಶೈಲಿ ಮತ್ತು ಭಾಷೆಯ ಕಾರಣಕ್ಕೆ ಮೆಚ್ಚುಗೆ ಪಡೆದ ಈ ಕೃತಿ ಆನಿಯ ಸೃಜನಶೀಲ ಪ್ರಯೋಗವನ್ನು ಗಟ್ಟಿಯಾಗಿ ದಾಖಲಿಸಿತು.

ತನ್ನ ಪೋಷಕರ ಸಾಮಾಜಿಕ ಪ್ರಗತಿ, ಹರೆಯದ ದಿನಗಳು, ಮದುವೆ, ಪೂರ್ವ ಯುರೋಪಿನ ವ್ಯಕ್ತಿಯೊಂದಿಗೆ ಸಂಬಂಧ, ಗರ್ಭಪಾತ, ತನ್ನ ತಾಯಿಯ ಸಾವು, ಸ್ತನ ಕ್ಯಾನ್ಸರ್, ಹೀಗೆ ತನ್ನ ಬದುಕಿನ ಘಟ್ಟದ ತೀವ್ರ ಅನುಭವಗಳನ್ನು ಕಥನದ ಮೂಸೆಯಲ್ಲಿ ಕರಗಿಸಿ ಎರಕ ಹೊಯ್ದ ಆನಿ ನೆನಪುಗಳ ದಟ್ಟ ಅನುಭವವನ್ನು, ಬರವಣಿಗೆಯ ಮೂಲಕ ಆ ಕಾಲ, ಸಮಾಜದ ಅನುಭವವನ್ನಾಗಿಸಿ ಜಗತ್ತಿಗೆ ದಾಟಿಸಲಾರಂಭಿಸಿದರು. ಹೀಗೆ ವ್ಯಕ್ತಿಗತ ಅನುಭವಗಳನ್ನು ಬರೆಯುತ್ತಲೇ ದನಿಯಿಲ್ಲದ, ದಾಖಲಾದ ಎಷ್ಟೋ ಕತೆಗಳಿಗೆ ದನಿಯಾದರು.

ಆದರೆ ಹೀಗೆ ತನ್ನ ಬದುಕಿನ ಮೂಲಕ ಲೋಕದ ನೆನಪುಗಳನ್ನು ಹೆಕ್ಕಿ ತೆಗೆದು ದಾಖಲಿಸಿದ ಮೇಲೆ ಅವುಗಳನ್ನೇ ಅನುಮಾನಿಸುವುದು ಆನಿಯ ಇನ್ನೊಂದು ವೈಶಿಷ್ಟ್ಯ. ಇಪ್ಪತ್ತು ಕೃತಿಗಳನ್ನು ನೀಡಿರುವ ಆನಿ ವ್ಯಕ್ತಿಗತವಾದ ಬದುಕನ್ನು ದಾಖಲಿಸುತ್ತಿದ್ದರೂ, ಸಾಮಾಜಿಕ, ರಾಜಕೀಯ ಪರಿಸರವನ್ನು ಕಟ್ಟಿಕೊಟ್ಟಿದ್ದಾರೆ. ಉತ್ಖನನದಲ್ಲಿ ಸಿಕ್ಕುವ ಪ್ರತಿ ವಸ್ತುವು ಐತಿಹಾಸಿಕ ಕಾಲಘಟ್ಟದ ಹೊಸ ಮಗ್ಗಲನ್ನು ಅರಿಯುವಂತೆ ಮಾಡುವ ರೀತಿಯಲ್ಲೇ, ಆನಿಯ ಕಥನಗಳು ಬಿಚ್ಚಿಕೊಳ್ಳುತ್ತವೆ. ಹಾಗಾಗಿ ಆಕೆಯನ್ನು ಅಕ್ಷರ ಲೋಕದ ಪುರಾತತ್ವಶಾಸ್ತ್ರಜ್ಞೆ ಎಂದಿರುವುದು.

ಬರವಣಿಗೆಯ ಮೂಲಕ ಮುಕ್ತಿ ಹೊಂದುವ ಕ್ರಿಯೆ ಅತ್ಯಂತ ಸಂಕೀರ್ಣವಾದದ್ದು ಎನ್ನುವ ಆನಿ, ವ್ಯಕ್ತಿಗತ ಸತ್ಯದ ಹುಡುಕಾಟದ ಬಗ್ಗೆ ಅಪಾರ ಆಸ್ಥೆ, ಕುತೂಹಲದಿಂದ ತೊಡಗಿಸಿಕೊಳ್ಳುತ್ತಾ ಬಂದಿದ್ದಾರೆ. ಅವರ ಒಟ್ಟು ಸೃಜನಶೀಲ ಪಯಣದ ಹಿಂದಿರುವ ಚೈತನ್ಯ, ಸ್ಫೂರ್ತಿ ಈ ಕುತೂಹಲವೇ ಆಗಿದೆ.

ಎಸ್ ಕುಮಾರ್

ಎಸ್ ಕುಮಾರ್
ಸಂಪಾದಕರು ಈದಿನ.ಕಾಂ


ಇದನ್ನೂ ಓದಿ: ಅಲೈನ್ ಆಸ್ಪೆಕ್ಟ್, ಜಾನ್ ಎಫ್. ಕ್ಲೌಸರ್, ಆಂಟನ್ ಝೈಲಿಂಗರ್‌ರವರಿಗೆ 2022ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...