Homeಮುಖಪುಟಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್...

ಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್ ಕಿಶೋರ್

- Advertisement -
- Advertisement -

ನಾಲ್ಕು ರಾಜ್ಯಗಳಲ್ಲಿನ ಬಿಜೆಪಿ ಪ್ರಚಂಡ ಜಯದಿಂದ ಉಲ್ಲಾಸಿತರಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಯುಪಿ ಫಲಿತಾಂಶ 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, “ರಾಜ್ಯಗಳ ಚುನಾವಣೆಯೇ ಬೇರೆ, ಲೋಕಸಭಾ ಚುನಾವಣೆಯೇ ಬೇರೆ ರೀತಿಯದ್ದು. ಹಾಗಾಗಿ ಮೋದಿಯವರ ಸುಳ್ಳು ನಿರೂಪಣೆಗಳಿಗೆ ಬಲಿಯಾಗದಿರಿ” ಎಂದು ಕಿಡಿಕಾರಿದ್ದಾರೆ.

ಫಲಿತಾಂಶ ಪ್ರಕಟಗೊಂಡ ನಂತರ ನವದೆಹಲಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, “2017 ರ ಉತ್ತರ ಪ್ರದೇಶ ಚುನಾವಣಾ ಫಲಿತಾಂಶ ಪ್ರಕಟವಾದಾಗ ಇದು 2019 ರ ಸಾರ್ವತ್ರಿಕ ಚುನಾವಣೆಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅನೇಕರು ಹೇಳಿದ್ದರು. ಅದೇ ಆಲೋಚನೆ ಈಗ ಕೂಡ ಅನ್ವಯಿಸುತ್ತದೆ ಎಂದು ನಾನು ಹೇಳಬಲ್ಲೆ… 2024 ರ ಸಾರ್ವತ್ರಿಕ ಚುನಾವಣಾ ಫಲಿತಾಂಶವನ್ನು 2022 ಯುಪಿ ಚುನಾವಣೆಯ ಫಲಿತಾಂಶದಲ್ಲಿ ನೋಡಬಹುದು” ಎಂದಿದ್ದರು.

ಮೋದಿಯವರ ಈ ಹೇಳಿಕೆಯನ್ನು ಪ್ರಶಾಂತ್ ಕಿಶೋರ್ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತಕ್ಕಾಗಿನ ಹೋರಾಟ 2024 ರಲ್ಲಿ ನಡೆಯಲಿದೆ ಮತ್ತು ಆಗ ನಿರ್ಧರಿಸಲಾಗುತ್ತದೆಯೆ ಹೊರತು ಯಾವುದೇ ರಾಜ್ಯದ ಚುನಾವಣೆಗಳಲ್ಲಿ ಅಲ್ಲ. ಇದು ಸಾಹೇಬರಿಗೆ (ಮೋದಿ) ಚೆನ್ನಾಗಿ ಗೊತ್ತು. ಆದರೂ ವಿರೋಧ ಪಕ್ಷಗಳ ಮೇಲೆ ನಿರ್ಣಾಯಕ ಮಾನಸಿಕ ಪ್ರಯೋಜನವನ್ನು ಸ್ಥಾಪಿಸಲು ರಾಜ್ಯದ ಫಲಿತಾಂಶಗಳ ಸುತ್ತ ಉನ್ಮಾದವನ್ನು ಸೃಷ್ಟಿಸುವ ಬುದ್ಧಿವಂತ ಪ್ರಯತ್ನವೇ ಆ ಹೇಳಿಕೆಯಾಗಿದೆ. ಇಂತಹ ಸುಳ್ಳು ನಿರೂಪಣೆಗಳಿಗೆ ಬಲಿಯಾಗದಿರಿ” ಎಂದು ಎಚ್ಚರಿಸಿದ್ದಾರೆ.

ಈ ಹೇಳಿಕೆಯ ಮೂಲಕ ಪ್ರಶಾಂತ್ ಕಿಶೋರ್ 2024ರ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುವುದು ಇನ್ನೂ ನಿರ್ಧಾರವಾಗಿಲ್ಲ ಮತ್ತು ಮೋದಿ ಮತ್ತೊಮ್ಮೆ ಗೆಲ್ಲಲು ನಾವು ಬಿಡುವುದಿಲ್ಲ ಎಂಬ ಸಂದೇಶ ಸಾರಿದ್ದಾರೆ. ಸದ್ಯಕ್ಕೆ ಟಿಎಂಸಿ ಮತ್ತು ಎನ್‌ಸಿಪಿ ಪಕ್ಷದ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಪ್ರಶಾಂತ್ ಕಿಶೋರ್ 2024ರಲ್ಲಿ ಮೋದಿ ಮಣಿಸಲು ರಣತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಅತಿ ದೊಡ್ಡ ರಾಜ್ಯವಾಗಿದೆ. 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ ಅಲ್ಲಿನ ಬಹುತೇಕ ಸ್ಥಾನಗಳಲ್ಲಿ ಜಯಗಳಿಸಿದೆ. ಮೋದಿ ಸೇರಿದಂತೆ ಹಲವು ವಿರೋಧ ಪಕ್ಷಗಳು ಆ ರಾಜ್ಯದ ಮೇಲೆ ಕಣ್ಣಿಟ್ಟಿವೆ.

2014ರ ಚುನಾವಣೆಯಲ್ಲಿ ಚಾಯ್ ಪೆ ಚರ್ಚಾ ಕಾರ್ಯಕ್ರಮ, ಅಬ್‌ಕಿ ಬಾರ್ ಮೋದಿ ಸರ್ಕಾರ್ ಘೋಷಣೆ ಸೇರಿದಂತೆ ಪ್ರಶಾಂತ್ ಕಿಶೋರ್ ನರೇಂದ್ರ ಮೋದಿ ಪರವಾಗಿ ಚುನಾವಣಾ ತಂತ್ರಜ್ಞನಾಗಿ ಕೆಲಸ ಮಾಡಿದ್ದರು. ಆ ನಂತರದ ದಿನಗಳಲ್ಲಿ ಮೋದಿ ವಿರುದ್ಧ ಸಿಡಿದೆದ್ದಿರುವ ಅವರು, ಟಿಎಂಸಿ, ಆಪ್, ಡಿಎಂಕೆ ಪರವಾಗಿ ಕೆಲಸ ಮಾಡುತ್ತಾ ವಿರೋಧ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುತ್ತಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸೀಟುಗಳನ್ನು ಕಡಿತಗೊಳಿಸಬಹುದು ಎಂಬುದನ್ನು ತೋರಿಸಿದ್ದೇವೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...