Homeಮುಖಪುಟಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್...

ಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್ ಕಿಶೋರ್

- Advertisement -
- Advertisement -

ನಾಲ್ಕು ರಾಜ್ಯಗಳಲ್ಲಿನ ಬಿಜೆಪಿ ಪ್ರಚಂಡ ಜಯದಿಂದ ಉಲ್ಲಾಸಿತರಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಯುಪಿ ಫಲಿತಾಂಶ 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, “ರಾಜ್ಯಗಳ ಚುನಾವಣೆಯೇ ಬೇರೆ, ಲೋಕಸಭಾ ಚುನಾವಣೆಯೇ ಬೇರೆ ರೀತಿಯದ್ದು. ಹಾಗಾಗಿ ಮೋದಿಯವರ ಸುಳ್ಳು ನಿರೂಪಣೆಗಳಿಗೆ ಬಲಿಯಾಗದಿರಿ” ಎಂದು ಕಿಡಿಕಾರಿದ್ದಾರೆ.

ಫಲಿತಾಂಶ ಪ್ರಕಟಗೊಂಡ ನಂತರ ನವದೆಹಲಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, “2017 ರ ಉತ್ತರ ಪ್ರದೇಶ ಚುನಾವಣಾ ಫಲಿತಾಂಶ ಪ್ರಕಟವಾದಾಗ ಇದು 2019 ರ ಸಾರ್ವತ್ರಿಕ ಚುನಾವಣೆಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅನೇಕರು ಹೇಳಿದ್ದರು. ಅದೇ ಆಲೋಚನೆ ಈಗ ಕೂಡ ಅನ್ವಯಿಸುತ್ತದೆ ಎಂದು ನಾನು ಹೇಳಬಲ್ಲೆ… 2024 ರ ಸಾರ್ವತ್ರಿಕ ಚುನಾವಣಾ ಫಲಿತಾಂಶವನ್ನು 2022 ಯುಪಿ ಚುನಾವಣೆಯ ಫಲಿತಾಂಶದಲ್ಲಿ ನೋಡಬಹುದು” ಎಂದಿದ್ದರು.

ಮೋದಿಯವರ ಈ ಹೇಳಿಕೆಯನ್ನು ಪ್ರಶಾಂತ್ ಕಿಶೋರ್ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತಕ್ಕಾಗಿನ ಹೋರಾಟ 2024 ರಲ್ಲಿ ನಡೆಯಲಿದೆ ಮತ್ತು ಆಗ ನಿರ್ಧರಿಸಲಾಗುತ್ತದೆಯೆ ಹೊರತು ಯಾವುದೇ ರಾಜ್ಯದ ಚುನಾವಣೆಗಳಲ್ಲಿ ಅಲ್ಲ. ಇದು ಸಾಹೇಬರಿಗೆ (ಮೋದಿ) ಚೆನ್ನಾಗಿ ಗೊತ್ತು. ಆದರೂ ವಿರೋಧ ಪಕ್ಷಗಳ ಮೇಲೆ ನಿರ್ಣಾಯಕ ಮಾನಸಿಕ ಪ್ರಯೋಜನವನ್ನು ಸ್ಥಾಪಿಸಲು ರಾಜ್ಯದ ಫಲಿತಾಂಶಗಳ ಸುತ್ತ ಉನ್ಮಾದವನ್ನು ಸೃಷ್ಟಿಸುವ ಬುದ್ಧಿವಂತ ಪ್ರಯತ್ನವೇ ಆ ಹೇಳಿಕೆಯಾಗಿದೆ. ಇಂತಹ ಸುಳ್ಳು ನಿರೂಪಣೆಗಳಿಗೆ ಬಲಿಯಾಗದಿರಿ” ಎಂದು ಎಚ್ಚರಿಸಿದ್ದಾರೆ.

ಈ ಹೇಳಿಕೆಯ ಮೂಲಕ ಪ್ರಶಾಂತ್ ಕಿಶೋರ್ 2024ರ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುವುದು ಇನ್ನೂ ನಿರ್ಧಾರವಾಗಿಲ್ಲ ಮತ್ತು ಮೋದಿ ಮತ್ತೊಮ್ಮೆ ಗೆಲ್ಲಲು ನಾವು ಬಿಡುವುದಿಲ್ಲ ಎಂಬ ಸಂದೇಶ ಸಾರಿದ್ದಾರೆ. ಸದ್ಯಕ್ಕೆ ಟಿಎಂಸಿ ಮತ್ತು ಎನ್‌ಸಿಪಿ ಪಕ್ಷದ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಪ್ರಶಾಂತ್ ಕಿಶೋರ್ 2024ರಲ್ಲಿ ಮೋದಿ ಮಣಿಸಲು ರಣತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಅತಿ ದೊಡ್ಡ ರಾಜ್ಯವಾಗಿದೆ. 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ ಅಲ್ಲಿನ ಬಹುತೇಕ ಸ್ಥಾನಗಳಲ್ಲಿ ಜಯಗಳಿಸಿದೆ. ಮೋದಿ ಸೇರಿದಂತೆ ಹಲವು ವಿರೋಧ ಪಕ್ಷಗಳು ಆ ರಾಜ್ಯದ ಮೇಲೆ ಕಣ್ಣಿಟ್ಟಿವೆ.

2014ರ ಚುನಾವಣೆಯಲ್ಲಿ ಚಾಯ್ ಪೆ ಚರ್ಚಾ ಕಾರ್ಯಕ್ರಮ, ಅಬ್‌ಕಿ ಬಾರ್ ಮೋದಿ ಸರ್ಕಾರ್ ಘೋಷಣೆ ಸೇರಿದಂತೆ ಪ್ರಶಾಂತ್ ಕಿಶೋರ್ ನರೇಂದ್ರ ಮೋದಿ ಪರವಾಗಿ ಚುನಾವಣಾ ತಂತ್ರಜ್ಞನಾಗಿ ಕೆಲಸ ಮಾಡಿದ್ದರು. ಆ ನಂತರದ ದಿನಗಳಲ್ಲಿ ಮೋದಿ ವಿರುದ್ಧ ಸಿಡಿದೆದ್ದಿರುವ ಅವರು, ಟಿಎಂಸಿ, ಆಪ್, ಡಿಎಂಕೆ ಪರವಾಗಿ ಕೆಲಸ ಮಾಡುತ್ತಾ ವಿರೋಧ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುತ್ತಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸೀಟುಗಳನ್ನು ಕಡಿತಗೊಳಿಸಬಹುದು ಎಂಬುದನ್ನು ತೋರಿಸಿದ್ದೇವೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...