Homeಮುಖಪುಟಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್...

ಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್ ಕಿಶೋರ್

- Advertisement -
- Advertisement -

ನಾಲ್ಕು ರಾಜ್ಯಗಳಲ್ಲಿನ ಬಿಜೆಪಿ ಪ್ರಚಂಡ ಜಯದಿಂದ ಉಲ್ಲಾಸಿತರಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಯುಪಿ ಫಲಿತಾಂಶ 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, “ರಾಜ್ಯಗಳ ಚುನಾವಣೆಯೇ ಬೇರೆ, ಲೋಕಸಭಾ ಚುನಾವಣೆಯೇ ಬೇರೆ ರೀತಿಯದ್ದು. ಹಾಗಾಗಿ ಮೋದಿಯವರ ಸುಳ್ಳು ನಿರೂಪಣೆಗಳಿಗೆ ಬಲಿಯಾಗದಿರಿ” ಎಂದು ಕಿಡಿಕಾರಿದ್ದಾರೆ.

ಫಲಿತಾಂಶ ಪ್ರಕಟಗೊಂಡ ನಂತರ ನವದೆಹಲಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, “2017 ರ ಉತ್ತರ ಪ್ರದೇಶ ಚುನಾವಣಾ ಫಲಿತಾಂಶ ಪ್ರಕಟವಾದಾಗ ಇದು 2019 ರ ಸಾರ್ವತ್ರಿಕ ಚುನಾವಣೆಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅನೇಕರು ಹೇಳಿದ್ದರು. ಅದೇ ಆಲೋಚನೆ ಈಗ ಕೂಡ ಅನ್ವಯಿಸುತ್ತದೆ ಎಂದು ನಾನು ಹೇಳಬಲ್ಲೆ… 2024 ರ ಸಾರ್ವತ್ರಿಕ ಚುನಾವಣಾ ಫಲಿತಾಂಶವನ್ನು 2022 ಯುಪಿ ಚುನಾವಣೆಯ ಫಲಿತಾಂಶದಲ್ಲಿ ನೋಡಬಹುದು” ಎಂದಿದ್ದರು.

ಮೋದಿಯವರ ಈ ಹೇಳಿಕೆಯನ್ನು ಪ್ರಶಾಂತ್ ಕಿಶೋರ್ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತಕ್ಕಾಗಿನ ಹೋರಾಟ 2024 ರಲ್ಲಿ ನಡೆಯಲಿದೆ ಮತ್ತು ಆಗ ನಿರ್ಧರಿಸಲಾಗುತ್ತದೆಯೆ ಹೊರತು ಯಾವುದೇ ರಾಜ್ಯದ ಚುನಾವಣೆಗಳಲ್ಲಿ ಅಲ್ಲ. ಇದು ಸಾಹೇಬರಿಗೆ (ಮೋದಿ) ಚೆನ್ನಾಗಿ ಗೊತ್ತು. ಆದರೂ ವಿರೋಧ ಪಕ್ಷಗಳ ಮೇಲೆ ನಿರ್ಣಾಯಕ ಮಾನಸಿಕ ಪ್ರಯೋಜನವನ್ನು ಸ್ಥಾಪಿಸಲು ರಾಜ್ಯದ ಫಲಿತಾಂಶಗಳ ಸುತ್ತ ಉನ್ಮಾದವನ್ನು ಸೃಷ್ಟಿಸುವ ಬುದ್ಧಿವಂತ ಪ್ರಯತ್ನವೇ ಆ ಹೇಳಿಕೆಯಾಗಿದೆ. ಇಂತಹ ಸುಳ್ಳು ನಿರೂಪಣೆಗಳಿಗೆ ಬಲಿಯಾಗದಿರಿ” ಎಂದು ಎಚ್ಚರಿಸಿದ್ದಾರೆ.

ಈ ಹೇಳಿಕೆಯ ಮೂಲಕ ಪ್ರಶಾಂತ್ ಕಿಶೋರ್ 2024ರ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುವುದು ಇನ್ನೂ ನಿರ್ಧಾರವಾಗಿಲ್ಲ ಮತ್ತು ಮೋದಿ ಮತ್ತೊಮ್ಮೆ ಗೆಲ್ಲಲು ನಾವು ಬಿಡುವುದಿಲ್ಲ ಎಂಬ ಸಂದೇಶ ಸಾರಿದ್ದಾರೆ. ಸದ್ಯಕ್ಕೆ ಟಿಎಂಸಿ ಮತ್ತು ಎನ್‌ಸಿಪಿ ಪಕ್ಷದ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಪ್ರಶಾಂತ್ ಕಿಶೋರ್ 2024ರಲ್ಲಿ ಮೋದಿ ಮಣಿಸಲು ರಣತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಅತಿ ದೊಡ್ಡ ರಾಜ್ಯವಾಗಿದೆ. 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ ಅಲ್ಲಿನ ಬಹುತೇಕ ಸ್ಥಾನಗಳಲ್ಲಿ ಜಯಗಳಿಸಿದೆ. ಮೋದಿ ಸೇರಿದಂತೆ ಹಲವು ವಿರೋಧ ಪಕ್ಷಗಳು ಆ ರಾಜ್ಯದ ಮೇಲೆ ಕಣ್ಣಿಟ್ಟಿವೆ.

2014ರ ಚುನಾವಣೆಯಲ್ಲಿ ಚಾಯ್ ಪೆ ಚರ್ಚಾ ಕಾರ್ಯಕ್ರಮ, ಅಬ್‌ಕಿ ಬಾರ್ ಮೋದಿ ಸರ್ಕಾರ್ ಘೋಷಣೆ ಸೇರಿದಂತೆ ಪ್ರಶಾಂತ್ ಕಿಶೋರ್ ನರೇಂದ್ರ ಮೋದಿ ಪರವಾಗಿ ಚುನಾವಣಾ ತಂತ್ರಜ್ಞನಾಗಿ ಕೆಲಸ ಮಾಡಿದ್ದರು. ಆ ನಂತರದ ದಿನಗಳಲ್ಲಿ ಮೋದಿ ವಿರುದ್ಧ ಸಿಡಿದೆದ್ದಿರುವ ಅವರು, ಟಿಎಂಸಿ, ಆಪ್, ಡಿಎಂಕೆ ಪರವಾಗಿ ಕೆಲಸ ಮಾಡುತ್ತಾ ವಿರೋಧ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುತ್ತಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸೀಟುಗಳನ್ನು ಕಡಿತಗೊಳಿಸಬಹುದು ಎಂಬುದನ್ನು ತೋರಿಸಿದ್ದೇವೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...