Homeಕರ್ನಾಟಕ2023-24ರ ಸಾಲಿನ ಬಜೆಟ್: ಭರವಸೆ ಮತ್ತು ಆತಂಕಗಳ ನಡುವಿನ ತೂಗುಯ್ಯಾಲೆ

2023-24ರ ಸಾಲಿನ ಬಜೆಟ್: ಭರವಸೆ ಮತ್ತು ಆತಂಕಗಳ ನಡುವಿನ ತೂಗುಯ್ಯಾಲೆ

- Advertisement -
- Advertisement -

ಕರ್‍ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 14ನೆ ಬಾರಿಗೆ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಅವರು ಮಂಡಿಸಿದ 2023-24ರ ಬಜೆಟ್ ವೆಚ್ಚ 3,27,747 ಕೋಟಿ ಮತ್ತು ಜಮೆ 3,24,478 ಕೋಟಿ ಎಂದು ಅಂದಾಜಿಸಲಾಗಿದೆ. ಒಟ್ಟು ವೆಚ್ಚವು 2,50,933 ಕೋಟಿ; ರೆವಿನ್ಯೂ ವೆಚ್ಚ 54,374 ಕೋಟಿ; ಬಂಡವಾಳ ವೆಚ್ಚ ಮತ್ತು ಸಾಲದ ಮರು ಪಾವತಿ 22,441 ಕೋಟಿಯನ್ನು ಒಳಗೊಂಡಿದೆ. ಜಮೆಯಲ್ಲಿ ರೆವಿನ್ಯೂ ಜಮೆ 2,38,410 ಕೋಟಿ (ಜಿಎಸ್‌ಟಿ ಒಳಗೊಂಡಂತೆ ತೆರಿಗೆ ರೂಪದಲ್ಲಿ 1,75,653 ಕೋಟಿ, ತೆರಿಗೆಯೇತರ ರೆವಿನ್ಯೂಗಳಿಂದ 12,500 ಕೋಟಿ, ಕೇಂದ್ರ ತೆರಿಗೆ ಪಾಲಿನ ರೂಪದಲ್ಲಿ 37,252 ಕೋಟಿ, ಕೇಂದ್ರ ಸಹಾಯಾನುಧಾನ ರೂಪದಲ್ಲಿ 13,005 ಕೋಟಿ), ಸಾಲದ ರೂಪದಲ್ಲಿ 85,818 ಕೋಟಿ, ಋಣೇತರ ಸ್ವೀಕೃತಿ ಮತ್ತು ಸಾಲ ವಸೂಲಿ 228 ಕೋಟಿಯನ್ನು ಒಳಗೊಂಡಿದೆ. ಈ ಬಾರಿ ಪ್ರತಿ ಹಂತದಲ್ಲಿ ಮುಖ್ಯಮಂತ್ರಿಗಳು 2018ರಿಂದ 2023ರ ಅವಧಿಯಲ್ಲಿ, ಹಿಂದಿನ ತಮ್ಮದೇ ಮೈತ್ರಿ ಮತ್ತು ನಂತರದ ಬಿಜೆಪಿ ಸರಕಾರ ಹೇಗೆ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸಿದ್ದರು ಎಂದು ವಿವರಿಸುತ್ತಿದ್ದರು. ಹಿಂದಿನ ಸರಕಾರವು ಬಜೆಟ್‌ನಲ್ಲಿ ಘೋಷಿಸಿ ಆದರೆ ಕಾಮಗಾರಿ ಪೂರ್ಣಗೊಳಿಸದ ಮೊತ್ತ 2,55,102 ಕೋಟಿಯಷ್ಟಿದೆ ಎಂದು ಹೇಳಿದರು ಮತ್ತು ಇಂತಹ ಯೋಜನೆಗಳು ಅವಾಸ್ತವ ಎನ್ನುವ ಅಭಿಪ್ರಾಯವನ್ನೂ ಸಹ ವ್ಯಕ್ತಪಡಿಸಿದರು. ಈ ಬಾರಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಯೋಜನೆಗಳಿಗೆ 800 ಕೋಟಿ ಹಂಚಿಕೆ ಮಾಡಿದ್ದಾರೆ.

ಎಲ್ಲರ ಕೇಂದ್ರಬಿಂದುವಾಗಿದ್ದ 1.3 ಕೋಟಿ ಕುಟುಂಬಗಳಿಗೆ ಸಹಾಯವಾಗಲಿರುವ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ ಅಂದಾಜು ವೆಚ್ಚ 52,000 ಕೋಟಿ ತಗಲುತ್ತದೆ ಎಂದು ಪ್ರಕಟಿಸಿದರು. ಇದಕ್ಕಾಗಿ ತೆರಿಗೆ ಮೂಲಕ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು ಎಂದು ಹೇಳಿದ್ದಾರೆ. ಅದರೆ ಪ್ರತಿ ವರ್ಷವೂ ಬಜೆಟ್‌ನ ಅಂದಾಜಿಗಿಂತಲೂ ಕಡಿಮೆ ಮೊತ್ತದ ತೆರಿಗೆ ಸಂಗ್ರಹವಾಗುತ್ತಿರುವುದು ಮಾತ್ರ ವಾಸ್ತವ. ಆದರೆ ಈ ಬಾರಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಗರಿಷ್ಠ ಪ್ರಮಾಣದಲ್ಲಿ ತೆರಿಗೆ ಸಂಗ್ರಹಿಸಬಲ್ಲರೇ ಎನ್ನುವ ಪ್ರಶ್ನೆಗೆ 2024-25ರ ’ಪರಿಷ್ಕೃತ ಅಂದಾಜಿನಲ್ಲಿ’ (RE) ಉತ್ತರ ಗೋಚರಿಸುತ್ತದೆ. ಅಲ್ಲಿಯವರೆಗೆ ಆಶಾಭಾವನೆಯಿಂದ ಕಾಯಬೇಕು. ಆದರೆ ಒಕ್ಕೂಟ ವ್ಯವಸ್ಥೆಯನ್ನೇ ಧಿಕ್ಕರಿಸುವ ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ಬರಬೇಕಾದ ರಾಜ್ಯದ ಪಾಲಿನ ಜಿಎಸ್‌ಟಿ ಮೊತ್ತವನ್ನು ಹೇಗೆ ಪಡೆದುಕೊಳ್ಳಬಲ್ಲರು ಎನ್ನುವ ಪ್ರಶ್ನೆಗೆ ಬಹುಶಃ ಸಿದ್ದರಾಮಯ್ಯನವರ ಬಳಿಯೂ ಉತ್ತರವಿಲ್ಲ. ಉದಾಹರಣೆಗೆ 2020-21ರ ಬಜೆಟ್‌ನಲ್ಲಿ ಜಿಎಸ್ಟಿ ಪರಿಹಾರ 16,116 ಕೋಟಿ ಎಂದು ಅಂದಾಜಿಸಿದ್ದರು. ಆದರೆ ಕೇಂದ್ರ ನೀಡಿದ್ದು 13,798 ಕೋಟಿ. ಶೇ.14ರಷ್ಟು ಕಡಿತವಾಗಿತ್ತು. ಕೇಂದ್ರದ ಈ ಅನ್ಯಾಯದ ವಿರುದ್ಧ ಸಿದ್ದರಾಮಯ್ಯನವರು ಏಕಾಂಗಿಯಾಗಿ ಸೆಣೆಸಲು ಸಾಧ್ಯವಿಲ್ಲ. ಬಹುಶಃ ವಿರೋಧ ಪಕ್ಷಗಳ ಸರಕಾರಗಳು ಒಕ್ಕೂಟ ರಚಿಸಿಕೊಂಡು ಮೋದಿ ಸರಕಾರದ ಫ್ಯಾಸಿಸಂ ವಿರುದ್ಧ ಜಂಟಿಯಾಗಿ ಆಂದೋಲನ ನಡೆಸಬೇಕು. ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಾದ ಸಂಪನ್ಮೂಲಕ್ಕೆ ಸಂಬಂಧಿಸಿದಂತೆ ಮೇಲಿನ ಈ ಅಂಶಗಳು ಪ್ರಮುಖ ಪಾತ್ರ ವಹಿಸಲಿವೆ.

ಫೆಬ್ರವರಿ 2023ರಲ್ಲಿ ಆಗಿನ ಬೊಮ್ಮಾಯಿ ಸರಕಾರ ಮಂಡಿಸಿದ್ದ ಚುನಾವಣಾ ಬಜೆಟ್‌ನಲ್ಲಿ 77,977 ಕೋಟಿ ಮೊತ್ತದ ಸಾಲದ ಜಮೆಯನ್ನು ಪ್ರಕಟಿಸಿದ್ದರೆ ಸಿದ್ದರಾಮಯ್ಯನವರು ಈ ಬಾರಿ 86,045 ಕೋಟಿ ಮೊತ್ತದ ಸಾಲದ ಜಮೆಯನ್ನು ಪ್ರಕಟಿಸಿದ್ದಾರೆ. ಈ ಬಾರಿಯ ಬಜೆಟ್ ಅನ್ವಯ ರಾಜ್ಯದ ಒಟ್ಟು ಸಾಲ 4,88,827 ಕೋಟಿ. ಇದು ಉತ್ತಮ ಬೆಳವಣಿಗೆಯಲ್ಲ. ಆದರೆ ಒಟ್ಟಾರೆ 13,000 ಕೋಟಿಯಷ್ಟು ಆದಾಯದ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಇದು ಅಂತಹ ಆತಂಕದ ಸಂಗತಿಯಲ್ಲ.

ಈ ಬಾರಿ ಹೆಚ್ಚುವರಿಯಾಗಿ 52,000 ಕೋಟಿ ಗ್ಯಾರಂಟಿ ಯೋಜನೆಗಳ ವೆಚ್ಚವಿದ್ದೂ ಸಹ ಸಿದ್ದರಾಮಯ್ಯನವರ ಬಜೆಟ್ ವೆಚ್ಚ ಮತ್ತು ಫೆಬ್ರವರಿ 2023ರಲ್ಲಿ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ವೆಚ್ಚದ ನಡುವೆ ಅಂದಾಜು 15 ಸಾವಿರ ಕೋಟಿಯ ಅಂತರವಿದೆಯಷ್ಟೆ. ಇದು ಕುತೂಹಲಕಾರಿಯಾಗಿದೆ. ಮತ್ತು ಅಂತಹ ಆತಂಕಗೊಳ್ಳುವ ಅಗತ್ಯವಿಲ್ಲ ಎಂದೂ ಸಹ ಇದು ಹೇಳುತ್ತಿರುವಂತಿದೆ.

ಇನ್ನು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2023ರಲ್ಲಿ ಬೊಮ್ಮಾಯಿ ಸರಕಾರವು 37,960 ಕೋಟಿ ಹಂಚಿಕೆ ಮಾಡಿದ್ದರೆ ಸಿದ್ದರಾಮಯ್ಯನವರು 37,587 ಕೋಟಿ ಹಂಚಿಕೆ ಮಾಡಿದ್ದಾರೆ (ಬಜೆಟ್ ವೆಚ್ಚದ ಶೇ.11ರ ಪ್ರಮಾಣ). ಹಿಂದಿನ ಬಜೆಟ್‌ಗಳಿಗೆ ಹೋಲಿಸಿದರೆ ಈ ಬಾರಿ ಸುಮಾರು 11,000 ಕೋಟಿ ಹೆಚ್ಚಳವಾಗಿದೆ. ಬಜೆಟ್ ವೆಚ್ಚದ ಶೇ.26ರಷ್ಟಿರಬೇಕಾಗಿದ್ದರೂ ಸಹ ಇದು ತಕ್ಕಮಟ್ಟಿಗೆ ಸ್ವಾಗತಾರ್ಹ ಮೊತ್ತವಾಗಿದೆ. ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುವ ಪ್ರಸ್ತಾಪವೂ ಶ್ಲಾಘನೀಯ ನಿರ್ಧಾರ ಎನ್ನಬಹುದಾದರೂ ಸಹ ಪೌಷ್ಟಿಕ ಆಹಾರ ತಜ್ಞರು ಪ್ರತಿ ದಿನ ಮೊಟ್ಟೆ ಕೊಡಬೇಕು ಎಂದು ಹೇಳುತ್ತಾರೆ. ಇದನ್ನು ಸಿದ್ದರಾಮಯ್ಯನವರ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಶೌಚಾಲಯ ನಿರ್ಮಾಣಕ್ಕೆ 200 ಕೋಟಿ ಮತ್ತು ಹೊಸ ತರಗತಿಗಳ ನಿರ್ಮಾಣಕ್ಕೆ 540 ಕೋಟಿ, ಶಿಥಿಲ ಶಾಲಾ ಕಟ್ಟಡಗಳ ದುರಸ್ಥಿಗೆ 100 ಹಂಚಿಕೆ ಮಾಡಿದ್ದಾರೆ. 47,272 ಸರಕಾರಿ ಶಾಲೆಗಳು 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗೆ 153 ಕೋಟಿ ಅನುದಾನ ಕೊಡುವುದಾಗಿ ಹೇಳಿದ್ದಾರೆ. 80 ಕೋಟಿ ವೆಚ್ಚದ ಕಲಿಕಾ ಬಲವರ್ಧನೆ ಕಾರ್ಯಕ್ರಮ ಪ್ರಕಟಿಸಿದ್ದಾರೆ. ಇದೆಲ್ಲವೂ ಜಾರಿಗೊಳ್ಳುತ್ತವೆಯೇ ಎನ್ನುವ ಪ್ರಶ್ನೆಗೆ 2024-25ರ ’ಪರಿಷ್ಕೃತ ಅಂದಾಜಿನ (RE)’ವರೆಗೂ ಕಾಯಬೇಕು. ಅಲ್ಲಿಯವರೆಗೂ ಈ ಅಂಕಿಅಂಶಗಳು ಅಂದಾಜು ಪೂರ್ವ (BE) ಬಜೆಟ್ ಮಾತ್ರವಾಗಿರುತ್ತದೆ. ಪ್ರತಿ ಬಾರಿಯೂ ಸದ್ದು ಮಾಡುತ್ತಿದ್ದ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳ ಕುರಿತು ಈ ಬಾರಿ ಪ್ರಸ್ತಾಪವಿಲ್ಲ. ಈಗಿರುವ 276 ಕೆಪಿಎಸ್ ಶಾಲೆಗಳ ಸ್ಥಿತಿಗತಿಯೇನು? ಅವುಗಳ ಭವಿಷ್ಯವೇನು? ಈ ಕುರಿತು ಈ ಬಜೆಟ್‌ನಲ್ಲಿ ಯಾವುದೇ ಪ್ರಕಟಣೆಯಿಲ್ಲ. ಶಾಲಾ ಶಿಕ್ಷಣದಲ್ಲಿ ಎನ್‌ಇಪಿ ಜಾರಿಗೊಳಿಸಲು ಹಿಂದಿನ ಬಿಜೆಪಿ ಸರಕಾರವು ಮದನ್‌ಗೋಪಾಲ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಎನ್‌ಇಪಿಯನ್ನು ರದ್ದುಗೊಳಿಸುತ್ತೇವೆ ಎಂದು ಬಜೆಟ್‌ನಲ್ಲಿ ಘೋಷಿಸಿರುವ ಮುಖ್ಯಮಂತ್ರಿಗಳು ಈ ಸಮಿತಿಯನ್ನು ಸಹ ರದ್ದುಗೊಳಿಸಬೇಕಾಗುತ್ತದೆ. ಆದರೆ ಇದರ ಕುರಿತು ಎಲ್ಲಿಯೂ ಪ್ರಸ್ತಾಪವಿಲ್ಲ. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನಿಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಬೊಮ್ಮಾಯಿ ಸರಕಾರ ಸ್ಥಗಿತಗೊಳಿಸಿತ್ತು. ಆದರೆ ಈ ಬಾರಿ ಅದನ್ನು ಮುಂದುವರೆಸಲು 60 ಕೋಟಿ ಹಂಚಿಕೆ ಮಾಡಿದ್ದಾರೆ. ಇದು ಸಕಾರಾತ್ಮಕ ಕ್ರಮ.

ಇದನ್ನೂ ಓದಿ: ಗಿಗ್ ದುಡಿಮೆಗಾರರಿಗೆ ವಿಮೆ ಸ್ವಾಗತಾರ್ಹ; ಶೋಷಣೆ ತಡೆಗಟ್ಟುವ ಕ್ರಮಗಳು ಯಾವಾಗ?

ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಶೇಷ ಯೋಜನೆಗಳನ್ನು ಪ್ರಕಟಿಸಲಿಲ್ಲ. ಅಲ್ಪಸಂಖ್ಯಾತ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಪಡಿಯಲು ಸಹಾಯಕವಾಗುವಂತೆ 8 ಕೋಟಿ ಹಂಚಿಕೆ ಮಾಡಿದ್ದಾರೆ. ಇದು ಒಳ್ಳೆಯದೇ.

ಹಿಂದಿನ ಬಿಜೆಪಿ ಸರಕಾರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಹೆಚ್ಚಿಸಿ ಕರಾಳ ಕಾರ್ಖಾನೆ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿತು. ಮತ್ತು ಅಲ್ಲಿ ಇತರ ಅನೇಕ ಕಾರ್ಮಿಕ ವಿರೋಧಿ ನೀತಿಗಳಿದ್ದವು. ಈ ಕಾಯ್ದೆಯನ್ನು ರದ್ದುಪಡಿಸುವುದರ ಕುರಿತು ಪ್ರಸ್ತಾಪವಿಲ್ಲದಿರುವುದು, ಕನಿಷ್ಠ ವೇತನದ ಕುರಿತಾಗಿ ದೃಢ ನಿರ್ಧಾರ ಪ್ರಕಟಿಸದಿರುವುದು ನಿರಾಸೆ ಮೂಡಿಸುತ್ತದೆ.

ಪೌರ ಕಾರ್ಮಿಕರು, ಸ್ವಚ್ಛ ಕಾರ್ಮಿಕರು, manual scavengers ಕುರಿತು ಯಾವುದೇ ಪ್ರಸ್ತಾಪವಿಲ್ಲದಿರುವುದು, ಇವರಿಗೆ ಪರ್ಯಾಯ ಉದ್ಯೋಗ ಸೃಷ್ಟಿಯ ಕುರಿತಾದ ಯಾವುದೇ ಯೋಜನೆಗಳನ್ನು ರೂಪಿಸದಿರುವುದು ನಿರಾಸೆ ಮೂಡಿಸುತ್ತದೆ. ಇದು ಸಣ್ಣಪುಟ್ಟ ಲೋಪವಂತೂ ಅಲ್ಲ.

ರಾಜ್ಯದಲ್ಲಿ ಖಾಲಿಯಿರುವ 2.4 ಲಕ್ಷ ಹುದ್ದೆಗಳ ನೇಮಕಾತಿ ಕುರಿತಂತೆ ಈ ಬಾರಿ ಯಾವುದೇ ವಿಶೇಷ ಪ್ರಸ್ತಾಪವಿಲ್ಲ. ಈ ಹುದ್ದೆಗಳಿಗೆ ಇಲಾಖಾವಾರು ಹಂತಹಂತವಾಗಿ ನೇಮಕಾತಿ ಮಾಡಿಕೊಳ್ಳುವರೇ? ಅದರ ನೀಲನಕ್ಷೆಯೇನು? ಇದಕ್ಕಾಗಿ ಬಜೆಟ್‌ನಲ್ಲಿ ಮೀಸಲಿಟ್ಟ ಮೊತ್ತವೇನು? ಇದೆಲ್ಲವೂ ಉತ್ತರವಿಲ್ಲದ ಪ್ರಶ್ನೆಗಳಾಗಿ ಉಳಿದುಕೊಂಡಿವೆ. ಯುವಕರ ಭವಿಷ್ಯದ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪ ಮಾಡದಿರುವುದು ಉತ್ತಮ ಬೆಳವಣಿಗೆಯಲ್ಲ. ಈಗಾಗಲೇ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡು ಕೇವಲ ನೇಮಕಾತಿ ಆದೇಶ ಬಾಕಿಯಿರುವ 15000 ಶಾಲಾ ಶಿಕ್ಷಕರ ನೇಮಕಾತಿ ಕುರಿತು ಯಾವುದೇ ಪ್ರಸ್ತಾಪವಿಲ್ಲ. ಅದೇ ರೀತಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶದ ಕುರಿತು ಸಹ ಎಲ್ಲಿಯೂ ಪ್ರಸ್ತಾಪವಿಲ್ಲ. ಇದು ಜನಪರ ಕಾಳಜಿಯುಳ್ಳ ಎಂದು ಬಣ್ಣಿಸಲ್ಪಡುತ್ತಿರುವ ಈ ಬಜೆಟ್‌ನ ಮಿತಿಯಾಗಿದೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಬರುವ ಆದರೆ ಅದರ ಆಶಯಕ್ಕೆ ಪ್ರತಿಕ್ರಾಂತಿಯಂತಿರುವ ಸೆಕ್ಷನ್ 7ಡಿಯನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿರುವುದು ಸ್ವಾಗತಾರ್ಹ. ಆದರೆ ಇದು ಕೂಡಲೆ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು. ಮತ್ತು ಇದರಿಂದ ಉಳಿತಾಯವಾಗುವ ಹಣವನ್ನು ದಲಿತ ಸಮುದಾಯದ ಮಕ್ಕಳ ಶಿಕ್ಷಣ, ಪೌಷ್ಟಿಕಾಂಶಕ್ಕೆ ವಿನಿಯೋಗಿಸಬೇಕು.

ಒಟ್ಟಾರೆಯಾಗಿ ವಂಚಿತರ ಪರವಾದ ಕಾಳಜಿ ಈ ಬಜೆಟ್‌ನಲ್ಲಿ ವ್ಯಕ್ತವಾಗಿದೆ. ಸರ್ವರಿಗೂ ಸಮಬಾಳು ಎನ್ನುವ ನೀತಿಯ ಕುರಿತು ಬದ್ಧತೆಯೂ ಕಂಡು ಬರುತ್ತದೆ. ಆದರೆ ಮೇಲೆ ವಿವರಿಸಿದ ಮಿತಿಗಳು ಸಹ ಬಿಡದೆ ಕಾಡುತ್ತದೆ.

ಬಿ. ಶ್ರೀಪಾದ ಭಟ್

ಬಿ. ಶ್ರೀಪಾದ ಭಟ್
ವೃತ್ತಿಯಲ್ಲಿ ಇಂಜಿನಿಯರ್ ಆದ ಬಿ.ಶ್ರೀಪಾದ್ ಭಟ್ ಹಿರಿಯ ಚಿಂತಕ, ಬರಹಗಾರ. ಹಲವು ಸಾಮಾಜಿಕ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಮಾಜದ ಆಗುಹೋಗುಗಳಿಗೆ ನಿರಂತರ ಸ್ಪಂದಿಸುವ ಇವರು ಸಮಾನ ಶಿಕ್ಷಣಕ್ಕಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...