Homeಮುಖಪುಟದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಕೃಷಿ ಕ್ಷೇತ್ರದ ಪ್ರಮುಖ ಅಂಕಿ-ಅಂಶಗಳು ಇಲ್ಲಿವೆ.

- Advertisement -
- Advertisement -

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಕೃಷಿ ಕ್ಷೇತ್ರದ ಪ್ರಮುಖ ಅಂಕಿ-ಅಂಶಗಳು ಈ ಕೆಳಗಿನಂತಿವೆ.

  • ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂಗಳಿಂದ 5 ಲಕ್ಷ ರೂಗಳಿಗೆ ಹೆಚ್ಚಿಸಲಾಗಿದೆ.
  • ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂಗಳ ಹೆಚ್ಚುವರಿ ಸಹಾಯ ಧನ ನೀಡಲಾಗುವುದು.
  • ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ ವೆಚ್ಚ ಮಾಡಲಾಗಿದೆ.
  • ನೀರಾವರಿ ಪಂಪ್‌ಸೆಟ್‌ಗಳಿಗೆ 52,590 ಕೋಟಿ ರೂ ವಿದ್ಯುತ್‌ ಸಹಾಯ ಧನ ನೀಡಲಾಗಿದೆ.
  • ಫಸಲ್ ಬಿಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ 4,900 ಕೋಟಿ ರೂ ಪ್ರೀಮಿಯಂ ಪಾವತಿಸಲಾಗಿದೆ.
  • ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ, ರಾಗಿ, ಜೋಳ, ಹೆಸರು ಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ 6,650 ಕೋಟಿ ರೂ ಒದಗಿಸಲಾಗಿದೆ.
  • ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ ವೆಚ್ಚದಲ್ಲಿ ಜೀವನ್‌ ಜ್ಯೋತಿ ವಿಮಾ ಯೋಜನೆಯಡಿ ಭದ್ರತೆ ನೀಡಲಾಗುವುದು.
  • ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ ನೀಡಲಾಗಿದೆ.
  • ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ 5,245 ಕೋಟಿ ರೂ ವೆಚ್ಚ ಮಾಡಲಾಗಿದೆ.
  • ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ 10.32 ಲಕ್ಷ ವಿದ್ಯಾರ್ಥಿಗಳಿಗೆ 125 ಕೋಟಿ ರೂ ನೀಡಲಾಗಿದೆ.
  • ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ ₹ 2,900 ಕೋಟಿಗೆ ಮಾರುಕಟ್ಟೆ ನೆರವು ನೀಡಲಾಗಿದೆ.

ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಇದು ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಬಜೆಟ್ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, “ಈ ಬಜೆಟ್‌ನಲ್ಲಿ ಯಾವುದೇ ತಿರುಳು ಇಲ್ಲ. ಏಕೆಂದರೆ ರೈತರ ಆದಾಯ ಹೆಚ್ಚಿಸುವ ಯಾವುದೇ ಕಾರ್ಯಗಳಿಲ್ಲ, ಕೃಷಿ ಉತ್ಪನ್ನಗಳ ಖರೀದಿಗೆ ಆವರ್ತ ನಿಧಿ ಮೀಸಲಿಟ್ಟಿಲ್ಲ” ಎಂದರು.

ಶೂನ್ಯ ಬಡ್ಡಿತರದ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹ. ಆದರೆ ಸ್ಕೇಲ್ ಬೆಳೆ ಸಾಲದ ಆಫ್ ಫೈನಾನ್ಸ್ ಅದನ್ನು ಹೆಚ್ಚಿಸದೇ ಇದ್ದರೆ ಕರ್ನಾಟಕದಲ್ಲಿರುವ 87% ಸಣ್ಣ ಇಳುವಳಿದಾರರಿಗೆ ಇದು ಉಪಯೋಗವಾಗುವುದಿಲ್ಲ ಎಂದರು.

ಒಟ್ಟು ಬಜೆಟ್ 3.07 ಲಕ್ಷ ಕೋಟಿಯಲ್ಲಿ ನೀರಾವರಿ ಬಾಬ್ತಿಗೆ ಕೇವಲ 6.5% ಅನ್ನು ಮೀಸಲಿಡಲಾಗಿದೆ. ಪಕ್ಕದ ಆಂಧ್ರ ಮತ್ತು ತೆಲಂಗಾಣ ರಾಜ್ಯದಗಳು 14-15% ವರೆಗೆ ಬಜೆಟ್ ಹಣ ಮೀಸಲಿಡುತ್ತಿವೆ. ಕೃಷಿ- ತೋಟಗಾರಿಕೆಗೆ ಕೇವಲ 11% ಮೀಸಲಿಡಲಾಗಿದೆ. ಈ ಅಂಕಿ ಅಂಶಗಳು ಕೃಷಿಕರ ಪರವಾಗಿಲ್ಲ ಎಂಬುದನ್ನು ಸೂಚಿಸುತ್ತವೆ. ಕೃಷಿಕರು ಸಾಲದ ಹೊರೆಯಿಂದ ಹೊರಬರಲು ಯಾವುದೇ ಕ್ರಮಗಳು ಈ ಬಜೆಟ್‌ನಲ್ಲಿ ಪ್ರಸ್ತಾಪ ಇಲ್ಲ ಎಂದರು.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...