Homeಮುಖಪುಟದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಕೃಷಿ ಕ್ಷೇತ್ರದ ಪ್ರಮುಖ ಅಂಕಿ-ಅಂಶಗಳು ಇಲ್ಲಿವೆ.

- Advertisement -
- Advertisement -

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಕೃಷಿ ಕ್ಷೇತ್ರದ ಪ್ರಮುಖ ಅಂಕಿ-ಅಂಶಗಳು ಈ ಕೆಳಗಿನಂತಿವೆ.

  • ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂಗಳಿಂದ 5 ಲಕ್ಷ ರೂಗಳಿಗೆ ಹೆಚ್ಚಿಸಲಾಗಿದೆ.
  • ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂಗಳ ಹೆಚ್ಚುವರಿ ಸಹಾಯ ಧನ ನೀಡಲಾಗುವುದು.
  • ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ ವೆಚ್ಚ ಮಾಡಲಾಗಿದೆ.
  • ನೀರಾವರಿ ಪಂಪ್‌ಸೆಟ್‌ಗಳಿಗೆ 52,590 ಕೋಟಿ ರೂ ವಿದ್ಯುತ್‌ ಸಹಾಯ ಧನ ನೀಡಲಾಗಿದೆ.
  • ಫಸಲ್ ಬಿಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ 4,900 ಕೋಟಿ ರೂ ಪ್ರೀಮಿಯಂ ಪಾವತಿಸಲಾಗಿದೆ.
  • ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ, ರಾಗಿ, ಜೋಳ, ಹೆಸರು ಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ 6,650 ಕೋಟಿ ರೂ ಒದಗಿಸಲಾಗಿದೆ.
  • ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ ವೆಚ್ಚದಲ್ಲಿ ಜೀವನ್‌ ಜ್ಯೋತಿ ವಿಮಾ ಯೋಜನೆಯಡಿ ಭದ್ರತೆ ನೀಡಲಾಗುವುದು.
  • ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ ನೀಡಲಾಗಿದೆ.
  • ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ 5,245 ಕೋಟಿ ರೂ ವೆಚ್ಚ ಮಾಡಲಾಗಿದೆ.
  • ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ 10.32 ಲಕ್ಷ ವಿದ್ಯಾರ್ಥಿಗಳಿಗೆ 125 ಕೋಟಿ ರೂ ನೀಡಲಾಗಿದೆ.
  • ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ ₹ 2,900 ಕೋಟಿಗೆ ಮಾರುಕಟ್ಟೆ ನೆರವು ನೀಡಲಾಗಿದೆ.

ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಇದು ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಬಜೆಟ್ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, “ಈ ಬಜೆಟ್‌ನಲ್ಲಿ ಯಾವುದೇ ತಿರುಳು ಇಲ್ಲ. ಏಕೆಂದರೆ ರೈತರ ಆದಾಯ ಹೆಚ್ಚಿಸುವ ಯಾವುದೇ ಕಾರ್ಯಗಳಿಲ್ಲ, ಕೃಷಿ ಉತ್ಪನ್ನಗಳ ಖರೀದಿಗೆ ಆವರ್ತ ನಿಧಿ ಮೀಸಲಿಟ್ಟಿಲ್ಲ” ಎಂದರು.

ಶೂನ್ಯ ಬಡ್ಡಿತರದ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹ. ಆದರೆ ಸ್ಕೇಲ್ ಬೆಳೆ ಸಾಲದ ಆಫ್ ಫೈನಾನ್ಸ್ ಅದನ್ನು ಹೆಚ್ಚಿಸದೇ ಇದ್ದರೆ ಕರ್ನಾಟಕದಲ್ಲಿರುವ 87% ಸಣ್ಣ ಇಳುವಳಿದಾರರಿಗೆ ಇದು ಉಪಯೋಗವಾಗುವುದಿಲ್ಲ ಎಂದರು.

ಒಟ್ಟು ಬಜೆಟ್ 3.07 ಲಕ್ಷ ಕೋಟಿಯಲ್ಲಿ ನೀರಾವರಿ ಬಾಬ್ತಿಗೆ ಕೇವಲ 6.5% ಅನ್ನು ಮೀಸಲಿಡಲಾಗಿದೆ. ಪಕ್ಕದ ಆಂಧ್ರ ಮತ್ತು ತೆಲಂಗಾಣ ರಾಜ್ಯದಗಳು 14-15% ವರೆಗೆ ಬಜೆಟ್ ಹಣ ಮೀಸಲಿಡುತ್ತಿವೆ. ಕೃಷಿ- ತೋಟಗಾರಿಕೆಗೆ ಕೇವಲ 11% ಮೀಸಲಿಡಲಾಗಿದೆ. ಈ ಅಂಕಿ ಅಂಶಗಳು ಕೃಷಿಕರ ಪರವಾಗಿಲ್ಲ ಎಂಬುದನ್ನು ಸೂಚಿಸುತ್ತವೆ. ಕೃಷಿಕರು ಸಾಲದ ಹೊರೆಯಿಂದ ಹೊರಬರಲು ಯಾವುದೇ ಕ್ರಮಗಳು ಈ ಬಜೆಟ್‌ನಲ್ಲಿ ಪ್ರಸ್ತಾಪ ಇಲ್ಲ ಎಂದರು.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...