Homeಮುಖಪುಟಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ - ಭಾರತದ ವರ್ಚಸ್ಸಿಗೆ ಧಕ್ಕೆ ಎಂದ...

ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ

ಜುಕರ್‌ಬರ್ಗ್ ಸಂಸತ್ತಿನಲ್ಲಿ ಕ್ಷಮೆ ಕೇಳಲು ಸಮ್ಸನ್ಸ್ ಜಾರಿಗೆ ಸಿದ್ದತೆ ಎಂದ ಆಡಳಿರೂಢ ಪಕ್ಷ

- Advertisement -
- Advertisement -

ಲೋಕಸಭೆ 2024ರ ಚುನಾವಣೆಯಲ್ಲಿ ಭಾರತದ ಆಡಳಿತ ಪಕ್ಷವು ಸೋತಿದೆ ಎಂದು ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದು ಇದೀಗ ವಿವಾದಕ್ಕೆ ಕಾರಣಗವಾಗಿದೆ. ಬಿಜೆಪಿ ಈ ಹೇಳಿಕೆಯನ್ನು ಭಾರತದ ವರ್ಚಸ್ಸಿಗೆ ಕಳಂಕ ಎಂದು ಪ್ರತಿಪಾದಿಸಿದ್ದು, ಹಾಗಾಗಿ ಈ ಬಗ್ಗೆ ಕ್ಷಮೆಯಾಚಿಸುವಂತೆ ಮೆಟಾಗೆ ಸಮನ್ಸ್‌ ಜಾರಿ ಮಾಡುವುದಾಗಿ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸತ್ತಿನ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಂಗಳವಾರ ಹೇಳಿದ್ದಾರೆ. ಲೋಕಸಭೆ 2024ರ ಚುನಾವಣೆ

“ಈ ತಪ್ಪು ಮಾಹಿತಿಗಾಗಿ ಸಮಿತಿಯು ಮೆಟಾಗೆ ಸಮನ್ಸ್ ಜಾರಿ ಮಾಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರವೊಂದರ ಬಗ್ಗೆ ತಪ್ಪಾದ ಮಾಹಿತಿ ನೀಡುವುದು ಅದರ ವರ್ಚಸ್ಸಿಗೆ ಕಳಂಕ ತರುತ್ತದೆ. ಈ ತಪ್ಪಿಗಾಗಿ ಈ ಸಂಸ್ಥೆ ಭಾರತೀಯ ಸಂಸತ್ತಿನಲ್ಲಿ ಮತ್ತು ಇಲ್ಲಿನ ಜನರಲ್ಲಿ ಕ್ಷಮೆಯಾಚಿಸಬೇಕು” ಎಂದು ದುಬೆ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದ ಸಮಸ್ಯೆಗಳಿಂದಾಗಿ ಭಾರತದಲ್ಲಿ ಹಾಲಿ ಸರ್ಕಾರ 2024 ರಲ್ಲಿ ನಡೆದ ಚುನಾವಣೆಯಲ್ಲಿ ಸೋತಿದೆ ಎಂದು ಮೆಟಾ ಸಮೂಹದ ಕಂಪನಿಗಳಲ್ಲಿ ನಿಯಂತ್ರಣ ಪಾಲನ್ನು ಹೊಂದಿರುವ ಫೇಸ್‌ಬುಕ್ ಸಹ-ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದರು. ಅವರ ಹೇಳಿಕೆಯು “ವಾಸ್ತವಿಕವಾಗಿ ತಪ್ಪಾಗಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿ ಬಂದಿರುವುದು ನಿರಾಶಾದಾಯಕವಾಗಿದೆ. ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದು ಅಶ್ವಿನಿ ವೈಷ್ಣವ್ ಅವರು ಎಕ್ಸ್‌ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೆಟಾವನ್ನು ಟ್ಯಾಗ್ ಮಾಡಿದ್ದಾರೆ. ಲೋಕಸಭೆ 2024ರ ಚುನಾವಣೆ

“ಕೊರೊನಾ ಸಮಯದಲ್ಲಿ 800 ಮಿಲಿಯನ್‌ ಜನರಿಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ವಿಶ್ವಾದ್ಯಂತ ರಾಷ್ಟ್ರಗಳಿಗೆ ನೆರವು ನೀಡುವುದರಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ 3 ನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಜೋ ರೋಗನ್ ಪಾಡ್‌ಕ್ಯಾಸ್ಟ್‌ನಲ್ಲಿ ಕಾಣಿಸಿಕೊಂಡ ಜುಕರ್‌ಬರ್ಗ್, 2024 ಪ್ರಪಂಚದಾದ್ಯಂತ ದೊಡ್ಡ ಚುನಾವಣಾ ವರ್ಷವಾಗಿತ್ತು. ಈ ವರ್ಷದಲ್ಲಿ ಭಾರತದಂತಹ ಹಲವು ದೇಶಗಳಲ್ಲಿ, ಅಧಿಕಾರದಲ್ಲಿರುವವರು ಮತದಾನದಲ್ಲಿ ಸೋತರು ಎಂದು ಹೇಳಿದ್ದರು.

2024 ರ ಚುನಾವಣೆಯಲ್ಲಿ ಬಿಜೆಪಿ ತನ್ನ ಬಹುಮತವನ್ನು ಕಳೆದುಕೊಂಡಿತ್ತು. ಆದರೆ, ಪಕ್ಷದ ನೇತೃತ್ವದ ಆಡಳಿತ ಮೈತ್ರಿಕೂಟವು ಆರಾಮದಾಯಕ ಬಹುಮತವನ್ನು ಗಳಿಸಿತ್ತು.ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.

ಇದನ್ನೂಓದಿ:  ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...