Homeಮುಖಪುಟಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ - ಭಾರತದ ವರ್ಚಸ್ಸಿಗೆ ಧಕ್ಕೆ ಎಂದ...

ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ

ಜುಕರ್‌ಬರ್ಗ್ ಸಂಸತ್ತಿನಲ್ಲಿ ಕ್ಷಮೆ ಕೇಳಲು ಸಮ್ಸನ್ಸ್ ಜಾರಿಗೆ ಸಿದ್ದತೆ ಎಂದ ಆಡಳಿರೂಢ ಪಕ್ಷ

- Advertisement -
- Advertisement -

ಲೋಕಸಭೆ 2024ರ ಚುನಾವಣೆಯಲ್ಲಿ ಭಾರತದ ಆಡಳಿತ ಪಕ್ಷವು ಸೋತಿದೆ ಎಂದು ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದು ಇದೀಗ ವಿವಾದಕ್ಕೆ ಕಾರಣಗವಾಗಿದೆ. ಬಿಜೆಪಿ ಈ ಹೇಳಿಕೆಯನ್ನು ಭಾರತದ ವರ್ಚಸ್ಸಿಗೆ ಕಳಂಕ ಎಂದು ಪ್ರತಿಪಾದಿಸಿದ್ದು, ಹಾಗಾಗಿ ಈ ಬಗ್ಗೆ ಕ್ಷಮೆಯಾಚಿಸುವಂತೆ ಮೆಟಾಗೆ ಸಮನ್ಸ್‌ ಜಾರಿ ಮಾಡುವುದಾಗಿ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸತ್ತಿನ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಂಗಳವಾರ ಹೇಳಿದ್ದಾರೆ. ಲೋಕಸಭೆ 2024ರ ಚುನಾವಣೆ

“ಈ ತಪ್ಪು ಮಾಹಿತಿಗಾಗಿ ಸಮಿತಿಯು ಮೆಟಾಗೆ ಸಮನ್ಸ್ ಜಾರಿ ಮಾಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರವೊಂದರ ಬಗ್ಗೆ ತಪ್ಪಾದ ಮಾಹಿತಿ ನೀಡುವುದು ಅದರ ವರ್ಚಸ್ಸಿಗೆ ಕಳಂಕ ತರುತ್ತದೆ. ಈ ತಪ್ಪಿಗಾಗಿ ಈ ಸಂಸ್ಥೆ ಭಾರತೀಯ ಸಂಸತ್ತಿನಲ್ಲಿ ಮತ್ತು ಇಲ್ಲಿನ ಜನರಲ್ಲಿ ಕ್ಷಮೆಯಾಚಿಸಬೇಕು” ಎಂದು ದುಬೆ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದ ಸಮಸ್ಯೆಗಳಿಂದಾಗಿ ಭಾರತದಲ್ಲಿ ಹಾಲಿ ಸರ್ಕಾರ 2024 ರಲ್ಲಿ ನಡೆದ ಚುನಾವಣೆಯಲ್ಲಿ ಸೋತಿದೆ ಎಂದು ಮೆಟಾ ಸಮೂಹದ ಕಂಪನಿಗಳಲ್ಲಿ ನಿಯಂತ್ರಣ ಪಾಲನ್ನು ಹೊಂದಿರುವ ಫೇಸ್‌ಬುಕ್ ಸಹ-ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದರು. ಅವರ ಹೇಳಿಕೆಯು “ವಾಸ್ತವಿಕವಾಗಿ ತಪ್ಪಾಗಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿ ಬಂದಿರುವುದು ನಿರಾಶಾದಾಯಕವಾಗಿದೆ. ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದು ಅಶ್ವಿನಿ ವೈಷ್ಣವ್ ಅವರು ಎಕ್ಸ್‌ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೆಟಾವನ್ನು ಟ್ಯಾಗ್ ಮಾಡಿದ್ದಾರೆ. ಲೋಕಸಭೆ 2024ರ ಚುನಾವಣೆ

“ಕೊರೊನಾ ಸಮಯದಲ್ಲಿ 800 ಮಿಲಿಯನ್‌ ಜನರಿಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ವಿಶ್ವಾದ್ಯಂತ ರಾಷ್ಟ್ರಗಳಿಗೆ ನೆರವು ನೀಡುವುದರಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ 3 ನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಜೋ ರೋಗನ್ ಪಾಡ್‌ಕ್ಯಾಸ್ಟ್‌ನಲ್ಲಿ ಕಾಣಿಸಿಕೊಂಡ ಜುಕರ್‌ಬರ್ಗ್, 2024 ಪ್ರಪಂಚದಾದ್ಯಂತ ದೊಡ್ಡ ಚುನಾವಣಾ ವರ್ಷವಾಗಿತ್ತು. ಈ ವರ್ಷದಲ್ಲಿ ಭಾರತದಂತಹ ಹಲವು ದೇಶಗಳಲ್ಲಿ, ಅಧಿಕಾರದಲ್ಲಿರುವವರು ಮತದಾನದಲ್ಲಿ ಸೋತರು ಎಂದು ಹೇಳಿದ್ದರು.

2024 ರ ಚುನಾವಣೆಯಲ್ಲಿ ಬಿಜೆಪಿ ತನ್ನ ಬಹುಮತವನ್ನು ಕಳೆದುಕೊಂಡಿತ್ತು. ಆದರೆ, ಪಕ್ಷದ ನೇತೃತ್ವದ ಆಡಳಿತ ಮೈತ್ರಿಕೂಟವು ಆರಾಮದಾಯಕ ಬಹುಮತವನ್ನು ಗಳಿಸಿತ್ತು.ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.

ಇದನ್ನೂಓದಿ:  ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...