Homeಮುಖಪುಟ2024 ಭಾರತದ ಗರಿಷ್ಠ ತಾಪಮಾನದ ವರ್ಷ : ಹವಾಮಾನ ಇಲಾಖೆ

2024 ಭಾರತದ ಗರಿಷ್ಠ ತಾಪಮಾನದ ವರ್ಷ : ಹವಾಮಾನ ಇಲಾಖೆ

- Advertisement -
- Advertisement -

2024ನೇ ವರ್ಷವು 1901ರಿಂದ ಇದುವರೆಗೆ ಭಾರತದಲ್ಲಿ ದಾಖಲಾದ ಗರಿಷ್ಠ ತಾಪಮಾನದ ವರ್ಷವಾಗಿದೆ. ಸರಾಸರಿ ಕನಿಷ್ಠ ತಾಪಮಾನವು ದೀರ್ಘಾವಧಿಯ ಸರಾಸರಿಗಿಂತ 0.90 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ (ಜ.1) ತಿಳಿಸಿದೆ.

ವರ್ಷದ ಕೊನೆಯ ಮೂರು ತಿಂಗಳುಗಳು (ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್) ಅತಿ ಹೆಚ್ಚು ತಾಪಮಾನ ದಾಖಲಾದ ಜಂಟಿ ತಿಂಗಳುಗಳಾದರೆ, ಅಕ್ಟೋಬರ್ 2024 ಅತಿ ಹೆಚ್ಚು ತಾಪಮಾನ ದಾಖಲಾದ ಒಂಟಿ (ಪ್ರತ್ಯೇಕ) ತಿಂಗಳಾಗಿದೆ ಎಂದು ಐಎಂಡಿ ಹೇಳಿದೆ.

2024ರ ವಾರ್ಷಿಕ ಸರಾಸರಿ ತಾಪಮಾನವು 25.75 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಇದು ದೀರ್ಘಾವಧಿ ಸರಾಸರಿ ತಾಪಮಾನಕ್ಕಿಂತ 0.65 ಹೆಚ್ಚು. ಸರಾಸರಿ ಗರಿಷ್ಠ ತಾಪಮಾನವು 31.25 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಇದು ಸಾಮಾನ್ಯಕ್ಕಿಂತ 0.20 ಡಿಗ್ರಿ ಹೆಚ್ಚು ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ವಿವರಿಸಿದ್ದಾರೆ.

ಈ ಹಿಂದೆ 2016ರಲ್ಲಿ ಗರಿಷ್ಠ ತಾಪಮಾನ ದಾಖಲಾಗಿತ್ತು. ದೀರ್ಘಾವಧಿ ಸರಾಸರಿ ತಾಪಮಾನಕ್ಕಿಂತ 0.54 ಹೆಚ್ಚು ಇತ್ತು. 2016 ಮತ್ತು 2024ರ ಸರಾಸರಿ ತಾಪಮಾನದ ನಡುವೆ 0.11 ಡಿಗ್ರಿ ವ್ಯತ್ಯಾಸ ಕಂಡು ಬಂದಿದೆ.

ಭಾರತದಲ್ಲಿ ತಾಪಮಾನ ಏರಿಕೆಯೊಂದಿಗೆ ಜಾಗತಿಕ ತಾಪಮಾನದಲ್ಲೂ ಹೆಚ್ಚಳ ಕಂಡು ಬಂದಿದೆ. ವಿಶ್ವ ಹವಾಮಾನ ಸಂಸ್ಥೆ ಕೂಡ 2024ನ್ನು ಅತ್ಯಂತ ಬೆಚ್ಚಗಿನ ವರ್ಷ ಎಂದು ಹೇಳಿದೆ. ಜಾಗತಿಕ ತಾಪಮಾನ ಪ್ಯಾರಿಸ್ ಒಪ್ಪಂದದ ಮಿತಿಯನ್ನು ಮೀರಿ 1.5ರಷ್ಟು ಹೆಚ್ಚಳವಾಗಿದೆ. ಪ್ಯಾರಿಸ್ ಒಪ್ಪಂದವು ಕೈಗಾರಿಕಾ ಪೂರ್ವದ(1850-1900) ತಾಪಮಾನವನ್ನು ಮಿತಿಯಾಗಿಟ್ಟುಕೊಂಡಿದೆ. 2023ರಲ್ಲಿ ಜಾಗತಿಕ ತಾಪಮಾನ 1.45 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿತ್ತು. ಈ ಬಾರಿ ಆ ದಾಖಲೆ ಮುರಿದಿದೆ.

ಜನವರಿಯಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಪೂರ್ವ ವಾಯುವ್ಯ ಮತ್ತು ಪಶ್ಚಿಮ-ಮಧ್ಯ ಪ್ರದೇಶಗಳ ಕೆಲವು ಪ್ರದೇಶಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಐಎಂಡಿಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. ಜನವರಿಯಲ್ಲಿ ಮಧ್ಯ ಭಾರತದ ಪಶ್ಚಿಮ ಮತ್ತು ಉತ್ತರ ಭಾಗಗಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಶೀತದ ವಾತವರಣವಿರುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....