Homeಮುಖಪುಟ206ನೇ ಕೋರೆಗಾಂವ್ ವಿಜಯೋತ್ಸವ; ದೇಶದಾದ್ಯಂತ ಮಹರ್ ಸೈನಿಕರಿಗೆ ಗೌರವ ಅರ್ಪಣೆ

206ನೇ ಕೋರೆಗಾಂವ್ ವಿಜಯೋತ್ಸವ; ದೇಶದಾದ್ಯಂತ ಮಹರ್ ಸೈನಿಕರಿಗೆ ಗೌರವ ಅರ್ಪಣೆ

- Advertisement -
- Advertisement -

ದೇಶದ ದಲಿತ ಸಮುದಾಯಕ್ಕೆ ಮಹತ್ವದ ದಿನವಾದ ‘ಭೀಮಾ ಕೋರೆಗಾಂವ್ ಕದನದ 206ನೇ ವಿಜಯೋತ್ಸವ’ದ ಪ್ರಯುಕ್ತ, ಪೇಶ್ವೆ ಸೈನ್ಯದ ವಿರುದ್ಧ ಹೋರಾಡಿ ಮಡಿದ 500 ಜನ ಮಹರ್ ಸೈನಿಕರಿಗೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ನಮನ ಸಲ್ಲಿಸಲಾಯಿತು.

ಮಹರ್ ಸೈನ್ಯ ಮತ್ತು ಮರಾಠಾ ಒಕ್ಕೂಟದ ಪೇಶ್ವೆ ಬಣಗಳ ನಡುವೆ ಡಿಸೆಂಬರ್ 31, 1817ರಂದು ಆರಂಭವಾದ ಯುದ್ಧ 1818 ಜನವರಿ 1, 1818 ರಂದು ಮುಗಿದಿತ್ತು. ಅಂದಿನ ಭೀಮಾ ನದಿ ತೀರದಲ್ಲಿ ನಡೆದ ಯುದ್ಧದಲ್ಲಿ 28 ಸಾವಿರ ಪೇಶ್ವೆ ಸೈನ್ಯದ ವಿರುದ್ಧ ಹೋರಾಡಿ ಜಯಗಳಿಸಿದ ಮಹರ್ ಸೈನಿಕರ ನೆನಪಿಗೆ ಪ್ರತಿ ವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ. ಮಹಾರಾಷ್ಟ್ರದ ಪೆರ್ನೆ ಗ್ರಾಮದಲ್ಲಿರುವ ‘ವಿಜಯ್ ಸ್ತಂಭ’ದ ಮುಂಭಾಗ ಪ್ರತಿ ವರ್ಷ ಡಿಸೆಂಬರ್ 31ರ ರಾತ್ರಿ ಲಕ್ಷಗಟ್ಟಲೆ ಜನ ಸೇರುತ್ತಾರೆ.

ಕೋರೆಗಾಂವ್‌ಗೆ ಹರಿದುಬಂದ ಜನಸಾಗರ:

ಭೀಮಾ ಕೋರೆಗಾಂವ್ ಸ್ಮಾರಕಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಜನ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿ, ಡಿಸೆಂಬರ್ 31ರ ಮಧ್ಯರಾತ್ರಿ 12 ಗಂಟೆಗೆ ವಿಜಯೋತ್ಸವ ಆಚರಿಸಿದರು. ವಂಚಿತ್ ಬಹುಜನ ಅಘಾಡಿ ನಾಯಕ ಪ್ರಕಾಶ್ ಅಂಬೇಡ್ಕರ್, ಶಿರೂರು (ಪುಣೆ ಜಿಲ್ಲೆಯ) ಎನ್‌ಸಿಪಿ ಸಂಸದ ಅಮೋಲ್ ಕೋಲ್ಹೆ ಸಹ ವಿಜಯ ಸ್ತಂಭಕ್ಕೆ ಇಂದು ನಮನ ಸಲ್ಲಿಸಿದರು.

ಪುಣೆ-ಅಹ್ಮದ್‌ನಗರ ರಸ್ತೆಯ ಪೆರ್ನೆ ಗ್ರಾಮದ ಬಳಿ ಇರುವ ಸ್ಮಾರಕದ ಸುತ್ತಲೂ ಇರುವ ವಿಸ್ತಾರವಾದ ಜಾಗದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸ್ಮಾರಕಕ್ಕೆ 10 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ಪುಣೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಕೋರೆಗಾಂವ್ ಭೀಮಾ ಕದನದ ವಾರ್ಷಿಕೋತ್ಸವದಂದು ಶ್ರದ್ಧಾಂಜಲಿ ಸಲ್ಲಿಸಲು ಬರುವ ಜನರಿಗೆ ಪೊಲೀಸ್ ಅಥವಾ ಸ್ಥಳೀಯ ಆಡಳಿತ ಉತ್ತಮ ವ್ಯವಸ್ಥೆ ಕಲ್ಪಿಸಿವೆ.

ಸ್ಮಾರಕಕ್ಕೆ ಭೇಟಿ ನೀಡಿದ್ದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಾತನಾಡಿ, ‘ಜನವರಿ 1, 2018 ರಂದು ಕೋರೆಗಾಂವ್ ಭೀಮಾ ಕದನದ 200ನೇ ವಾರ್ಷಿಕೋತ್ಸವದಂದು, ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಇದರಲ್ಲಿ ಒಬ್ಬರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಆದ್ದರಿಂದ, ಆಡಳಿತದೊಂದಿಗೆ ಸಹಕರಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ’ ಎಂದು ಪವಾರ್ ಹೇಳಿದರು.

ಎಲ್ಗರ್ ಪರಿಷತ್ ಆಯೋಜಿಸಿದ್ದ ಭೀಮಾ ಕೋರೆಗಾಂವ್ ಸಂಗ್ರಾಮದ 200ನೇ ವಿಜಯೋತ್ಸವ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಪುಣೆ ಹಾಗೂ ಮುಂಬೈನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮಹಾರಾಷ್ಟ್ರಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿತ್ತು. ದಲಿತಪರ ಸಂಘಟನೆಗಳು ಆಗ ಮಹಾರಾಷ್ಟ್ರ ಬಂಗ್‌ದೂ ಕರೆ ನೀಡಿದ್ದವು. ಇಡೀ ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ, ಎಲ್ಗರ್ ಪರಿಷತ್‌ನ ಹಲವರು ಇನ್ನೂ ಜೈಲಿನ್ಲಲಿದ್ದಾರೆ.

ಏನಿದು ಕೋರೆಗಾಂವ್ ಯುದ್ಧ; ದಲಿತರ ಪಾಲಿಗೆ ಅತ್ಯಂತ ಮಹತ್ವದಾಗಿದ್ದು ಏಕೆ?

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆಯಾಗಿದ್ದು, 28 ಸಾವಿರ ಸೈನಿಕರನ್ನು ಕೇವಲ ಐನೂರು ಜನ, ದಲಿತ ಸಮುದಾಯಕ್ಕೆ ಸೇರಿದ ಸೈನಿಕರು ಸೇರಿಕೊಂಡು ಸೋಲಿಸಿದ ಮಹತ್ವದ ಕದನವಾಗಿದೆ. ಪೇಶ್ವೆಗಳ ಆಡಳಿತದಲ್ಲಿ ಜಾರಿಯಲ್ಲಿದ್ದ ಅಮಾನುಷ ಜಾತಿ ಪದ್ಧತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸಿದ್ದ ಮಹರ್ ಸೈನಿಕರ ಧೈರ್ಯ, ಸಾಹಸ, ಕೆಚ್ಚೆದೆಯ ಹೋರಾಟದ ಕಥನವಾಗಿದೆ. ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ನಡೆಸಿ ಗೆಲುವು ಸಾಧಿಸಿದ್ದು, ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್’ ಎಂದು ಪ್ರಸಿದ್ಧವಾಗಿದೆ.

ಮಹರ್ ಸೈನಿಕರಿಗೆ ಮತ್ತು ಪೇಶ್ವೆಗಳ ನಡುವೆ ಭೀಮಾ ಕೋರೆಗಾಂವ್ ನಲ್ಲಿ ಡಿಸೆಂಬರ್ 31, 1817ರ ರಾತ್ರಿ ಯುದ್ಧ ಆರಂಭವಾಗಿ ಜನವರಿ 1, 1818ರ ಬೆಳಗಿನ ಜಾವ ಮುಗಿದಿತ್ತು. ಅಂದು ರಾತ್ರಿ ನಡೆದ ಐತಿಹಾಸಿಕ ಯುದ್ದದಲ್ಲಿ ಐನೂರು ಮಂದಿ ದಲಿತ ಸೈನಿಕರು ಆಹಾರ, ನೀರು ಹಾಗೂ ವಿಶ್ರಾಂತಿ ಇಲ್ಲದೆ ಇಪ್ಪತ್ತೆಂಟು ಸಾವಿರ ಮಂದಿ ಇದ್ದ ಸೈನ್ಯದ ವಿರುದ್ಧ ನಿರಂತರ ಹನ್ನೆರಡು ಗಂಟೆ ಕಾದಾಡಿದ ಸ್ಮರಣೀಯ ಕದನವಾಗಿದೆ.

ಅಸ್ಪೃಶ್ಯರು ಎಂಬ ಕಾರಣಕ್ಕೆ ಪೇಶ್ವೆ ಭಾಜಿರಾಯ ದಲಿತ ಸಮುದಾಯದವರನ್ನು ತನ್ನ ಸೇನೆಗೆ ಸೇರಸಿಕೊಂಡಿರಲಿಲ್ಲ. ಆ ಸಿಟ್ಟಿಗೆ ಬ್ರಿಟಿಷ್ ಸೈನ್ಯ ಸೇರಿದ ಅವರು, ಪೇಶ್ವೆಗಳ ಇಪ್ಪತ್ತೆಂಟು ಸಾವಿರ ಸೈನ್ಯ ಬಲವನ್ನು ಸೋಲಿಸಿದರು. ಯುದ್ಧದಲ್ಲಿ ಇಪ್ಪತ್ತೆರಡು ಮಹರ್ ಸೈನಿಕರು ಹುತಾತ್ಮರಾಗಿದ್ದರು. ಕೋರೆಗಾಂವ್ ಸ್ಮಾರಕದಲ್ಲಿ ಹುತಾತ್ಮರಾದ ಚಿತ್ರಗಳು ದೇಶ ಸ್ವಾತಂತ್ರ್ಯ ಪಡೆಯುವವರೆಗೂ ಇತ್ತು ಎನ್ನಲಾಗಿದ್ದು, ಮಹರ್ ಸೈನಿಕರ ವೀರಗಾಥೆ ಹೇಳುವ ಸ್ಮಾರಕವನ್ನು ಬ್ರಿಟಿಷರೇ ನಿರ್ಮಿಸಿದ್ದರು.

ಬ್ರಾಹ್ಮಣ ಸೈನಿಕರೇ ಹೆಚ್ಚಿದ್ದ ಇಪ್ಪತ್ತೆಂಟು ಸಾವಿರ ಸಂಖ್ಯೆಯ ಪೇಶ್ವೆಗಳ ಸೈನ್ಯವನ್ನು ಕೇವಲ ಐನೂರು ಮಂದಿಯಿದ್ದ ಮಹರ್ ಸೈನಿಕರು ಇಡೀ ರಾತ್ರಿ ಕಾದಾಡಿ ನಡುಕ ಹುಟ್ಟಿಸಿದ್ದರು. ಶಿರೂರಿನಿಂದ ಇಪ್ಪತ್ತೇಳು ಮೈಲು ದೂರ ಭೀಮಾ ಕೋರೆಗಾಂವ್ ನವರೆಗೆ ನಡೆದುಕೊಂಡೇ ಬಂದ ಮಹರ್ ಸೈನಿಕರಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಹ ಇರಲಿಲ್ಲ. ಆದರೂ ಹನ್ನೆರಡು ಗಂಟೆಗಳ ಕಾಲ ಆ ಸೈನಿಕರು ರಣಭೂಮಿಯಲ್ಲಿ ಪೇಶ್ವೆಗಳ ವಿರುದ್ಧ ಕಾದಾಡಿದರು. ಆ ಯುದ್ಧದಲ್ಲಿ ಪೇಶ್ವೆಗಳು ಸೋತಿದ್ದಲ್ಲದೆ, ಅಲ್ಲಿಯವರೆಗೆ ದಲಿತರ ಮೇಲೆ ಅವರು ಹೇರಿದ್ದ ಕೆಲವು ಅಸ್ಪೃಶ್ಯತೆ ಆಚರಣೆಗಳೂ ಅಂದಿಗೆ ಕೊನೆಗೊಂಡಿತು. ಆದ್ದರಿಂದ ಯುದ್ಧವು ದೇಶದ ದಲಿತರ ಪಾಲಿಗೆ ಮಹತ್ವದ್ದಾಗಿದೆ.

ಅತ್ಯಂತ ಕಡಿಮೆ ಸಂಖ್ಯೆಯ ಸೈನಿಕರೊಂದಿಗೆ ಪೇಶ್ವೆಗಳ ವಿರುದ್ಧ ಯುದ್ಧಕ್ಕೆ ಇಳಿದಾಗ ಬ್ರಿಟಿಷರಿಗೆ ಗೆಲ್ಲುವ ನಂಬಿಕೆಯೇ ಇರಲಿಲ್ಲ. ಆದರೆ, ಈ ಯುದ್ಧವೇ ಪೇಶ್ವೆಗಳ ಆಡಳಿತದ ಅಂತ್ಯಕ್ಕೆ ಕಾರಣವಾಗಿದ್ದೂ ಅಲ್ಲದೆ, ಅವರ ಆಡಳಿತದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಶ್ಯತೆಯ ಬೇರುಗಳನ್ನು ಅಲುಗಾಡಿಸಿತು.

ಐನೂರು ಸೈನಿಕರ ನೇತೃತ್ವ ವಹಿಸಿದ್ದು ಸಿಧ್ನಾಕ ಮಹರ್ ಎಂಬಾತ. ‘ಬ್ರಿಟಿಷರು ವಿದೇಶಿಯರು; ಯುದ್ಧದಲ್ಲಿ ನಾವು ನಿಮಗೆ ನೆರವು ನೀಡುತ್ತೇವೆ’ ಎಂದು ಪೇಶ್ವೆ ಭಾಜಿರಾಯನ ಬಳಿ ಮನವಿ ಮಾಡುತ್ತಾರೆ. ಆದರೆ, ಆವರ ಮನವಿಯನ್ನು ನಿರಾಕರಿಸಿದ ಪೇಶ್ವೆಗಳು, ಆ ಸೈನಿಕರನ್ನು ಅವಹೇಳನ ಮಾಡಿ, ಹೀಯಾಳಿಸುತ್ತಾರೆ. ‘ನಿಮಗೆ ಯಾವುದೇ ಹಕ್ಕು ಸಿಗಲ್ಲ; ನೀವು ನಮ್ಮ ವಿರುದ್ಧ ಕಾದಾಡಿದರೂ ಅಷ್ಟೇ, ಬ್ರಿಟಿಷರ ವಿರುದ್ಧ ಹೋರಾಡಿದರೂ ಅಷ್ಟೇ’ ಎನ್ನುತ್ತಾರೆ.

ಆಗ ಪೇಶ್ವೆಗಳ ವಿರುದ್ಧ ಯುದ್ಧ ಮಾಡುವುದು ಮಹರ್ ಸೈನಿಕರ ಆತ್ಮಗೌರವ ಹಾಗೂ ಹಕ್ಕುಗಳ ಪ್ರಶ್ನೆಯಾಗುತ್ತದೆ. ಅಷ್ಟು ದೊಡ್ಡ ಸಂಖ್ಯೆಯ ಪೇಶ್ವೆ ಪಡೆ 500 ಜನ ಮಹರ್ ಸೈನಿಕರ ಎದುರು ಮಂಡಿಯೂರುತ್ತದೆ. ಬ್ರಿಟಿಷರಿಗೆ ಮಹತ್ವದ ವಿಜಯ ಲಭಿಸುತ್ತದೆ. ಅದೇ ಕಾರಣಕ್ಕೆ ಯುದ್ಧದಲ್ಲಿ ಹುತಾತ್ಮರಾದ ಹಾಗೂ ಬದುಕುಳಿದ ಮಹರ್ ಸೈನಿಕರಿಗೆ ಬ್ರಿಟಿಷರು ಗೌರವ ಸಲ್ಲಿಸಿ ಸನ್ಮಾನಿಸುತ್ತಾರೆ. ವಿಜಯೋತ್ಸವದ ನೆನಪಿಗೆ ಸ್ಮಾರಕ ನಿರ್ಮಿಸಿ, ತನ್ನ ಸೈನ್ಯದ ಒಂದು ಗುಂಪಿಗೆ ‘ಮಹರ್ ರೆಜಿಮೆಂಟ್’ ಎಂದು ಹೆಸರಿಡುತ್ತಾರೆ.

ಕೋರೆಗಾಂವ್ ಸ್ಮಾರಕದ ಬಳಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬೆಂಬಲಿಗರು.

ಆದರೆ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಘಟನೆಯನ್ನು ಬೆಳಕಿಗೆ ತರುವವರೆಗೂ, ಜಾತಿವಾದಿಗಳು ಈ ಇತಿಹಾಸವನ್ನು ಮುಚ್ಚಿಡುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಸೈನಿಕರ ಸಾಹಸ ಬಿಂಬಿಸುವ ಕೋರೆಗಾಂವ್ ಸ್ಥಂಭ (ವಿಜಯ ಸ್ಥಂಭ) ಭಾರತಕ್ಕೆ ಸ್ವಾತಂತ್ರ್ಯ ದೊರೆಯುವ ತನಕ ಇತ್ತು. ಇಪ್ಪತ್ತೆರಡು ಮಹರ್ ಸೈನಿಕರ ತ್ಯಾಗದ ಬಗ್ಗೆ ಅದರಲ್ಲಿ ಪ್ರಸ್ತಾವ ಇತ್ತು. ಇಂದಿಗೂ ಆ ಸ್ಮಾರಕ ಅಸ್ಪೃಶ್ಯರ (ಮಹರ್) ವೀರ ಕಥೆಗೆ ಸಾಕ್ಷಿಯಂತೆ ಇದ್ದು, ಬಾಬಾ ಸಾಹೇಬರು ಬದುಕ್ಕಿದ್ದಷ್ಟೂ ಕಾಲ ಪ್ರತಿವರ್ಷ ಜನವರಿ ಒಂದರಂದು ಭೀಮಾ ಕೋರೆಗಾಂವ್ ಗೆ ಭೇಟಿ ನೀಡಿ ಗೌರವ ಸಲ್ಲಿಸುತ್ತಿದ್ದರು.

ಇದನ್ನೂ ಓದಿ; ಕೇರಳ ರಾಜ್ಯಪಾಲರ ಪ್ರತಿಕೃತಿ ದಹನ; ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...