Homeಮುಖಪುಟ206ನೇ ಕೋರೆಗಾಂವ್ ವಿಜಯೋತ್ಸವ; ದೇಶದಾದ್ಯಂತ ಮಹರ್ ಸೈನಿಕರಿಗೆ ಗೌರವ ಅರ್ಪಣೆ

206ನೇ ಕೋರೆಗಾಂವ್ ವಿಜಯೋತ್ಸವ; ದೇಶದಾದ್ಯಂತ ಮಹರ್ ಸೈನಿಕರಿಗೆ ಗೌರವ ಅರ್ಪಣೆ

- Advertisement -
- Advertisement -

ದೇಶದ ದಲಿತ ಸಮುದಾಯಕ್ಕೆ ಮಹತ್ವದ ದಿನವಾದ ‘ಭೀಮಾ ಕೋರೆಗಾಂವ್ ಕದನದ 206ನೇ ವಿಜಯೋತ್ಸವ’ದ ಪ್ರಯುಕ್ತ, ಪೇಶ್ವೆ ಸೈನ್ಯದ ವಿರುದ್ಧ ಹೋರಾಡಿ ಮಡಿದ 500 ಜನ ಮಹರ್ ಸೈನಿಕರಿಗೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ನಮನ ಸಲ್ಲಿಸಲಾಯಿತು.

ಮಹರ್ ಸೈನ್ಯ ಮತ್ತು ಮರಾಠಾ ಒಕ್ಕೂಟದ ಪೇಶ್ವೆ ಬಣಗಳ ನಡುವೆ ಡಿಸೆಂಬರ್ 31, 1817ರಂದು ಆರಂಭವಾದ ಯುದ್ಧ 1818 ಜನವರಿ 1, 1818 ರಂದು ಮುಗಿದಿತ್ತು. ಅಂದಿನ ಭೀಮಾ ನದಿ ತೀರದಲ್ಲಿ ನಡೆದ ಯುದ್ಧದಲ್ಲಿ 28 ಸಾವಿರ ಪೇಶ್ವೆ ಸೈನ್ಯದ ವಿರುದ್ಧ ಹೋರಾಡಿ ಜಯಗಳಿಸಿದ ಮಹರ್ ಸೈನಿಕರ ನೆನಪಿಗೆ ಪ್ರತಿ ವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ. ಮಹಾರಾಷ್ಟ್ರದ ಪೆರ್ನೆ ಗ್ರಾಮದಲ್ಲಿರುವ ‘ವಿಜಯ್ ಸ್ತಂಭ’ದ ಮುಂಭಾಗ ಪ್ರತಿ ವರ್ಷ ಡಿಸೆಂಬರ್ 31ರ ರಾತ್ರಿ ಲಕ್ಷಗಟ್ಟಲೆ ಜನ ಸೇರುತ್ತಾರೆ.

ಕೋರೆಗಾಂವ್‌ಗೆ ಹರಿದುಬಂದ ಜನಸಾಗರ:

ಭೀಮಾ ಕೋರೆಗಾಂವ್ ಸ್ಮಾರಕಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಜನ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿ, ಡಿಸೆಂಬರ್ 31ರ ಮಧ್ಯರಾತ್ರಿ 12 ಗಂಟೆಗೆ ವಿಜಯೋತ್ಸವ ಆಚರಿಸಿದರು. ವಂಚಿತ್ ಬಹುಜನ ಅಘಾಡಿ ನಾಯಕ ಪ್ರಕಾಶ್ ಅಂಬೇಡ್ಕರ್, ಶಿರೂರು (ಪುಣೆ ಜಿಲ್ಲೆಯ) ಎನ್‌ಸಿಪಿ ಸಂಸದ ಅಮೋಲ್ ಕೋಲ್ಹೆ ಸಹ ವಿಜಯ ಸ್ತಂಭಕ್ಕೆ ಇಂದು ನಮನ ಸಲ್ಲಿಸಿದರು.

ಪುಣೆ-ಅಹ್ಮದ್‌ನಗರ ರಸ್ತೆಯ ಪೆರ್ನೆ ಗ್ರಾಮದ ಬಳಿ ಇರುವ ಸ್ಮಾರಕದ ಸುತ್ತಲೂ ಇರುವ ವಿಸ್ತಾರವಾದ ಜಾಗದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸ್ಮಾರಕಕ್ಕೆ 10 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ಪುಣೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಕೋರೆಗಾಂವ್ ಭೀಮಾ ಕದನದ ವಾರ್ಷಿಕೋತ್ಸವದಂದು ಶ್ರದ್ಧಾಂಜಲಿ ಸಲ್ಲಿಸಲು ಬರುವ ಜನರಿಗೆ ಪೊಲೀಸ್ ಅಥವಾ ಸ್ಥಳೀಯ ಆಡಳಿತ ಉತ್ತಮ ವ್ಯವಸ್ಥೆ ಕಲ್ಪಿಸಿವೆ.

ಸ್ಮಾರಕಕ್ಕೆ ಭೇಟಿ ನೀಡಿದ್ದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಾತನಾಡಿ, ‘ಜನವರಿ 1, 2018 ರಂದು ಕೋರೆಗಾಂವ್ ಭೀಮಾ ಕದನದ 200ನೇ ವಾರ್ಷಿಕೋತ್ಸವದಂದು, ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಇದರಲ್ಲಿ ಒಬ್ಬರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಆದ್ದರಿಂದ, ಆಡಳಿತದೊಂದಿಗೆ ಸಹಕರಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ’ ಎಂದು ಪವಾರ್ ಹೇಳಿದರು.

ಎಲ್ಗರ್ ಪರಿಷತ್ ಆಯೋಜಿಸಿದ್ದ ಭೀಮಾ ಕೋರೆಗಾಂವ್ ಸಂಗ್ರಾಮದ 200ನೇ ವಿಜಯೋತ್ಸವ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಪುಣೆ ಹಾಗೂ ಮುಂಬೈನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮಹಾರಾಷ್ಟ್ರಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿತ್ತು. ದಲಿತಪರ ಸಂಘಟನೆಗಳು ಆಗ ಮಹಾರಾಷ್ಟ್ರ ಬಂಗ್‌ದೂ ಕರೆ ನೀಡಿದ್ದವು. ಇಡೀ ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ, ಎಲ್ಗರ್ ಪರಿಷತ್‌ನ ಹಲವರು ಇನ್ನೂ ಜೈಲಿನ್ಲಲಿದ್ದಾರೆ.

ಏನಿದು ಕೋರೆಗಾಂವ್ ಯುದ್ಧ; ದಲಿತರ ಪಾಲಿಗೆ ಅತ್ಯಂತ ಮಹತ್ವದಾಗಿದ್ದು ಏಕೆ?

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆಯಾಗಿದ್ದು, 28 ಸಾವಿರ ಸೈನಿಕರನ್ನು ಕೇವಲ ಐನೂರು ಜನ, ದಲಿತ ಸಮುದಾಯಕ್ಕೆ ಸೇರಿದ ಸೈನಿಕರು ಸೇರಿಕೊಂಡು ಸೋಲಿಸಿದ ಮಹತ್ವದ ಕದನವಾಗಿದೆ. ಪೇಶ್ವೆಗಳ ಆಡಳಿತದಲ್ಲಿ ಜಾರಿಯಲ್ಲಿದ್ದ ಅಮಾನುಷ ಜಾತಿ ಪದ್ಧತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸಿದ್ದ ಮಹರ್ ಸೈನಿಕರ ಧೈರ್ಯ, ಸಾಹಸ, ಕೆಚ್ಚೆದೆಯ ಹೋರಾಟದ ಕಥನವಾಗಿದೆ. ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ನಡೆಸಿ ಗೆಲುವು ಸಾಧಿಸಿದ್ದು, ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್’ ಎಂದು ಪ್ರಸಿದ್ಧವಾಗಿದೆ.

ಮಹರ್ ಸೈನಿಕರಿಗೆ ಮತ್ತು ಪೇಶ್ವೆಗಳ ನಡುವೆ ಭೀಮಾ ಕೋರೆಗಾಂವ್ ನಲ್ಲಿ ಡಿಸೆಂಬರ್ 31, 1817ರ ರಾತ್ರಿ ಯುದ್ಧ ಆರಂಭವಾಗಿ ಜನವರಿ 1, 1818ರ ಬೆಳಗಿನ ಜಾವ ಮುಗಿದಿತ್ತು. ಅಂದು ರಾತ್ರಿ ನಡೆದ ಐತಿಹಾಸಿಕ ಯುದ್ದದಲ್ಲಿ ಐನೂರು ಮಂದಿ ದಲಿತ ಸೈನಿಕರು ಆಹಾರ, ನೀರು ಹಾಗೂ ವಿಶ್ರಾಂತಿ ಇಲ್ಲದೆ ಇಪ್ಪತ್ತೆಂಟು ಸಾವಿರ ಮಂದಿ ಇದ್ದ ಸೈನ್ಯದ ವಿರುದ್ಧ ನಿರಂತರ ಹನ್ನೆರಡು ಗಂಟೆ ಕಾದಾಡಿದ ಸ್ಮರಣೀಯ ಕದನವಾಗಿದೆ.

ಅಸ್ಪೃಶ್ಯರು ಎಂಬ ಕಾರಣಕ್ಕೆ ಪೇಶ್ವೆ ಭಾಜಿರಾಯ ದಲಿತ ಸಮುದಾಯದವರನ್ನು ತನ್ನ ಸೇನೆಗೆ ಸೇರಸಿಕೊಂಡಿರಲಿಲ್ಲ. ಆ ಸಿಟ್ಟಿಗೆ ಬ್ರಿಟಿಷ್ ಸೈನ್ಯ ಸೇರಿದ ಅವರು, ಪೇಶ್ವೆಗಳ ಇಪ್ಪತ್ತೆಂಟು ಸಾವಿರ ಸೈನ್ಯ ಬಲವನ್ನು ಸೋಲಿಸಿದರು. ಯುದ್ಧದಲ್ಲಿ ಇಪ್ಪತ್ತೆರಡು ಮಹರ್ ಸೈನಿಕರು ಹುತಾತ್ಮರಾಗಿದ್ದರು. ಕೋರೆಗಾಂವ್ ಸ್ಮಾರಕದಲ್ಲಿ ಹುತಾತ್ಮರಾದ ಚಿತ್ರಗಳು ದೇಶ ಸ್ವಾತಂತ್ರ್ಯ ಪಡೆಯುವವರೆಗೂ ಇತ್ತು ಎನ್ನಲಾಗಿದ್ದು, ಮಹರ್ ಸೈನಿಕರ ವೀರಗಾಥೆ ಹೇಳುವ ಸ್ಮಾರಕವನ್ನು ಬ್ರಿಟಿಷರೇ ನಿರ್ಮಿಸಿದ್ದರು.

ಬ್ರಾಹ್ಮಣ ಸೈನಿಕರೇ ಹೆಚ್ಚಿದ್ದ ಇಪ್ಪತ್ತೆಂಟು ಸಾವಿರ ಸಂಖ್ಯೆಯ ಪೇಶ್ವೆಗಳ ಸೈನ್ಯವನ್ನು ಕೇವಲ ಐನೂರು ಮಂದಿಯಿದ್ದ ಮಹರ್ ಸೈನಿಕರು ಇಡೀ ರಾತ್ರಿ ಕಾದಾಡಿ ನಡುಕ ಹುಟ್ಟಿಸಿದ್ದರು. ಶಿರೂರಿನಿಂದ ಇಪ್ಪತ್ತೇಳು ಮೈಲು ದೂರ ಭೀಮಾ ಕೋರೆಗಾಂವ್ ನವರೆಗೆ ನಡೆದುಕೊಂಡೇ ಬಂದ ಮಹರ್ ಸೈನಿಕರಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಹ ಇರಲಿಲ್ಲ. ಆದರೂ ಹನ್ನೆರಡು ಗಂಟೆಗಳ ಕಾಲ ಆ ಸೈನಿಕರು ರಣಭೂಮಿಯಲ್ಲಿ ಪೇಶ್ವೆಗಳ ವಿರುದ್ಧ ಕಾದಾಡಿದರು. ಆ ಯುದ್ಧದಲ್ಲಿ ಪೇಶ್ವೆಗಳು ಸೋತಿದ್ದಲ್ಲದೆ, ಅಲ್ಲಿಯವರೆಗೆ ದಲಿತರ ಮೇಲೆ ಅವರು ಹೇರಿದ್ದ ಕೆಲವು ಅಸ್ಪೃಶ್ಯತೆ ಆಚರಣೆಗಳೂ ಅಂದಿಗೆ ಕೊನೆಗೊಂಡಿತು. ಆದ್ದರಿಂದ ಯುದ್ಧವು ದೇಶದ ದಲಿತರ ಪಾಲಿಗೆ ಮಹತ್ವದ್ದಾಗಿದೆ.

ಅತ್ಯಂತ ಕಡಿಮೆ ಸಂಖ್ಯೆಯ ಸೈನಿಕರೊಂದಿಗೆ ಪೇಶ್ವೆಗಳ ವಿರುದ್ಧ ಯುದ್ಧಕ್ಕೆ ಇಳಿದಾಗ ಬ್ರಿಟಿಷರಿಗೆ ಗೆಲ್ಲುವ ನಂಬಿಕೆಯೇ ಇರಲಿಲ್ಲ. ಆದರೆ, ಈ ಯುದ್ಧವೇ ಪೇಶ್ವೆಗಳ ಆಡಳಿತದ ಅಂತ್ಯಕ್ಕೆ ಕಾರಣವಾಗಿದ್ದೂ ಅಲ್ಲದೆ, ಅವರ ಆಡಳಿತದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಶ್ಯತೆಯ ಬೇರುಗಳನ್ನು ಅಲುಗಾಡಿಸಿತು.

ಐನೂರು ಸೈನಿಕರ ನೇತೃತ್ವ ವಹಿಸಿದ್ದು ಸಿಧ್ನಾಕ ಮಹರ್ ಎಂಬಾತ. ‘ಬ್ರಿಟಿಷರು ವಿದೇಶಿಯರು; ಯುದ್ಧದಲ್ಲಿ ನಾವು ನಿಮಗೆ ನೆರವು ನೀಡುತ್ತೇವೆ’ ಎಂದು ಪೇಶ್ವೆ ಭಾಜಿರಾಯನ ಬಳಿ ಮನವಿ ಮಾಡುತ್ತಾರೆ. ಆದರೆ, ಆವರ ಮನವಿಯನ್ನು ನಿರಾಕರಿಸಿದ ಪೇಶ್ವೆಗಳು, ಆ ಸೈನಿಕರನ್ನು ಅವಹೇಳನ ಮಾಡಿ, ಹೀಯಾಳಿಸುತ್ತಾರೆ. ‘ನಿಮಗೆ ಯಾವುದೇ ಹಕ್ಕು ಸಿಗಲ್ಲ; ನೀವು ನಮ್ಮ ವಿರುದ್ಧ ಕಾದಾಡಿದರೂ ಅಷ್ಟೇ, ಬ್ರಿಟಿಷರ ವಿರುದ್ಧ ಹೋರಾಡಿದರೂ ಅಷ್ಟೇ’ ಎನ್ನುತ್ತಾರೆ.

ಆಗ ಪೇಶ್ವೆಗಳ ವಿರುದ್ಧ ಯುದ್ಧ ಮಾಡುವುದು ಮಹರ್ ಸೈನಿಕರ ಆತ್ಮಗೌರವ ಹಾಗೂ ಹಕ್ಕುಗಳ ಪ್ರಶ್ನೆಯಾಗುತ್ತದೆ. ಅಷ್ಟು ದೊಡ್ಡ ಸಂಖ್ಯೆಯ ಪೇಶ್ವೆ ಪಡೆ 500 ಜನ ಮಹರ್ ಸೈನಿಕರ ಎದುರು ಮಂಡಿಯೂರುತ್ತದೆ. ಬ್ರಿಟಿಷರಿಗೆ ಮಹತ್ವದ ವಿಜಯ ಲಭಿಸುತ್ತದೆ. ಅದೇ ಕಾರಣಕ್ಕೆ ಯುದ್ಧದಲ್ಲಿ ಹುತಾತ್ಮರಾದ ಹಾಗೂ ಬದುಕುಳಿದ ಮಹರ್ ಸೈನಿಕರಿಗೆ ಬ್ರಿಟಿಷರು ಗೌರವ ಸಲ್ಲಿಸಿ ಸನ್ಮಾನಿಸುತ್ತಾರೆ. ವಿಜಯೋತ್ಸವದ ನೆನಪಿಗೆ ಸ್ಮಾರಕ ನಿರ್ಮಿಸಿ, ತನ್ನ ಸೈನ್ಯದ ಒಂದು ಗುಂಪಿಗೆ ‘ಮಹರ್ ರೆಜಿಮೆಂಟ್’ ಎಂದು ಹೆಸರಿಡುತ್ತಾರೆ.

ಕೋರೆಗಾಂವ್ ಸ್ಮಾರಕದ ಬಳಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬೆಂಬಲಿಗರು.

ಆದರೆ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಘಟನೆಯನ್ನು ಬೆಳಕಿಗೆ ತರುವವರೆಗೂ, ಜಾತಿವಾದಿಗಳು ಈ ಇತಿಹಾಸವನ್ನು ಮುಚ್ಚಿಡುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಸೈನಿಕರ ಸಾಹಸ ಬಿಂಬಿಸುವ ಕೋರೆಗಾಂವ್ ಸ್ಥಂಭ (ವಿಜಯ ಸ್ಥಂಭ) ಭಾರತಕ್ಕೆ ಸ್ವಾತಂತ್ರ್ಯ ದೊರೆಯುವ ತನಕ ಇತ್ತು. ಇಪ್ಪತ್ತೆರಡು ಮಹರ್ ಸೈನಿಕರ ತ್ಯಾಗದ ಬಗ್ಗೆ ಅದರಲ್ಲಿ ಪ್ರಸ್ತಾವ ಇತ್ತು. ಇಂದಿಗೂ ಆ ಸ್ಮಾರಕ ಅಸ್ಪೃಶ್ಯರ (ಮಹರ್) ವೀರ ಕಥೆಗೆ ಸಾಕ್ಷಿಯಂತೆ ಇದ್ದು, ಬಾಬಾ ಸಾಹೇಬರು ಬದುಕ್ಕಿದ್ದಷ್ಟೂ ಕಾಲ ಪ್ರತಿವರ್ಷ ಜನವರಿ ಒಂದರಂದು ಭೀಮಾ ಕೋರೆಗಾಂವ್ ಗೆ ಭೇಟಿ ನೀಡಿ ಗೌರವ ಸಲ್ಲಿಸುತ್ತಿದ್ದರು.

ಇದನ್ನೂ ಓದಿ; ಕೇರಳ ರಾಜ್ಯಪಾಲರ ಪ್ರತಿಕೃತಿ ದಹನ; ಎಸ್ಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...