Homeಮುಖಪುಟಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

ಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

- Advertisement -
- Advertisement -

ದೇಶದಲ್ಲಿ 2020 ರ ಆರಂಭದಿಂದ ಕಾಣಿಸಿಕೊಂಡ ಕೊರೊನಾ ಸಾಂಕ್ರಾಮಿಕದ ಮೂರು ಅಲೆಗಳಿಂದಾಗಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 2.15 ಕೋಟಿ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಸೋಮವಾರ ಹೇಳಿದ್ದಾರೆ.

ಕೊರೊನಾ ಮೊದಲ ಅಲೆ ದೇಶದಲ್ಲಿ ಏಕಾಏಕಿ ಕಾಣಿಸಿಕೊಂಡಾಗ ಪ್ರವಾಸಿಗರ ಆಗಮನವು ಶೇಕಡಾ 93 ರಷ್ಟಿತ್ತು. ಎರಡನೇ ಅಲೆಯಲ್ಲಿ ಶೇಕಡಾ 79ಕ್ಕೆ ಇಳಿಯಿತು ಬಳಿಕ ಮೂರನೇ ಅಲೆಯಲ್ಲಿ ಪ್ರವಾಸಿಗರ ಆಗಮನ ಶೇಕಡಾ 64 ರಷ್ಟು ಕಡಿಮೆಯಾಗಿದೆ ಎಂದು ಕಿಶನ್ ರೆಡ್ಡಿ ಮಾಹಿತಿ ನೀಡಿದ್ದಾರೆ.

“ನಾವು ಪ್ರವಾಸೋದ್ಯಮದ ಮೇಲೆ ಸಾಂಕ್ರಾಮಿಕ ರೋಗದ ಪ್ರಭಾವದ ಕುರಿತು ಅಧ್ಯಯನವನ್ನು ನಡೆಸಿದ್ದೇವೆ. ಈ ಅಧ್ಯಯನದ ಪ್ರಕಾರ, ಮೊದಲ ಅಲೆಯಲ್ಲಿ 1.45 ಕೋಟಿ ಉದ್ಯೋಗ ನಷ್ಟಗಳು, ಎರಡನೇ ತರಂಗದಲ್ಲಿ 52 ಲಕ್ಷ ಮತ್ತು ಮೂರನೇ ಅಲೆಯಲ್ಲಿ 18 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

“ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿಕೊಳ್ಳುವ ಮೊದಲು ದೇಶದಲ್ಲಿ 3.8 ಕೋಟಿ ಜನರು ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಕೊರೊನಾದ ಮೂರು ಅಲೆಗಳ ಸಮಯದಲ್ಲಿ ಪ್ರವಾಸೋದ್ಯಮದ ಆರ್ಥಿಕತೆಯು ಗಮನಾರ್ಹವಾಗಿ ಕುಸಿದಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಈ ವಲಯಕ್ಕೆ ಕೆಟ್ಟ ಹೊಡೆತ ನೀಡಿದೆ” ಎಂದು ತಿಳಿಸಿದ್ದಾರೆ.

“ಈ ವಲಯಕ್ಕೆ ಸಹಾಯ ಮಾಡಲು, ಪ್ರಯಾಣ ಮತ್ತು ಪ್ರವಾಸೋದ್ಯಮದ ಪಾಲುದಾರರಿಗೆ 10 ಲಕ್ಷ ರೂ ಬಡ್ಡಿ ರಹಿತ ಸಾಲವನ್ನು ಮತ್ತು ಪ್ರವಾಸಿ ಮಾರ್ಗದರ್ಶಿಗಳಿಗೆ 1 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ತಮ್ಮ ಕೈಲಾದ ರೀತಿಯಲ್ಲಿ ಸಹಾಯ ಮಾಡುವಂತೆ ನಾನು ಎಲ್ಲಾ ರಾಜ್ಯ ಸರ್ಕಾರಗಳಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಪ್ರವಾಸಿಗರನ್ನು ಉತ್ತೇಜಿಸಲು, ಮೊದಲ ಐದು ಲಕ್ಷ ಪ್ರವಾಸಿಗರ ವೀಸಾ ಶುಲ್ಕವನ್ನು ಮನ್ನಾ ಮಾಡಲು ಸರ್ಕಾರ ಈಗಾಗಲೇ ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ, 2018 ಮತ್ತು 2020 ರ ನಡುವೆ 25,000 ಕ್ಕೂ ಹೆಚ್ಚು ಭಾರತೀಯರು ನಿರುದ್ಯೋಗ ಅಥವಾ ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಒಕ್ಕೂಟ ಸರ್ಕಾರ ರಾಜ್ಯಸಭೆಗೆ ಈ ಹಿಂದೆ ತಿಳಿಸಿತ್ತು.

ಒಕ್ಕೂಟ ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ, 2020 ರ ಸಾಂಕ್ರಾಮಿಕ ವರ್ಷದಲ್ಲಿ ಅತಿ ಹೆಚ್ಚು (3,548) ನಿರುದ್ಯೋಗಿಗಳ ಆತ್ಮಹತ್ಯೆಗಳು ವರದಿಯಾಗಿವೆ . 2018 ರಲ್ಲಿ 2,741 ಮತ್ತು 2019 ರಲ್ಲಿ 2,851 ಮಂದಿ ನಿರುದ್ಯೋಗದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿವಾಳಿತನದಿಂದಾಗಿ, ಸಾಲದಿಂದಾಗಿ 2018 ರಲ್ಲಿ 4,970 ಜನ, 2019 ರಲ್ಲಿ 5,908, 2020 ರಲ್ಲಿ 5,213 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆಯಿಂದ 3 ವರ್ಷಗಳಲ್ಲಿ 25 ಸಾವಿರ ಭಾರತೀಯರ ಆತ್ಮಹತ್ಯೆ: ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...