Homeಮುಖಪುಟಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

ಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

- Advertisement -
- Advertisement -

ದೇಶದಲ್ಲಿ 2020 ರ ಆರಂಭದಿಂದ ಕಾಣಿಸಿಕೊಂಡ ಕೊರೊನಾ ಸಾಂಕ್ರಾಮಿಕದ ಮೂರು ಅಲೆಗಳಿಂದಾಗಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 2.15 ಕೋಟಿ ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಸೋಮವಾರ ಹೇಳಿದ್ದಾರೆ.

ಕೊರೊನಾ ಮೊದಲ ಅಲೆ ದೇಶದಲ್ಲಿ ಏಕಾಏಕಿ ಕಾಣಿಸಿಕೊಂಡಾಗ ಪ್ರವಾಸಿಗರ ಆಗಮನವು ಶೇಕಡಾ 93 ರಷ್ಟಿತ್ತು. ಎರಡನೇ ಅಲೆಯಲ್ಲಿ ಶೇಕಡಾ 79ಕ್ಕೆ ಇಳಿಯಿತು ಬಳಿಕ ಮೂರನೇ ಅಲೆಯಲ್ಲಿ ಪ್ರವಾಸಿಗರ ಆಗಮನ ಶೇಕಡಾ 64 ರಷ್ಟು ಕಡಿಮೆಯಾಗಿದೆ ಎಂದು ಕಿಶನ್ ರೆಡ್ಡಿ ಮಾಹಿತಿ ನೀಡಿದ್ದಾರೆ.

“ನಾವು ಪ್ರವಾಸೋದ್ಯಮದ ಮೇಲೆ ಸಾಂಕ್ರಾಮಿಕ ರೋಗದ ಪ್ರಭಾವದ ಕುರಿತು ಅಧ್ಯಯನವನ್ನು ನಡೆಸಿದ್ದೇವೆ. ಈ ಅಧ್ಯಯನದ ಪ್ರಕಾರ, ಮೊದಲ ಅಲೆಯಲ್ಲಿ 1.45 ಕೋಟಿ ಉದ್ಯೋಗ ನಷ್ಟಗಳು, ಎರಡನೇ ತರಂಗದಲ್ಲಿ 52 ಲಕ್ಷ ಮತ್ತು ಮೂರನೇ ಅಲೆಯಲ್ಲಿ 18 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

“ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿಕೊಳ್ಳುವ ಮೊದಲು ದೇಶದಲ್ಲಿ 3.8 ಕೋಟಿ ಜನರು ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಕೊರೊನಾದ ಮೂರು ಅಲೆಗಳ ಸಮಯದಲ್ಲಿ ಪ್ರವಾಸೋದ್ಯಮದ ಆರ್ಥಿಕತೆಯು ಗಮನಾರ್ಹವಾಗಿ ಕುಸಿದಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಈ ವಲಯಕ್ಕೆ ಕೆಟ್ಟ ಹೊಡೆತ ನೀಡಿದೆ” ಎಂದು ತಿಳಿಸಿದ್ದಾರೆ.

“ಈ ವಲಯಕ್ಕೆ ಸಹಾಯ ಮಾಡಲು, ಪ್ರಯಾಣ ಮತ್ತು ಪ್ರವಾಸೋದ್ಯಮದ ಪಾಲುದಾರರಿಗೆ 10 ಲಕ್ಷ ರೂ ಬಡ್ಡಿ ರಹಿತ ಸಾಲವನ್ನು ಮತ್ತು ಪ್ರವಾಸಿ ಮಾರ್ಗದರ್ಶಿಗಳಿಗೆ 1 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ತಮ್ಮ ಕೈಲಾದ ರೀತಿಯಲ್ಲಿ ಸಹಾಯ ಮಾಡುವಂತೆ ನಾನು ಎಲ್ಲಾ ರಾಜ್ಯ ಸರ್ಕಾರಗಳಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಪ್ರವಾಸಿಗರನ್ನು ಉತ್ತೇಜಿಸಲು, ಮೊದಲ ಐದು ಲಕ್ಷ ಪ್ರವಾಸಿಗರ ವೀಸಾ ಶುಲ್ಕವನ್ನು ಮನ್ನಾ ಮಾಡಲು ಸರ್ಕಾರ ಈಗಾಗಲೇ ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ, 2018 ಮತ್ತು 2020 ರ ನಡುವೆ 25,000 ಕ್ಕೂ ಹೆಚ್ಚು ಭಾರತೀಯರು ನಿರುದ್ಯೋಗ ಅಥವಾ ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಒಕ್ಕೂಟ ಸರ್ಕಾರ ರಾಜ್ಯಸಭೆಗೆ ಈ ಹಿಂದೆ ತಿಳಿಸಿತ್ತು.

ಒಕ್ಕೂಟ ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ, 2020 ರ ಸಾಂಕ್ರಾಮಿಕ ವರ್ಷದಲ್ಲಿ ಅತಿ ಹೆಚ್ಚು (3,548) ನಿರುದ್ಯೋಗಿಗಳ ಆತ್ಮಹತ್ಯೆಗಳು ವರದಿಯಾಗಿವೆ . 2018 ರಲ್ಲಿ 2,741 ಮತ್ತು 2019 ರಲ್ಲಿ 2,851 ಮಂದಿ ನಿರುದ್ಯೋಗದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿವಾಳಿತನದಿಂದಾಗಿ, ಸಾಲದಿಂದಾಗಿ 2018 ರಲ್ಲಿ 4,970 ಜನ, 2019 ರಲ್ಲಿ 5,908, 2020 ರಲ್ಲಿ 5,213 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆಯಿಂದ 3 ವರ್ಷಗಳಲ್ಲಿ 25 ಸಾವಿರ ಭಾರತೀಯರ ಆತ್ಮಹತ್ಯೆ: ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...