Homeಮುಖಪುಟನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ...

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

- Advertisement -
- Advertisement -

ಮೇ 7 ಬುಧವಾರದಿಂದ ಮೇ 10 ಶನಿವಾರದವರೆಗೆ ನಾಲ್ಕು ದಿನಗಳಲ್ಲಿ ಭಾರತದ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ 21 ಭಾರತೀಯ ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ತಡರಾತ್ರಿ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಪಾಕಿಸ್ತಾನ ಸೇನೆ ಪದೇ ಪದೇ ಶೆಲ್ ದಾಳಿ ನಡೆಸಿದೆ. ಇದರಿಂದ ಅಮಾಯಕ ನಾಗರಿಕರು ಮತ್ತು ಸೇನಾ ಸಿಬ್ಬಂದಿಯ ಸಾವಾಗಿದೆ.

ಜಮ್ಮುವಿನಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ಪೂಂಚ್ ಜಿಲ್ಲೆಯಲ್ಲಿ ಹದಿನೈದು ಜನರು ಜೀವ ಕಳೆದುಕೊಂಡಿದ್ದಾರೆ.

ಸತ್ತವರಲ್ಲಿ ಅವಳಿ ಸಹೋದರರಾದ ಝೈನ್ ಅಲಿ ಮತ್ತು ಸಹೋದರಿ ಉರ್ವಾ ಫಾತಿಮಾ ಕೂಡ ಸೇರಿದ್ದಾರೆ. 14 ವರ್ಷದ ಈ ಇಬ್ಬರು ಮಕ್ಕಳು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೇ 7 ರಂದು ಪೂಂಚ್ ಪಟ್ಟಣದ ತಮ್ಮ ಮನೆಯ ಹೊರಗೆ ನಿಂತಿದ್ದ ವೇಳೆ ಪಾಕಿಸ್ತಾನದ ನಡೆಸಿದ ಶೆಲ್ ದಾಳಿಗೆ ಬಲಿಯಾಗಿದ್ದಾರೆ. ಈ ಮಕ್ಕಳ ತಂದೆ ರಮೀಝ್ ಖಾನ್ ಗಾಯಗೊಂಡಿದ್ದಾರೆ.

ಅದೇ ದಿನ ಪೂಂಚ್ ಪಟ್ಟಣದ ತನ್ನ ಮನೆಯ ಆವರಣದಲ್ಲಿ ಕುಳಿತಿದ್ದಾಗ 7 ವರ್ಷದ ಮರಿಯಂ ಖಾತೂನ್ ಎಂಬ ಬಾಲಕಿ ಕೂಡ ಶೆಲ್ ದಾಳಿಗೆ ಅಸುನೀಗಿದ್ದಾಳೆ.

ಪೂಂಚ್ ಜಿಲ್ಲೆಯ ಮನ್ಕೋಟ್ ಗ್ರಾಮದಲ್ಲಿ ಮೇ 7ರಂದು ನಡೆದ ಭಾರೀ ಗುಂಡಿನ ದಾಳಿಯಲ್ಲಿ 32 ವರ್ಷದ ಬಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಮೂವರು ಮಕ್ಕಳನ್ನು ಕೌರ್ ಅಗಲಿದ್ದಾರೆ. ಈಕೆಯ ಸಣ್ಣ ಮಗುವಿಗೆ ಕೇವಲ ಒಂದೂವರೆ ವರ್ಷವಾಗಿದೆ.

ಪೂಂಚ್‌ನ ಮದ್ರಸಾ ಝಿಯಾ-ಉಲ್-ಉಲೂಮ್‌ನಲ್ಲಿ ಚಿಕ್ಕ ಮಕ್ಕಳಿಗೆ ಪಾಠ ಮಾಡುತ್ತಿದ್ದ 46 ವರ್ಷದ ಧರ್ಮಗುರು ಕಾರಿ ಮುಹಮ್ಮದ್ ಇಕ್ಬಾಲ್ ಕೂಡ ಮೇ 7ರಂದು ಕೊಲ್ಲಲ್ಪಟ್ಟಿದ್ದಾರೆ. ದುರಾದೃಷ್ಟವಶಾತ್, ಭಾರತೀಯ ನಾಗರಿಕನಾಗಿರುವ ಇವರನ್ನು ಅನೇಕ ಟಿವಿ ಚಾನೆಲ್‌ಗಳು ಹತ್ಯೆಯಾದ ಭಯೋತ್ಪಾದಕ ಎಂದು ಬಿಂಬಿಸಿ ಸುದ್ದಿ ಮಾಡಿತ್ತು.

ಮಾಧ್ಯಮಗಳ ಆರೋಪಗಳಿಗೆ ಧರ್ಮಗುರು ಮುಹಮ್ಮದ್ ಇಕ್ಬಾಲ್ ಅವರ ಕುಟುಂಬ ತೀವ್ರ ಆಕ್ಷೇಪ ಮತ್ತು ದುಖಃ ವ್ಯಕ್ತಪಡಿಸಿದೆ. ಪೂಂಚ್ ಪೊಲೀಸರು ಹೇಳಿಕೆ ನೀಡಿ, “ಇಕ್ಬಾಲ್ ಅವರು ಸ್ಥಳೀಯ ಸಮುದಾಯದಲ್ಲಿ ಗೌರವಾನ್ವಿತ ಧಾರ್ಮಿಕ ವ್ಯಕ್ತಿ, ಅವರು ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ ಇಬ್ಬರು ವ್ಯಾಪಾರಿಗಳು ಶೆಲ್‌ ದಾಳಿಗೆ ಬಲಿಯಾಗಿದ್ದಾರೆ. 55 ವರ್ಷದ ಅಮ್ರೀಕ್ ಸಿಂಗ್ ಮತ್ತು 48 ವರ್ಷದ ರಂಜಿತ್ ಸಿಂಗ್ ಸಾವಿಗೀಡಾದವರು. ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ ಅಮ್ರೀಕ್ ಸಿಂಗ್, ತನ್ನ ಕುಟುಂಬದ ಏಕೈಕ ಜೀವನಾಧಾರ ಆಗಿದ್ದರು. ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಮ್ರೀಕ್ ಸಿಂಗ್ ಅಗಲಿದ್ದಾರೆ. ಅಂಗಡಿ ತೆರೆಯಲು ಹೋದಾಗ ಶೆಲ್ ದಾಳಿಗೆ ಅಮ್ರೀಕ್ ಸಿಂಗ್ ಬಲಿಯಾಗಿದ್ದಾರೆ. ಇದೇ ವೇಳೆ ಅಮ್ರೀಕ್ ಅವರ ಅಂಗಡಿಯ ಹೊರಗೆ ಇದ್ದ ರಂಜಿತ್ ಸಿಂಗ್ ಕೂಡ ಸಾವನ್ನಪ್ಪಿದ್ದಾರೆ.

ಮೇ 7ರಂದು ಬೆಳಿಗ್ಗೆ ಗುರುದ್ವಾರದಿಂದ ಮನೆಗೆ ಹೋಗುತ್ತಿದ್ದಾಗ ಶೆಲ್‌ನ ಚೂರುಗಳು ಬಡಿದು 54 ವರ್ಷದ ನಿವೃತ್ತ ಸೈನಿಕ ಅಮರ್‌ಜೀತ್ ಸಿಂಗ್ ಸಾವನ್ನಪ್ಪಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ 13 ವರ್ಷದ ಮಗು ವಿಹಾನ್ ಭಾರ್ಗವ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಮೇ 10 ಶನಿವಾರ, ಪೂಂಚ್‌ನ ಕಾಂಗ್ರಾ-ಗಲ್ಹುಟ್ಟಾ ಗ್ರಾಮದಲ್ಲಿ ಮನೆ ಮೇಲೆ ನಡೆದ ಶೆಲ್ ದಾಳಿಯಲ್ಲಿ 56 ವರ್ಷದ ರಶೀದಾ ಬಿ ಎಂಬವರು ಕೊನೆಯುಸಿರೆಳೆದಿದ್ದಾರೆ.

ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಬ್ಬರು ನಾಗರಿಕರ ಸಾವಿನ ಬಗ್ಗೆ ವರದಿಯಾಗಿದೆ. ಉರಿ ಪ್ರದೇಶದಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ 47 ವರ್ಷದ ಗೃಹಿಣಿ ನರ್ಗಿಸ್ ಬೇಗಂ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಬಳಲುತ್ತಿರುವ ತನ್ನ 14 ವರ್ಷದ ಮಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾಗ ಬೇಗಂ ಸಾವಿಗೀಡಾಗಿದ್ದಾರೆ.

ಮೇ 10ರಂದು ರಾಜೌರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಶೆಲ್‌ಗಳು ಬಡಿದು ಬಿಹಾರದ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದು, ಅವರನ್ನು 2 ವರ್ಷದ ಆಯಿಷಾ ನೂರ್ ಮತ್ತು 35 ವರ್ಷದ ಮುಹಮ್ಮದ್ ಶೋಹಿಬ್ ಎಂದು ಗುರುತಿಸಲಾಗಿದೆ.

ಅದೇ ದಿನ, ಮನೆಯೆ ಮೇಲೆ ಶೆಲ್ ಬಡಿದು ರಾಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಪ್ಪಾ ಅವರು ಸಾವನ್ನಪ್ಪಿದ್ದಾರೆ.

ಮೇ.7 ಬುಧವಾರ, ಪೂಂಚ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಸೇನೆಯ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಸಾವನ್ನಪ್ಪಿದ್ದಾರೆ.

ಮೇ 10ರಂದು ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿಯಲ್ಲಿ ಗಾಯಗೊಂಡು ಜೆ & ಕೆ ಲೈಟ್ ಇನ್‌ಫೆಂಟ್ರಿಯ ರೈಫಲ್‌ಮ್ಯಾನ್ ಸುನಿಲ್ ಕುಮಾರ್ (25) ಸಾವಿಗೀಡಾಗಿದ್ದಾರೆ.

ಭಾರತೀಯ ವಾಯುಪಡೆಯ 36ನೇ ವಿಂಗ್‌ನಲ್ಲಿ ವೈದ್ಯಕೀಯ ಸಹಾಯಕರಾಗಿದ್ದ 36 ವರ್ಷದ ಸಾರ್ಜೆಂಟ್ ಸುರೇಂದ್ರ ಕುಮಾರ್ ಮೋಗಾ ಅವರು, ಮೇ 10 ರಂದು ಉಧಂಪುರದಲ್ಲಿ ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಅದೇ ದಿನ, ಜಮ್ಮುವಿನ ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ಶೆಲ್ ದಾಳಿಯಿಂದಾಗಿ ಗಡಿ ಭದ್ರತಾ ಪಡೆಯ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತಿಯಾಝ್ ಕೊನೆಯುಸಿರೆಳೆದಿದ್ದಾರೆ.

ಹಿಮಾಚಲ ಪ್ರದೇಶದ ನಿವಾಸಿ ಮತ್ತು ಸೇನಾ ಸುಬೇದಾರ್ ಮೇಜರ್ ಆಗಿದ್ದ ಪವನ್ ಕುಮಾರ್ ಅವರನ್ನು ಮೇ 10 ರಂದು ಪೂಂಚ್‌ನ ಕೃಷ್ಣ ಘರಿ ಸೆಕ್ಟರ್‌ನಲ್ಲಿ ಕೊಲ್ಲಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...