Homeಮುಖಪುಟನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ...

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

- Advertisement -
- Advertisement -

ಮೇ 7 ಬುಧವಾರದಿಂದ ಮೇ 10 ಶನಿವಾರದವರೆಗೆ ನಾಲ್ಕು ದಿನಗಳಲ್ಲಿ ಭಾರತದ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ 21 ಭಾರತೀಯ ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ತಡರಾತ್ರಿ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಪಾಕಿಸ್ತಾನ ಸೇನೆ ಪದೇ ಪದೇ ಶೆಲ್ ದಾಳಿ ನಡೆಸಿದೆ. ಇದರಿಂದ ಅಮಾಯಕ ನಾಗರಿಕರು ಮತ್ತು ಸೇನಾ ಸಿಬ್ಬಂದಿಯ ಸಾವಾಗಿದೆ.

ಜಮ್ಮುವಿನಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ಪೂಂಚ್ ಜಿಲ್ಲೆಯಲ್ಲಿ ಹದಿನೈದು ಜನರು ಜೀವ ಕಳೆದುಕೊಂಡಿದ್ದಾರೆ.

ಸತ್ತವರಲ್ಲಿ ಅವಳಿ ಸಹೋದರರಾದ ಝೈನ್ ಅಲಿ ಮತ್ತು ಸಹೋದರಿ ಉರ್ವಾ ಫಾತಿಮಾ ಕೂಡ ಸೇರಿದ್ದಾರೆ. 14 ವರ್ಷದ ಈ ಇಬ್ಬರು ಮಕ್ಕಳು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೇ 7 ರಂದು ಪೂಂಚ್ ಪಟ್ಟಣದ ತಮ್ಮ ಮನೆಯ ಹೊರಗೆ ನಿಂತಿದ್ದ ವೇಳೆ ಪಾಕಿಸ್ತಾನದ ನಡೆಸಿದ ಶೆಲ್ ದಾಳಿಗೆ ಬಲಿಯಾಗಿದ್ದಾರೆ. ಈ ಮಕ್ಕಳ ತಂದೆ ರಮೀಝ್ ಖಾನ್ ಗಾಯಗೊಂಡಿದ್ದಾರೆ.

ಅದೇ ದಿನ ಪೂಂಚ್ ಪಟ್ಟಣದ ತನ್ನ ಮನೆಯ ಆವರಣದಲ್ಲಿ ಕುಳಿತಿದ್ದಾಗ 7 ವರ್ಷದ ಮರಿಯಂ ಖಾತೂನ್ ಎಂಬ ಬಾಲಕಿ ಕೂಡ ಶೆಲ್ ದಾಳಿಗೆ ಅಸುನೀಗಿದ್ದಾಳೆ.

ಪೂಂಚ್ ಜಿಲ್ಲೆಯ ಮನ್ಕೋಟ್ ಗ್ರಾಮದಲ್ಲಿ ಮೇ 7ರಂದು ನಡೆದ ಭಾರೀ ಗುಂಡಿನ ದಾಳಿಯಲ್ಲಿ 32 ವರ್ಷದ ಬಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಮೂವರು ಮಕ್ಕಳನ್ನು ಕೌರ್ ಅಗಲಿದ್ದಾರೆ. ಈಕೆಯ ಸಣ್ಣ ಮಗುವಿಗೆ ಕೇವಲ ಒಂದೂವರೆ ವರ್ಷವಾಗಿದೆ.

ಪೂಂಚ್‌ನ ಮದ್ರಸಾ ಝಿಯಾ-ಉಲ್-ಉಲೂಮ್‌ನಲ್ಲಿ ಚಿಕ್ಕ ಮಕ್ಕಳಿಗೆ ಪಾಠ ಮಾಡುತ್ತಿದ್ದ 46 ವರ್ಷದ ಧರ್ಮಗುರು ಕಾರಿ ಮುಹಮ್ಮದ್ ಇಕ್ಬಾಲ್ ಕೂಡ ಮೇ 7ರಂದು ಕೊಲ್ಲಲ್ಪಟ್ಟಿದ್ದಾರೆ. ದುರಾದೃಷ್ಟವಶಾತ್, ಭಾರತೀಯ ನಾಗರಿಕನಾಗಿರುವ ಇವರನ್ನು ಅನೇಕ ಟಿವಿ ಚಾನೆಲ್‌ಗಳು ಹತ್ಯೆಯಾದ ಭಯೋತ್ಪಾದಕ ಎಂದು ಬಿಂಬಿಸಿ ಸುದ್ದಿ ಮಾಡಿತ್ತು.

ಮಾಧ್ಯಮಗಳ ಆರೋಪಗಳಿಗೆ ಧರ್ಮಗುರು ಮುಹಮ್ಮದ್ ಇಕ್ಬಾಲ್ ಅವರ ಕುಟುಂಬ ತೀವ್ರ ಆಕ್ಷೇಪ ಮತ್ತು ದುಖಃ ವ್ಯಕ್ತಪಡಿಸಿದೆ. ಪೂಂಚ್ ಪೊಲೀಸರು ಹೇಳಿಕೆ ನೀಡಿ, “ಇಕ್ಬಾಲ್ ಅವರು ಸ್ಥಳೀಯ ಸಮುದಾಯದಲ್ಲಿ ಗೌರವಾನ್ವಿತ ಧಾರ್ಮಿಕ ವ್ಯಕ್ತಿ, ಅವರು ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ ಇಬ್ಬರು ವ್ಯಾಪಾರಿಗಳು ಶೆಲ್‌ ದಾಳಿಗೆ ಬಲಿಯಾಗಿದ್ದಾರೆ. 55 ವರ್ಷದ ಅಮ್ರೀಕ್ ಸಿಂಗ್ ಮತ್ತು 48 ವರ್ಷದ ರಂಜಿತ್ ಸಿಂಗ್ ಸಾವಿಗೀಡಾದವರು. ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ ಅಮ್ರೀಕ್ ಸಿಂಗ್, ತನ್ನ ಕುಟುಂಬದ ಏಕೈಕ ಜೀವನಾಧಾರ ಆಗಿದ್ದರು. ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಮ್ರೀಕ್ ಸಿಂಗ್ ಅಗಲಿದ್ದಾರೆ. ಅಂಗಡಿ ತೆರೆಯಲು ಹೋದಾಗ ಶೆಲ್ ದಾಳಿಗೆ ಅಮ್ರೀಕ್ ಸಿಂಗ್ ಬಲಿಯಾಗಿದ್ದಾರೆ. ಇದೇ ವೇಳೆ ಅಮ್ರೀಕ್ ಅವರ ಅಂಗಡಿಯ ಹೊರಗೆ ಇದ್ದ ರಂಜಿತ್ ಸಿಂಗ್ ಕೂಡ ಸಾವನ್ನಪ್ಪಿದ್ದಾರೆ.

ಮೇ 7ರಂದು ಬೆಳಿಗ್ಗೆ ಗುರುದ್ವಾರದಿಂದ ಮನೆಗೆ ಹೋಗುತ್ತಿದ್ದಾಗ ಶೆಲ್‌ನ ಚೂರುಗಳು ಬಡಿದು 54 ವರ್ಷದ ನಿವೃತ್ತ ಸೈನಿಕ ಅಮರ್‌ಜೀತ್ ಸಿಂಗ್ ಸಾವನ್ನಪ್ಪಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ 13 ವರ್ಷದ ಮಗು ವಿಹಾನ್ ಭಾರ್ಗವ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಮೇ 10 ಶನಿವಾರ, ಪೂಂಚ್‌ನ ಕಾಂಗ್ರಾ-ಗಲ್ಹುಟ್ಟಾ ಗ್ರಾಮದಲ್ಲಿ ಮನೆ ಮೇಲೆ ನಡೆದ ಶೆಲ್ ದಾಳಿಯಲ್ಲಿ 56 ವರ್ಷದ ರಶೀದಾ ಬಿ ಎಂಬವರು ಕೊನೆಯುಸಿರೆಳೆದಿದ್ದಾರೆ.

ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಬ್ಬರು ನಾಗರಿಕರ ಸಾವಿನ ಬಗ್ಗೆ ವರದಿಯಾಗಿದೆ. ಉರಿ ಪ್ರದೇಶದಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ 47 ವರ್ಷದ ಗೃಹಿಣಿ ನರ್ಗಿಸ್ ಬೇಗಂ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಬಳಲುತ್ತಿರುವ ತನ್ನ 14 ವರ್ಷದ ಮಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾಗ ಬೇಗಂ ಸಾವಿಗೀಡಾಗಿದ್ದಾರೆ.

ಮೇ 10ರಂದು ರಾಜೌರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಶೆಲ್‌ಗಳು ಬಡಿದು ಬಿಹಾರದ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದು, ಅವರನ್ನು 2 ವರ್ಷದ ಆಯಿಷಾ ನೂರ್ ಮತ್ತು 35 ವರ್ಷದ ಮುಹಮ್ಮದ್ ಶೋಹಿಬ್ ಎಂದು ಗುರುತಿಸಲಾಗಿದೆ.

ಅದೇ ದಿನ, ಮನೆಯೆ ಮೇಲೆ ಶೆಲ್ ಬಡಿದು ರಾಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಪ್ಪಾ ಅವರು ಸಾವನ್ನಪ್ಪಿದ್ದಾರೆ.

ಮೇ.7 ಬುಧವಾರ, ಪೂಂಚ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಸೇನೆಯ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಸಾವನ್ನಪ್ಪಿದ್ದಾರೆ.

ಮೇ 10ರಂದು ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿಯಲ್ಲಿ ಗಾಯಗೊಂಡು ಜೆ & ಕೆ ಲೈಟ್ ಇನ್‌ಫೆಂಟ್ರಿಯ ರೈಫಲ್‌ಮ್ಯಾನ್ ಸುನಿಲ್ ಕುಮಾರ್ (25) ಸಾವಿಗೀಡಾಗಿದ್ದಾರೆ.

ಭಾರತೀಯ ವಾಯುಪಡೆಯ 36ನೇ ವಿಂಗ್‌ನಲ್ಲಿ ವೈದ್ಯಕೀಯ ಸಹಾಯಕರಾಗಿದ್ದ 36 ವರ್ಷದ ಸಾರ್ಜೆಂಟ್ ಸುರೇಂದ್ರ ಕುಮಾರ್ ಮೋಗಾ ಅವರು, ಮೇ 10 ರಂದು ಉಧಂಪುರದಲ್ಲಿ ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಅದೇ ದಿನ, ಜಮ್ಮುವಿನ ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ಶೆಲ್ ದಾಳಿಯಿಂದಾಗಿ ಗಡಿ ಭದ್ರತಾ ಪಡೆಯ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತಿಯಾಝ್ ಕೊನೆಯುಸಿರೆಳೆದಿದ್ದಾರೆ.

ಹಿಮಾಚಲ ಪ್ರದೇಶದ ನಿವಾಸಿ ಮತ್ತು ಸೇನಾ ಸುಬೇದಾರ್ ಮೇಜರ್ ಆಗಿದ್ದ ಪವನ್ ಕುಮಾರ್ ಅವರನ್ನು ಮೇ 10 ರಂದು ಪೂಂಚ್‌ನ ಕೃಷ್ಣ ಘರಿ ಸೆಕ್ಟರ್‌ನಲ್ಲಿ ಕೊಲ್ಲಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...