Homeಮುಖಪುಟನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ...

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

- Advertisement -
- Advertisement -

ಮೇ 7 ಬುಧವಾರದಿಂದ ಮೇ 10 ಶನಿವಾರದವರೆಗೆ ನಾಲ್ಕು ದಿನಗಳಲ್ಲಿ ಭಾರತದ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ 21 ಭಾರತೀಯ ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ತಡರಾತ್ರಿ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಪಾಕಿಸ್ತಾನ ಸೇನೆ ಪದೇ ಪದೇ ಶೆಲ್ ದಾಳಿ ನಡೆಸಿದೆ. ಇದರಿಂದ ಅಮಾಯಕ ನಾಗರಿಕರು ಮತ್ತು ಸೇನಾ ಸಿಬ್ಬಂದಿಯ ಸಾವಾಗಿದೆ.

ಜಮ್ಮುವಿನಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ಪೂಂಚ್ ಜಿಲ್ಲೆಯಲ್ಲಿ ಹದಿನೈದು ಜನರು ಜೀವ ಕಳೆದುಕೊಂಡಿದ್ದಾರೆ.

ಸತ್ತವರಲ್ಲಿ ಅವಳಿ ಸಹೋದರರಾದ ಝೈನ್ ಅಲಿ ಮತ್ತು ಸಹೋದರಿ ಉರ್ವಾ ಫಾತಿಮಾ ಕೂಡ ಸೇರಿದ್ದಾರೆ. 14 ವರ್ಷದ ಈ ಇಬ್ಬರು ಮಕ್ಕಳು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೇ 7 ರಂದು ಪೂಂಚ್ ಪಟ್ಟಣದ ತಮ್ಮ ಮನೆಯ ಹೊರಗೆ ನಿಂತಿದ್ದ ವೇಳೆ ಪಾಕಿಸ್ತಾನದ ನಡೆಸಿದ ಶೆಲ್ ದಾಳಿಗೆ ಬಲಿಯಾಗಿದ್ದಾರೆ. ಈ ಮಕ್ಕಳ ತಂದೆ ರಮೀಝ್ ಖಾನ್ ಗಾಯಗೊಂಡಿದ್ದಾರೆ.

ಅದೇ ದಿನ ಪೂಂಚ್ ಪಟ್ಟಣದ ತನ್ನ ಮನೆಯ ಆವರಣದಲ್ಲಿ ಕುಳಿತಿದ್ದಾಗ 7 ವರ್ಷದ ಮರಿಯಂ ಖಾತೂನ್ ಎಂಬ ಬಾಲಕಿ ಕೂಡ ಶೆಲ್ ದಾಳಿಗೆ ಅಸುನೀಗಿದ್ದಾಳೆ.

ಪೂಂಚ್ ಜಿಲ್ಲೆಯ ಮನ್ಕೋಟ್ ಗ್ರಾಮದಲ್ಲಿ ಮೇ 7ರಂದು ನಡೆದ ಭಾರೀ ಗುಂಡಿನ ದಾಳಿಯಲ್ಲಿ 32 ವರ್ಷದ ಬಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಮೂವರು ಮಕ್ಕಳನ್ನು ಕೌರ್ ಅಗಲಿದ್ದಾರೆ. ಈಕೆಯ ಸಣ್ಣ ಮಗುವಿಗೆ ಕೇವಲ ಒಂದೂವರೆ ವರ್ಷವಾಗಿದೆ.

ಪೂಂಚ್‌ನ ಮದ್ರಸಾ ಝಿಯಾ-ಉಲ್-ಉಲೂಮ್‌ನಲ್ಲಿ ಚಿಕ್ಕ ಮಕ್ಕಳಿಗೆ ಪಾಠ ಮಾಡುತ್ತಿದ್ದ 46 ವರ್ಷದ ಧರ್ಮಗುರು ಕಾರಿ ಮುಹಮ್ಮದ್ ಇಕ್ಬಾಲ್ ಕೂಡ ಮೇ 7ರಂದು ಕೊಲ್ಲಲ್ಪಟ್ಟಿದ್ದಾರೆ. ದುರಾದೃಷ್ಟವಶಾತ್, ಭಾರತೀಯ ನಾಗರಿಕನಾಗಿರುವ ಇವರನ್ನು ಅನೇಕ ಟಿವಿ ಚಾನೆಲ್‌ಗಳು ಹತ್ಯೆಯಾದ ಭಯೋತ್ಪಾದಕ ಎಂದು ಬಿಂಬಿಸಿ ಸುದ್ದಿ ಮಾಡಿತ್ತು.

ಮಾಧ್ಯಮಗಳ ಆರೋಪಗಳಿಗೆ ಧರ್ಮಗುರು ಮುಹಮ್ಮದ್ ಇಕ್ಬಾಲ್ ಅವರ ಕುಟುಂಬ ತೀವ್ರ ಆಕ್ಷೇಪ ಮತ್ತು ದುಖಃ ವ್ಯಕ್ತಪಡಿಸಿದೆ. ಪೂಂಚ್ ಪೊಲೀಸರು ಹೇಳಿಕೆ ನೀಡಿ, “ಇಕ್ಬಾಲ್ ಅವರು ಸ್ಥಳೀಯ ಸಮುದಾಯದಲ್ಲಿ ಗೌರವಾನ್ವಿತ ಧಾರ್ಮಿಕ ವ್ಯಕ್ತಿ, ಅವರು ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ ಇಬ್ಬರು ವ್ಯಾಪಾರಿಗಳು ಶೆಲ್‌ ದಾಳಿಗೆ ಬಲಿಯಾಗಿದ್ದಾರೆ. 55 ವರ್ಷದ ಅಮ್ರೀಕ್ ಸಿಂಗ್ ಮತ್ತು 48 ವರ್ಷದ ರಂಜಿತ್ ಸಿಂಗ್ ಸಾವಿಗೀಡಾದವರು. ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ ಅಮ್ರೀಕ್ ಸಿಂಗ್, ತನ್ನ ಕುಟುಂಬದ ಏಕೈಕ ಜೀವನಾಧಾರ ಆಗಿದ್ದರು. ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಮ್ರೀಕ್ ಸಿಂಗ್ ಅಗಲಿದ್ದಾರೆ. ಅಂಗಡಿ ತೆರೆಯಲು ಹೋದಾಗ ಶೆಲ್ ದಾಳಿಗೆ ಅಮ್ರೀಕ್ ಸಿಂಗ್ ಬಲಿಯಾಗಿದ್ದಾರೆ. ಇದೇ ವೇಳೆ ಅಮ್ರೀಕ್ ಅವರ ಅಂಗಡಿಯ ಹೊರಗೆ ಇದ್ದ ರಂಜಿತ್ ಸಿಂಗ್ ಕೂಡ ಸಾವನ್ನಪ್ಪಿದ್ದಾರೆ.

ಮೇ 7ರಂದು ಬೆಳಿಗ್ಗೆ ಗುರುದ್ವಾರದಿಂದ ಮನೆಗೆ ಹೋಗುತ್ತಿದ್ದಾಗ ಶೆಲ್‌ನ ಚೂರುಗಳು ಬಡಿದು 54 ವರ್ಷದ ನಿವೃತ್ತ ಸೈನಿಕ ಅಮರ್‌ಜೀತ್ ಸಿಂಗ್ ಸಾವನ್ನಪ್ಪಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ 13 ವರ್ಷದ ಮಗು ವಿಹಾನ್ ಭಾರ್ಗವ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಮೇ 10 ಶನಿವಾರ, ಪೂಂಚ್‌ನ ಕಾಂಗ್ರಾ-ಗಲ್ಹುಟ್ಟಾ ಗ್ರಾಮದಲ್ಲಿ ಮನೆ ಮೇಲೆ ನಡೆದ ಶೆಲ್ ದಾಳಿಯಲ್ಲಿ 56 ವರ್ಷದ ರಶೀದಾ ಬಿ ಎಂಬವರು ಕೊನೆಯುಸಿರೆಳೆದಿದ್ದಾರೆ.

ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಬ್ಬರು ನಾಗರಿಕರ ಸಾವಿನ ಬಗ್ಗೆ ವರದಿಯಾಗಿದೆ. ಉರಿ ಪ್ರದೇಶದಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ 47 ವರ್ಷದ ಗೃಹಿಣಿ ನರ್ಗಿಸ್ ಬೇಗಂ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಬಳಲುತ್ತಿರುವ ತನ್ನ 14 ವರ್ಷದ ಮಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾಗ ಬೇಗಂ ಸಾವಿಗೀಡಾಗಿದ್ದಾರೆ.

ಮೇ 10ರಂದು ರಾಜೌರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಶೆಲ್‌ಗಳು ಬಡಿದು ಬಿಹಾರದ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದು, ಅವರನ್ನು 2 ವರ್ಷದ ಆಯಿಷಾ ನೂರ್ ಮತ್ತು 35 ವರ್ಷದ ಮುಹಮ್ಮದ್ ಶೋಹಿಬ್ ಎಂದು ಗುರುತಿಸಲಾಗಿದೆ.

ಅದೇ ದಿನ, ಮನೆಯೆ ಮೇಲೆ ಶೆಲ್ ಬಡಿದು ರಾಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಪ್ಪಾ ಅವರು ಸಾವನ್ನಪ್ಪಿದ್ದಾರೆ.

ಮೇ.7 ಬುಧವಾರ, ಪೂಂಚ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಸೇನೆಯ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಸಾವನ್ನಪ್ಪಿದ್ದಾರೆ.

ಮೇ 10ರಂದು ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿಯಲ್ಲಿ ಗಾಯಗೊಂಡು ಜೆ & ಕೆ ಲೈಟ್ ಇನ್‌ಫೆಂಟ್ರಿಯ ರೈಫಲ್‌ಮ್ಯಾನ್ ಸುನಿಲ್ ಕುಮಾರ್ (25) ಸಾವಿಗೀಡಾಗಿದ್ದಾರೆ.

ಭಾರತೀಯ ವಾಯುಪಡೆಯ 36ನೇ ವಿಂಗ್‌ನಲ್ಲಿ ವೈದ್ಯಕೀಯ ಸಹಾಯಕರಾಗಿದ್ದ 36 ವರ್ಷದ ಸಾರ್ಜೆಂಟ್ ಸುರೇಂದ್ರ ಕುಮಾರ್ ಮೋಗಾ ಅವರು, ಮೇ 10 ರಂದು ಉಧಂಪುರದಲ್ಲಿ ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಅದೇ ದಿನ, ಜಮ್ಮುವಿನ ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ಶೆಲ್ ದಾಳಿಯಿಂದಾಗಿ ಗಡಿ ಭದ್ರತಾ ಪಡೆಯ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತಿಯಾಝ್ ಕೊನೆಯುಸಿರೆಳೆದಿದ್ದಾರೆ.

ಹಿಮಾಚಲ ಪ್ರದೇಶದ ನಿವಾಸಿ ಮತ್ತು ಸೇನಾ ಸುಬೇದಾರ್ ಮೇಜರ್ ಆಗಿದ್ದ ಪವನ್ ಕುಮಾರ್ ಅವರನ್ನು ಮೇ 10 ರಂದು ಪೂಂಚ್‌ನ ಕೃಷ್ಣ ಘರಿ ಸೆಕ್ಟರ್‌ನಲ್ಲಿ ಕೊಲ್ಲಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...