Homeಮುಖಪುಟನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ...

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

- Advertisement -
- Advertisement -

ಮೇ 7 ಬುಧವಾರದಿಂದ ಮೇ 10 ಶನಿವಾರದವರೆಗೆ ನಾಲ್ಕು ದಿನಗಳಲ್ಲಿ ಭಾರತದ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ 21 ಭಾರತೀಯ ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ತಡರಾತ್ರಿ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಪಾಕಿಸ್ತಾನ ಸೇನೆ ಪದೇ ಪದೇ ಶೆಲ್ ದಾಳಿ ನಡೆಸಿದೆ. ಇದರಿಂದ ಅಮಾಯಕ ನಾಗರಿಕರು ಮತ್ತು ಸೇನಾ ಸಿಬ್ಬಂದಿಯ ಸಾವಾಗಿದೆ.

ಜಮ್ಮುವಿನಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ಪೂಂಚ್ ಜಿಲ್ಲೆಯಲ್ಲಿ ಹದಿನೈದು ಜನರು ಜೀವ ಕಳೆದುಕೊಂಡಿದ್ದಾರೆ.

ಸತ್ತವರಲ್ಲಿ ಅವಳಿ ಸಹೋದರರಾದ ಝೈನ್ ಅಲಿ ಮತ್ತು ಸಹೋದರಿ ಉರ್ವಾ ಫಾತಿಮಾ ಕೂಡ ಸೇರಿದ್ದಾರೆ. 14 ವರ್ಷದ ಈ ಇಬ್ಬರು ಮಕ್ಕಳು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೇ 7 ರಂದು ಪೂಂಚ್ ಪಟ್ಟಣದ ತಮ್ಮ ಮನೆಯ ಹೊರಗೆ ನಿಂತಿದ್ದ ವೇಳೆ ಪಾಕಿಸ್ತಾನದ ನಡೆಸಿದ ಶೆಲ್ ದಾಳಿಗೆ ಬಲಿಯಾಗಿದ್ದಾರೆ. ಈ ಮಕ್ಕಳ ತಂದೆ ರಮೀಝ್ ಖಾನ್ ಗಾಯಗೊಂಡಿದ್ದಾರೆ.

ಅದೇ ದಿನ ಪೂಂಚ್ ಪಟ್ಟಣದ ತನ್ನ ಮನೆಯ ಆವರಣದಲ್ಲಿ ಕುಳಿತಿದ್ದಾಗ 7 ವರ್ಷದ ಮರಿಯಂ ಖಾತೂನ್ ಎಂಬ ಬಾಲಕಿ ಕೂಡ ಶೆಲ್ ದಾಳಿಗೆ ಅಸುನೀಗಿದ್ದಾಳೆ.

ಪೂಂಚ್ ಜಿಲ್ಲೆಯ ಮನ್ಕೋಟ್ ಗ್ರಾಮದಲ್ಲಿ ಮೇ 7ರಂದು ನಡೆದ ಭಾರೀ ಗುಂಡಿನ ದಾಳಿಯಲ್ಲಿ 32 ವರ್ಷದ ಬಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಮೂವರು ಮಕ್ಕಳನ್ನು ಕೌರ್ ಅಗಲಿದ್ದಾರೆ. ಈಕೆಯ ಸಣ್ಣ ಮಗುವಿಗೆ ಕೇವಲ ಒಂದೂವರೆ ವರ್ಷವಾಗಿದೆ.

ಪೂಂಚ್‌ನ ಮದ್ರಸಾ ಝಿಯಾ-ಉಲ್-ಉಲೂಮ್‌ನಲ್ಲಿ ಚಿಕ್ಕ ಮಕ್ಕಳಿಗೆ ಪಾಠ ಮಾಡುತ್ತಿದ್ದ 46 ವರ್ಷದ ಧರ್ಮಗುರು ಕಾರಿ ಮುಹಮ್ಮದ್ ಇಕ್ಬಾಲ್ ಕೂಡ ಮೇ 7ರಂದು ಕೊಲ್ಲಲ್ಪಟ್ಟಿದ್ದಾರೆ. ದುರಾದೃಷ್ಟವಶಾತ್, ಭಾರತೀಯ ನಾಗರಿಕನಾಗಿರುವ ಇವರನ್ನು ಅನೇಕ ಟಿವಿ ಚಾನೆಲ್‌ಗಳು ಹತ್ಯೆಯಾದ ಭಯೋತ್ಪಾದಕ ಎಂದು ಬಿಂಬಿಸಿ ಸುದ್ದಿ ಮಾಡಿತ್ತು.

ಮಾಧ್ಯಮಗಳ ಆರೋಪಗಳಿಗೆ ಧರ್ಮಗುರು ಮುಹಮ್ಮದ್ ಇಕ್ಬಾಲ್ ಅವರ ಕುಟುಂಬ ತೀವ್ರ ಆಕ್ಷೇಪ ಮತ್ತು ದುಖಃ ವ್ಯಕ್ತಪಡಿಸಿದೆ. ಪೂಂಚ್ ಪೊಲೀಸರು ಹೇಳಿಕೆ ನೀಡಿ, “ಇಕ್ಬಾಲ್ ಅವರು ಸ್ಥಳೀಯ ಸಮುದಾಯದಲ್ಲಿ ಗೌರವಾನ್ವಿತ ಧಾರ್ಮಿಕ ವ್ಯಕ್ತಿ, ಅವರು ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ ಇಬ್ಬರು ವ್ಯಾಪಾರಿಗಳು ಶೆಲ್‌ ದಾಳಿಗೆ ಬಲಿಯಾಗಿದ್ದಾರೆ. 55 ವರ್ಷದ ಅಮ್ರೀಕ್ ಸಿಂಗ್ ಮತ್ತು 48 ವರ್ಷದ ರಂಜಿತ್ ಸಿಂಗ್ ಸಾವಿಗೀಡಾದವರು. ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ ಅಮ್ರೀಕ್ ಸಿಂಗ್, ತನ್ನ ಕುಟುಂಬದ ಏಕೈಕ ಜೀವನಾಧಾರ ಆಗಿದ್ದರು. ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಮ್ರೀಕ್ ಸಿಂಗ್ ಅಗಲಿದ್ದಾರೆ. ಅಂಗಡಿ ತೆರೆಯಲು ಹೋದಾಗ ಶೆಲ್ ದಾಳಿಗೆ ಅಮ್ರೀಕ್ ಸಿಂಗ್ ಬಲಿಯಾಗಿದ್ದಾರೆ. ಇದೇ ವೇಳೆ ಅಮ್ರೀಕ್ ಅವರ ಅಂಗಡಿಯ ಹೊರಗೆ ಇದ್ದ ರಂಜಿತ್ ಸಿಂಗ್ ಕೂಡ ಸಾವನ್ನಪ್ಪಿದ್ದಾರೆ.

ಮೇ 7ರಂದು ಬೆಳಿಗ್ಗೆ ಗುರುದ್ವಾರದಿಂದ ಮನೆಗೆ ಹೋಗುತ್ತಿದ್ದಾಗ ಶೆಲ್‌ನ ಚೂರುಗಳು ಬಡಿದು 54 ವರ್ಷದ ನಿವೃತ್ತ ಸೈನಿಕ ಅಮರ್‌ಜೀತ್ ಸಿಂಗ್ ಸಾವನ್ನಪ್ಪಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ 13 ವರ್ಷದ ಮಗು ವಿಹಾನ್ ಭಾರ್ಗವ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಮೇ 10 ಶನಿವಾರ, ಪೂಂಚ್‌ನ ಕಾಂಗ್ರಾ-ಗಲ್ಹುಟ್ಟಾ ಗ್ರಾಮದಲ್ಲಿ ಮನೆ ಮೇಲೆ ನಡೆದ ಶೆಲ್ ದಾಳಿಯಲ್ಲಿ 56 ವರ್ಷದ ರಶೀದಾ ಬಿ ಎಂಬವರು ಕೊನೆಯುಸಿರೆಳೆದಿದ್ದಾರೆ.

ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಬ್ಬರು ನಾಗರಿಕರ ಸಾವಿನ ಬಗ್ಗೆ ವರದಿಯಾಗಿದೆ. ಉರಿ ಪ್ರದೇಶದಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ 47 ವರ್ಷದ ಗೃಹಿಣಿ ನರ್ಗಿಸ್ ಬೇಗಂ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಬಳಲುತ್ತಿರುವ ತನ್ನ 14 ವರ್ಷದ ಮಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾಗ ಬೇಗಂ ಸಾವಿಗೀಡಾಗಿದ್ದಾರೆ.

ಮೇ 10ರಂದು ರಾಜೌರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಶೆಲ್‌ಗಳು ಬಡಿದು ಬಿಹಾರದ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದು, ಅವರನ್ನು 2 ವರ್ಷದ ಆಯಿಷಾ ನೂರ್ ಮತ್ತು 35 ವರ್ಷದ ಮುಹಮ್ಮದ್ ಶೋಹಿಬ್ ಎಂದು ಗುರುತಿಸಲಾಗಿದೆ.

ಅದೇ ದಿನ, ಮನೆಯೆ ಮೇಲೆ ಶೆಲ್ ಬಡಿದು ರಾಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಪ್ಪಾ ಅವರು ಸಾವನ್ನಪ್ಪಿದ್ದಾರೆ.

ಮೇ.7 ಬುಧವಾರ, ಪೂಂಚ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಸೇನೆಯ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಸಾವನ್ನಪ್ಪಿದ್ದಾರೆ.

ಮೇ 10ರಂದು ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿಯಲ್ಲಿ ಗಾಯಗೊಂಡು ಜೆ & ಕೆ ಲೈಟ್ ಇನ್‌ಫೆಂಟ್ರಿಯ ರೈಫಲ್‌ಮ್ಯಾನ್ ಸುನಿಲ್ ಕುಮಾರ್ (25) ಸಾವಿಗೀಡಾಗಿದ್ದಾರೆ.

ಭಾರತೀಯ ವಾಯುಪಡೆಯ 36ನೇ ವಿಂಗ್‌ನಲ್ಲಿ ವೈದ್ಯಕೀಯ ಸಹಾಯಕರಾಗಿದ್ದ 36 ವರ್ಷದ ಸಾರ್ಜೆಂಟ್ ಸುರೇಂದ್ರ ಕುಮಾರ್ ಮೋಗಾ ಅವರು, ಮೇ 10 ರಂದು ಉಧಂಪುರದಲ್ಲಿ ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಅದೇ ದಿನ, ಜಮ್ಮುವಿನ ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ಶೆಲ್ ದಾಳಿಯಿಂದಾಗಿ ಗಡಿ ಭದ್ರತಾ ಪಡೆಯ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತಿಯಾಝ್ ಕೊನೆಯುಸಿರೆಳೆದಿದ್ದಾರೆ.

ಹಿಮಾಚಲ ಪ್ರದೇಶದ ನಿವಾಸಿ ಮತ್ತು ಸೇನಾ ಸುಬೇದಾರ್ ಮೇಜರ್ ಆಗಿದ್ದ ಪವನ್ ಕುಮಾರ್ ಅವರನ್ನು ಮೇ 10 ರಂದು ಪೂಂಚ್‌ನ ಕೃಷ್ಣ ಘರಿ ಸೆಕ್ಟರ್‌ನಲ್ಲಿ ಕೊಲ್ಲಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...