Homeಮುಖಪುಟನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ...

ನಾಲ್ಕು ದಿನಗಳ ಭಾರತ-ಪಾಕ್‌ ಸಂಘರ್ಷ: ಜಮ್ಮು ಕಾಶ್ಮೀರದಲ್ಲಿ 21 ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವು

- Advertisement -
- Advertisement -

ಮೇ 7 ಬುಧವಾರದಿಂದ ಮೇ 10 ಶನಿವಾರದವರೆಗೆ ನಾಲ್ಕು ದಿನಗಳಲ್ಲಿ ಭಾರತದ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ 21 ಭಾರತೀಯ ನಾಗರಿಕರು, ಐವರು ಸಶಸ್ತ್ರ ಪಡೆ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು ತಡರಾತ್ರಿ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಪಾಕಿಸ್ತಾನ ಸೇನೆ ಪದೇ ಪದೇ ಶೆಲ್ ದಾಳಿ ನಡೆಸಿದೆ. ಇದರಿಂದ ಅಮಾಯಕ ನಾಗರಿಕರು ಮತ್ತು ಸೇನಾ ಸಿಬ್ಬಂದಿಯ ಸಾವಾಗಿದೆ.

ಜಮ್ಮುವಿನಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ಪೂಂಚ್ ಜಿಲ್ಲೆಯಲ್ಲಿ ಹದಿನೈದು ಜನರು ಜೀವ ಕಳೆದುಕೊಂಡಿದ್ದಾರೆ.

ಸತ್ತವರಲ್ಲಿ ಅವಳಿ ಸಹೋದರರಾದ ಝೈನ್ ಅಲಿ ಮತ್ತು ಸಹೋದರಿ ಉರ್ವಾ ಫಾತಿಮಾ ಕೂಡ ಸೇರಿದ್ದಾರೆ. 14 ವರ್ಷದ ಈ ಇಬ್ಬರು ಮಕ್ಕಳು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೇ 7 ರಂದು ಪೂಂಚ್ ಪಟ್ಟಣದ ತಮ್ಮ ಮನೆಯ ಹೊರಗೆ ನಿಂತಿದ್ದ ವೇಳೆ ಪಾಕಿಸ್ತಾನದ ನಡೆಸಿದ ಶೆಲ್ ದಾಳಿಗೆ ಬಲಿಯಾಗಿದ್ದಾರೆ. ಈ ಮಕ್ಕಳ ತಂದೆ ರಮೀಝ್ ಖಾನ್ ಗಾಯಗೊಂಡಿದ್ದಾರೆ.

ಅದೇ ದಿನ ಪೂಂಚ್ ಪಟ್ಟಣದ ತನ್ನ ಮನೆಯ ಆವರಣದಲ್ಲಿ ಕುಳಿತಿದ್ದಾಗ 7 ವರ್ಷದ ಮರಿಯಂ ಖಾತೂನ್ ಎಂಬ ಬಾಲಕಿ ಕೂಡ ಶೆಲ್ ದಾಳಿಗೆ ಅಸುನೀಗಿದ್ದಾಳೆ.

ಪೂಂಚ್ ಜಿಲ್ಲೆಯ ಮನ್ಕೋಟ್ ಗ್ರಾಮದಲ್ಲಿ ಮೇ 7ರಂದು ನಡೆದ ಭಾರೀ ಗುಂಡಿನ ದಾಳಿಯಲ್ಲಿ 32 ವರ್ಷದ ಬಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಮೂವರು ಮಕ್ಕಳನ್ನು ಕೌರ್ ಅಗಲಿದ್ದಾರೆ. ಈಕೆಯ ಸಣ್ಣ ಮಗುವಿಗೆ ಕೇವಲ ಒಂದೂವರೆ ವರ್ಷವಾಗಿದೆ.

ಪೂಂಚ್‌ನ ಮದ್ರಸಾ ಝಿಯಾ-ಉಲ್-ಉಲೂಮ್‌ನಲ್ಲಿ ಚಿಕ್ಕ ಮಕ್ಕಳಿಗೆ ಪಾಠ ಮಾಡುತ್ತಿದ್ದ 46 ವರ್ಷದ ಧರ್ಮಗುರು ಕಾರಿ ಮುಹಮ್ಮದ್ ಇಕ್ಬಾಲ್ ಕೂಡ ಮೇ 7ರಂದು ಕೊಲ್ಲಲ್ಪಟ್ಟಿದ್ದಾರೆ. ದುರಾದೃಷ್ಟವಶಾತ್, ಭಾರತೀಯ ನಾಗರಿಕನಾಗಿರುವ ಇವರನ್ನು ಅನೇಕ ಟಿವಿ ಚಾನೆಲ್‌ಗಳು ಹತ್ಯೆಯಾದ ಭಯೋತ್ಪಾದಕ ಎಂದು ಬಿಂಬಿಸಿ ಸುದ್ದಿ ಮಾಡಿತ್ತು.

ಮಾಧ್ಯಮಗಳ ಆರೋಪಗಳಿಗೆ ಧರ್ಮಗುರು ಮುಹಮ್ಮದ್ ಇಕ್ಬಾಲ್ ಅವರ ಕುಟುಂಬ ತೀವ್ರ ಆಕ್ಷೇಪ ಮತ್ತು ದುಖಃ ವ್ಯಕ್ತಪಡಿಸಿದೆ. ಪೂಂಚ್ ಪೊಲೀಸರು ಹೇಳಿಕೆ ನೀಡಿ, “ಇಕ್ಬಾಲ್ ಅವರು ಸ್ಥಳೀಯ ಸಮುದಾಯದಲ್ಲಿ ಗೌರವಾನ್ವಿತ ಧಾರ್ಮಿಕ ವ್ಯಕ್ತಿ, ಅವರು ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ ಇಬ್ಬರು ವ್ಯಾಪಾರಿಗಳು ಶೆಲ್‌ ದಾಳಿಗೆ ಬಲಿಯಾಗಿದ್ದಾರೆ. 55 ವರ್ಷದ ಅಮ್ರೀಕ್ ಸಿಂಗ್ ಮತ್ತು 48 ವರ್ಷದ ರಂಜಿತ್ ಸಿಂಗ್ ಸಾವಿಗೀಡಾದವರು. ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ ಅಮ್ರೀಕ್ ಸಿಂಗ್, ತನ್ನ ಕುಟುಂಬದ ಏಕೈಕ ಜೀವನಾಧಾರ ಆಗಿದ್ದರು. ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಮ್ರೀಕ್ ಸಿಂಗ್ ಅಗಲಿದ್ದಾರೆ. ಅಂಗಡಿ ತೆರೆಯಲು ಹೋದಾಗ ಶೆಲ್ ದಾಳಿಗೆ ಅಮ್ರೀಕ್ ಸಿಂಗ್ ಬಲಿಯಾಗಿದ್ದಾರೆ. ಇದೇ ವೇಳೆ ಅಮ್ರೀಕ್ ಅವರ ಅಂಗಡಿಯ ಹೊರಗೆ ಇದ್ದ ರಂಜಿತ್ ಸಿಂಗ್ ಕೂಡ ಸಾವನ್ನಪ್ಪಿದ್ದಾರೆ.

ಮೇ 7ರಂದು ಬೆಳಿಗ್ಗೆ ಗುರುದ್ವಾರದಿಂದ ಮನೆಗೆ ಹೋಗುತ್ತಿದ್ದಾಗ ಶೆಲ್‌ನ ಚೂರುಗಳು ಬಡಿದು 54 ವರ್ಷದ ನಿವೃತ್ತ ಸೈನಿಕ ಅಮರ್‌ಜೀತ್ ಸಿಂಗ್ ಸಾವನ್ನಪ್ಪಿದ್ದಾರೆ.

ಮೇ 7ರಂದು ಪೂಂಚ್‌ನಲ್ಲಿ 13 ವರ್ಷದ ಮಗು ವಿಹಾನ್ ಭಾರ್ಗವ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಮೇ 10 ಶನಿವಾರ, ಪೂಂಚ್‌ನ ಕಾಂಗ್ರಾ-ಗಲ್ಹುಟ್ಟಾ ಗ್ರಾಮದಲ್ಲಿ ಮನೆ ಮೇಲೆ ನಡೆದ ಶೆಲ್ ದಾಳಿಯಲ್ಲಿ 56 ವರ್ಷದ ರಶೀದಾ ಬಿ ಎಂಬವರು ಕೊನೆಯುಸಿರೆಳೆದಿದ್ದಾರೆ.

ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಬ್ಬರು ನಾಗರಿಕರ ಸಾವಿನ ಬಗ್ಗೆ ವರದಿಯಾಗಿದೆ. ಉರಿ ಪ್ರದೇಶದಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ 47 ವರ್ಷದ ಗೃಹಿಣಿ ನರ್ಗಿಸ್ ಬೇಗಂ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಬಳಲುತ್ತಿರುವ ತನ್ನ 14 ವರ್ಷದ ಮಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾಗ ಬೇಗಂ ಸಾವಿಗೀಡಾಗಿದ್ದಾರೆ.

ಮೇ 10ರಂದು ರಾಜೌರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಶೆಲ್‌ಗಳು ಬಡಿದು ಬಿಹಾರದ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದು, ಅವರನ್ನು 2 ವರ್ಷದ ಆಯಿಷಾ ನೂರ್ ಮತ್ತು 35 ವರ್ಷದ ಮುಹಮ್ಮದ್ ಶೋಹಿಬ್ ಎಂದು ಗುರುತಿಸಲಾಗಿದೆ.

ಅದೇ ದಿನ, ಮನೆಯೆ ಮೇಲೆ ಶೆಲ್ ಬಡಿದು ರಾಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಪ್ಪಾ ಅವರು ಸಾವನ್ನಪ್ಪಿದ್ದಾರೆ.

ಮೇ.7 ಬುಧವಾರ, ಪೂಂಚ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಸೇನೆಯ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಸಾವನ್ನಪ್ಪಿದ್ದಾರೆ.

ಮೇ 10ರಂದು ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿಯಲ್ಲಿ ಗಾಯಗೊಂಡು ಜೆ & ಕೆ ಲೈಟ್ ಇನ್‌ಫೆಂಟ್ರಿಯ ರೈಫಲ್‌ಮ್ಯಾನ್ ಸುನಿಲ್ ಕುಮಾರ್ (25) ಸಾವಿಗೀಡಾಗಿದ್ದಾರೆ.

ಭಾರತೀಯ ವಾಯುಪಡೆಯ 36ನೇ ವಿಂಗ್‌ನಲ್ಲಿ ವೈದ್ಯಕೀಯ ಸಹಾಯಕರಾಗಿದ್ದ 36 ವರ್ಷದ ಸಾರ್ಜೆಂಟ್ ಸುರೇಂದ್ರ ಕುಮಾರ್ ಮೋಗಾ ಅವರು, ಮೇ 10 ರಂದು ಉಧಂಪುರದಲ್ಲಿ ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಅದೇ ದಿನ, ಜಮ್ಮುವಿನ ಆರ್‌ಎಸ್ ಪುರ ಸೆಕ್ಟರ್‌ನಲ್ಲಿ ಶೆಲ್ ದಾಳಿಯಿಂದಾಗಿ ಗಡಿ ಭದ್ರತಾ ಪಡೆಯ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತಿಯಾಝ್ ಕೊನೆಯುಸಿರೆಳೆದಿದ್ದಾರೆ.

ಹಿಮಾಚಲ ಪ್ರದೇಶದ ನಿವಾಸಿ ಮತ್ತು ಸೇನಾ ಸುಬೇದಾರ್ ಮೇಜರ್ ಆಗಿದ್ದ ಪವನ್ ಕುಮಾರ್ ಅವರನ್ನು ಮೇ 10 ರಂದು ಪೂಂಚ್‌ನ ಕೃಷ್ಣ ಘರಿ ಸೆಕ್ಟರ್‌ನಲ್ಲಿ ಕೊಲ್ಲಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಶಾಂತ ರಾತ್ರಿ, ಯಾವುದೇ ಘಟನೆಗಳು ವರದಿಯಾಗಿಲ್ಲ: ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...