Homeಕರ್ನಾಟಕದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

- Advertisement -
- Advertisement -

ದಲಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ತುಮಕೂರಿನ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ (ನ.20) ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಇಂದು (ನ.21) ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ದಲಿತ ಸಮುದಾಯದ ಹೊನ್ನಮ್ಮ ಎಂಬವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ಈ ಪ್ರಕರಣದ ತನಿಖೆ, ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್‌ ಜ್ಯೋತಿ ಹೇಳಿದ್ದಾಗಿ ವರದಿಯಾಗಿದೆ.

ಗೋಪಾಲಪುರದ ಹೊನ್ನಮ್ಮ ಅವರು ಡಾಬಾ ನಡೆಸುತ್ತಿದ್ದರು. ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಅವುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಹೊನ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮ ನಡುವೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯ ಜಗಳ ನಡೆಯುತ್ತಿತ್ತು. ಹೊನ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರೆದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

2010ರಲ್ಲಿ ನಡೆದ ಈ ಕೊಲೆ ಸಂಬಂಧ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈಗ 2014ರಲ್ಲಿ ತೀರ್ಪು ಪ್ರಕಟಗೊಂಡಿದೆ.

ಪ್ರಕರಣ ಆರೋಪಿಗಳಾಗಿದ್ದ ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ-ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅವರನ್ನು ಅಪರಾಧಿಗಳೆಂದು ಘೋಷಿಸಿದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪ್ರಕರಣ ಇತರ 6 ಆರೋಪಿಗಳಾಗಿದ್ದ ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ ,ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ : ಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...