Homeಕರ್ನಾಟಕದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

- Advertisement -
- Advertisement -

ದಲಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ತುಮಕೂರಿನ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ (ನ.20) ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಇಂದು (ನ.21) ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ದಲಿತ ಸಮುದಾಯದ ಹೊನ್ನಮ್ಮ ಎಂಬವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ಈ ಪ್ರಕರಣದ ತನಿಖೆ, ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್‌ ಜ್ಯೋತಿ ಹೇಳಿದ್ದಾಗಿ ವರದಿಯಾಗಿದೆ.

ಗೋಪಾಲಪುರದ ಹೊನ್ನಮ್ಮ ಅವರು ಡಾಬಾ ನಡೆಸುತ್ತಿದ್ದರು. ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಅವುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಹೊನ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮ ನಡುವೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯ ಜಗಳ ನಡೆಯುತ್ತಿತ್ತು. ಹೊನ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರೆದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

2010ರಲ್ಲಿ ನಡೆದ ಈ ಕೊಲೆ ಸಂಬಂಧ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈಗ 2014ರಲ್ಲಿ ತೀರ್ಪು ಪ್ರಕಟಗೊಂಡಿದೆ.

ಪ್ರಕರಣ ಆರೋಪಿಗಳಾಗಿದ್ದ ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ-ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅವರನ್ನು ಅಪರಾಧಿಗಳೆಂದು ಘೋಷಿಸಿದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪ್ರಕರಣ ಇತರ 6 ಆರೋಪಿಗಳಾಗಿದ್ದ ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ ,ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ : ಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...