Homeಮುಖಪುಟ21 ದಿನ ಲಾಕ್‌ಡೌನ್‌ : ಸಾಲದ ಭಯಕ್ಕೆ ಆಂಧ್ರದ ದಂಪತಿ ಆತ್ಮಹತ್ಯೆ

21 ದಿನ ಲಾಕ್‌ಡೌನ್‌ : ಸಾಲದ ಭಯಕ್ಕೆ ಆಂಧ್ರದ ದಂಪತಿ ಆತ್ಮಹತ್ಯೆ

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಕಾರಣಕ್ಕಾಗಿ ಘೋಷಿಸಲಾಗಿರುವ 21 ದಿನ ಲಾಕ್‌ಡೌನ್‌‌ನಿಂದಾಗಿ ಸಾಲ ತೀರಿಸಲಾಗದ ಭಯಕ್ಕೆ ಆಂಧ್ರಪ್ರದೇಶದ ದಂಪತಿಗಿಳಿಬ್ಬರು ಆತ್ಮಹತ್ಯೆ ಮಾಡಿಕೊಡಿರುವ ದುರ್ಘಟನೆ ಶುಕ್ರವಾರ ಜರುಗಿದೆ.

ಆಟೋ ಚಾಲಕನಾದ ಸತೀಶ್‌ (38) ಮತ್ತು ಆಕೆಯ ಪತ್ನಿ ವೀರವೆಂಕಟಲಕ್ಷ್ಮಿ (35) ಇವರೇ ಆತ್ಮಹತ್ಯೆಗೊಳಗಾದ ದುರ್ದೈವಿಗಳಾಗಿದ್ದು, ಈ ಘಟನೆಯು ಆಂಧ್ರಪ್ರದೇಶದ ತರ‍್ಪು ಗೋದಾವರಿ ಜಿಲ್ಲಾ ರಾಜ ಮಹೇಂದ್ರವರಂನಲ್ಲಿ ನಡೆದಿದೆ.

ಪೋಲೀಸರ ಹೇಳಿಕೆಯ ಪ್ರಕಾರ ಬಾಬಾನಗರಕ್ಕೆ ಸೇರಿದ ಸತೀಶ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆತನಿಗೆ ನರಗಳಿಗೆ ಸಂಬಂಧಿಸಿದ ಕಾಯಿಲೆ ಇತ್ತು. ಆತನ ಪತ್ನಿ ವೆಂಕಟಲಕ್ಷ್ಮಿಯವರ ಕಿಡ್ನಿ ಸಹ ಹಾಳಗಿದ್ದವು. ಇಬ್ಬರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೊಂದು ಕಡೆ ಫೈನಾನ್ಸ್ ಸಾಲದಿಂದ ಆಟೋ ಖರೀದಿಸಿದ್ದು, ಅದರ ಕಂತುಗಳನ್ನು ಕಟ್ಟಲು ಕಷ್ಟಪಡುವ ಸಂದರ್ಭ ನಿರ್ಮಾಣವಾಗಿತ್ತು. ಇದೇ ಸಮಯಕ್ಕೆ ಕೊರೊನಾ ವೈರಸ್‌ನಿಂದ ಲಾಕ್‌ಡೌನ್ ಆದ ಕಾರಣ ಅವರಿಗೆ ದುಡಿಮೆಯೇ ಇಲ್ಲದಂತೆ ಆಗಿದೆ. ಈ ವೇಳೆ ಸಾಲ ತೀರಿಸಲು ಆಗದೆ, ಮತ್ತೊಂದೆಡೆ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುಲು ಸಾಧ್ಯವಾಗದೇ ಮಧ್ಯರಾತ್ರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಮನೆಹತ್ತಿರವೇ ಕಸದಲ್ಲಿ ಸುಟ್ಟು ಹೋಗಿದ್ದ ಶವಗಳನ್ನು ನೋಡಿ ಸ್ಥಳೀಯರು ಪೋಲಿಸರಿಗೆ ದೂರು ನೀಡಿದ್ದಾರೆ. ಘಟನೆಯ ಸ್ಥಳದಲ್ಲಿ ಸಿಕ್ಕ ಡೆತ್‌ ನೋಟ್‌ನಲ್ಲಿ, ಆರ್ಥಿಕ ಸಮಸ್ಯೆಗಳೊಂದಿಗೆ ಕೊರೊನಾ ಲಾಕ್‌ಡೌನ್ ಇಂದ ದುಡಿಮೆ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಇದರ ಕುರಿತು ಸತೀಶ್‌ ಸಹೋದರ ವೆಂಕಟ್‌ರಾವ್‌ರವರನ್ನು ವಿಚಾರಿಸಿದಾಗ ಅವರು ಆರ್ಥಿಕ ಸಮಸ್ಯೆಗಳಿಂದ ತುಂಬಾ ಕಷ್ಟ ಅನುಭವಿಸುತ್ತಿದ್ದರು ಎಂದು ಹೇಳಿದ್ದಾರೆ. ಪೋಲಿಸರು ಅನುಮಾನಸ್ಫದ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.

ಆರ್‌ಬಿಐ ಸಾಲ ಮರುಪಾವತಿ ಕಂತುಗಳನ್ನು ಮೂರು ತಿಂಗಳು ಮುಂದೂಡಿರುವ ವಿಚಾರ ಅವರಿಗೆ ತಿಳಿದಿತ್ತೆ ಇಲ್ಲವೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಒಟ್ಟಿನಲ್ಲಿ ಬಡವರಿಗೆ ಶಕ್ತಿ ತುಂಬುವ ಕೆಲಸಗಳು ಸರ್ಕಾರದ ಕಡೆಯಿಂದ ಜರುಗಬೇಕು ಎಂಬು ಒತ್ತಾಯಗಳು ಕೇಳಿಬಂದಿವೆ.

ಸರ್ಕಾರ ಕೊರೊನಾ ವೈರಸ್ ಹರಡದಂತೆ ಲಾಕ್‌ಡೌನ್ ಮಾಡಿರುವುದು ಸರಿ. ಆದರೆ ಬೇರೆ ದೇಶಗಳಲ್ಲಿ ಇರುವ ಶ್ರೀಮಂತರನ್ನು ವಿಮಾನದಲ್ಲಿ ಕರೆತರುವಂತೆ ನಿರ್ಗತಿಕರು, ದಿನಗೂಲಿಗಳು, ಸಾಲ ಮಾಡಿಕೊಂಡು ತಮ್ಮ ಬದುಕು ಕಟ್ಟಿಕೊಳ್ಳುತ್ತಿರುವವರು ಎಲ್ಲರ ಬದುಕು ಲಾಕ್ ಡೌನ್ ಆಗದಂತೆ ಎಚ್ಚರವಹಿಸಬೇಕಿದೆ. ಸರ್ಕಾರಿ ಆಧಿಕಾರಿಗಳನ್ನು ಹೆಚ್ಚು ಹೆಚ್ಚು ಬಡವರ ಜೀವನ ಅಸ್ಥವ್ಯಸ್ಥ ಆಗದಂತೆ ನೋಡಿಕೊಳ್ಳುವಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...