Homeಮುಖಪುಟ21 ದಿನ ಲಾಕ್‌ಡೌನ್‌ : ಸಾಲದ ಭಯಕ್ಕೆ ಆಂಧ್ರದ ದಂಪತಿ ಆತ್ಮಹತ್ಯೆ

21 ದಿನ ಲಾಕ್‌ಡೌನ್‌ : ಸಾಲದ ಭಯಕ್ಕೆ ಆಂಧ್ರದ ದಂಪತಿ ಆತ್ಮಹತ್ಯೆ

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಕಾರಣಕ್ಕಾಗಿ ಘೋಷಿಸಲಾಗಿರುವ 21 ದಿನ ಲಾಕ್‌ಡೌನ್‌‌ನಿಂದಾಗಿ ಸಾಲ ತೀರಿಸಲಾಗದ ಭಯಕ್ಕೆ ಆಂಧ್ರಪ್ರದೇಶದ ದಂಪತಿಗಿಳಿಬ್ಬರು ಆತ್ಮಹತ್ಯೆ ಮಾಡಿಕೊಡಿರುವ ದುರ್ಘಟನೆ ಶುಕ್ರವಾರ ಜರುಗಿದೆ.

ಆಟೋ ಚಾಲಕನಾದ ಸತೀಶ್‌ (38) ಮತ್ತು ಆಕೆಯ ಪತ್ನಿ ವೀರವೆಂಕಟಲಕ್ಷ್ಮಿ (35) ಇವರೇ ಆತ್ಮಹತ್ಯೆಗೊಳಗಾದ ದುರ್ದೈವಿಗಳಾಗಿದ್ದು, ಈ ಘಟನೆಯು ಆಂಧ್ರಪ್ರದೇಶದ ತರ‍್ಪು ಗೋದಾವರಿ ಜಿಲ್ಲಾ ರಾಜ ಮಹೇಂದ್ರವರಂನಲ್ಲಿ ನಡೆದಿದೆ.

ಪೋಲೀಸರ ಹೇಳಿಕೆಯ ಪ್ರಕಾರ ಬಾಬಾನಗರಕ್ಕೆ ಸೇರಿದ ಸತೀಶ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆತನಿಗೆ ನರಗಳಿಗೆ ಸಂಬಂಧಿಸಿದ ಕಾಯಿಲೆ ಇತ್ತು. ಆತನ ಪತ್ನಿ ವೆಂಕಟಲಕ್ಷ್ಮಿಯವರ ಕಿಡ್ನಿ ಸಹ ಹಾಳಗಿದ್ದವು. ಇಬ್ಬರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೊಂದು ಕಡೆ ಫೈನಾನ್ಸ್ ಸಾಲದಿಂದ ಆಟೋ ಖರೀದಿಸಿದ್ದು, ಅದರ ಕಂತುಗಳನ್ನು ಕಟ್ಟಲು ಕಷ್ಟಪಡುವ ಸಂದರ್ಭ ನಿರ್ಮಾಣವಾಗಿತ್ತು. ಇದೇ ಸಮಯಕ್ಕೆ ಕೊರೊನಾ ವೈರಸ್‌ನಿಂದ ಲಾಕ್‌ಡೌನ್ ಆದ ಕಾರಣ ಅವರಿಗೆ ದುಡಿಮೆಯೇ ಇಲ್ಲದಂತೆ ಆಗಿದೆ. ಈ ವೇಳೆ ಸಾಲ ತೀರಿಸಲು ಆಗದೆ, ಮತ್ತೊಂದೆಡೆ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುಲು ಸಾಧ್ಯವಾಗದೇ ಮಧ್ಯರಾತ್ರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಮನೆಹತ್ತಿರವೇ ಕಸದಲ್ಲಿ ಸುಟ್ಟು ಹೋಗಿದ್ದ ಶವಗಳನ್ನು ನೋಡಿ ಸ್ಥಳೀಯರು ಪೋಲಿಸರಿಗೆ ದೂರು ನೀಡಿದ್ದಾರೆ. ಘಟನೆಯ ಸ್ಥಳದಲ್ಲಿ ಸಿಕ್ಕ ಡೆತ್‌ ನೋಟ್‌ನಲ್ಲಿ, ಆರ್ಥಿಕ ಸಮಸ್ಯೆಗಳೊಂದಿಗೆ ಕೊರೊನಾ ಲಾಕ್‌ಡೌನ್ ಇಂದ ದುಡಿಮೆ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಇದರ ಕುರಿತು ಸತೀಶ್‌ ಸಹೋದರ ವೆಂಕಟ್‌ರಾವ್‌ರವರನ್ನು ವಿಚಾರಿಸಿದಾಗ ಅವರು ಆರ್ಥಿಕ ಸಮಸ್ಯೆಗಳಿಂದ ತುಂಬಾ ಕಷ್ಟ ಅನುಭವಿಸುತ್ತಿದ್ದರು ಎಂದು ಹೇಳಿದ್ದಾರೆ. ಪೋಲಿಸರು ಅನುಮಾನಸ್ಫದ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.

ಆರ್‌ಬಿಐ ಸಾಲ ಮರುಪಾವತಿ ಕಂತುಗಳನ್ನು ಮೂರು ತಿಂಗಳು ಮುಂದೂಡಿರುವ ವಿಚಾರ ಅವರಿಗೆ ತಿಳಿದಿತ್ತೆ ಇಲ್ಲವೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಒಟ್ಟಿನಲ್ಲಿ ಬಡವರಿಗೆ ಶಕ್ತಿ ತುಂಬುವ ಕೆಲಸಗಳು ಸರ್ಕಾರದ ಕಡೆಯಿಂದ ಜರುಗಬೇಕು ಎಂಬು ಒತ್ತಾಯಗಳು ಕೇಳಿಬಂದಿವೆ.

ಸರ್ಕಾರ ಕೊರೊನಾ ವೈರಸ್ ಹರಡದಂತೆ ಲಾಕ್‌ಡೌನ್ ಮಾಡಿರುವುದು ಸರಿ. ಆದರೆ ಬೇರೆ ದೇಶಗಳಲ್ಲಿ ಇರುವ ಶ್ರೀಮಂತರನ್ನು ವಿಮಾನದಲ್ಲಿ ಕರೆತರುವಂತೆ ನಿರ್ಗತಿಕರು, ದಿನಗೂಲಿಗಳು, ಸಾಲ ಮಾಡಿಕೊಂಡು ತಮ್ಮ ಬದುಕು ಕಟ್ಟಿಕೊಳ್ಳುತ್ತಿರುವವರು ಎಲ್ಲರ ಬದುಕು ಲಾಕ್ ಡೌನ್ ಆಗದಂತೆ ಎಚ್ಚರವಹಿಸಬೇಕಿದೆ. ಸರ್ಕಾರಿ ಆಧಿಕಾರಿಗಳನ್ನು ಹೆಚ್ಚು ಹೆಚ್ಚು ಬಡವರ ಜೀವನ ಅಸ್ಥವ್ಯಸ್ಥ ಆಗದಂತೆ ನೋಡಿಕೊಳ್ಳುವಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...