Homeಮುಖಪುಟ21 ದಿನ ಲಾಕ್‌ಡೌನ್‌ : ಸಾಲದ ಭಯಕ್ಕೆ ಆಂಧ್ರದ ದಂಪತಿ ಆತ್ಮಹತ್ಯೆ

21 ದಿನ ಲಾಕ್‌ಡೌನ್‌ : ಸಾಲದ ಭಯಕ್ಕೆ ಆಂಧ್ರದ ದಂಪತಿ ಆತ್ಮಹತ್ಯೆ

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಕಾರಣಕ್ಕಾಗಿ ಘೋಷಿಸಲಾಗಿರುವ 21 ದಿನ ಲಾಕ್‌ಡೌನ್‌‌ನಿಂದಾಗಿ ಸಾಲ ತೀರಿಸಲಾಗದ ಭಯಕ್ಕೆ ಆಂಧ್ರಪ್ರದೇಶದ ದಂಪತಿಗಿಳಿಬ್ಬರು ಆತ್ಮಹತ್ಯೆ ಮಾಡಿಕೊಡಿರುವ ದುರ್ಘಟನೆ ಶುಕ್ರವಾರ ಜರುಗಿದೆ.

ಆಟೋ ಚಾಲಕನಾದ ಸತೀಶ್‌ (38) ಮತ್ತು ಆಕೆಯ ಪತ್ನಿ ವೀರವೆಂಕಟಲಕ್ಷ್ಮಿ (35) ಇವರೇ ಆತ್ಮಹತ್ಯೆಗೊಳಗಾದ ದುರ್ದೈವಿಗಳಾಗಿದ್ದು, ಈ ಘಟನೆಯು ಆಂಧ್ರಪ್ರದೇಶದ ತರ‍್ಪು ಗೋದಾವರಿ ಜಿಲ್ಲಾ ರಾಜ ಮಹೇಂದ್ರವರಂನಲ್ಲಿ ನಡೆದಿದೆ.

ಪೋಲೀಸರ ಹೇಳಿಕೆಯ ಪ್ರಕಾರ ಬಾಬಾನಗರಕ್ಕೆ ಸೇರಿದ ಸತೀಶ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆತನಿಗೆ ನರಗಳಿಗೆ ಸಂಬಂಧಿಸಿದ ಕಾಯಿಲೆ ಇತ್ತು. ಆತನ ಪತ್ನಿ ವೆಂಕಟಲಕ್ಷ್ಮಿಯವರ ಕಿಡ್ನಿ ಸಹ ಹಾಳಗಿದ್ದವು. ಇಬ್ಬರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೊಂದು ಕಡೆ ಫೈನಾನ್ಸ್ ಸಾಲದಿಂದ ಆಟೋ ಖರೀದಿಸಿದ್ದು, ಅದರ ಕಂತುಗಳನ್ನು ಕಟ್ಟಲು ಕಷ್ಟಪಡುವ ಸಂದರ್ಭ ನಿರ್ಮಾಣವಾಗಿತ್ತು. ಇದೇ ಸಮಯಕ್ಕೆ ಕೊರೊನಾ ವೈರಸ್‌ನಿಂದ ಲಾಕ್‌ಡೌನ್ ಆದ ಕಾರಣ ಅವರಿಗೆ ದುಡಿಮೆಯೇ ಇಲ್ಲದಂತೆ ಆಗಿದೆ. ಈ ವೇಳೆ ಸಾಲ ತೀರಿಸಲು ಆಗದೆ, ಮತ್ತೊಂದೆಡೆ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುಲು ಸಾಧ್ಯವಾಗದೇ ಮಧ್ಯರಾತ್ರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಮನೆಹತ್ತಿರವೇ ಕಸದಲ್ಲಿ ಸುಟ್ಟು ಹೋಗಿದ್ದ ಶವಗಳನ್ನು ನೋಡಿ ಸ್ಥಳೀಯರು ಪೋಲಿಸರಿಗೆ ದೂರು ನೀಡಿದ್ದಾರೆ. ಘಟನೆಯ ಸ್ಥಳದಲ್ಲಿ ಸಿಕ್ಕ ಡೆತ್‌ ನೋಟ್‌ನಲ್ಲಿ, ಆರ್ಥಿಕ ಸಮಸ್ಯೆಗಳೊಂದಿಗೆ ಕೊರೊನಾ ಲಾಕ್‌ಡೌನ್ ಇಂದ ದುಡಿಮೆ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಇದರ ಕುರಿತು ಸತೀಶ್‌ ಸಹೋದರ ವೆಂಕಟ್‌ರಾವ್‌ರವರನ್ನು ವಿಚಾರಿಸಿದಾಗ ಅವರು ಆರ್ಥಿಕ ಸಮಸ್ಯೆಗಳಿಂದ ತುಂಬಾ ಕಷ್ಟ ಅನುಭವಿಸುತ್ತಿದ್ದರು ಎಂದು ಹೇಳಿದ್ದಾರೆ. ಪೋಲಿಸರು ಅನುಮಾನಸ್ಫದ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.

ಆರ್‌ಬಿಐ ಸಾಲ ಮರುಪಾವತಿ ಕಂತುಗಳನ್ನು ಮೂರು ತಿಂಗಳು ಮುಂದೂಡಿರುವ ವಿಚಾರ ಅವರಿಗೆ ತಿಳಿದಿತ್ತೆ ಇಲ್ಲವೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಒಟ್ಟಿನಲ್ಲಿ ಬಡವರಿಗೆ ಶಕ್ತಿ ತುಂಬುವ ಕೆಲಸಗಳು ಸರ್ಕಾರದ ಕಡೆಯಿಂದ ಜರುಗಬೇಕು ಎಂಬು ಒತ್ತಾಯಗಳು ಕೇಳಿಬಂದಿವೆ.

ಸರ್ಕಾರ ಕೊರೊನಾ ವೈರಸ್ ಹರಡದಂತೆ ಲಾಕ್‌ಡೌನ್ ಮಾಡಿರುವುದು ಸರಿ. ಆದರೆ ಬೇರೆ ದೇಶಗಳಲ್ಲಿ ಇರುವ ಶ್ರೀಮಂತರನ್ನು ವಿಮಾನದಲ್ಲಿ ಕರೆತರುವಂತೆ ನಿರ್ಗತಿಕರು, ದಿನಗೂಲಿಗಳು, ಸಾಲ ಮಾಡಿಕೊಂಡು ತಮ್ಮ ಬದುಕು ಕಟ್ಟಿಕೊಳ್ಳುತ್ತಿರುವವರು ಎಲ್ಲರ ಬದುಕು ಲಾಕ್ ಡೌನ್ ಆಗದಂತೆ ಎಚ್ಚರವಹಿಸಬೇಕಿದೆ. ಸರ್ಕಾರಿ ಆಧಿಕಾರಿಗಳನ್ನು ಹೆಚ್ಚು ಹೆಚ್ಚು ಬಡವರ ಜೀವನ ಅಸ್ಥವ್ಯಸ್ಥ ಆಗದಂತೆ ನೋಡಿಕೊಳ್ಳುವಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...