Homeಮುಖಪುಟ21 ದಿನ ಲಾಕ್‌ಡೌನ್‌ : ಸಾಲದ ಭಯಕ್ಕೆ ಆಂಧ್ರದ ದಂಪತಿ ಆತ್ಮಹತ್ಯೆ

21 ದಿನ ಲಾಕ್‌ಡೌನ್‌ : ಸಾಲದ ಭಯಕ್ಕೆ ಆಂಧ್ರದ ದಂಪತಿ ಆತ್ಮಹತ್ಯೆ

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಕಾರಣಕ್ಕಾಗಿ ಘೋಷಿಸಲಾಗಿರುವ 21 ದಿನ ಲಾಕ್‌ಡೌನ್‌‌ನಿಂದಾಗಿ ಸಾಲ ತೀರಿಸಲಾಗದ ಭಯಕ್ಕೆ ಆಂಧ್ರಪ್ರದೇಶದ ದಂಪತಿಗಿಳಿಬ್ಬರು ಆತ್ಮಹತ್ಯೆ ಮಾಡಿಕೊಡಿರುವ ದುರ್ಘಟನೆ ಶುಕ್ರವಾರ ಜರುಗಿದೆ.

ಆಟೋ ಚಾಲಕನಾದ ಸತೀಶ್‌ (38) ಮತ್ತು ಆಕೆಯ ಪತ್ನಿ ವೀರವೆಂಕಟಲಕ್ಷ್ಮಿ (35) ಇವರೇ ಆತ್ಮಹತ್ಯೆಗೊಳಗಾದ ದುರ್ದೈವಿಗಳಾಗಿದ್ದು, ಈ ಘಟನೆಯು ಆಂಧ್ರಪ್ರದೇಶದ ತರ‍್ಪು ಗೋದಾವರಿ ಜಿಲ್ಲಾ ರಾಜ ಮಹೇಂದ್ರವರಂನಲ್ಲಿ ನಡೆದಿದೆ.

ಪೋಲೀಸರ ಹೇಳಿಕೆಯ ಪ್ರಕಾರ ಬಾಬಾನಗರಕ್ಕೆ ಸೇರಿದ ಸತೀಶ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆತನಿಗೆ ನರಗಳಿಗೆ ಸಂಬಂಧಿಸಿದ ಕಾಯಿಲೆ ಇತ್ತು. ಆತನ ಪತ್ನಿ ವೆಂಕಟಲಕ್ಷ್ಮಿಯವರ ಕಿಡ್ನಿ ಸಹ ಹಾಳಗಿದ್ದವು. ಇಬ್ಬರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೊಂದು ಕಡೆ ಫೈನಾನ್ಸ್ ಸಾಲದಿಂದ ಆಟೋ ಖರೀದಿಸಿದ್ದು, ಅದರ ಕಂತುಗಳನ್ನು ಕಟ್ಟಲು ಕಷ್ಟಪಡುವ ಸಂದರ್ಭ ನಿರ್ಮಾಣವಾಗಿತ್ತು. ಇದೇ ಸಮಯಕ್ಕೆ ಕೊರೊನಾ ವೈರಸ್‌ನಿಂದ ಲಾಕ್‌ಡೌನ್ ಆದ ಕಾರಣ ಅವರಿಗೆ ದುಡಿಮೆಯೇ ಇಲ್ಲದಂತೆ ಆಗಿದೆ. ಈ ವೇಳೆ ಸಾಲ ತೀರಿಸಲು ಆಗದೆ, ಮತ್ತೊಂದೆಡೆ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುಲು ಸಾಧ್ಯವಾಗದೇ ಮಧ್ಯರಾತ್ರಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಮನೆಹತ್ತಿರವೇ ಕಸದಲ್ಲಿ ಸುಟ್ಟು ಹೋಗಿದ್ದ ಶವಗಳನ್ನು ನೋಡಿ ಸ್ಥಳೀಯರು ಪೋಲಿಸರಿಗೆ ದೂರು ನೀಡಿದ್ದಾರೆ. ಘಟನೆಯ ಸ್ಥಳದಲ್ಲಿ ಸಿಕ್ಕ ಡೆತ್‌ ನೋಟ್‌ನಲ್ಲಿ, ಆರ್ಥಿಕ ಸಮಸ್ಯೆಗಳೊಂದಿಗೆ ಕೊರೊನಾ ಲಾಕ್‌ಡೌನ್ ಇಂದ ದುಡಿಮೆ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಇದರ ಕುರಿತು ಸತೀಶ್‌ ಸಹೋದರ ವೆಂಕಟ್‌ರಾವ್‌ರವರನ್ನು ವಿಚಾರಿಸಿದಾಗ ಅವರು ಆರ್ಥಿಕ ಸಮಸ್ಯೆಗಳಿಂದ ತುಂಬಾ ಕಷ್ಟ ಅನುಭವಿಸುತ್ತಿದ್ದರು ಎಂದು ಹೇಳಿದ್ದಾರೆ. ಪೋಲಿಸರು ಅನುಮಾನಸ್ಫದ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.

ಆರ್‌ಬಿಐ ಸಾಲ ಮರುಪಾವತಿ ಕಂತುಗಳನ್ನು ಮೂರು ತಿಂಗಳು ಮುಂದೂಡಿರುವ ವಿಚಾರ ಅವರಿಗೆ ತಿಳಿದಿತ್ತೆ ಇಲ್ಲವೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಒಟ್ಟಿನಲ್ಲಿ ಬಡವರಿಗೆ ಶಕ್ತಿ ತುಂಬುವ ಕೆಲಸಗಳು ಸರ್ಕಾರದ ಕಡೆಯಿಂದ ಜರುಗಬೇಕು ಎಂಬು ಒತ್ತಾಯಗಳು ಕೇಳಿಬಂದಿವೆ.

ಸರ್ಕಾರ ಕೊರೊನಾ ವೈರಸ್ ಹರಡದಂತೆ ಲಾಕ್‌ಡೌನ್ ಮಾಡಿರುವುದು ಸರಿ. ಆದರೆ ಬೇರೆ ದೇಶಗಳಲ್ಲಿ ಇರುವ ಶ್ರೀಮಂತರನ್ನು ವಿಮಾನದಲ್ಲಿ ಕರೆತರುವಂತೆ ನಿರ್ಗತಿಕರು, ದಿನಗೂಲಿಗಳು, ಸಾಲ ಮಾಡಿಕೊಂಡು ತಮ್ಮ ಬದುಕು ಕಟ್ಟಿಕೊಳ್ಳುತ್ತಿರುವವರು ಎಲ್ಲರ ಬದುಕು ಲಾಕ್ ಡೌನ್ ಆಗದಂತೆ ಎಚ್ಚರವಹಿಸಬೇಕಿದೆ. ಸರ್ಕಾರಿ ಆಧಿಕಾರಿಗಳನ್ನು ಹೆಚ್ಚು ಹೆಚ್ಚು ಬಡವರ ಜೀವನ ಅಸ್ಥವ್ಯಸ್ಥ ಆಗದಂತೆ ನೋಡಿಕೊಳ್ಳುವಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...