Homeಮುಖಪುಟನ್ಯಾಯಾಂಗ ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಉಳಿಯುವುದು ಅತ್ಯಗತ್ಯ: ಸಿಜೆಐಗೆ ಜಂಟಿ ಪತ್ರ ಬರೆದ ಮಾಜಿ ನ್ಯಾಯಮೂರ್ತಿಗಳ ತಂಡ

ನ್ಯಾಯಾಂಗ ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಉಳಿಯುವುದು ಅತ್ಯಗತ್ಯ: ಸಿಜೆಐಗೆ ಜಂಟಿ ಪತ್ರ ಬರೆದ ಮಾಜಿ ನ್ಯಾಯಮೂರ್ತಿಗಳ ತಂಡ

- Advertisement -
- Advertisement -

ಸುಪ್ರೀಂ ಕೋರ್ಟ್‌ನ ನಾಲ್ವರು ನಿವೃತ್ತ ನ್ಯಾಯಾಧೀಶರು ಮತ್ತು 17 ಮಾಜಿ ಹೈಕೋರ್ಟ್ ನ್ಯಾಯಾಧೀಶರು ಸೇರಿ ಒಟ್ಟು 21  ಮಾಜಿ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್‌ನ ಹಾಲಿ ಸಿಜೆಐ ಚಂದ್ರಚೂಡ್‌ ಅವರಿಗೆ ಜಂಟಿ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ತಪ್ಪು ಮಾಹಿತಿ ಮತ್ತು ಸಾರ್ವಜನಿಕ ಅವಹೇಳನದ ಮೂಲಕ ನ್ಯಾಯಾಂಗವನ್ನು ದುರ್ಬಲಗೊಳಿಸಲು ಪ್ರಯತ್ನಿಸಲಾಗುತ್ತಿದೆ. ನ್ಯಾಯಾಂಗವು ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಉಳಿಯುವುದು ಅತ್ಯಗತ್ಯ. ಈ ಕುರಿತು ಮಧ್ಯಸ್ಥಿಕೆಯನ್ನು ವಹಿಸಬೇಕು ಎಂದು ಆಗ್ರಹಿಸಲಾಗಿದೆ.

ಸಂಕುಚಿತ ರಾಜಕೀಯ ಹಿತಾಸಕ್ತಿ ಮತ್ತು ವೈಯಕ್ತಿಕ ಲಾಭಗಳಿಂದ ಪ್ರೇರಿತವಾಗಿರುವ ಈ ಅಂಶಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಕುಗ್ಗಿಸಲು ಪ್ರಯತ್ನಿಸುತ್ತಿವೆ ಎಂಬುದು ನಮ್ಮ ಗಮನಕ್ಕೆ ಬಂದಿದೆ.

ಅವರು ವಿಧಾನಗಳು ಹಲವಾಗಿದೆ ಮತ್ತು ಅವುಗಳು ಕಪಟವಾಗಿದೆ, ನಮ್ಮ ನ್ಯಾಯಾಲಯಗಳು ಮತ್ತು ನ್ಯಾಯಾಧೀಶರ ಪ್ರಕ್ರಿಯೆಗಳಲ್ಲಿ ಗೊಂದಲವುಂಟು ಮಾಡುವ ಪ್ರಯತ್ನವಾಗಿದೆ. ಇಂತಹ ಕ್ರಮಗಳು ನಮ್ಮ ನ್ಯಾಯಾಂಗದ ಪಾವಿತ್ರ್ಯತೆಯನ್ನು ಅಗೌರವಗೊಳಿಸುವುದಲ್ಲದೆ, ನ್ಯಾಯಾಂಗದ ಪಾಲಕರಾದ ನ್ಯಾಯಾಧೀಶರು ಎತ್ತಿಹಿಡಿಯಲು ಪ್ರಮಾಣ ಮಾಡಿದ ನ್ಯಾಯಸಮ್ಮತತೆ ಮತ್ತು ನಿಷ್ಪಕ್ಷಪಾತದ ತತ್ವಗಳಿಗೆ ನೇರ ಸವಾಲನ್ನು ಒಡ್ಡುತ್ತದೆ‌, ಆದ್ದರಿಂದ ಅನಗತ್ಯ ಒತ್ತಡಗಳಿಂದ ನ್ಯಾಯಾಂಗವನ್ನು ರಕ್ಷಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಹಿ ಮಾಡಿದವರಲ್ಲಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ದೀಪಕ್ ವರ್ಮಾ, ಕೃಷ್ಣ ಮುರಾರಿ, ದಿನೇಶ್ ಮಹೇಶ್ವರಿ ಮತ್ತು ಎಂ ಆರ್ ಶಾ ಸೇರಿದ್ದಾರೆ. ಗುಜರಾತ್, ದೆಹಲಿ, ರಾಜಸ್ಥಾನ, ಸಿಕ್ಕಿಂ, ಜಾರ್ಖಂಡ್, ಮುಂಬೈ, ಅಲಹಾಬಾದ್, ಉತ್ತರಾಖಂಡ, ಪಂಜಾಬ್ ಮತ್ತು ಹರ್ಯಾಣ ಮತ್ತು ಮಧ್ಯಪ್ರದೇಶ ಹೈಕೋರ್ಟ್‌ಗಳ ಮಾಜಿ ನ್ಯಾಯಾಧೀಶರ ಹೆಸರುಗಳು ಪಟ್ಟಿಯಲ್ಲಿ ಸೇರಿವೆ. ಕೆಲವು ದಿನಗಳ ಹಿಂದೆ 600ಕ್ಕೂ ಹೆಚ್ಚು ವಕೀಲರು ಇದೇ ರೀತಿ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿದ್ದರು.

ನ್ಯಾಯಾಂಗದ ಖ್ಯಾತಿಯನ್ನು ಕೆಡಿಸುವ ಉದ್ದೇಶದಿಂದ ಆಧಾರ ರಹಿತ ಸಿದ್ಧಾಂತಗಳ ಪ್ರಚಾರದಿಂದ ಹಿಡಿದು ನ್ಯಾಯಾಂಗದ ಫಲಿತಾಂಶಗಳನ್ನು ಅವರ ಪರವಾಗಿ ಪ್ರಭಾವಿಸಲು ಬಹಿರಂಗ ಮತ್ತು ರಹಸ್ಯ ಪ್ರಯತ್ನಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಈ ಗುಂಪುಗಳು ಬಳಸಿದ ತಂತ್ರವು ಆಳವಾಗಿ ತೊಂದರೆದಾಯಕವಾಗಿದೆ. ಕೆಲವು ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳು ಸೇರಿದಂತೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಪ್ರಾಮುಖ್ಯತೆಯ ಪ್ರಕರಣಗಳಲ್ಲಿ ಈ ರೀತಿಯ ಬೆಳವಣಿಗೆಗಳನ್ನು ಕಾಣಬಹುದಾಗಿದೆ. ನಾವು ನಿರ್ದಿಷ್ಟವಾಗಿ ತಪ್ಪು ಮಾಹಿತಿಯ ತಂತ್ರಗಳು ಮತ್ತು ನ್ಯಾಯಾಂಗದ ವಿರುದ್ಧ ಸಾರ್ವಜನಿಕ ಭಾವನೆಗಳನ್ನು ತಪ್ಪಾಗಿ ರೂಪಿಸುತ್ತಿರುವ ಬಗ್ಗೆ ಕಾಳಜಿ ವಹಿಸುತ್ತೇವೆ, ಇದು ಅನೈತಿಕ ಮಾತ್ರವಲ್ಲದೆ ನಮ್ಮ ಪ್ರಜಾಪ್ರಭುತ್ವದ ಮೂಲಭೂತ ತತ್ವಗಳಿಗೆ ಹಾನಿಕಾರಕವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಂತಹ ಒತ್ತಡಗಳ ವಿರುದ್ಧ ನ್ಯಾಯಾಂಗವು ಬಲಗೊಳ್ಳಬೇಕು ಮತ್ತು ನಮ್ಮ ಕಾನೂನು ವ್ಯವಸ್ಥೆಯ ಪಾವಿತ್ರ್ಯತೆ ಮತ್ತು ಸ್ವಾಯತ್ತತೆಯನ್ನು ಕಾಪಾಡಬೇಕು. ನ್ಯಾಯಾಂಗವು ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಉಳಿಯುವುದು ಅತ್ಯಗತ್ಯವಾಗಿದೆ, ನಾವು ನ್ಯಾಯಾಂಗದೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಮತ್ತು ಘನತೆ, ಸಮಗ್ರತೆ ಮತ್ತು ನಿಷ್ಪಕ್ಷಪಾತವನ್ನು ಎತ್ತಿಹಿಡಿಯಲು ಅಗತ್ಯವಿರುವ ಯಾವುದೇ ರೀತಿಯಲ್ಲಿ ಬೆಂಬಲವನ್ನು ನೀಡಲು ಸಿದ್ಧರಿದ್ದೇವೆ. ಈ ಸವಾಲಿನ ಸಮಯದಲ್ಲಿ ನಿಮ್ಮ ದೃಢವಾದ ಮಾರ್ಗದರ್ಶನ ಮತ್ತು ನಾಯಕತ್ವವನ್ನು ನಾವು ನಿರೀಕ್ಷಿಸುತ್ತೇವೆ ಎಂದು ಪತ್ರದಲ್ಲಿ ಮಾಜಿ ನ್ಯಾಯ ಮೂರ್ತಿಗಳು ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿರುವ ಮೋದಿ, ಪುಟಿನ್‌ ನಡುವೆ ಯಾವುದೇ ವ್ಯತ್ಯಾಸವಿಲ್ಲ: ಶರದ್ ಪವಾರ್ ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...