Homeಮುಖಪುಟಸಿಜೆಐ ಗವಾಯಿ ಅಧಿಕಾರಾವಧಿಯಲ್ಲಿ ಹಿಂದುಳಿದ ಜಾತಿಗಳ 21 ನ್ಯಾಯಾಧೀಶರ ನೇಮಕ

ಸಿಜೆಐ ಗವಾಯಿ ಅಧಿಕಾರಾವಧಿಯಲ್ಲಿ ಹಿಂದುಳಿದ ಜಾತಿಗಳ 21 ನ್ಯಾಯಾಧೀಶರ ನೇಮಕ

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಅಧಿಕಾರಾವಧಿಯಲ್ಲಿ ದೇಶದ ವಿವಿಧ ಹೈಕೋರ್ಟ್‌ಗಳಿಗೆ ಪರಿಶಿಷ್ಟ ಜಾತಿ ವರ್ಗದಿಂದ ಹತ್ತು ನ್ಯಾಯಾಧೀಶರು, ಹಿಂದುಳಿದ ವರ್ಗಗಳಿಂದ ಹನ್ನೊಂದು ಜನ ನ್ಯಾಯಾಧೀಶರನ್ನು ನೇಮಿಸಲಾಗಿದೆ.

ದೇಶದ ಮೊದಲ ಬೌದ್ಧ ಮತ್ತು ಎರಡನೇ ದಲಿತ ಸಿಜೆಐ ಆಗಿರುವ ನ್ಯಾಯಮೂರ್ತಿ ಗವಾಯಿ, ವಿವಿಧ ಹೈಕೋರ್ಟ್‌ಗಳ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಸರ್ಕಾರಕ್ಕೆ 129 ಹೆಸರುಗಳನ್ನು ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್‌ನ ಮೂವರು ಸದಸ್ಯರ ಕೊಲಿಜಿಯಂನ ನೇತೃತ್ವ ವಹಿಸಿದ್ದರು. ಅದರಲ್ಲಿ 93 ಹೆಸರುಗಳನ್ನು ತೆರವುಗೊಳಿಸಲಾಯಿತು.

ನ್ಯಾಯಮೂರ್ತಿಗಳಾದ ಎನ್.ವಿ. ಅಂಜಾರಿಯಾ, ವಿಜಯ್ ಬಿಷ್ಣೋಯ್, ಎ.ಎಸ್. ಚಂದೂರ್ಕರ್, ಅಲೋಕ್ ಆರಾಧೆ ಮತ್ತು ವಿಪುಲ್ ಮನುಭಾಯಿ ಪಂಚೋಲಿ – ಅವರ ಅಧಿಕಾರಾವಧಿಯಲ್ಲಿ ಐವರು ನ್ಯಾಯಾಧೀಶರನ್ನು ಸಹ ಸುಪ್ರೀಂ ಕೋರ್ಟ್‌ಗೆ ನೇಮಿಸಲಾಯಿತು.

ನ್ಯಾಯಮೂರ್ತಿ ಗವಾಯಿ ಭಾರತದ ಮುಖ್ಯ ನ್ಯಾಯಮೂರ್ತಿಯಾದ ಮೇ 14 ರಿಂದ ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ನ್ಯಾಯಾಧೀಶರ ನೇಮಕಾತಿಯ ವಿವರಗಳ ಪ್ರಕಾರ, ಹೈಕೋರ್ಟ್‌ಗೆ ಸರ್ಕಾರವು ಅನುಮೋದಿಸಿದ 93 ಹೆಸರುಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳ 13 ನ್ಯಾಯಾಧೀಶರು ಮತ್ತು 15 ಮಹಿಳಾ ನ್ಯಾಯಾಧೀಶರು ಸೇರಿದ್ದಾರೆ.

ಅವರಲ್ಲಿ ಐದು ಮಂದಿ ಮಾಜಿ ಅಥವಾ ಸೇವೆಯಲ್ಲಿರುವ ನ್ಯಾಯಾಧೀಶರಿಗೆ ಸಂಬಂಧಿಸಿರುತ್ತಾರೆ. 49 ನ್ಯಾಯಾಧೀಶರು ಕೊಲಿಜಿಯಂನಿಂದ ನೇಮಕಗೊಂಡಿದ್ದಾರೆ. ಉಳಿದವರು ಸೇವಾ ಕೇಡರ್‌ನಿಂದ ಬಂದವರು.

ಸಿಜೆಐ ಗವಾಯಿ ಅವರು ನವೆಂಬರ್ 23 ರ ಭಾನುವಾರದಂದು ಅಧಿಕಾರ ತ್ಯಜಿಸಲಿದ್ದಾರೆ. ಅವರ ಉತ್ತರಾಧಿಕಾರಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನವೆಂಬರ್ 24 ರಂದು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿರುವ ಗವಾಯಿ ಅವರು ತಮ್ಮ ಆರು ತಿಂಗಳ ಅಧಿಕಾರಾವಧಿಯಲ್ಲಿ ವಕ್ಫ್ ಕಾನೂನಿನ ಪ್ರಮುಖ ನಿಬಂಧನೆಗಳನ್ನು ತಡೆಹಿಡಿದ ತೀರ್ಪುಗಳನ್ನು ಒಳಗೊಂಡಂತೆ ಅದ್ಭುತ ತೀರ್ಪುಗಳನ್ನು ನೀಡಿದ್ದಾರೆ. ನ್ಯಾಯಮಂಡಳಿ ಸುಧಾರಣಾ ಶಾಸನವನ್ನು ರದ್ದುಗೊಳಿಸಿ, ಯೋಜನೆಗಳಿಗೆ ಪೋಸ್ಟ್ ಫ್ಯಾಕ್ಟೋ ಹಸಿರು ಅನುಮತಿಗಳನ್ನು ನೀಡಲು ಕೇಂದ್ರಕ್ಕೆ ಅವಕಾಶ ಮಾಡಿಕೊಟ್ಟರು.

ಕೆ ಜಿ ಬಾಲಕೃಷ್ಣನ್ ನಂತರ ಭಾರತೀಯ ನ್ಯಾಯಾಂಗದ ಮುಖ್ಯಸ್ಥರಾದ ಎರಡನೇ ದಲಿತ ಸಿಜೆಐ ಗವಾಯಿ ಅವರ ಕೊನೆಯ ಕೆಲಸದ ದಿನ ಶುಕ್ರವಾರವಾಗಿತ್ತು.

ತಮ್ಮ ಕೊನೆಯ ಕೆಲಸದ ದಿನದಂದು ಅಪಾರ ಗೌರವ ಸ್ವೀಕರಿಸಿದ ಸಿಜೆಐ ಗವಾಯಿ, ವಕೀಲರಾಗಿ ಮತ್ತು ನ್ಯಾಯಾಧೀಶರಾಗಿ ನಾಲ್ಕು ದಶಕಗಳ ಪ್ರಯಾಣವನ್ನು ಕೊನೆಗೊಳಿಸಿದ ನಂತರ ಸಂಪೂರ್ಣ ತೃಪ್ತಿ ಮತ್ತು ಸಂತೃಪ್ತಿಯೊಂದಿಗೆ, ನ್ಯಾಯದ ವಿದ್ಯಾರ್ಥಿಯಾಗಿ ಸಂಸ್ಥೆಯನ್ನು ತೊರೆಯುತ್ತಿದ್ದೇನೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...